ಭಾರತವು ಧರ್ಮಪ್ರಧಾನ ರಾಷ್ಟ್ರವಾಗಿದ್ದು, ಧರ್ಮ ಮತ್ತು ದೇವರೇ ಈ ದೇಶದ ಜೀವಾಳ ಹಾಗೂ ತಾಯಿ ಬೇರು. ಇವುಗಳಿಲ್ಲದ ಭಾರತದ ಕಲ್ಪನೆಯೇ ಅಸಾಧ್ಯ ಎಂದು ಯಡೂರು ಶ್ರೀಕ್ಷೇತ್ರ ಹಾಗೂ ಶ್ರೀಶೈಲ ಜಗದ್ಗುರು ಶ್ರೀಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದರು. ಪಟ್ಟಣದ ರಾಜರಾಜೇಶ್ವರಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ದಾನಮ್ಮ ದೇವಿ ಮಂದಿರದ ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಶನಿವಾರ ಅವರು ಆಶೀರ್ವಚನ ನೀಡಿದರು. ಮಾನವರು ಧನ, ದೇಹ ಮತ್ತು ವೈಯಕ್ತಿಕ …
Read More »ಸುಗಮ ಸಂಚಾರಕ್ಕಾಗಿ ರಸ್ತೆ ಅಭಿವೃದ್ಧಿ
ಹುಕ್ಕೇರಿ: ಗ್ರಾಮೀಣ ಜನರ ಸುಗಮ ಸಂಚಾರ ಮತ್ತು ಸರಕು ಸಾಗಣೆ ಅನುಕೂಲಕ್ಕಾಗಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ನಿಖಿಲ ಕತ್ತಿ ಹೇಳಿದರು. ತಾಲೂಕಿನ ಮದಮಕ್ಕನಾಳ, ಹೊನ್ನಿಹಳ್ಳಿ, ಕೋಣಕೇರಿ, ಹಡಲಗಾ ಗ್ರಾಮಗಳ ರಸ್ತೆ ಹಾಗೂ ಸಂಕೇಶ್ವರ ಪಟ್ಟಣದ ಲಿಂಗಾಯತ ಸಮುದಾಯದ ಸ್ಮಶಾನ ರಸ್ತೆ ಸುಧಾರಣೆ ಕಾಮಗಾರಿಗೆ ೨.೯೫ ಕೋಟಿ ರೂ. ವೆಚ್ಚದಲ್ಲಿ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆ ಬಳಸಿಕೊಂಡು ನೀರಾವರಿ, …
Read More »ಸಕಾರಾತ್ಮಕ ಚಿಂತನೆಯಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ
ಇಟಗಿ: ಪರಸ್ಪರ ಸಹಕಾರ ಮತ್ತು ಸಕಾರಾತ್ಮಕ ಚಿಂತನೆಯಿAದ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು. ಅವರೊಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು, ಭೂ ದಾನಿಗಳು ಹಾಗೂ ಜನಪ್ರತಿನಿಽಗಳ ಸಹಕಾರದೊಂದಿಗೆ ನಿರ್ಮಾಣವಾಗುತ್ತಿರುವ ಕಲ್ಯಾಣ ಮಂಟಪದ ಚೌಕಟ್ಟು ಪೂಜಾ ಸಮಾರಂಭದಲ್ಲಿ ಮಾತನಾಡಿ, ಕಲ್ಯಾಣ ಮಂಟಪ ನಿರ್ಮಾಣಕ್ಕೆ ಭೂ ದಾನ ಮಾಡಿದ ಭೀಮರಾವ ಕುಲಕರ್ಣಿ ಹಾಗೂ ಸಾವಿತ್ರಿಬಾಯಿ ಕುಲಕರ್ಣಿ ಸೇವೆ ಸ್ಮರಣೀಯ. ವೈಯಕ್ತಿಕವಾಗಿ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡುತ್ತಿದ್ದು, …
Read More »ಕನಿಷ್ಠ ವೇತನ ಹೆಚ್ಚುವರಿ ಆದೇಶ ವಾಪಸ್ಸು ಪಡೆಯಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಬೆಳಗಾವಿ : ರಾಜ್ಯ ಸರ್ಕಾರದ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ನಗರದಲ್ಲಿ ವಿವಿಧ ವ್ಯಾಪಾರ ಮತ್ತು ಕೈಗಾರಿಕಾ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ನಗರದ ಚನ್ನಮ್ಮ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಭವನದಲ್ಲಿ ಎಲ್ಲ ವ್ಯಾಪಾರಿ, ಉದ್ಯಮಿಗಳು ಹಾಗೂ ಸಂಘಟನೆಗಳ ಸದಸ್ಯರು ಒಗ್ಗೂಡಿ ಸಭೆ ನಡೆಸಿದರು. ಬಳಿಕ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ರಿಗೆ ಮನವಿ ಸಲ್ಲಿಸಿದರು. ಕನಿಷ್ಠ ವೇತನ ಹೆಚ್ಚಳದಿಂದ ವ್ಯಾಪಾರ, ಕೈಗಾರಿಕೆ ಹಾಗೂ ಸಣ್ಣ …
Read More »ಬೀದಿ ವ್ಯಾಪಾರಿಗಳ ಭೂಬಾಡಿಗೆ ಜಿಲ್ಲಾಧಿಖಾರಿ ಕಚೇರಿ ಎದುರು ಪ್ರತಿಭಟನೆ
ಬೆಳಗಾವಿ : ಗ್ರಾಪಂದಿಂದ ಬೀದಿ ವ್ಯಾಪಾರಿಗಳ ದಿನಿನಿತ್ಯದ ಭೂಬಾಡಿಗೆಯನ್ನು ಏಕಾಏಕಿಯಾಗಿ ಹೆಚ್ಚುವರಿ ಮಾಡುವುದರ ಜತೆಗೆ, ಕಟ್ಟುವ ಬಾಡಿಗೆಗೆ ರಸೀದಿಯನ್ನೂ ನೀಡುತ್ತಿಲ್ಲ ಎಂದು ಆರೋಪಿಸಿ ಗಣೇಶಪುರ ಪೈಪ್ಲೈನ್ ರಸ್ತೆಯ ಬೀದಿ ಬದಿ ವ್ಯಾಪಾರಿಗಳು ಸೋಮವಾರ ಪ್ರತಿಭಟಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವ್ಯಾಪಾರಿಗಳು, ತಮಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ರಿಗೆ ಮನವಿ ಪತ್ರ ಸಲ್ಲಿಸಿದರು. ಗ್ರಾಪಂ ಸಿಬ್ಬಂದಿ ಯೋಗೇಶ ಎಂಬಾತ ನಿತ್ಯವೂ ಬೀದಿ ವ್ಯಾಪಾರಿಗಳಿಂದ 10ರೂ. ಭೂ ಬಾಡಿಗೆ …
Read More »ಬೆಳಗಾವಿ : ಆರು ವರ್ಷಗಳಿಂದ ಕಾಣೆಯಾದಾತ ಗುಜರಾತನಲ್ಲಿ ಪತ್ತೆ
ಬೆಳಗಾವಿ : ಆರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ರಾಯಬಾಗ ತಾಲೂಕಿನ ಹಾರೂಗೇರಿ ಹಿರೇಹಳ್ಳ ತೋಟದ ಅಬ್ದುಲ್ಗಣಿ ಗೌಸ್ ಪೆಂಡಾರಿ(41)ಯನ್ನು ಹಾರೂಗೇರಿ ಠಾಣೆ ಪೊಲೀಸರು ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಗುಜರಾತ ರಾಜ್ಯದಲ್ಲಿ ಪತ್ತೆ ಮಾಡಿದ್ದಾರೆ. ಪೆಂಡಾರಿ, 2020ರ ಜ.19ರಂದು ಯಾರಿಗೂ ಹೇಳದೇ ಮನೆಬಿಟ್ಟು ಹೋಗಿದ್ದನು. ಈ ಬಗ್ಗೆ ಅದೇ ವರ್ಷದ ಮಾ. 18ರಂದು ಪತ್ನಿ ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಲ್ಲ ಕಡೆ ಹುಡುಕಾಡಿದರೂ ಆತ ಸಿಗದಿದ್ದಾಗ, ನಾಪತ್ತೆ ಪ್ರಕರಣವೆಂದು ಪರಿಗಣಿಸಿ ಅಷ್ಟಕ್ಕೆ …
Read More »ಹ್ಯಾಟ್ರಿಕ್ ತಪ್ಪು, ಮುಂದಿನ ಸೀಸನ್ನ ಮೊದಲ ಪಂದ್ಯಕ್ಕೆ ಟಿಮ್ ಡೇವಿಡ್ ಬ್ಯಾನ್!
ಅಹಮದಾಬಾದ್: ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಭಾರೀ ಆಘಾತ ಎದುರಾಗಿದೆ. ಫೈನಲ್ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಗಂಭೀರವಾಗಿ ಉಲ್ಲಂಘಿಸಿದ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಅವರಿಗೆ ಮುಂದಿನ ಸೀಸನ್ನ ಒಂದು ಪಂದ್ಯಕ್ಕೆ ನಿಷೇಧ ಹೇರಿ ಐಪಿಎಲ್ ಶಿಸ್ತು ಸಮಿತಿ ಆದೇಶಿಸಿದೆ. ಗುಜರಾತ್ ಟೈಟನ್ಸ್ ವಿರುದ್ಧದ ಫೈನಲ್ ಪಂದ್ಯದ 10ನೇ ಓವರ್ನಲ್ಲಿ ವಿಕೆಟ್ ಪತನದ ಬಳಿಕ ಟಿಮ್ ಡೇವಿಡ್ ಅವರು ಮೈದಾನದ ಅಂಪೈರ್ ನಿತಿನ್ ಮೆನನ್ ಅವರತ್ತ ಐಸ್ …
Read More »ಕರಾವಳಿಯಲ್ಲಿ ಜೂ.3 ರಿಂದ 5ರ ವರೆಗೆ ಭಾರೀ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್ ಘೋಷಣೆ
ಕಾರವಾರ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದಿನಿಂದ (ಜೂ.2) ಜೂ.4 ರ ವರೆಗೆ ಅಲ್ಲಲ್ಲಿ ಅಲ್ಪ ಹಾಗೂ ಮಧ್ಯಮ ಗಾಳಿ ಸಹಿತ ಮಳೆಯಾಗಲಿದೆ. ಜೂ.5 ರಂದು ಜಿಲ್ಲೆಯ ಬಹುತೇಕ ಭಾಗದಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ …
Read More »ಭವಿಷ್ಯದ ತಂತ್ರಜ್ಞಾನ ಕಲಿಕೆಗೆ ಹೊಸ ದಾರಿ; ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಅವಕಾಶ ಎಂದ ಡಿಸಿ ಮೊಹಮ್ಮದ್ ರೋಶನ್
ಬೆಳಗಾವಿ : ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ನಗರದ ಉದ್ಯಮಬಾಗದಲ್ಲಿರುವ ಜೈನ್ ಹೆರಿಟೇಜ್ ಸ್ಕೂಲ್ನಲ್ಲಿ ಸ್ಥಾಪಿಸಲಾಗಿರುವ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ಆಧಾರಿತ ಇನೋವೇಶನ್ ಮತ್ತು ಸ್ಕಿಲ್ ಲ್ಯಾಬ್ ಅನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರು ಸೋಮವಾರ ಉದ್ಘಾಟಿಸಿದರು. ಶಾಲೆಯ ಆರಂಭೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿಗಳು, ನೂತನ ಲ್ಯಾಬ್ನ ವಿವಿಧ ವಿಭಾಗಗಳನ್ನು ವೀಕ್ಷಿಸಿ ಅದರಲ್ಲಿರುವ ತಂತ್ರಜ್ಞಾನ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ …
Read More »ಎಐಟಿಎಂನಲ್ಲಿ 14ನೇ ಪದವಿ ಪ್ರದಾನ ಹಾಗೂ ಪ್ಲೇಸ್ಮೆಂಟ್ ದಿನಾಚರಣೆ ಸಂಭ್ರಮ
ಬೆಳಗಾವಿ : ಸುರೇಶ್ ಅಂಗಡಿ ಎಜುಕೇಶನ್ ಫೌಂಡೇಶನ್ನ ಅಧೀನದಲ್ಲಿರುವ ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್ (ಎಐಟಿಎಂ) ಸಂಸ್ಥೆಯಲ್ಲಿ ಸೋಮವಾರ 14ನೇ ಪದವಿ ಪ್ರದಾನ ಸಮಾರಂಭ ಹಾಗೂ ಪ್ಲೇಸ್ಮೆಂಟ್ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮವು ವಿದ್ಯಾರ್ಥಿಗಳ ಸಾಧನೆಗಳನ್ನು ಬಿಂಬಿಸುವ ಪ್ಲೇಸ್ಮೆಂಟ್ ವಿಡಿಯೊ ಪ್ರದರ್ಶನದೊಂದಿಗೆ ಆರಂಭವಾಯಿತು. ವಿದ್ಯಾರ್ಥಿನಿಯರಾದ ಶ್ರುಷ್ಟಿ ಮತ್ತು ಭಕ್ತಿ ಅವರ ಪ್ರಾರ್ಥನಾ ಗೀತೆಯ ಬಳಿಕ ಗಣ್ಯರನ್ನು ಸ್ವಾಗತಿಸಲಾಯಿತು. ನಂತರ ಪುಷ್ಪಗುಚ್ಛ ನೀಡಿ ಸನ್ಮಾನಿಸಿ, ದೀಪ ಬೆಳಗುವ ಮೂಲಕ …
Read More »
Laxmi News 24×7