ಹಣ ಡಬ್ಲಿಂಗ್ ದಂಧೆ ಪ್ರಕರಣದ ಸಾಕ್ಷಿಯ ಹತ್ಯೆ – ಚಿತ್ರದುರ್ಗದ ಜಿಪಂ ಮಾಜಿ ಸದಸ್ಯ ಅರೆಸ್ಟ್

ಚಿತ್ರದುರ್ಗ: ಹಣ ಡಬ್ಲಿಂಗ್ ದಂಧೆ ಮತ್ತು ಕೊಲೆ ಪ್ರಕರಣದ ಆರೋಪಿ ಆಗಿರುವ ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್ ಅಲಿಯಾಸ್ ಕೋಟಾನೋಟ್ ಚಂದ್ರ ಬಂಧಿತ ಆರೋಪಿ. ಸಾವನ್ನಪ್ಪಿರುವ ವ್ಯಕ್ತಿ ಮಲ್ಲಿಕಾರ್ಜುನ (40) ಅವರಿಗೆ ಲೋನ್ ಕೊಡಿಸುವುದಾಗಿ ನಂಬಿಸಿ ಈತ ವಂಚಿಸಿದ್ದಾನೆ. ಅದಲ್ಲದೆ, ಮಲ್ಲಿಕಾರ್ಜುನ ಅವರ ಬ್ಯಾಂಕ್ ಖಾತೆ ಮೂಲಕ ಹಣ ಡಬ್ಲಿಂಗ್ ದಂಧೆ ನಡೆಸಿದ್ದ. ಇದಾದ ಬಳಿಕ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮಲ್ಲಿಕಾರ್ಜುನ ಸಾಕ್ಷಿಯಾಗಿದ್ದರು. ಇದರಿಂದ …

Read More »

KPCC ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಫಿಕ್ಸ್‌?

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಹುದ್ದೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಹೆಸರು ಖಚಿತಗೊಂಡಿದೆ. ಈ ಹಿನ್ನೆಲೆ ತೆರವಾಗುವ ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ಯಾರು ಬರುತ್ತಾರೆ ಅನ್ನೋ ಕುತೂಹಲಕ್ಕೂ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌ ಹಾಕಿದೆ. ಶಾಸಕಾಂಗ ಪಕ್ಷದ ನಾಯಕನಾಗುತ್ತಿದ್ದಂತೆ ಡಿಕೆ ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅದರಿಂದ ತೆರವಾಗುವ ಸ್ಥಾನಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಹೆಸರು ಬಹುತೇಕ ಅಂತಿಮಗೊಂಡಿದೆ ಎಂದು ಪಕ್ಷದ ಆಪ್ತ ಮೂಲಗಳು …

Read More »

ಮಾಜಿ ಸಚಿವ ವೆಂಕಟರಮಣಪ್ಪ ನಿಧನ

ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ವೆಂಕಟರಮಣಪ್ಪ ಶುಕ್ರವಾರ (ಇಂದು) ನಿಧನರಾಗಿದ್ದಾರೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದು, ಪುತ್ರ ಶಾಸಕ ಹೆಚ್‌.ವಿ ವೆಂಕಟೇಶ್‌, ಕುಮಾರಸ್ವಾಮಿ, ಪುತ್ರಿ ಪದ್ಮಾವತಿ ಅವರನ್ನ ಅಗಲಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ವೆಂಕಟರಮಣಪ್ಪ ಅವರನ್ನ ಬೆಂಗಳೂರಿನ ಪೋರ್ಟೀಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ (ಇಂದು) ಬೆಳಗ್ಗಿನ ಜಾವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವೆಂಕಟರಮಣಪ್ಪ ಅವರು 2008 ರ ಅವಧಿಯಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ …

Read More »

ಮಾಜಿ ಸಚಿವ ವೆಂಕಟರಮಣಪ್ಪ ಅಗಲಿಕೆಗೆ ಜಿ.ಪರಮೇಶ್ವರ್‌ ಕಂಬನಿ

ತುಮಕೂರು: ಗೃಹ ಸಚಿವ ಡಾ. ಜಿ.ಪರಮೇಶ್ವರ್‌  ಅವರು ಪಾವಗಡ ಮಾಜಿ ಶಾಸಕರು ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು ಬೆಂಗಳೂರಿನ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್‌ ಆಸ್ಪತ್ರೆಯಲ್ಲಿಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರದ್ಧಾಂಜಲಿ ಸಲ್ಲಿಸಿ, ಮೃತರ ಆತ್ಮಕ್ಕೆ ಸದ್ಗತಿ ಕೋರಿ, ಶಾಸಕ ಹೆಚ್.ವಿ.ವೆಂಕಟೇಶ್ ಮತ್ತು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ವೆಂಕಟರಮಣಪ್ಪ ಅಗಲಿಕೆಯು ಅತ್ಯಂತ ನೋವಿನ ವಿಚಾರ. ಸರಳ ವ್ಯಕ್ತಿತ್ವದಿಂದ …

Read More »

ಮೂರು ದಿನಗಳ ಬಳಿಕ ಮೌನ ಮುರಿದ ಡಿಕೆ ಶಿವಕುಮಾರ್‌

ನವದೆಹಲಿ: ಕಳೆದ ಮೂರು ದಿನಗಳಿಂದಲೂ ಮೌನವಾಗಿದ್ದ ಡಿಕೆ ಶಿವಕುಮಾರ್‌ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್‌ ನಾಯಕರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ನಾಳೆ ಸಂಜೆ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಎಲ್ಲ ಶಾಸಕರಿಗೂ ಬೆಂಗಳೂರಿನಲ್ಲೇ ಇರಲು ಸೂಚನೆ ನೀಡಲಾಗಿದೆ. ಹೈಕಮಾಂಡ್ ನಾಯಕರ ಸೂಚನೆಯ ಮೇರೆಗೆ ಈ ಸಭೆಯ ಸಮಯವನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದರು. ಮೊದಲಿಗೆ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಳ್ಳಬೇಕು, …

Read More »

ಸಿದ್ದರಾಮಯ್ಯ ರಾಜೀನಾಮೆಗೆ ಎಂ.ಸಿ ಸುಧಾಕರ್ ಕಣ್ಣೀರು

ದಾವಣಗೆರೆ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದನ್ನು ನೆನೆದು ಸಿದ್ದರಾಮಯ್ಯ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಎಂ.ಸಿ ಸುಧಾಕರ್  ಭಾವುಕರಾದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ  ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ನೆನೆದು ಭಾವುಕರಾದರು. ಸಿದ್ದರಾಮಯ್ಯನವರನ್ನು ಕಳೆದ ಎರಡು, ಮೂರು ದಿನಗಳಿಂದ ನೋಡಲಾಗುತ್ತಿಲ್ಲ. ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋಗಿ, ಒಂದು ಜಾತಿಗೆ ಸೀಮಿತವಾಗದೇ ಎಲ್ಲಾ ಸಮುದಾಯಕ್ಕೆ ಸಮಾನತೆ ನೀಡಿದ ವ್ಯಕ್ತಿ ಎಂದರೆ ಅದು ಸಿದ್ದರಾಮಯ್ಯನವರು. ಆದರೆ ಅಂತಹ …

Read More »

ಮೂರು ದಿನಗಳ ಬಳಿಕ ಮೌನ ಮುರಿದ ಡಿಕೆ ಶಿವಕುಮಾರ್‌

ನವದೆಹಲಿ: ಕಳೆದ ಮೂರು ದಿನಗಳಿಂದಲೂ ಮೌನವಾಗಿದ್ದ ಡಿಕೆ ಶಿವಕುಮಾರ್‌ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್‌ ನಾಯಕರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ನಾಳೆ ಸಂಜೆ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಎಲ್ಲ ಶಾಸಕರಿಗೂ ಬೆಂಗಳೂರಿನಲ್ಲೇ ಇರಲು ಸೂಚನೆ ನೀಡಲಾಗಿದೆ. ಹೈಕಮಾಂಡ್ ನಾಯಕರ ಸೂಚನೆಯ ಮೇರೆಗೆ ಈ ಸಭೆಯ ಸಮಯವನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದರು. ಮೊದಲಿಗೆ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಳ್ಳಬೇಕು, …

Read More »

ಡಿಕೆಶಿ ಪಟ್ಟಾಭಿಷೇಕಕ್ಕೆ ರಾಮನಗರದಿಂದ 50 ಸಾವಿರ ಜನ!

ರಾಮನಗರ: ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಅವರ ತವರು ಜಿಲ್ಲೆ ರಾಮನಗರದಲ್ಲಿ ಭರ್ಜರಿ ಸಿದ್ಧತೆಗಳು ಆರಂಭವಾಗಿವೆ. ಹೈಕಮಾಂಡ್ ಮಟ್ಟದಲ್ಲಿ ಪ್ರಕ್ರಿಯೆಗಳು ಚುರುಕಾಗಿರುವ ಬೆನ್ನಲ್ಲೇ, ಪದಗ್ರಹಣ ಕಾರ್ಯಕ್ರಮಕ್ಕೆ ರಾಮನಗರ ಜಿಲ್ಲೆಯಿಂದಲೇ ಬರೋಬ್ಬರಿ 40 ರಿಂದ 50 ಸಾವಿರ ಜನರನ್ನು ಬೆಂಗಳೂರಿಗೆ ಕರೆದೊಯ್ಯಲು ಕಾಂಗ್ರೆಸ್ ನಿರ್ಧರಿಸಿದೆ. ಡಿಕೆಶಿ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಗಳ ಸಂಬಂಧ ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಮುಖ ಮುಖಂಡರು ಹಾಗೂ …

Read More »

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರಾಣಿ ಚನ್ನಮ್ಮ ಮ್ಯೂಸಿಯಂ

ಬೆಳಗಾವಿಗೆ ಕಮಲ ಬಸದಿ  ಮಾದರಿಯಲ್ಲೇ ಇಲ್ಲಿನ ವಿಮಾನ ನಿಲ್ದಾಣದ ಟರ್ಮಿನಲ್-2 ಕಟ್ಟಡ ತಲೆಎತ್ತಲಿದೆ. ಐತಿಹಾಸಿಕ ಬಸದಿಗಿಂತ ಈ ಕಟ್ಟಡ ನಾಲ್ಕು ಪಟ್ಟು ದೊಡ್ಡದಾಗಿರಲಿದೆ. ಸದ್ಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಉದ್ದೇಶದಿಂದ 223 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಟರ್ಮಿನಲ್-2ರಲ್ಲಿ ಜಿಲ್ಲೆಯ ಇತಿಹಾಸ, ಕಲೆ, ಸಂಸ್ಕೃತಿ ಮತ್ತು ಪರಂಪರೆ ಪರಿಚಯಿಸುವ ಪ್ರಯತ್ನ ಮಾಡಲಾಗುತ್ತಿದೆ. ಅದರ ಭಾಗವಾಗಿ ಟರ್ಮಿನಲ್‌ನ ಇಡೀ ಕಟ್ಟಡವೇ ಕಮಲ ಬಸದಿ ವಿನ್ಯಾಸದಲ್ಲಿರಲಿದೆ. ಈಗಾಗಲೇ ಶೇ.87ರಷ್ಟು ಕಾಮಗಾರಿ ಪೂರ್ಣಗೊಂಡಿದೆ. …

Read More »

ಉತ್ತರ ವಲಯ ಐಜಿಪಿಯಾಗಿ ಸಂದೀಪ ಪಾಟೀಲ ಅಧಿಕಾರ ಸ್ವೀಕಾರ

ಬೆಳಗಾವಿ : ಉತ್ತರ ವಲಯ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಸಂದೀಪ ಪಾಟೀಲ ಗುರುವಾರ ಇಲ್ಲಿನ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈವರೆಗಿನ ಉತ್ತರ ವಲಯ ಐಜಿಪಿ ಡಾ.ಚೇತನಸಿಂಗ್ ರಾಥೋರ್, ಪಾಟೀಲರಿಗೆ  ಅಧಿಕಾರ ಹಸ್ತಾಂತರಿಸಿದರು. ಬಳಿಕ ಉತ್ತರ ವಲಯದ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಕಾನೂನು-ಸುವ್ಯವಸ್ಥೆ, ಅಪರಾಧ ನಿಯಂತ್ರಣ, ಗಡಿ ಭಾಗದ ಭದ್ರತಾ ವ್ಯವಸ್ಥೆ ಹಾಗೂ ಪ್ರಮುಖ ಪ್ರಕರಣಗಳ ಕುರಿತು ಪ್ರಾಥಮಿಕ ಮಾಹಿತಿ ಪಡೆದುಕೊಂಡ ಸಂದೀಪ ಪಾಟೀಲ, ಅಧೀನ ಅಧಿಕಾರಿ …

Read More »