ಬಾಗಲಕೋಟೆ: ವಾಂಬೆ ಕಾಲೋನಿ ನಮ್ಮ ಕ್ಲಿನಿಕ್ನಲ್ಲಿ ವೈದ್ಯಾಧಿಕಾರಿಯಾಗಿದ್ದುಕೊಂಡೇ ನಿಯಮಬಾಹಿರವಾಗಿ ವೈದ್ಯಕೀಯ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದ ವೈದ್ಯಾಧಿಕಾರಿ ಡಾ. ಅಂಕಿತಾ ಯರಗಲ್ ಅವರನ್ನು ಗುತ್ತಿಗೆ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆಗೊಳಿಸಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜಕುಮಾರ ಯರಗಲ್ ಆದೇಶ ಹೊರಡಿಸಿದ್ದಾರೆ. ಹಾಲಿ ಡಿಹೆಚ್ಒ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಹಾಲಿ ಶಾಸಕ ಉಮೇಶ್ ಮೇಟಿ ಅವರ ಸೊಸೆಯಾಗಿರುವ ಡಾ. ಅಂಕಿತಾ ಯರಗಲ್ ನಮ್ಮ ಕ್ಲಿನಿಕ್ನಲ್ಲಿ ವೈದ್ಯಾಧಿಕಾರಿಯಾಗಿ ನಿಯೋಜಿಸಲಾಗಿತ್ತು. ಅಂಕಿತಾ …
Read More »ಜಮೀನು ವಿಚಾರಕ್ಕೆ ಗಲಾಟೆ; ಸ್ವಂತ ಚಿಕ್ಕಪ್ಪನಿಗೆ ಚಾಕು ಇರಿದ ಯುವಕ
ಶಿವಮೊಗ್ಗ: ಸಹೋದರರ ನಡುವೆ ಜಮೀನು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೋರ್ವ ತನ್ನ ಚಿಕ್ಕಪ್ಪನಿಗೆ ಚಾಕು ಇರಿದ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ನಿವಾಸಿ ಶ್ರೀನಿವಾಸ್ (52) ಚಾಕು ಇರಿತಕ್ಕೊಳಗಾದ ವ್ಯಕ್ತಿ. ರಾಜಪ್ಪ ಅವರ ಪುತ್ರ ಮಂಜುನಾಥ್ ಚಾಕು ಇರಿದ ಆರೋಪಿ. ಪುರದಾಳು ಗ್ರಾಮದ ರಾಜಪ್ಪ ಹಾಗೂ ಶ್ರೀನಿವಾಸ್ ಸಹೋದರರಾಗಿದ್ದು, ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ …
Read More »ಹುಡುಗಿ ಸಿಗುತ್ತಿಲ್ಲ ಅಂತಾ ಎಂಬಿಎ ಪದವೀಧರ ಅಳಲು; ನೀನೇ ಲವ್ ಮಾಡು ಅಂತಾ ಸಲಹೆ ಕೊಟ್ಟ ಶಾಸಕ
ಹಾಸನ: ʻಪ್ರಜಾ ಸೇವೆʼ ಆಂದೋಲನದಲ್ಲಿ ಯುವಕನೋರ್ವ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಅಂತಾ ಶಾಸಕರ ಎದುರು ಅಳಲು ತೋಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ಮಲ್ಲಿಪಟ್ಟಣದಲ್ಲಿ ನಡೆದಿದೆ, ಯುವಕನ ಬೇಡಿಕೆಗೆ ಶಾಸಕರು ತಬ್ಬಿಬ್ಬಾಗಿದ್ದಾರೆ. ಹೌದು. ಅರಕಲಗೂಡು ಕ್ಷೇತ್ರದ ಶಾಸಕ ಎ.ಮಂಜು ಅಧ್ಯಕ್ಷತೆಯಲ್ಲಿ ಸೆ.12 ರ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಆಲದಹಳ್ಳಿ ಗ್ರಾಮದ ಸಂತೋಷ್ ಎಂಬ ಯುವಕ ಮದುವೆಯಾಗಲು ಹುಡುಗಿ ಕೊಡಿಸಿ ಎಂದು ʻಪ್ರಜಾ ಸೇವೆʼ ಆಂದೋಲನದಲ್ಲಿ ಶಾಸಕರಿಗೆ ಅರ್ಜಿ …
Read More »ಗಂಡನಿಂದ ಪತ್ನಿಗೆ ಗುಂಡು, ಬಳಿಕ ತಾನೂ ಶೂಟ್ ಮಾಡಿಕೊಂಡ ವೃದ್ಧ!
ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವೃದ್ಧ ದಂಪತಿ ಗುಂಡೇಟಿಗೆ ಬಲಿಯಾಗಿದ್ದಾರೆ. ಕನ್ನಿಕಂಡ ಕುಟುಂಬದ 74 ವರ್ಷದ ಸುಬ್ಬಯ್ಯ ಹಾಗೂ ಅವರ 72 ವರ್ಷದ ಪತ್ನಿ ಭೋಜಮ್ಮ ಮೃತರು. ಪ್ರಾಥಮಿಕ ಮಾಹಿತಿಯಂತೆ, ಸುಬ್ಬಯ್ಯ ಅವರು ಪತ್ನಿಗೆ ಗುಂಡು ಹಾರಿಸಿ, ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಕೊಡಗು ಜಿಲ್ಲಾ ಪೊಲೀಸ್ …
Read More »ಬೆಳಗಾವಿಯಲ್ಲಿ ಬಸ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವು
ಬೆಳಗಾವಿಯ ಚಾವ್ಹಾಣ್ ಗಲ್ಲಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಘಟನೆ ಬೆನ್ನಲ್ಲೇ ಜಿಲ್ಲೆಯಲ್ಲೇ ಮತ್ತೊಂದು ದುರಂತ ಸಂಭವಿಸಿದೆ. ಗಣೇಶ ಮೆರವಣಿಗೆ ನೋಡಿ ಬೈಕ್ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಮೂವರು ಯುವಕರು ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ. ಸವದತ್ತಿಯಿಂದ ಧಾರವಾಡದತ್ತ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ …
Read More »ಸ್ಕೂಟರ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ – ಹಬ್ಬ ಮುಗಿಸಿ ಬೆಂಗ್ಳೂರಿಗೆ ಹೊರಟಿದ್ದ ಮೂವರು ದುರ್ಮರಣ
ಮಂಡ್ಯ: ಸ್ಕೂಟರ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದಿದೆ. ಕೊಪ್ಪ ನಿವಾಸಿಗಳಾದ ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಮೃತ ದುರ್ದೈವಿಗಳು. ಸ್ಕೂಟರ್ಗೆ ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಬಳಿಕ ಮೂವರ ಮೇಲೆ ಹರಿದಿದೆ. ಇದರಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಮೂವರು ಗಣೇಶ ಹಬ್ಬ ಮುಗಿಸಿ ಮುಂಜಾನೆ ಬೆಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು …
Read More »ಗಣೇಶನ ಮೂರ್ತಿ ತರಲು ಹೋಗುತ್ತಿದ್ದಾಗ ಬೈಕ್ ಅಪಘಾತ – ಸವಾರ ದುರ್ಮರಣ
ಕಲಬುರಗಿ: ಗಣೇಶನ ಮೂರ್ತಿ ತರಲು ಹೋಗುತ್ತಿರುವಾಗ ಬೈಕ್ ಅಪಘಾತವಾಗಿ ಸವಾರ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಕಲಬುರಗಿ ನಗರದ ಹೀರಾಪುರ ರಸ್ತೆಯ ಫ್ಲೈ ಓವರ್ ಮೇಲೆ ನಡೆದಿದೆ. ಕೊಟನೂರು ಬಡಾವಣೆಯ ಪ್ರಶಾಂತ್ ಬಿರಾದರ್ (23) ಮೃತ ಯುವಕ. ಕಳೆದ ರಾತ್ರಿ ಸ್ನೇಹಿತರೊಡನೆ ಗಣೇಶ ಮೂರ್ತಿ ತರಲು ಹೋಗುತ್ತಿದ್ದರು. ಈ ವೇಳೆ ಪಕ್ಕದ ಬೈಕ್ ಟಚ್ ಆಗಿ ಕೆಳಗೆ ಬಿದ್ದು ಇಬ್ಬರು ಸವಾರರ ತಲೆಗೆ ಗಂಭೀರ ಗಾಯವಾಗಿದೆ. ಇಬ್ಬರ ಪೈಕಿ …
Read More »ಗಣೇಶ ಚತುರ್ಥಿ ಸಂಭ್ರಮದಲ್ಲೇ ಬೆಳಗಾವಿಯಲ್ಲಿ ದುರಂತ – ಒಂದೇ ಕುಟುಂಬದ ನಾಲ್ವರು ಸಜೀವ ದಹನ!
ಬೆಳಗಾವಿ: ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಬೆಳಗಾವಿಯಲ್ಲಿ ತಡರಾತ್ರಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ನಗರದ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾವ್ಹಾಟ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಡರಾತ್ರಿ ಮನೆಯಲ್ಲಿ ಎಲ್ಲರೂ ನಿದ್ರಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ಆವರಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು …
Read More »ಹೆಬ್ಬಾಳ್ಕರ್ ಪುತ್ರನಿಗೆ ಮಹತ್ವದ ಹೊಣೆ – ಗೋವಾ ಚುನಾವಣಾ ಮಾಧ್ಯಮ ಸಂಯೋಜಕರಾಗಿ ನೇಮಕ
ಬೆಳಗಾವಿ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ಚುನಾವಣಾ ಮಾಧ್ಯಮ ಮತ್ತು ಪ್ರಚಾರ ತಂತ್ರಗಾರಿಕೆಗಾಗಿ ನಾಲ್ವರು ಪ್ರಮುಖ ಸಂಯೋಜಕರನ್ನು ನೇಮಿಸಿದೆ. ಈ ಪೈಕಿ ಬೆಳಗಾವಿಯ ಯುವ ಕಾಂಗ್ರೆಸ್ ಮುಖಂಡ ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರಿಗೆ ಮಹತ್ವದ ಜವಾಬ್ದಾರಿ ವಹಿಸಲಾಗಿದೆ. ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಮುಂಬರುವ …
Read More »ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ನರಗುಂದ ಬಂದ್
ಗದಗ: ಬರ ಘೋಷಣೆ, ಬರ ಪರಿಹಾರ, ಬೆಳೆ ವಿಮೆ ಪರಿಹಾರ, ರಾಷ್ಟ್ರೀಕೃತ ಬ್ಯಾಂಕ್ಗಳ ರೈತರ ಸಾಲ ಮನ್ನಾ ಘೋಷಿಸುವಂತೆ ಆಗ್ರಹಿಸಿ ಜಿಲ್ಲೆಯ ನರಗುಂದ ಪಟ್ಟಣ ಬಂದ್ಗೆ ಇಂದು (ಸೆ.12) ಕರೆ ನೀಡಲಾಗಿದೆ. ಗದಗ ಜಿಲ್ಲೆಯ ವಿವಿಧ ರೈತ ಸಂಘಟನೆಗಳು, ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವೇದಿಕೆ ಸೇರಿದಂತೆ ಅನೇಕ ಸಂಘಟನೆಗಳು ಒಟ್ಟಾಗಿ ನರಗುಂದ ಬಂದ್ಗೆ ಕರೆ ನೀಡಿವೆ. ಸದ್ಯ ಬಸ್ ಸಂಚಾರ, ವ್ಯಾಪಾರ, ವಹಿವಾಟು, ಅಂಗಡಿ ಬಂದ್ ಮಾಡಲಾಗಿದೆ. ಹುಬ್ಬಳ್ಳಿ-ನರಗುಂದ-ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ …
Read More »
Laxmi News 24×7