ಬಾಗಲಕೋಟೆ, ಜು. 23: ಬಸವೇಶ್ವರ ಕಲಾ ಮಹಾವಿದ್ಯಾಲಯದ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ವಿದ್ಯಾರ್ಥಿನಿಯರಾದ ಸನಾ ಬಾಳಿಕಾಯಿ ಹಾಗೂ ಸೃಷ್ಟಿ ಭೂಮನ್ನವರ ಅವರು ಬಾಗಲಕೋಟೆ ವಿಶ್ವವಿದ್ಯಾಲಯದ 2025–26ನೇ ಸಾಲಿನ ಬಿ.ಎ. 5ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ತಲಾ 99 ಅಂಕಗಳನ್ನು ಗಳಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯರ ಈ ಅತ್ಯುತ್ತಮ ಸಾಧನೆಗೆ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಸಿ. ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ್ ಎನ್. ಅಥಣಿ, ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ …
Read More »ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಹಡ್ಸನ್ ಎಂಬಾತನ ಮೇಲೆ ಎಫ್ ಐಆರ್ ದಾಖಲಾಗಿದೆ. ಈತ ಅವಾಚ್ಯ ಶಬ್ದ ಬಳಸಿ ಮೋದಿಯನ್ನು ನಿಂದಿಸಿ ವಿಡಿಯೋ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ವಿರುದ್ಧ ಸರ್ವಜ್ಞನಗರ ಬಿಜೆಪಿ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಯುವಕನನ್ನು …
Read More »ಯುವಕರ ಭವಿಷ್ಯ ಹಾಳು ಮಾಡಿದ್ದು ನೀವು: ಮೋದಿ ವಿರುದ್ಧ ರಾಗಾ ಆಕ್ರೋಶ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ನಡುವೆ ಪ್ರಧಾನಿ ನರೇಂದ್ರ ಮೋದಿ (PM Modi) ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ದೇಶದ ಯುವಕರ ಭವಿಷ್ಯಕ್ಕೆ ದೊಡ್ಡ ಹಾನಿ ಮಾಡಿದ್ದು ಕೇಂದ್ರ ಸರ್ಕಾರವೇ ಎಂದು ಅವರು ಆರೋಪಿಸಿದ್ದಾರೆ. ಪ್ರಧಾನಿ ಮೋದಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಖಚಿತಪಡಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ. ಯುವಕರ ಭವಿಷ್ಯ ಸರ್ಕಾರದ ಮೊದಲ ಆದ್ಯತೆ …
Read More »ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ – ಆರೋಪಿ ಪುಣ್ಯೇಶ್ ಬಂಧನ
ಬೆಂಗಳೂರು: ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು ಪ್ರಮುಖ ಆರೋಪಿ ಪುಣ್ಯೇಶ್ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ, ಆರೋಪಿ ಒಂದು ಬಾಕ್ಸ್ನಲ್ಲಿ ಮೊಟ್ಟೆಗಳನ್ನು ತಂದು ಘಟನೆ ನಡೆಸಿರುವುದು ಬೆಳಕಿಗೆ ಬಂದಿದೆ. ಈ ಕೃತ್ಯದ ಹಿಂದೆ ಇನ್ನೂ ಕೆಲವರು ಇದ್ದಾರೆಯೇ ಎಂಬ ಅನುಮಾನವೂ ಪೊಲೀಸರಿಗೆ ಮೂಡಿದ್ದು, ಆ ದಿಕ್ಕಿನಲ್ಲೂ ತನಿಖೆ ಮುಂದುವರಿದಿದೆ. ಪ್ರಮುಖ ಅರೋಪಿ ಸೇರಿ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಟ್ಟೆಗಳನ್ನು ಎಲ್ಲಿಂದ …
Read More »ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ನಡೆದಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಪಿಜಿ ಇದಾಗಿದ್ದು, ಲಿಂಗರಾಜು ಎಂಬವರಿಗೆ ಲೀಸ್ಗೆ ನೀಡಿದ್ದರು. ಈ ಕಟ್ಟಡ 18 ಕೊಠಡಿಗಳನ್ನು ಒಳಗೊಂಡಿದ್ದು, 10ಕ್ಕೂ ಹೆಚ್ಚು ಅನ್ಯರಾಜ್ಯದವರು ವಾಸವಾಗಿದ್ದರು. ಉತ್ತರ ಭಾರತದ ಕಾರ್ಮಿಕರು ಈ ಪಿಜಿಯಲ್ಲಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ …
Read More »ಬರ್ತ್ಡೇ ದಿನವೇ ಹತ್ಯೆಗೆ ಒಳಗಾದವನ ಕೊಲೆ ರಹಸ್ಯ ಬಯಲು – ಊಟಕ್ಕೆ ಹಣ ಕೊಡಲಿಲ್ಲವೆಂದು ಜೊತೆಯಲ್ಲಿದ್ದವನಿಂದಲೇ ಕೃತ್ಯ
ಮಂಡ್ಯ: ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಬರ್ಬರ ಹತ್ಯೆಗೆ ಒಳಗಾಗಿದ್ದ ರಹಸ್ಯವನ್ನು ಶ್ವಾನದ ಸಹಾಯದಿಂದ ಮಂಡ್ಯ ಪೊಲೀಸರು ಭೇದಿಸಿದ್ದಾರೆ. ಊಟಕ್ಕೆ ಹಣ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಜೊತೆಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಯೇ ಕಲ್ಲು ಎತ್ತಿಹಾಕಿ ಈ ಕೃತ್ಯ ಎಸಗಿರುವುದು ತನಿಖೆಯಿಂದ ಬಯಲಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದ ನಿವಾಸಿ ಕಾರ್ಪೆಂಟರ್ ರಾಕೇಶ್ ಕೊಲೆಯಾದ ದುರ್ದೈವಿ. ಈ ಪ್ರಕರಣದಲ್ಲಿ ಅದೇ ಗ್ರಾಮದ ಅಂಬರೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ …
Read More »ದೆಹಲಿ ವಿದ್ಯಾರ್ಥಿಗಳ ಪರ ನಿಂತ ಆಲಿಯಾ ಭಟ್
ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ಈ ಪ್ರತಿಭಟನೆಗೆ ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಬೆಂಬಲ ಸೂಚಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಆಲಿಯಾ ಪೋಸ್ಟ್ನಲ್ಲಿ ಏನಿದೆ? ʼಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ತುಂಬಾ ಬೇಸರವಾಗುತ್ತಿದೆ. ಆದರೆ ಈ ಪರಿಸ್ಥಿತಿ ವಿದ್ಯಾರ್ಥಿಗಳಲ್ಲಿ ಧೈರ್ಯ ಮತ್ತೆ ಭರವಸೆಯನ್ನೂ ಮೂಡಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಹಿಂದೆ ಒಂದು ಕನಸು, ಕುಟುಂಬದ …
Read More »ಪ್ರಶ್ನೆ ಪತ್ರಿಕೆ ಸೋರಿಕೆ; ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ
ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದರು. ಬೆಂಗಳೂರಿನ ಕೆ ಜಿ ರಸ್ತೆ ಬಳಿ ಮಾಧ್ಯಮಗಳಿಗೆ ಅವರು ಗುರುವಾರ ಪ್ರತಿಕ್ರಿಯಿಸಿ, ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. …
Read More »ನಾವು ಪ್ರತಿಷ್ಠೆಗೆ ಬಿದ್ದಿಲ್ಲ, ಮಾತುಕತೆಗೆ ಬನ್ನಿ – ಸಿಜೆಪಿ ಜೊತೆ ಸಭೆಗೆ ಕೇಂದ್ರದಿಂದ 4ನೇ ಆಹ್ವಾನ
ನವದೆಹಲಿ: ವಿದ್ಯಾರ್ಥಿ ನಾಯಕರೊಂದಿಗೆ ಚರ್ಚಿಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನಿನ್ನೆ ಮಧ್ಯಾಹ್ನದಿಂದ ಸಿಜೆಪಿ ಪ್ರತಿನಿಧಿಗಳೊಂದಿಗೆ ಚರ್ಚಿಸಲು ಸರ್ಕಾರವು ಈಗಾಗಲೇ ನಾಲ್ಕು ಅಧಿಕೃತ ಪ್ರಸ್ತಾಪಗಳನ್ನು ಕಳುಹಿಸಿದೆ. ಇದು ನಮ್ಮ ಯುವ ಸ್ನೇಹಿತರಿಗೆ ನೀಡುತ್ತಿರುವ ಮುಕ್ತ ಆಹ್ವಾನ. ನಿಮ್ಮ ಅನುಕೂಲಕ್ಕೆ ತಕ್ಕಂತೆ, ಯಾವುದೇ ಸಮಯದಲ್ಲಿ ಎಲ್ಲಾ ವಿಷಯಗಳ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ …
Read More »ಅನಂತನಾಗ್ನಲ್ಲಿ ಬಾಲ ಬಿಚ್ಚಿದ ಉಗ್ರರು – ಇಬ್ಬರ ಮನೆ ಧ್ವಂಸಗೊಳಿಸಿದ ಸೇನೆ
ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕ ಜಾಲಗಳ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಬುಧವಾರ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಕುಟುಂಬಗಳಿಗೆ ಸೇರಿದ ಎರಡು ಮನೆಗಳನ್ನು ಸೇನೆ ನೆಲಸಮಗೊಳಿಸಿದೆ. ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ್ದರು. ಇದಾದ ಬೆನ್ನಲ್ಲೇ ಸೇನೆ ಉಗ್ರರ ವಿರುದ್ಧದ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿದೆ. ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಲಷ್ಕರ್ ಭಯೋತ್ಪಾದಕ ಹರೂನ್ ರಶೀದ್ ಕುಟುಂಬಕ್ಕೆ ಸೇರಿದ ಮತ್ತೊಂದು ಮನೆಯನ್ನು ಕೆಡವಲಾಗಿದೆ. ಹರೂನ್ ಮತ್ತು …
Read More »
Laxmi News 24×7