Breaking News

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

ಹುಬ್ಬಳ್ಳಿ: ಬಿಲ್ಡಿಂಗ್‌ ಒಂದರ ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ ಆಗಿ ನಾಲ್ವರು ಕಾರ್ಮಿಕರು ಅಸ್ವಸ್ಥರಾದ ಘಟನೆ ಹುಬ್ಬಳ್ಳಿ  ದೇಶಪಾಂಡೆ ನಗರದಲ್ಲಿ ನಡೆದಿದೆ. ಅಸ್ವಸ್ಥಗೊಂಡ ಕಾರ್ಮಿಕರನ್ನು ಬೆಂಗಳೂರು ಮೂಲದ ಜಾಫರ್, ಅಹ್ಮದ್, ಜಬಿ ಮತ್ತು ಹೈದರ್ ಎಂದು ಗುರುತಿಸಲಾಗಿದೆ. ಬಿಲ್ಡಿಂಗ್ ಒಂದರಲ್ಲಿ ಫ್ಲೈ ವುಡ್ ಕೆಲಸ ನಡೆಯುತ್ತಿತ್ತು. ಅಲ್ಲಿ ಸಾಕಷ್ಟು ಕೆಮಿಕಲ್ ಬಳಕೆ ಮಾಡಲಾಗಿತ್ತು. ಕೆಲಸ ಮುಗಿದ ಬಳಿಕ ಸುಸ್ತಾಗಿದ್ದ ಕಾರ್ಮಿಕರು, ತಡರಾತ್ರಿ ಸಂಪೂರ್ಣ ಬಾಗಿಲು, ಕಿಟಕಿ ಬಂದ್ ಮಾಡಿ …

Read More »

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

ದಾವಣಗೆರೆ: ಜಗಳೂರಲ್ಲಿ  ಗೃಹ ಬಳಕೆ ಸಿಲಿಂಡರ್ ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ. ನಗರದ ಹಲವು ಹೋಟೆಲ್ ಹಾಗೂ ಟೀ ಅಂಗಡಿಗಳಲ್ಲಿ ಗೃಹ ಬಳಕೆ ಸಿಲಿಂಡರ್ ಬಳಕೆ ಮಾಡಲಾಗುತ್ತಿತ್ತು. ಈ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿಯವರು ದಾಳಿ ನಡೆಸುವಂತೆ ತಹಶೀಲ್ದಾರ್ ಕಲೀಂ ಉಲ್ಲಾ ಅವರಿಗೆ ಸೂಚಿಸಿದ್ದರು. ಡಿಸಿ ಸೂಚನೆ ಮೇರೆಗೆ ದಾಳಿ …

Read More »

ಗಂಡನನ್ನು ಬಂಧಿಸಿ ಪತ್ನಿಗೆ ಲೈಂಗಿಕ ಕಿರುಕುಳ; ರಾತ್ರಿ ಕಾಂಪೌಂಡ್ ಹಾರಿ ಬರ್ತಾರಂತೆ.. ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಟಕ್ಕೆ ಮಹಿಳೆಯರು ಕಂಗಾಲು..

ಮೂವರು ಸಂತ್ರಸ್ತೆಯರು ಧೈರ್ಯ ಮಾಡಿ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ಅಸಲಿಯತ್ತನ್ನು ಬಯಲು ಮಾಡಿದ್ದು, ಉನ್ನತ ಮಟ್ಟದ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಗಂಭೀರ ಸ್ವರೂಪದ ಈ ಆರೋಪಗಳ ಬಗ್ಗೆ ಪೊಲೀಸ್ ಇಲಾಖೆ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಕಾದು ನೋಡಬೇಕಿದೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಮುಜುಗರದ ಪ್ರಸಂಗ ಬೆಳಕಿಗೆ ಬಂದಿದೆ. ರಕ್ಷಣೆ ನೀಡಬೇಕಾದ ಖಾಕಿಯೇ ಭಕ್ಷಕನಾದ ಆರೋಪವೊಂದು ಕೇಳಿಬಂದಿದ್ದು, ಮೂಡುಬಿದಿರೆ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ …

Read More »

ಕೃಷಿ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟಿಸಿದ ರಾಹುಲ್ ಜಾರಕಿಹೊಳಿ

ಬೆಳಗಾವಿ ತಾಲೂಕಿನ ರಾಕಸಕೊಪ್ಪ ಗ್ರಾಮದಲ್ಲಿ ಇಂದು ಶ್ರೀ ಪಂಚರಾಶಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಹಕಾರ ಚಳುವಳಿ ಗ್ರಾಮೀಣ ಅಭಿವೃದ್ಧಿಗೆ ಮಹತ್ವದ ಶಕ್ತಿಯಾಗಿದ್ದು, ರೈತರು ಮತ್ತು ಗ್ರಾಮಸ್ಥರ ಆರ್ಥಿಕ ಪ್ರಗತಿಗೆ ಸಹಕಾರಿ ಸಂಘಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂಬುದನ್ನು ತಿಳಿಸಿದರು. ನೂತನ ಕಟ್ಟಡದೊಂದಿಗೆ ಸಂಘದ ಸೇವೆಗಳು ಇನ್ನಷ್ಟು ಪರಿಣಾಮಕಾರಿಯಾಗಿ …

Read More »

25 ಸಾವಿರ ಲಂಚ ಪಡೆದು ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ  ಸಿಕ್ಕಿಬಿದ್ದ ಪಿಡಿಓ

ಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ ಪಿಡಿಓ ಮಂಜುಳಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ.25 ಸಾವಿರ ಲಂಚ ಪಡೆದು ಕಚೇರಿಯಲ್ಲೇ ಮಂಜುಳಾ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಸ್ವಾಮಿ ಎಂಬುವರು ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿದ್ದಾರೆ.ಅನುಕಂಪದ ಆಧಾರದ ಮೇಲೆ ಸ್ವಾಮಿ ರವರ ಮಗ ಮಹದೇವ್ ಎಂಬುವರಿಗೆ ಕೆಲಸ ಸಿಕ್ಕಿದೆ.ತಂದೆ ಕರ್ತವ್ಯ ನಿರ್ವಹಿಸಿದ್ದ ಎರಡು ವರ್ಷದ ಸಂಬಳ ಬಾಕಿ …

Read More »

ಕಣ್ಣಿಗೆ ಲೆನ್ಸ್ ಹಾಕಲು 6 ಸಾವಿರ ಲಂಚ ಕೇಳಿದ ವೈದ್ಯೆ – ಲೋಕಾ ಬಲೆಗೆ ಬಿದ್ದ ತುಮಕೂರು ಜಿಲ್ಲಾಸ್ಪತ್ರೆ ನೇತ್ರ ತಜ್ಞೆ..!!!

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನೇತ್ರಾ ಚಿಕಿತ್ಸಕಿಯಾಗಿರುವ ಡಾ. ಸವಿತಾ 6 ಸಾವಿರ ಹಣ ಲಂಚ ಪಡೆಯುವಾಗ ರೇಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಹಣ ಪಡೆಯುವಾಗ ರೇಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ತುಮಕೂರಿನ ಉಪ್ಪಾರಹಳ್ಳಿ ನಿವಾಸಿ ಅವಿನಾಶ್ ಎಂಬುವವರ ತಾಯಿ ಕಣ್ಣಿಗೆ ಲೆನ್ಸ್ ಹಾಕಲು 6 ಸಾವಿರಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಈ ಸಂಬಂಧ ಲೋಕಾಯಕ್ತಕ್ಕೆ ಅವಿನಾಶ್ ದೂರು ನೀಡಿದ್ದರು. ಇಂದು ಮಧ್ಯಾಹ್ನ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಮನೋಜ್ ಎಂಬಾತನ ಮೂಲಕ …

Read More »

ಸಿಎಂ ಆಪ್ತನಿಗೆ ಡೀಲ್ ಮಾಸ್ಟರ್ ಪಟ್ಟ

ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹೊತ್ತಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತನ ವಿರುದ್ಧ ದಿನದಿಂದ ದಿನಕ್ಕೆ ಅಸಮಾಧಾನ ಹೆಚ್ಚುತ್ತಿದೆ. ಇದುವರೆಗೂ ದಿ. ಶಾಸಕ ಎಚ್.ವೈ.‌ಮೇಟಿ ಅವರ ಪುತ್ರಿ ಮಹಾದೇವಿ ಮೇಟಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಲೇ ಬಂದಿದ್ದಾರೆ. ಇದೀಗ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ಸಿದ್ದರಾಮಯ್ಯ ಆಪ್ತನ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಲ್ಲದೆ ಡೀಲ್ ಮಾಸ್ಟರ್ ಪಟ್ಟಗಟ್ಟಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೊರಗಿನವರ ಹಸ್ತಕ್ಷೇಪ ಬೇಡ: …

Read More »

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

ಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ (Chitradurga) ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದ ಐವರನ್ನು …

Read More »

ತಾರತಮ್ಯ ಧೋರಣೆ ಅನುಸರಿಸಿದ ಶಾಸಕ ಲಕ್ಷ್ಮಣ ಸವದಿ

ಜನಪ್ರಿಯ ಮಾಜಿ ಉಪಮುಖ್ಯಮಂತ್ರಿಗಳು, ಹಾಲಿ ಅಥಣಿ ವಿಧಾನಸಭಾ ಮತಕ್ಷೇತ್ರದ ಶಾಸಕರು ಶ್ರೀ ಮ್ಯಾನ ಲಕ್ಷ್ಮಣ ಸವದಿ ಸಾಹೇಬರು ಇಡೀ ಅಥಣಿ ತಾಲೂಕಿನಲ್ಲಿ ಬರುವ 98 ಪ್ರೌಡಶಾಲೆಗಳ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯವ ಎಲ್ಲಾ ವಿದ್ಯಾರ್ಥಿಗಳಿಗೆ ಎಕ್ಸಾಮ್ ಪ್ಯಾಡ್ ವಿತರಣೆ ಮಾಡಿರುವುದು ಮಾದರಿ ಹಾಗೂ ಸಂತೋಷದ ವಿಚಾರ, ಎಲ್ಲಾ ಶಾಲೆಗಳಲ್ಲೂ ವಿದ್ಯಾರ್ಥಿಗಳು ಸಮವಸ್ತ್ರ ಪಾಲನೆ ಮಾಡುವುದರ ಹಿಂದಿನ ಮಹತ್ತರವಾದ ಉದ್ದೇಶ ವಿದ್ಯಾರ್ಥಿಗಳಲ್ಲಿ ಮೇಲು ಕೀಳು,ಬಡವ ಶ್ರೀಮಂತ ಎನ್ನುವ ಭೇದ ಬಾವ ಮೂಡಬಾರದು ಅನ್ನುವ …

Read More »

ಪೊದೆಯಲ್ಲಿ ಮಲಗಲು ಸಹಕರಿಸದ ಮಹಿಳೆಯ ಕೊಲೆ, ಜೀವಾವಧಿ ಶಿಕ್ಷೆ

ರಾಯಚೂರ: ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಲಿಂಗಸುಗೂರು ಪೀಠ ಆದೇಶ ಹೊರಡಿಸಿದೆ. ಮೃತ ಮಹಿಳೆ ವಿಜಯಲಕ್ಷ್ಮಿ ಜೊತೆ ಯರಡೋಣ ಗ್ರಾಮದ ಆರೋಪಿ ದೇವರಾಜ ಅಕ್ರಮ ಸಂಬಂಧ ಹೊಂದಿದ್ದ. ಇದೀಗ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯ ಆರೋಪಿ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಮೃತ ಮಹಿಳೆ ಪತಿ ಮರಣ …

Read More »