ಗೋಕಾಕ: ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಗೆ ಜಲ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು. ನಗರದ ಹಿಲ್ ಗಾರ್ಡನ್ ನಲ್ಲಿ ಕೃಷಿ ಇಲಾಖೆ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ರಿವಾರ್ಡ್ ಮತ್ತು ಆತ್ಮ ಯೋಜನೆಗಳ ಅಡಿಯಲ್ಲಿ …
Read More »ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಗೂ ಅಗ್ನಿವೀರರ ಪೋಲಿಸ್ ವಿಚಾರಣೆ ಪ್ರಕ್ರಿಯೆ ವಿಳಂಬ – ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಮನವಿ
ರಾಜ್ಯ ಹಾಗೂ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿ, ಕಾರ್ಯಕರ್ತರನ್ನು ಬೆದರಿಸುವ, ಬಂಧಿಸುತ್ತಿರುವ ಪೋಲಿಸರ ನಡೆ ಖಂಡಿಸಿ ಹಾಗೂ ಹೊಸದಾಗಿ ನೇಮಕವಾದ ದೇಶದ ರಕ್ಷಣಾ ಪಡೆಯ ಸೈನಿಕರು (ಅಗ್ನಿವೀರ)ಅವರ ನೇಮಕಾತಿ ಪ್ರಕ್ರಿಯೆಯ ಕೊನೆಯ ಹಂತದ ಪೋಲಿಸ್ ಠಾಣೆಯ ವಿಚಾರಣೆ ಪ್ರಕ್ರಿಯೆ ( ಪೋಲಿಸ್ ವೇರಿಪಿಕೇಷನ್) ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ಮನವಿ ಸಲ್ಲಿಸಿದರು ಈ ಸಂದರ್ಭದಲ್ಲಿ ಮನವಿಗೆ ಸ್ಪಂದಿಸಿದ ಜಿಲ್ಲಾ ಪೋಲಿಸ್ …
Read More »ಫೋಟೊ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಜಲಸಮಾಧಿ
ಮಂಡ್ಯ: ಫೋಟೊ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಕಾವೇರಿಯಲ್ಲಿ ನದಿಯಲ್ಲಿ ಜಲಸಮಾಧಿಯಾಗಿರುವ ದುರ್ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಇಂದು ಸಂಜೆ 5 ಗಂಟೆಗೆ ಘಟನೆ ನಡೆದಿದೆ. ಚೈತ್ರ (20), ಶ್ವೇತಾ (38), ವಿಜಯಮ್ಮ (50), ಪ್ರಿಯಾಂಕಾ (28), ಮಹೇಶ್ ಮೃತಪಟ್ಟವರು. ಮೃತರು ಚನ್ನಪಟ್ಟಣ ಮೂಲದವರು. ಮುತ್ತತ್ತಿಯ ಮುತ್ತೆತ್ತರಾಯ ದೇಗುಲಕ್ಕೆ ಕುಟುಂಬಸ್ಥರು ಬಂದಿದ್ದರು. ಈ ವೇಳೆ ಕಾವೇರಿ ನದಿಗಿಳಿದು ಪೋಟೊ ತೆಗೆದುಕೊಳ್ಳುವಾಗ ದುರ್ಘಟನೆ ನಡೆದಿದೆ. ಸದ್ಯ …
Read More »ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ
ಕಲಬುರಗಿ/ಬೀದರ್: ಜೂನ್ 28ರಂದು ಬೀದರ್ನ ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠವು ಷರತ್ತುಬದ್ಧ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಭಾಗವಹಿಸಲು ಅವಕಾಶ ನೀಡಿದ್ದು, ಅವರು ಭಾಷಣ ಮಾಡದಂತೆ ಅಫಿಡವಿಟ್ ಸಲ್ಲಿಸಿರುವ ಹಿನ್ನೆಲೆ ನ್ಯಾಯಾಲಯ ಈ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ ಗರಿಷ್ಠ 2,500 ಜನರು ಭಾಗವಹಿಸಬಹುದೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಮಾವೇಶದ ವೇಳೆ ಯಾವುದೇ ರೀತಿಯಲ್ಲಿ ಕಾನೂನು …
Read More »ಮತ್ತೆ ಸುಪ್ರೀಂ ಮೆಟ್ಟಿಲೇರಿದ ದರ್ಶನ್ – ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ ಆದೇಶ ಮಾರ್ಪಾಡಿಗೆ ಮನವಿ
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತೊಮ್ಮೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಒಂದು ವರ್ಷದವರೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ನೀಡಿದ ಆದೇಶವನ್ನು ಮಾರ್ಪಾಡುವಂತೆ ಮನವಿ ಮಾಡಿದ್ದಾರೆ. ಬದಲಾದ ವಕೀಲರ ಮೂಲಕ ಅರ್ಜಿ ಸಲ್ಲಿಸಿರುವ ಅವರು, ವೈಯಕ್ತಿಕ ಸ್ವಾತಂತ್ರ್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಸಂವಿಧಾನದ ಆರ್ಟಿಕಲ್ 21 ಅಡಿಯಲ್ಲಿ ರಕ್ಷಿತವಾಗಿದೆ. ಹೀಗಾಗೀ ತುರ್ತು ಪರಿಸ್ಥಿತಿಗಳಿಗೆ ಅನ್ವಯವಾಗುವಂತೆ ಆದೇಶ ಬದಲಿಸಬೇಕು. ಒಂದು ವರ್ಷದೊಳಗೆ ಜಾಮೀನು ಅರ್ಜಿ …
Read More »133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್
ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ನೀಡಿದೆ. ಬ್ರ್ಯಾಂಡೆಡ್ ಔಷಧಿ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಔಷಧ ನಿಯಂತ್ರಣ ಇಲಾಖೆ ಕಳೆದ ಎರಡು ದಿನಗಳಲ್ಲಿ 172 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಮೇಲೆ ದಾಳಿ ಮಾಡಿದ್ದು, ಇದೀಗ 133 ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಹೊರಡಿಸಿದೆ. ರಾಜ್ಯದಲ್ಲಿ 1200ಕ್ಕೂ ಹೆಚ್ಚು ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಇವೆ. ಇದರಲ್ಲಿ 172ರ ಔಷಧಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದು, …
Read More »ಬಸವಕಲ್ಯಾಣದ ‘ಬಸವಾದಿ ಶರಣರ ಹಿಂದೂ ಸಮಾವೇಶ’ ರದ್ದತಿಗೆ ಬಸವಪರ ಸಂಘಟನೆಗಳ ಒತ್ತಾಯ
ಬೆಳಗಾವಿ: ಬಸವಕಲ್ಯಾಣದಲ್ಲಿ ಜೂನ್ 28ರಂದು ನಡೆಯಲಿರುವ ‘ಬಸವಾದಿ ಶರಣರ ಹಿಂದೂ ಸಮಾವೇಶ’ಕ್ಕೆ ಅನುಮತಿ ನೀಡಬಾರದು ಹಾಗೂ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಬಸವಪರ ಸಂಘಟನೆಗಳ ಒಕ್ಕೂಟವು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಮನವಿಯಲ್ಲಿ, ಕೆಲವು ಧಾರ್ಮಿಕ ಮುಖಂಡರು ಲಿಂಗಾಯತ ಸಮಾಜ, ಬಸವಾದಿ ಶರಣರು ಹಾಗೂ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದಾಗಿ ಆರೋಪಿಸಿ, ಇಂತಹ ಹಿನ್ನೆಲೆಯಲ್ಲೇ ಬಸವಕಲ್ಯಾಣದಲ್ಲಿ ಸಮಾವೇಶ ಆಯೋಜನೆ ಮಾಡುವುದು ಸಮಾಜದಲ್ಲಿ ಗೊಂದಲ ಮತ್ತು ಅಶಾಂತಿಗೆ …
Read More »ಉಚಗಾಂವ ರಸ್ತೆ ಕಾಮಗಾರಿಗೆ ಭೂಮಿಪೂಜೆ, ಬೆನಕನಹಳ್ಳಿಯಲ್ಲಿ ದೇವಸ್ಥಾನ ಮೇಲ್ಚಾವಣಿ ಕಾಮಗಾರಿಗೆ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾಗಿ ಉಚಗಾಂವ ಗ್ರಾಮದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಉಚಗಾಂವ ಗ್ರಾಮದ ವಿವಿಧ ಬಡಾವಣೆಗಳು ಹಾಗೂ ಒಳರಸ್ತೆಗಳ ಅಭಿವೃದ್ಧಿಗಾಗಿ ಸುಮಾರು 70 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ …
Read More »ಬೈಕ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಸಾವು
ಬೆಳಗಾವಿ: ಬೈಕ್ ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ನಗರದ ನಾಥಪೈ ವೃತ್ತದ ಬಳಿ ನಡೆದಿದೆ. ಬೈಕ್ ಸವಾರ ಗಣೇಶ ಸ್ಥಳದಲ್ಲಿಯೇ ಮೃತಪಟ್ಟ ಯುವಕ. ಹಿಂಬದಿ ಕುಳಿತಿದ್ದ ಆತನ ಸ್ನೇಹಿತನಗೆ ಗಂಭೀರವಾಗಿ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಟ್ರಕ್ ಚಾಲಕ ಅಪಘಾತವಾಗುತ್ತಿದ್ದಂತೆಯೇ ಸ್ಥಳದಿಂದ ಪರಾರಿಯಾಗಿದ್ದಾನೆ. ದಕ್ಷಿಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »ಒಂದೇ ತಿಂಗಳಲ್ಲಿ 2ನೇ ಬಾರಿ ಗದಗ ಸರ್ಕಾರಿ ಆಸ್ಪತ್ರೆಯಲ್ಲಿ ಪೈಪ್ ಕಳ್ಳತನ – ಆಪರೇಷನ್ ಥಿಯೇಟರ್ ಬಂದ್
ಗದಗ: ಜಿಲ್ಲಾ ಕೇಂದ್ರ ಗದಗ ನಗರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭದ್ರತೆಯಿಲ್ಲದ ಕಾರಣ ಕಳ್ಳರು ಸರಣಿ ಕಳ್ಳತನ ನಡೆಸುತ್ತಿದ್ದು, ರೋಗಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಕೆ.ಸಿ. ರಾಣಿ ರಸ್ತೆಯಲ್ಲಿರುವ ದುಂಡಪ್ಪ ಮಾನ್ವಿ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಬಾರಿ ಕಳ್ಳತನವಾಗಿದ್ದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಇದೇ ಆಸ್ಪತ್ರೆಯಲ್ಲಿದ್ದ ಆಕ್ಸಿಜನ್ ಪೈಪ್ಗಳನ್ನು …
Read More »
Laxmi News 24×7