Breaking News

ಬಾಣಂತಿ, ಮಗು ಸಾವು – ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪ

ಬೆಳಗಾವಿ: ಬಿಮ್ಸ್ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ತುರಮರಿ ಗ್ರಾಮದ ಬಾಣಂತಿ 21 ವರ್ಷದ ಈರಮ್ಮ ಶಿಗೀಹಳ್ಳಿ ಏಪ್ರಿಲ್ 10 ರಂದು ಮಧ್ಯಾಹ್ನ 12ಗಂಟೆಗೆ ಬೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಾದಾಗಿಂದ ಇಲ್ಲಿಯವರೆಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಮಧ್ಯರಾತ್ರಿ 1.30ಕ್ಕೆ ಬಾಣಂತಿ …

Read More »

ಎಂಟು ವರ್ಷ ಪತಿಯೊಂದಿಗೆ ಸಂಸಾರ ನಡೆಸಿ ಪ್ರಿಯಕರನ ಜೊತೆ ಮದುವೆಯಾದ ಖತರ್ನಾಕ್ ಪತ್ನಿ

ಹಾಸನ: ಎಂಟು ವರ್ಷ ಪತಿಯೊಂದಿಗೆ ಸಂಸಾರ ನಡೆಸಿ ಇದೀಗ ಪ್ರಿಯಕರನ ಜೊತೆ ಪತ್ನಿ ಮದುವೆಯಾಗಿರುವ ಘಟನೆ ಹಾಸನ  ತಾಲ್ಲೂಕಿನ ಮುಕುಂದೂರು ಗ್ರಾಮದಲ್ಲಿ ನಡೆದಿದೆ. ಪತಿಯನ್ನು ಮುಕುಂದೂರು ಗ್ರಾಮದ ಪ್ರಕಾಶ್ ಹಾಗೂ ಪತ್ನಿಯನ್ನು ಅರಕಲಗೂಡು  ತಾಲ್ಲೂಕಿನ ಮುಂಡಗೋಡು ಗ್ರಾಮದ ಹರ್ಷಿತಾ ಎಂದು ಗುರುತಿಸಲಾಗಿದ್ದು, ಪ್ರಿಯಕನ ಜೊತೆ ಮದುವೆಯಾದ ಗೃಹಿಣಿ ಎಂದು ತಿಳಿದುಬಂದಿದೆ. ಕಳೆದ ಎಂಟು ವರ್ಷಗಳ ಹಿಂದೆ ಅಂದರೆ 2017ರ ಮಾ.30ರಂದು ಪ್ರಕಾಶ್ ಅವರು ಸ್ವಂತ ಅತ್ತೆ ಮಗಳಾದ ಹರ್ಷಿತಾಳನ್ನು ಮದುವೆಯಾಗಿದ್ದರು. …

Read More »

ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

ಬಾಗಲಕೋಟೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಕೇಸ್‌ಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಮಹಿಳೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ವಿಡಿಯೋ ಹೇಳಿಕೆಯೊಂದನ್ನು ರಿಲೀಸ್ ಮಾಡಿದ್ದಾರೆ. ಇತ್ತೀಚಿಗಷ್ಟೇ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಇದೀಗ ಈ ಸಂಬಂಧ ಸಂತ್ರಸ್ತ ಮಹಿಳೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನಾನು ಶ್ರೀಗಳ ವಿರುದ್ಧ ದೂರು ನೀಡಿಲ್ಲ. ನನ್ನ ಮತ್ತು ಸ್ವಾಮೀಜಿ ಮೇಲಿರುವ ಆರೋಪಗಳೆಲ್ಲವೂ ಸುಳ್ಳು. ನನ್ನ ಹೆಸರಿನಲ್ಲಿ ಯಾರೋ …

Read More »

ಪಿಯುಸಿ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ: ಕೆಇಎ

ಬೆಂಗಳೂರು: ದ್ವಿತೀಯ ಪಿಯುಸಿ  ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ- 1 ಮತ್ತು ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೋ ಆ ಅಂಕಗಳನ್ನೇ ಸಿಇಟಿ  ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಕೆಲ ಅಭ್ಯರ್ಥಿಗಳು ಪರೀಕ್ಷೆ-1ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು …

Read More »

SSLC ಪರೀಕ್ಷೆಗೆ 525 ಅಂಕ – ಕರಡು ಅಧಿಸೂಚನೆ ಹೊರಡಿಸಿದ ಶಿಕ್ಷಣ ಇಲಾಖೆ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ (525 ಅಂಕ ನೀಡುವ ನಿಯಮ ಬದಲಾವಣೆ ಮಾಡಿರುವ ವಿಚಾರದಲ್ಲಿ ಶಿಕ್ಷಣ ಇಲಾಖೆ  ಕರಡು ಅಧಿಸೂಚನೆ ಹೊರಡಿಸಿದೆ. ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 7 ದಿನ ಅವಕಾಶ ನೀಡಲಾಗಿದ್ದು ಆಕ್ಷೇಪಣೆ ಸಲ್ಲಿಸಬಹುದಾಗಿದೆ‌‌. ಅಧಿಸೂಚನೆಯಲ್ಲಿ 525 ಅಂಕಗಳ ಅನುಷ್ಠಾನ ಹೇಗೆ ನಡೆಯಲಿದೆ ಎಂಬುದನ್ನು ತಿಳಿಸಲಾಗಿದೆ. ಅದರಂತೆ ತೃತೀಯ ಭಾಷೆ ವಿಷಯದಲ್ಲಿ ಅಂಕಗಳ ಬದಲಾಗಿ ಗ್ರೇಡ್ ಸಿಸ್ಟಮ್ ವಿವರಿಸಲಾಗಿದೆ. ಈ ಮೊದಲು 625 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ …

Read More »

ಧಾರವಾಡದ ಅಣ್ಣಿಗೇರಿ ಬಸಾಪುರದಲ್ಲಿ ಮನೆ ಕಳ್ಳತನ ಪ್ರಕರಣ, ವಾರದಲ್ಲಿ ಇಬ್ಬರು ಆರೋಪಿಗಳ ಬಂಧನ

ಧಾರವಾಡ- ಕಳೆದ ಏಪ್ರಿಲ್ 2ರಂದು ಧಾರವಾಡ ಜಿಲ್ಲೆ ಅಣ್ಣಿಗೇರಿ ತಾ. ಬಸಾಪುರ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಅಣ್ಣಿಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಣ್ಣಿಗೇರಿ ತಾಲ್ಲೂಕಿನ ನಿವಾಸಿಗಳಾದ ಉಮೇಶ ಹರಣಶಿಕಾರಿ(30), ಈರಪ್ಪ ಹರಣಶಿಕಾರಿ (25) ಇಬ್ಬರು ಬಂಧಿತ ಮನೆಗಳ್ಳರಾಗಿದ್ದಾರೆ. ಏಪ್ರಿಲ್ 2ರಂದು ಬಸಾಪುರ ಗ್ರಾಮದಲ್ಲಿ ಮನೆಯ ಡೋರ್ ಲಾಕ್ ಮುರಿದು ಮನೆ ಕಳ್ಳತನ ಮಾಡಲಾಗಿತ್ತು. ಈ ಕುರಿತು ಮನೆಯ ಮಾಲೀಕರು ಅಣ್ಣಿಗೇರಿ‌ ಪೊಲೀಸ …

Read More »

ಧಾರವಾಡ: ಇಸ್ಮಾಯಿಲ್ ತಮಟಗಾರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಹಿಂದೂ ಸಂಘಟನೆಗಳು

ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ವಿರುದ್ಧ ಇದೀಗ ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡರು ಧಾರವಾಡದ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವರದಿ: ಕಳೆದ ಏಪ್ರಿಲ್ 7 ರಂದು ಧಾರವಾಡದ ಸುಭಾಷ್ ರಸ್ತೆಯಲ್ಲಿ ಲವ್ ಜಿಹಾದ್ ವಿರುದ್ಧ ‘ಜನಾಕ್ರೋಶ ಪ್ರತಿಭಟನೆ’ …

Read More »

ಕ್ಷೇತ್ರದ ಸಹೋದರಿಯರ ಬಾಳಿಗೆ ಆಸರೆ: 28 ಕುಟುಂಬಗಳಿಗೆ “ಅಣ್ಣನ ಉಡುಗೊರೆ” ವಿತರಣೆ

ಸವದತ್ತಿ: ನನ್ನ ಕ್ಷೇತ್ರದ ಪ್ರತಿಯೊಂದು ಬಡ ಕುಟುಂಬದ ಕಷ್ಟ-ಸುಖಗಳಿಗೆ ಸ್ಪಂದಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಇಂದು ಮದುವೆಯ ಸಂಭ್ರಮದಲ್ಲಿರುವ ಸವದತ್ತಿ ಮತಕ್ಷೇತ್ರದ ಸುಮಾರು 28 ಬಡ ಕುಟುಂಬಗಳ ಹೆಣ್ಣುಮಕ್ಕಳ ವಿವಾಹಕ್ಕೆ “ಅಣ್ಣನ ಉಡುಗೊರೆ”ಯನ್ನು ನನ್ನ ಧರ್ಮಪತ್ನಿಯವರಾದ ಶ್ರೀಮತಿ Shruti Vaidya (ಶೃತಿ ವಿಶ್ವಾಸ್ ವೈದ್ಯ) ಅವರು ವಿತರಿಸಿದರು. ​ಹೊಸ ಬಾಳಿಗೆ ಪಾದಾರ್ಪಣೆ ಮಾಡುತ್ತಿರುವ ನನ್ನ ಕ್ಷೇತ್ರದ ಸಹೋದರಿಯರಿಗೆ ನೆರವಾಗಲು ಅಡುಗೆ ಮನೆಯ ಭಾಂಡೆ ಸಾಮಗ್ರಿಗಳು, ಟ್ರೇಸುರಿ, ಮಂಚ (ಕಾಟ್) ಹಾಗೂ …

Read More »

ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ

ನೆಲಮಂಗಲದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಮೃತ ಯುವಕನನ್ನು 28 ವರ್ಷದ ದಿಲೀಪ್ ಎಂದು ಗುರುತಿಸಲಾಗಿದೆ. ಇವರು ನೆಲಮಂಗಲ ಟೌನ್‌ನ ವಾಜರಹಳ್ಳಿಯಲ್ಲಿ ವಾಸವಾಗಿದ್ದು, ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು. ದಿಲೀಪ್ ಅವರಿಗೆ ಜಿಮ್‌ನಲ್ಲಿ ಯೋಗಿತಾ ಎಂಬ ಮಹಿಳೆಯ ಪರಿಚಯವಾಗಿದ್ದು, ನಂತರ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು ಎನ್ನಲಾಗಿದೆ. ಆರೋಪಿ ಯೋಗಿತಾ (42) ಮದುವೆಯಾಗಿದ್ದರೂ ದಿಲೀಪ್ ಜೊತೆ ಸಂಬಂಧ ಬೆಳೆಸಿ, …

Read More »

ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ  ಲೆಕ್ಕ ಕೊಡಿ ಅಭಿಯಾನ ತೀವ್ರಗೊಂಡ ಬೆನ್ನಲ್ಲೇ ವಚನಾನಂದ ಶ್ರೀಗಳನ್ನು ಪೀಠದಿಂದ ಉಚ್ಚಾಟನೆ ಮಾಡಲು ಟ್ರಸ್ಟಿಗಳು ಸಭೆಯಲ್ಲಿ ನಿರ್ಧರಿಸಿದ್ದಾರೆ. 10 ಕಾರಣಗಳನ್ನು ನೀಡಿ ಉಚ್ಚಾಟನೆ ಮಾಡಲಾಗಿದ್ದು, ಮಠದ ಕಚೇರಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ. ಟ್ರಸ್ಟಿಗಳು ಹೇಳೋದೇನು? ಸ್ವಾಮೀಜಿ ಶ್ವಾಸ ಪೀಠದಲ್ಲಿ ಇರಬೇಕು, ಇಲ್ಲವೇ ಹರಿಹರ ಪಂಚಮಸಾಲಿ ಪೀಠದಲ್ಲಿ ಇರಬೇಕು. ಆದರೆ ಎರಡೂ ಕಡೆ ಇರುವುದು ಸೂಕ್ತವಲ್ಲ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲು ಈಗಾಗಲೇ …

Read More »