Breaking News

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ

ಧಾರವಾಡ: ಜಿ.ಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಡಿ ಜೈಲು ಪಾಲಾಗಿದ್ದ ಶಾಸಕ ವಿನಯ್ ಕುಲಕರ್ಣಿ  ಅವರು ಆರು ವರ್ಷಗಳ ಬಳಿಕ ಇದೀಗ ಧಾರವಾಡ ಜಿಲ್ಲಾ ಪ್ರವೇಶ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಅಲ್ಲಿಂದ ನೇರವಾಗಿ ಧಾರವಾಡದ ಪ್ರಸಿದ್ಧ ಮುರುಘಾಮಠಕ್ಕೆ ಬಂದ ಶಾಸಕ ವಿನಯ್ ಅವರನ್ನು ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು. ಮುರುಘೇಂದ್ರ ಮಹಾಶಿವಯೋಗಿಗಳ ಹಾಗೂ ಮೃತ್ಯುಂಜಯಪ್ಪಗಳ ಗದ್ದುಗೆಗೆ ಶಾಸಕ ವಿನಯ್ ಪೂಜೆ …

Read More »

ಅರಮನೆ ಪ್ರವೇಶದ ವೇಳೆ ಗಾಬರಿಗೊಂಡ ಶ್ರೀರಾಮ ಆನೆ – ಕೆಲಕಾಲ ಆತಂಕ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಹಿನ್ನೆಲೆಯಲ್ಲಿ ದಸರಾ ಗಜಪಡೆಗಳಿಗೆ ಅರಣ್ಯ ಭವನದಲ್ಲಿ ಇಂದು ಬೆಳಗ್ಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಲಾಯಿತು. ಒಟ್ಟು 9 ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗಜಪಡೆಗಳು ಮೈಸೂರು ಅರಮನೆಯತ್ತ ಹೆಜ್ಜೆ ಹಾಕಿದವು. ಅರಮನೆ ದ್ವಾರಕ್ಕೆ ಆಗಮಿಸಿದ ದಸರಾ ಗಜಪಡೆಗಳನ್ನ  ಇಂದು ಸಂಪ್ರದಾಯಬದ್ಧವಾಗಿ ಸ್ವಾಗತಿಸಲಾಯಿತು. ಶುಭ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆ ಪ್ರವೇಶಿಸಬೇಕಿದ್ದ ಹಿನ್ನೆಲೆ ಮೈಸೂರು ಜಿಲ್ಲಾಡಳಿತ ವತಿಯಿಂದ ಆನೆಗಳನ್ನ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅರಣ್ಯ …

Read More »

ಗ್ರಾಮೀಣಾಭಿವೃದ್ಧಿ ಇಲಾಖೆ ಎಇಇ ನೇಮಕಾತಿ ಅಕ್ರಮದಲ್ಲಿ ಪ್ರಿಯಾಂಕ್ ಖರ್ಗೆ ಭಾಗಿ: ಹೆಚ್‌ಡಿಕೆ ಬಾಂಬ್‌

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನಿಯರ್ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ. ಈ ಅಕ್ರಮದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ  ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಭಾರೀ ಅಕ್ರಮಗಳ ಕುರಿತು ಆರೋಪ ಮಾಡಿದ್ದಾರೆ. ಎಇಇ ಅಕ್ರಮದ ಬಗ್ಗೆ ತನಿಖೆ ನಡೆದಿದೆ. 24 ಅಭ್ಯರ್ಥಿಗಳ ನೇಮಕಾತಿಯಲ್ಲಿ ಅಕ್ರಮ ಸಾಬೀತಾಗಿದ್ದರೂ, ಅಂದಿನ ಗ್ರಾಮೀಣಾಭಿವೃದ್ಧಿ …

Read More »

ಪ್ರಪಾತಕ್ಕೆ ಉರುಳಿದ ಬಸ್‌; ತನಿಖೆಗೆ ತೆರಳಿದ್ದ ಬೆಂಗ್ಳೂರು ಇನ್ಸ್‌ಪೆಕ್ಟರ್‌ ಸಾವು

ಭೋಪಾಲ್‌: ಸೈಬರ್‌ ಕ್ರೈಂ  ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಬಸ್‌ ಪ್ರಪಾತಕ್ಕೆ ಉರುಳಿದ ಪರಿಣಾಮ ಇನ್ಸ್‌ಪೆಕ್ಟರ್‌ ರವಿ ಕೆ.ಬಿ.  ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ರವಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ …

Read More »

ಮಂಡ್ಯ ಕಾರಾಗೃಹದಲ್ಲಿ ರಾಜ್ಯಾತಿಥ್ಯ ಆರೋಪ – ವೈರಲ್ ಪತ್ರದಲ್ಲಿ ಬೀಡಿ-ಸಿಗರೇಟ್ ಬೇಡಿಕೆಯ ಸೀಕ್ರೆಟ್ ಬಯಲು

ಮಂಡ್ಯ: ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ನೀಡಲು ಅಧಿಕಾರಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಪತ್ರ ವೈರಲ್ ಆದ ಬೆನ್ನಲ್ಲೇ ಪ್ರಕರಣಕ್ಕೀಗ ಸ್ಫೋಟಕ ತಿರುವು ಸಿಕ್ಕಿದೆ. ಜೈಲಧಿಕಾರಿಗಳ ಆಂತರಿಕ ತನಿಖೆಯಲ್ಲಿ ಇದು ಕೈದಿಗಳೇ ಹೆಣೆದ ಷಡ್ಯಂತ್ರ ಎಂಬ ಸತ್ಯಾಂಶ ಬೆಳಕಿಗೆ ಬಂದಿದ್ದು, ಜೈಲು ಅಧೀಕ್ಷಕಿ ಶಾಂತಮ್ಮ ಅವರು ಈ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್  ಅವರು ಮಂಡ್ಯ ಜೈಲಿಗೆ ಮೊನ್ನೆ ಭೇಟಿ ನೀಡಿದ್ದರು. …

Read More »

ಓವರ್‌ಟೇಕ್‌ ಭರದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ

ತುಮಕೂರು: ಓವರ್‌ಟೇಕ್‌ ಮಾಡುವಾಗ ಎರಡು ಕಾರುಗಳ  ನಡುವೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಚಿಕ್ಕನಾಯಕನಹಳ್ಳಿ  ತಾಲೂಕಿನ ಗೋಡೆಕೆರೆ ಗೇಟ್ ಬಳಿ ನಡೆದಿದೆ. ವೋಕ್ಸವೇಗನ್ ಹಾಗೂ ಕಿಯಾ ಸಾನೆಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಎರಡೂ ಕಾರಿನಲ್ಲಿದ್ದ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ತುರುವೇಕೆರೆ ಮೂಲದ ಆನಂ (3), ದಾವುದ್ ಪಾಷ (38) ಹಾಗೂ ಚಿಕ್ಕನಾಯಕನಹಳ್ಳಿ ಮೂಲದ ಅನಿಲ್ (32), ವಿವೇಕ್ (31) ಮೃತರು. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. …

Read More »

UGC-NET: 84 ವಿಷಯಗಳಿಗೆ ಫಲಿತಾಂಶ ಪ್ರಕಟ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ 84 ವಿಷಯಗಳಿಗೆ ನಡೆದ UGC-NET ಜೂನ್ 2026 ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈಗ ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಅಧಿಕೃತ NTA ವೆಬ್‌ಸೈಟ್‌ನಲ್ಲಿ ತಮ್ಮ ಅಂಕಗಳು ಮತ್ತು ಅರ್ಹತಾ ಸ್ಥಿತಿಯನ್ನು ಪರಿಶೀಲಿಸಬಹುದು. ಪರೀಕ್ಷೆಯ ಬಗ್ಗೆ ವಾರಗಳ ಅನಿಶ್ಚಿತತೆಯ ನಂತರ UGC NET 2026 ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಆ ಪತ್ರಿಕೆಗಳಲ್ಲಿ ವರದಿಯಾದ ಸಮಸ್ಯೆಗಳನ್ನು ಅನುಸರಿಸಿ NTA ಮೂರು ವಿಷಯಗಳಿಗೆ ಮರು …

Read More »

ಸಿಎನ್‌ಜಿ ಬೆಲೆ 4 ರೂ. ಏರಿಕೆ – ಇಂದಿನಿಂದಲೇ ಹೊರ ದರ ಜಾರಿ

ನವದೆಹಲಿ: ದೆಹಲಿ ಹಾಗೂ ಸುತ್ತಮುತ್ತಲಿನ ನಗರಗಳಲ್ಲಿ ಸಂಕುಚಿತ ನೈಸರ್ಗಿಕ ಅನಿಲ  ಬೆಲೆ ಏರಿಕೆಯಾಗಿದ್ದು, ಆ.29ರ ಶನಿವಾರ (ಇಂದು) ಬೆಳಗ್ಗೆ 6 ಗಂಟೆಯಿಂದ ಪ್ರತಿ ಕೆಜಿಗೆ 3.89 ರೂ. ಹೆಚ್ಚಳವಾಗಲಿದೆ ಎಂದು ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್  ತಿಳಿಸಿದೆ. ಬೆಲೆ ಏರಿಕೆಯ ಬಳಿಕ ದೆಹಲಿಯಲ್ಲಿ CNG ದರವು ಪ್ರತಿ ಕೆಜಿಗೆ 86.98 ರೂ. ತಲುಪಿದೆ. ಇದಕ್ಕೂ ಮೊದಲು CNG ದರ ಪ್ರತಿ ಕೆಜಿಗೆ 83.09 ರೂ. ಇತ್ತು. ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷದ …

Read More »

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ವ್ಯಕ್ತಿ ಆತ್ಮಹತ್ಯೆ

ಮೈಸೂರು: ಮೈಕ್ರೋಫೈನಾನ್ಸ್  ಕಿರುಕುಳಕ್ಕೆ ಹೆದರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರದಲ್ಲಿ ನಡೆದಿದೆ. ನಂಜಾಪುರದ ವಸಂತಕುಮಾರ್ ಪುತ್ರ ರಂಜಿತ್ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮನೆ ನಿರ್ಮಾಣಕ್ಕಾಗಿ ಮೈಕ್ರೋಫೈನಾನ್ಸ್‌ನಲ್ಲಿ 12 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಮರುಪಾವತಿಯಲ್ಲಿ ವಿಳಂಬ ಹಿನ್ನೆಲೆ 2 ಬಾರಿ ಫೈನಾನ್ಸ್ ನವರು ಮನೆಗೆ ಬೀಗ ಹಾಕಿದ್ದರು. ಈವರೆಗೆ 8 ಲಕ್ಷ ರೂ. ಪಾವತಿ ಮಾಡಿದ್ದ ರಂಜಿತ್‌ ಇತ್ತೀಚೆಗೆ 3 …

Read More »

ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ: ಸಂಜೆ ಗುರು ಅನುಗ್ರಹ ಪ್ರಶಸ್ತಿ ಪ್ರದಾ‌ನ

ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳು  ಸಶರೀರರಾಗಿ ವೃಂದಾವನಸ್ಥರಾಗಿ 355 ವರ್ಷಗಳು ಸಂದಿರುವ ಹಿನ್ನೆಲೆ ಎಲ್ಲೆಡೆ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆಯ ಸಡಗರವಿದ್ದು, ಬೆಳಗಿನ ಜಾವದಿಂದಲೇ ನಾನಾ ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಇಂದು ವಿಶೇಷವಾಗಿ ನಿರ್ಮಾಲ್ಯ ವಿಸರ್ಜನ, ಉತ್ಸವ ರಾಯರ ಪಾದಪೂಜೆ, ಪಂಚಾಮೃತ, ಅಲಂಕಾರ ಸಂತರ್ಪಣ, ಹಸ್ತೋದಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ನಡೆಯಲಿದೆ. ಮಠದ ಪ್ರಾಕಾರದಲ್ಲಿ ರಜತ ಸಿಂಹ, ಗಜ …

Read More »