ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಶವ ಪ್ಯಾಕ್ ಮಾಡಿಕೊಡಲು ಲಂಚ (Bribe) ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಹೊರ ಗುತ್ತಿಗೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಮಹಿಳೆಯೊಬ್ಬಳ ಶವವನ್ನು ಪ್ಯಾಕ್ ಮಾಡಲು ಐವರು ಸಿಬ್ಬಂದಿ ಹಣ ವಸೂಲಿ ಮಾಡಿದ್ದರು. ಸಿಬ್ಬಂದಿಯ ಅಮಾನವೀಯ ಕೃತ್ಯಕ್ಕೆ ಮೃತಳ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದರು. ಲಂಚಾವತಾರ ಬಯಲಾದ ಬಳಿಕ ಹಣ ವಸೂಲಿ ಮಾಡಿದ ಐವರು ಡಿ ಗ್ರೂಪ್ ನೌಕರರನ್ನು ಅಮಾನತು ಮಾಡಲಾಗಿದೆ. ರಾಯಚೂರು …
Read More »ಇಂದು ವಿಶ್ವ ರೇಡಿಯೋ ದಿನ..
ವಿಶ್ವ ರೇಡಿಯೋ ದಿನವನ್ನು ಪ್ರತಿವರ್ಷ ಫೆಬ್ರವರಿ 13ರಂದು ಆಚರಿಸಲಾಗುತ್ತದೆ. ಈ ದಿನವನ್ನು UNESCO 2011ರಲ್ಲಿ ಘೋಷಿಸಿದ್ದು, ನಂತರ United Nations General Assembly 2012ರಲ್ಲಿ ಅಧಿಕೃತವಾಗಿ ಅಂಗೀಕರಿಸಿತು. ರೇಡಿಯೋ ಎಂಬ ಮಾಧ್ಯಮದ ಮಹತ್ವವನ್ನು ಜಗತ್ತಿಗೆ ನೆನಪಿಸುವುದು ಮತ್ತು ಜನರ ನಡುವೆ ಮಾಹಿತಿ ಹಂಚಿಕೆಯನ್ನು ಉತ್ತೇಜಿಸುವುದು ಈ ದಿನದ ಉದ್ದೇಶವಾಗಿದೆ. ರೇಡಿಯೋ ಒಂದು ಸರಳ, ಸುಲಭ ಮತ್ತು ಅಗ್ಗದ ಸಂವಹನ ಮಾಧ್ಯಮವಾಗಿದೆ. ವಿದ್ಯುತ್ ಇಲ್ಲದ ಪ್ರದೇಶಗಳಲ್ಲಿಯೂ ಬ್ಯಾಟರಿ ಮೂಲಕ ರೇಡಿಯೋ ಕೇಳಬಹುದು. …
Read More »ಬೆಳಗಾವಿ: ಒಂದೇ ವರ್ಷದಲ್ಲಿ ಅಪಘಾತಕ್ಕೆ 800 ಬಲಿ
ಬೆಳಗಾವಿ: ಜಿಲ್ಲೆಯಲ್ಲಿ ಚಾಲಕರ ರ್ನಿಲಕ್ಷ$್ಯ ಮದ್ಯಸೇವನೆ ಮಾಡಿ ವಾಹನ ಚಲಾವಣೆ, ಅತಿಯಾದ ವೇಗ ಹೀಗೆ ವಿವಿಧ ಕಾರಣಗಳಿಂದ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಒಂದೇ ವರ್ಷದಲ್ಲಿ 800 ಜನ ಮೃತಪಟ್ಟಿದ್ದಾರೆ ಎಂದು ಎಸ್ಪಿ ಕೆ.ರಾಮರಾಜನ್ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಅಪಘಾತ ತಡೆಗಟ್ಟಲು ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕೇಸ್ ದಾಖಲಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಶಬ್ದಮಾಲಿನ್ಯ …
Read More »ಸೌಲಭ್ಯ ಸದುಪಯೋಗಪಡಿಸಿಕೊಳ್ಳಲಿ
ಸವದತ್ತಿ: ಅಂಗವಿಕಲರು ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ನಗರಸಭೆ ವ್ಯಾಪ್ತಿಯ ರಾಜ್ಯ ಹಣಕಾಸು ಯೋಜನೆ ಹಾಗೂ ಪುರಸಭೆ ನಿಧಿ ಯೋಜನೆಯಡಿ ಅಂಗವಿಕಲ ಪಲಾನುಭವಿಗಳಿಗೆ ಬುಧವಾರ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿ, ತ್ರಿಚಕ್ರ ವಾಹನ ಲಾನುಭವಿಗಳ ದೈನಂದಿನ ಬದುಕಿಗೆ ನೆರವಾಗುವ ಮೂಲಕ ಆಸರೆಯಾಗಲಿ ಎಂದು ಆಶಿಸಿದರು. ನಗರಸಭೆ ಆಯುಕ್ತ ಸಂಗನಬಸಯ್ಯ ಗದ್ದಗಿಮಠ, ತಾಪಂ ಇಒ ಆನಂದ ಬಡಕುಂದ್ರಿ, ಸಿಡಿಪಿಒ ಅಮೃತ …
Read More »ವಿದ್ಯುತ್ ದುರ್ಬಳಕೆ ತಡೆಗೆ ಕ್ರಮವಹಿಸಿ
ಹುಕ್ಕೇರಿ: ಬೇಸಿಗೆಯಲ್ಲಿ ವಿದ್ಯುತ್ ಬಳಕೆ ಹೆಚ್ಚಾಗುತ್ತದೆ. ಕಾರಣ ಅನಧಿಕೃತ ಪಂಪಸೆಟ್ಗಳಿಂದ ವಿದ್ಯುತ್ ದುರ್ಬಳಕೆ ಆಗದಂತೆ ರೈತರು ಗಮನಿಸಬೇಕು ಎಂದು ಹುಕ್ಕೇರಿ ತಾಲೂಕು ವಿದ್ಯುತ್ ಸಹಕಾರ ಸಂಘದ ಅಧ್ಯಕ್ಷ ಮಹಾವೀರ ನಿಲಜಗಿ ಹೇಳಿದರು. ತಾಲೂಕಿನ ಬಡಕುಂದ್ರಿ ಗ್ರಾಮದಲ್ಲಿ ಮಂಗಳವಾರ ಮಾನೆ ತೋಟದ ಬಳಿ ಅಳವಡಿಸಿದ್ದ ನೂತನ ಹೆಚ್ಚುವರಿ ವಿದ್ಯುತ್ ಪರಿವರ್ತಕ ಉದ್ಘಾಟಿಸಿ ಮಾತನಾಡಿ, ವಿದ್ಯುತ್ ಚಾಲಿತ ಪಂಪ್ಸೆಟ್ಗಳಿಗೆ ಹೆಚ್ಚು ವಿದ್ಯುತ್ ಬೇಕಾಗುತ್ತದೆ. ಆದ್ದರಿಂದ ಅಧಿಕೃತ ಜೋಡಣೆ ಅನುಸಾರ ಟಿಸಿ ಅಳವಡಿಸಲಾಗುತ್ತದೆ. ಅನಧಿಕೃತ ಸಂಪರ್ಕದಿಂದ …
Read More »ಯಲ್ಲಮ್ಮನಗುಡ್ಡದಲ್ಲಿ ಸಂಚಾರ ಕಿರಿಕಿರಿ
ಸವದತ್ತಿ: ಸಮೀಪದ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಅಪಾರ ಭಕ್ತ ಸಮೂಹ ಆಗಮಿಸಿದ್ದರಿಂದ ಮಂಗಳವಾರ ಎಲ್ಲೆಡೆ ಸಂಚಾರ ಸಿಕ್ಕು ಉಂಟಾಯಿತು. ಭಕ್ತರ ನಿಯಂತ್ರಣಕ್ಕಾಗಿ ಸವದತ್ತಿ ಯಿಂದ ಸಂಗಪ್ಪನಕೊಳ್ಳ ಮಾರ್ಗವಾಗಿ ಪ್ರವೇಶ ಹಾಗೂ ಯಲ್ಲಮ್ಮನಗುಡ್ಡ ಜೋಗುಳಬಾವಿ ಮಾರ್ಗವಾಗಿ ನಿರ್ಗಮನಕ್ಕೆ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಲಾಯಿತು. ಆದರೆ, ನಿರೀೆಗೂ ಮೀರಿ ಭಕ್ತರು ಆಗಮಿಸಿದ್ದರಿಂದ ಸಂಚಾರ ಸಿಕ್ಕು ಹೆಚ್ಚಿತು. ಯಲ್ಲಮ್ಮನಗುಡ್ಡದಿಂದ ಸವದತ್ತಿ ಎಪಿಎಂಸಿ ವರೆಗೆ, ಯಲ್ಲಮ್ಮನಗುಡ್ಡ ಜೋಗುಳಬಾವಿ ಮಾರ್ಗದ ಎಪಿಎಂಸಿ, ಮುನವಳ್ಳಿ, ಧಾರವಾಡ, …
Read More »Belagavi: ಡಾ.ಕೋರೆಗೆ ಪದ್ಮಶ್ರೀ ನಾಡಿಗೆ ಸಂದ ಗೌರವ
ಬೆಳಗಾವಿ: ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಗುರುತಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ನೀಡುವ ಮೂಲಕ ನಾಡಿಗೆ ಗೌರವ ಸಲ್ಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶಂಸಿಸಿದರು. ಬೆಳಗಾವಿ ನಗರದ ಕೆಎಲ್ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಬುಧವಾರ ಪದ್ಮಶ್ರೀ ಪುರಸ್ಕೃತ ಡಾ.ಪ್ರಭಾಕರ ಕೋರೆ ಅವರನ್ನು ಸತ್ಕರಿಸಿ ಮಾತನಾಡಿದ ಅವರು, ಡಾ.ಕೋರೆ ಸೇವೆ ಅಪಾರ. ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ನಾಡಿಗೆ ಅವರು ಅದ್ವಿತೀಯ ಕೊಡುಗೆ …
Read More »ಬೆಳಗಾವಿ: ಸಬ್ರಜಿಸ್ಟ್ರಾರ್ ಸೇರಿ 9 ವಂಚಕರ ಬಂಧನ
ಬೆಳಗಾವಿ: ವೃದ್ಧರು, ಓದಲು ಬಾರದಿರುವವರು, ದಾಖಲೆಗಳ ಅರಿವು ಇಲ್ಲದವರು, ಜಮೀನು ಬಳಸದಿರುವ ಮಾಲೀಕರನ್ನು ಗುರಿಯಾಗಿಸಿಕೊಂಡು ನಕಲಿ ದಾಖಲೆ ಸೃಷ್ಟಿಸಿ ಜಮೀನು, ನಿವೇಶನ ಕಬಳಿಸುತ್ತಿದ್ದ ವಂಚಕರ ಜಾಲ ಭೇದಿಸಿ, ಉಪ ನೋಂದಣಾಧಿಕಾರಿ ಸೇರಿ 9 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂಮಿ, ನಿವೇಶನ ಕಬಳಿಸಿರುವ ಕುರಿತು ಹುಕ್ಕೇರಿಯಲ್ಲಿ 2, ಮೂಡಲಗಿಯಲ್ಲಿ 3 ಹಾಗೂ ಯಮಕನಮರಡಿಯಲ್ಲಿ …
Read More »Belagavi: ಮುರಘೇಂದ್ರಗೌಡ ಎಸ್. ಪಾಟೀಲ ಟೋಫಿ ಆರಂಭ
ಬೆಳಗಾವಿ : ಐಪಿಎಲ್ನಂತಹ ಮ್ಯಾಚ್ಗಳು ಬೆಳಗಾವಿಯಲ್ಲೂ ನಡೆಯುವ ರೀತಿಯಲ್ಲಿ ಇಲ್ಲಿನ ಸ್ಟೇಡಿಯಂ ಅಭಿವೃದ್ಧಿಯಾಗಬೇಕಿದೆ. ಇದಕ್ಕಾಗಿಯೇ ಈಚೆಗೆ ಏಷಿಯನ್ ಕ್ರಿಕೆಟ್ ಕೌನ್ಸಿಲ್ ಸದಸ್ಯ ಆಶೀಷ ಶೇಲಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದೇನೆ. ಬೆಳಗಾವಿಗೆ ಐಪಿಎಲ್ ಮ್ಯಾಚ್ಗಳು ಬರುವವರೆಗೂ ನಮ್ಮ ಪ್ರಯತ್ನ ಮುಂದುವರೆಯುತ್ತದೆ ಎಂದು ಎಂದು ಶಾಸಕ ಅಭಯ ಪಾಟೀಲ ಹೇಳಿದರು. ನಗರದ ಸರ್ದಾರ ಮೈದಾನದಲ್ಲಿ ಎಂಪಿ ಫೌಂಡೇಶನ್ ವತಿಯಿಂದ ಆಯೋಜಿಸಿರುವ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಟುಗಳನ್ನು ಒಳಗೊಂಡಿರುವ ‘ಆಲ್ ಇಂಡಿಯಾ ಓಪನ್ ಟೆನಿಸ್ …
Read More »ಹಿರಿಯ ನಾಗರಿಕರೊಂದಿಗೆ ಹೆಬ್ಬಾಳ್ಕರ್ ಜನ್ಮದಿನ ಆಚರಣೆ
ಪಂಚಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಇಡೀ ರಾಜ್ಯದಲ್ಲಿ ಮನೆಮಾತಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು 14,500 ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ವಿಧಾನ ಪರಿಷತ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೆನಕನಹಳ್ಳಿ ಗ್ರಾಮದ ಗಾರ್ಡ್ನ ಕೋರ್ಟ್ ಎದುರಿನ ಮೈದಾನದಲ್ಲಿ …
Read More »
Laxmi News 24×7