Breaking News

ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಗೆ ಖಂಡನೆ – ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪಂಜಿನ ಮೆರವಣಿಗೆ

ಬಳ್ಳಾರಿ: ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬಳ್ಳಾರಿಯ ಕುರುಗೋಡು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕುರುಗೋಡು ಪಟ್ಟಣದ ದೊಡ್ಡ ಬಸವೇಶ್ವರ ದೇವಸ್ಥಾನದಿಂದ ಮೇನ್ ಸರ್ಕಲ್‌ವರೆಗೆ ಪಂಜಿನ ಮೆರವಣಿಗೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ …

Read More »

ಉದ್ಘಾಟನೆಗೂ ಮುನ್ನವೇ ಕಿತ್ತುಬಂದ ಕಾಂಕ್ರೀಟ್; 3 ಕೋಟಿ ವಸತಿ ನಿಲಯದ ಕಳಪೆ ಕಾಮಗಾರಿ ಬಯಲು

ಬೀದರ್‌: ನಗರದ ನೆಹರು ಸ್ಟೇಡಿಯಂ ಬಳಿ ಬರೋಬ್ಬರಿ 3 ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮೀಣ ಭಾಗದ ಬಡ ಕ್ರೀಡಾಪಟು ಮಕ್ಕಳಿಗಾಗಿ ಎರಡು ಅಂತಸ್ತಿನ ಬೃಹತ್ ವಸತಿ ನಿಲಯ ನಿರ್ಮಾಣ ಮಾಡಲಾಗುತ್ತಿದೆ. ಆದರೆ, ಕಳಪೆ ಕಾಮಗಾರಿಯಿಂದಾಗಿ ಸರ್ಕಾರದ ಹಣ ಗೋಲ್ಮಾಲ್ ಆಗ್ತಿದೆಯಾ ಎಂಬ ಅನುಮಾನ ಮೂಡಿದೆ. ಈಗಾಗಲೇ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಕಟ್ಟಡದ ಮೇಲ್ಚಾವಣಿ, ಶೌಚಾಲಯ, ಬಾಗಿಲು ಸೇರಿದಂತೆ ಹಲವು ಭಾಗಗಳಲ್ಲಿ ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ. ಕೋಟ್ಯಂತರ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ …

Read More »

ಪಾವಗಡದಲ್ಲಿ ನಕಲಿ ನಕ್ಸಲ್ ಕಾಟ; 5 ಲಕ್ಷಕ್ಕೆ ಬೇಡಿಕೆ ಇಟ್ಟು ಬೆದರಿಕೆ

ತುಮಕೂರು: ಒಂದು ತಿಂಗಳ ಹಿಂದೆ ರೈತರ ಪಂಪ್‌ಸೆಟ್‌ಗೆ  ಬಾಂಬ್ ಇಟ್ಟು ಸ್ಫೋಟಿಸಿದ್ದಾನೆ ಎನ್ನಲಾದ ನಕಲಿ ನಕ್ಸಲ್  ಕನಕಲ ಬಂಡೆ ವೆಂಕಟೇಶ್ ಇದೀಗ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಆರು ಮಂದಿ ನಕ್ಸಲರು ಶರಣಾಗುವ ಮೂಲಕ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ. ಆದರೆ, ತುಮಕೂರು ಜಿಲ್ಲೆ ಪಾವಗಡದಲ್ಲಿ ನಕಲಿ ನಕ್ಸಲ್ ಕಾಟ ಮಾತ್ರ ನಿಂತಿಲ್ಲ. ಪಾವಗಡ ತಾಲೂಕಿನ …

Read More »

8,000 ಕ್ಯೂಸೆಕ್ ನೀರು ಹರಿಯುತ್ತಿದ್ರೂ 6,000 ಕ್ಯೂ. ನೀರು ಬಿಡ್ತಿಲ್ಲ ಎಂದ ಚಲುವರಾಯಸ್ವಾಮಿ

ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಪ್ರಸ್ತುತ 8 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದ್ದರೂ, 6 ಸಾವಿರ ಕ್ಯೂಸೆಕ್ ಕೂಡ ಬಿಡುತ್ತಿಲ್ಲ ಎಂದು ಹೇಳುವ ಮೂಲಕ ಜಲವಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ  ನೀರು ಬಿಡುಗಡೆಯನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ಬೇಜವಾಬ್ದಾರಿಯ ಹೇಳಿಕೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಇರುವುದರಿಂದ ಲೀಗಲ್ ಟೀಮ್ ನೀರು ಬಿಡುವಂತೆ ಸೂಚಿಸಿದೆ. ನ್ಯಾಯಾಲಯದ ಆದೇಶ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆಯಾಗುತ್ತದೆ ಎಂಬ ಕಾರಣಕ್ಕೆ ನೀರು …

Read More »

ಬರಪೀಡಿತ ತಾಲ್ಲೂಕುಗಳಲ್ಲಿ ಇರುವ ಏತ ನೀರಾವರಿ ಯೋಜನೆಗಳ ಮೂಲಕ ಕೆರೆ ತುಂಬಿಸುವಿಕೆಗೆ ಆದ್ಯತೆ ನೀಡಿ: ಅಜಯ್ ಸಿಂಗ್

ಬೆಂಗಳೂರು: ಬರಪೀಡಿತ ತಾಲ್ಲೂಕುಗಳಲ್ಲಿ  ಕುಡಿಯುವ ನೀರು, ಜಾನುವಾರುಗಳ ನೀರಿನ ಅಗತ್ಯ ಹಾಗೂ ಅಂತರ್ಜಲ ಮರುಪೂರಣಕ್ಕೆ ನೆರವಾಗುವ ನಿಟ್ಟಿನಲ್ಲಿ, ಪ್ರಸ್ತುತ ಇರುವ ಏತ ನೀರಾವರಿ ಯೋಜನೆಗಳು ಹಾಗೂ ಇತರೆ ಲಭ್ಯ ಮೂಲಗಳ ಮೂಲಕ ಸಾಧ್ಯವಿರುವ ಕೆರೆಗಳನ್ನು ತುಂಬಿಸುವುದಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರಂ ಸಿಂಗ್ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಬೆಂಗಳೂರಿನಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ …

Read More »

ಇಡಿ ದಾಳಿ ಬೆನ್ನಲ್ಲೇ ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಂತೋಷ್‌ ಲಾಡ್‌

ಬೆಂಗಳೂರು: ಇಡಿ ದಾಳಿ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ  ಅವರ ಬೆಂಗಳೂರಿನ ನಿವಾಸಕ್ಕೆ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಸಂತೋಷ್‌ ಎಸ್‌. ಲಾಡ್‌  ಅವರು ಭೇಟಿ ನೀಡಿ ಮಾತುಕತೆ ನಡೆಸಿದರು. ಜಾರಕಿಹೊಳಿ ಅವರ ಜೊತೆ ಹಲವು ವಿಷಯಗಳ ಕುರಿತು ಲಾಡ್‌ ಅವರು ವೇಳೆ ಚರ್ಚೆ ನಡೆಸಿದರು. ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ (ಇ,ಡಿ) ಅಧಿಕಾರಿಗಳು 3 ದಿನಗಳ ಹಿಂದೆ ದಾಳಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ …

Read More »

ರಾಜಕೀಯ ನಿವೃತ್ತಿ ಕುರಿತು ಬಹಿರಂಗ ಹೇಳಿಕೆ ಬೇಡ – ಸಿದ್ದರಾಮಯ್ಯಗೆ ರಾಹುಲ್ ಸಲಹೆ

ನವದೆಹಲಿ: ರಾಜಕೀಯ ನಿವೃತ್ತಿ ಕುರಿತು ಸಾರ್ವಜನಿಕವಾಗಿ ಪದೇಪದೇ ಹೇಳಿಕೆ ನೀಡದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಹತ್ವದ ಸಲಹೆ ನೀಡಿದ್ದಾರೆ. ದೆಹಲಿ ಭೇಟಿ ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಅವರೊಂದಿಗೆ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು. ಈ ವೇಳೆ ರಾಜಕೀಯ ನಿವೃತ್ತಿ ಬಗ್ಗೆ ಸಾರ್ವಜನಿಕವಾಗಿ ಪದೇಪದೇ ಮಾತನಾಡುವುದರಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡುವುದರ ಜೊತೆಗೆ ಸಾರ್ವಜನಿಕ ವಲಯಕ್ಕೂ …

Read More »

ಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಸಿಹಿಸುದ್ದಿ – KSRTC ಯಿಂದ ಹೆಚ್ಚುವರಿ 2,400 ಬಸ್‌ಗಳ ವ್ಯವಸ್ಥೆ

ಬೆಂಗಳೂರು: ಗೌರಿ – ಗಣೇಶ ಹಬ್ಬದ ಹಿನ್ನೆಲೆ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಪ್ರಯಾಣಿಕರ ದಟ್ಟಣೆ ಗಮನದಲ್ಲಿಟ್ಟುಕೊಂಡು ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ. ಹೆಚ್ಚುವರಿಯಾಗಿ 270 ರಿಸರ್ವೇಶನ್ ಬಸ್‌ಗಳನ್ನ ನಿಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ 240 ಬಿಎಂಟಿಸಿ ಬಸ್‌ಗಳನ್ನ ಕಾರ್ಯಾಚರಣೆಗೆ ಸಿದ್ಧವಾಗಿರಿಸಲಾಗಿದೆ. ಹಬ್ಬದ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ …

Read More »

ವೈದ್ಯಕೀಯದಲ್ಲಿ 384 ಸೀಟು ಉಳಿಕೆ, ದಂತ ವೈದ್ಯಕೀಯದ ಎಲ್ಲಾ ಸೀಟು ಹಂಚಿಕೆ: ಕೆಇಎ

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಪ್ರಕಟಿಸಿದೆ. ಎಂಸಿಸಿ ಮತ್ತು ಕೆಇಎ – ಎರಡೂ ಕೌನ್ಸೆಲಿಂಗ್ ಗಳಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಒಂದು ವೇಳೆ ಎಂಸಿಸಿ ಸೀಟಿಗೆ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಅಂತಹವರು ಸೆ.14ರ ಸಂಜೆ 5ಗಂಟೆವರೆಗೆ ಚಾಯ್ಸ್- 4 ಆಯ್ಕೆ‌‌ ಮಾಡಿಕೊಂಡು ಕೆಇಎಯಿಂದ ಹೊರ ಹೋಗುವುದಕ್ಕೆ ಅವಕಾಶ ನೀಡಲಾಗಿದೆ ಎಂದು …

Read More »

ಐದೇ ದಿನಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಫಲಿತಾಂಶ ಪ್ರಕಟ: ಕೆಇಎ

ಬೆಂಗಳೂರು: ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್‌ಟೇಬಲ್  ಹುದ್ದೆಗಳಿಗೆ ಸೆ.6ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಕೇವಲ ಐದು ದಿನಗಳಲ್ಲಿಯೇ ಪ್ರಕಟಿಸಿ, ದಾಖಲೆ ಬರೆದಿದೆ. ಈ ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಸೆ.14ರಂದು ಸಂಜೆ‌ 5.30ರೊಳಗೆ ನಿಗದಿತ ಲಿಂಕ್ https://cetonline.karnataka.gov.in/kea/ ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ  ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆ ನಡೆದ …

Read More »