ಬಾಗಲಕೋಟೆ: ನೂತನವಾಗಿ ಆರಂಭಗೊAಡಿರುವ ಬಿವಿವಿ ಸಂಘದ ಸಂಗೀತ ಮತ್ತು ಪ್ರದರ್ಶಕ ಕಲೆಗಳ ಮಹಾವಿದ್ಯಾಲಯಕ್ಕೆ ವಿವಿಧ ಕೋರ್ಸುಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಪರಿಶೀಲನಾ ಸಮಿತಿಯು ಮಹಾವಿದ್ಯಾಲಯಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪರಿಶೀಲನಾ ಸಮಿತಿಯ ಸದಸ್ಯರು ಪಂ. ಪುಟ್ಟರಾಜ ಗವಾಯಿ ಹಾಗೂ ಹಾನಗಲ್ ಕುಮಾರೇಶ್ವರ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಬಳಿಕ ಮಹಾವಿದ್ಯಾಲಯದ ಮೂಲಸೌಕರ್ಯ, ಗಾಯನ, …
Read More »ಆಷಾಢ ಮಾಸದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ, ನಾಗಲಕ್ಷ್ಮೀಯಾದ ತಾಯಿ
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಆವರಿಸಿದೆ. ಇಡೀ ಬೆಟ್ಟವನ್ನು ವಿಶೇಷ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನಡೆಯುತ್ತಿದೆ. ತಾಯಿ ಚಾಮುಂಡಿ ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಉತ್ಸವ ಮೂರ್ತಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ದೇವಿಯ ದರ್ಶನಕ್ಕೆ ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಈ ಬಾರಿ 2 ಸಾವಿರ ರೂ. ಮೌಲ್ಯದ ಟಿಕೆಟ್ ಪಡೆದವರಿಗೆ ನೇರ …
Read More »ರಾಜ್ಯದಲ್ಲಿ ಮಳೆ ಕೊರತೆ – ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ನೀರು, ವಿದ್ಯುತ್ ಮಿತ ಬಳಕೆಗೆ ಸಿಎಸ್ ಆದೇಶ
ಬೆಂಗಳೂರು: ನಿರಂತರ ಮಳೆ ಕೊರತೆ ಹಿನ್ನೆಲೆ ರಾಜ್ಯದಲ್ಲಿರುವ ಎಲ್ಲಾ ಸಚಿವಾಲಯದ ಕಚೇರಿಗಳಲ್ಲಿ ನೀರು ಹಾಗೂ ವಿದ್ಯುತ್ ಅನ್ನು ಮಿತವಾಗಿ ಬಳಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಪ್ರಸ್ತುತ ಸಂಭವಿಸುತ್ತಿರುವ ಎಲ್ನೊ ಹವಾಮಾನ ವೈಪರೀತ್ಯದ ಪರಿಣಾಮದಿಂದ ವಿಶ್ವದಾದ್ಯಂತ ಸಾಮಾನ್ಯ ಹವಾಮಾನ ಮಾದರಿಗಳನ್ನ ವ್ಯತ್ಯಯಗೊಳಿಸುತ್ತಿದ್ದು, ದೇಶದಲ್ಲಿ ಅತಿವೃಷ್ಟಿ, ಪ್ರವಾಹ ಮತ್ತು …
Read More »ಜು.17 ರಂದು ಪ್ರಧಾನಿ ಮೋದಿಯಿಂದ ಕರ್ನಾಟಕದ 4 ‘ಅಮೃತ ಭಾರತ್ʼ ನಿಲ್ದಾಣಗಳ ಉದ್ಘಾಟನೆ
ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯು ನಿಲ್ದಾಣಗಳು, ರೈಲುಗಳು, ಹಳಿಗಳು ಹಾಗೂ ಸಿಗ್ನಲಿಂಗ್ ವ್ಯವಸ್ಥೆಗಳನ್ನು ಜಾಗತಿಕ ಮಾನದಂಡಗಳಿಗೆ ತಕ್ಕಂತೆ ಆಧುನೀಕರಿಸುವ ದಿಸೆಯಲ್ಲಿ ಮಹತ್ವದ ಪರಿವರ್ತನೆಯಲ್ಲಿ ಸಾಗುತ್ತಿದೆ. ಇದರ ಮೂಲಕ ಪ್ರಯಾಣಿಕರ ಅನುಭವ ಮತ್ತು ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸುವತ್ತ ಗಮನ ಹರಿಸಲಾಗುತ್ತಿದೆ. ಇದರ ಭಾಗವಾಗಿ ಕರ್ನಾಟಕದ 4 ʻಅಮೃತ ಭಾರತ್ʼ ನಿಲ್ದಾಣಗಳನ್ನು ಪ್ರಧಾನಿ ಮೋದಿ ಉದ್ಘಾಟಿಸುತ್ತಿದ್ದಾರೆ. ‘ಅಮೃತ ಭಾರತ್ ನಿಲ್ದಾಣ ಯೋಜನೆ’ (ABSS)ಯಡಿ, ಪ್ರಧಾನಿ ನರೇಂದ್ರ ಮೋದಿ ಅವರು, ಶುಕ್ರವಾರ (ಜು.17) ದೇಶಾದ್ಯಂತ ನವೀಕರಿಸಲಾದ …
Read More »120 ಸ್ಥಾನ ಪಡೆಯೋ ಕಾಲವೂ ಬರುತ್ತೆ, ಅಲ್ಲಿವರೆಗೂ ನಾನೇನು ಸಾಯಲ್ಲ: ಹೆಚ್ಡಿಕೆ ತಿರುಗೇಟು
ಬೆಂಗಳೂರು: ಜೆಡಿಎಸ್ 120 ಸ್ಥಾನ ಪಡೆಯುವ ಕಾಲವೂ ಬರುತ್ತದೆ ಅಂತ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಮಾಜಿ ಸಚಿವ ಚೆಲುವರಾಯಸ್ವಾಮಿ ಅವರಿಗೆ ತಿರುಗೇಟು ಕೊಟ್ಟರು. ಕುಮಾರಸ್ವಾಮಿ 120 ಸ್ಥಾನ ಗೆದ್ದು ತೋರಿಸಲಿ ಎಂಬ ಚೆಲುವರಾಯಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 20 ವರ್ಷಗಳಿಂದ ಟೀಕೆ ಮಾಡ್ತಾನೇ ಇದ್ದಾರೆ. ನನ್ಮ ವಿರುದ್ಧ ವಿಷ ಕಾರುತ್ತಾರೆ. ನೋಡೋಣ 120 ಸೀಟು ಗೆದ್ದು ತೋರಿಸೋ ದಿನ ಬರುತ್ತದೆ. ಅಲ್ಲಿವರೆಗೂ ನಾನೇನು ಸಾಯಲ್ಲ ಎಂದರು. …
Read More »ಕುಮಾರಸ್ವಾಮಿ ಆಪರೇಷನ್ ಕಮಲದಿಂದ ಆದ ಸಿಎಂ, ಮೈತ್ರಿಯಿಂದ ಹೊರಗೆ ಬಂದು ತೊಡೆ ತಟ್ಟಲಿ: ಚಲುವರಾಯಸ್ವಾಮಿ ಸವಾಲ್
ಬೆಂಗಳೂರು: 28-30 ಶಾಸಕರನ್ನು ಗೆಲ್ಲಿಸಿಕೊಂಡು ಆಕಸ್ಮಿಕವಾಗಿ ಸಿಎಂ ಆದ ಇತಿಹಾಸ ಹೊಂದಿರುವ ಹೆಚ್.ಡಿ ಕುಮಾರಸ್ವಾಮಿ ಅವರು, 136 ಸ್ಥಾನಗಳ ಸ್ಪಷ್ಟ ಬಹುಮತದೊಂದಿಗೆ 7 ಕೋಟಿ ಜನರ ಪ್ರತಿನಿಧಿಯಾಗಿ ಅಧಿಕಾರಕ್ಕೆ ಬಂದಿರುವ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಒಪ್ಪುವುದಿಲ್ಲ ಎನ್ನುತ್ತಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಹಾಗೂ ನಮ್ಮ ಸಂವಿಧಾನಕ್ಕೆ ಮಾಡುತ್ತಿರುವ ದ್ರೋಹವಾಗಿದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. ‘ಮಿಸ್ಟರ್ ಕುಮಾರಸ್ವಾಮಿ’ ಅಂತ ಕರೆಯೋಕೆ ನಮಗೂ ಬರುತ್ತದೆ. ಇನ್ನು ಮುಂದೆಯಾದರೂ ಅವರು ನಾಲಿಗೆ …
Read More »ಮೈಸೂರು ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ, ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ: ಅಶೋಕ್ ರೈ
ಬೆಂಗಳೂರು: ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ. ಮೈಸೂರಿಗೆ ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ. ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನಿಂದ ಕೋಣಗಳನ್ನ ಓಡಿಸುವವರು ಯಾರಿದ್ದರೋ ಅವರನ್ನ ಸಮಿತಿಗೆ ಸೇರಿಸಲಾಗಿದೆ. ಅವರ ಅಭಿಪ್ರಾಯ ಪಡೆದು ದಸರಾದಲ್ಲಿ ಭಾಗಿಯಾಗುವ ಬಗ್ಗೆ ಒಪ್ಪಿಗೆ ಸೂಚಿಸಿದ್ದೇವೆ. ಬೆಂಗಳೂರಿನಲ್ಲೂ ಕಂಬಳಕ್ಕೆ ವಿರೋಧ ಇತ್ತು. ಆಮೇಲೆ ಕಂಟ್ರೋಲ್ ಮಾಡಲಾಗದಷ್ಟು ಕೋಣಗಳು ಬಂದವು. ಬೆಂಗಳೂರಿನಲ್ಲಿ …
Read More »ನಾಯಿ ಬೆಲ್ಟ್ನಿಂದ 4 ತಿಂಗಳ ಗರ್ಭಿಣಿ ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ
ಬೆಂಗಳೂರು: ನಾಯಿ ಕಟ್ಟಿಹಾಕುವ ಬೆಲ್ಟ್ನಿಂದ 4 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದು ಬಳಿಕ ಪತಿಯೂ (Husband) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿಕೆ ಅಚ್ಚುಕಟ್ಟಿನಲ್ಲಿ ನಡೆದಿದೆ. ಸ್ವಪ್ನ ಗಂಡನಿಂದ ಕೊಲೆಯಾದ ಪತ್ನಿ. ಮನೋಜ್ ತನ್ನ ಪತ್ನಿಯನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಂಪತಿ ಮೂಲತಃ ಉತ್ತರ ಪ್ರದೇಶ ಮೂಲದವರಾಗಿದ್ದು, ಮನೋಜ್ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ. 4 ತಿಂಗಳ ಗರ್ಭಿಣಿಯಾಗಿದ್ದ ಪತ್ನಿ ಸ್ವಪ್ನಾಳನ್ನು ನಾಯಿ ಕಟ್ಟಿಹಾಕುವ ಬೆಲ್ಟ್ನಿಂದ ಕತ್ತು ಹಿಸುಕಿ …
Read More »HMT ಜಮೀನು ಇಂದಿನ ಸಿಎಂ ಅವರೇ ಮಾರಾಟ ಮಾಡಿರೋದು: ಹೆಚ್ಡಿಕೆ ಆರೋಪ
ಬೆಂಗಳೂರು: HMT ಭೂಮಿಯನ್ನ ಇಂದಿನ ಸಿಎಂ 2004 ರಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾಗಲೇ ಮಾರಾಟ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೆಸರು ಹೇಳದೇ ಸಿಎಂ ಡಿ.ಕೆ ಶಿವಕುಮಾರ್ ಮೇಲೆ ನೇರ ಆರೋಪ ಮಾಡಿದ್ದಾರೆ. HMT ಜಮೀನು ಅರಣ್ಯ ಇಲಾಖೆಗೆ ಸೇರಿದ್ದು ಎಂಬ ಸಚಿವ ಈಶ್ವರ್ ಖಂಡ್ರೆ ಆರೋಪ ಹಿನ್ನಲೆಯಲ್ಲಿ ಇಂದು ಜಾಲಹಳ್ಳಿಯ HMT ಕ್ಯಾಂಪಸ್ ವೀಕ್ಷಣೆ ಮಾಡಿದ ಕುಮಾರಸ್ವಾಮಿ, ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡಿದ್ರು. HMTಗೆ ಹೊಸ ಕಾಯಕಲ್ಪ …
Read More »ಮಳೆ ಜಾಸ್ತಿ ಆದ್ರೂ, ಕಡಿಮೆ ಆದ್ರೂ ಮೋದಿನೇ ಕಾರಣ – ಇದು ಕಾಂಗ್ರೆಸ್ ನೀತಿ: ಜೋಶಿ ಕಿಡಿಬೆಂಗಳೂರು: ಬರದ ವಿಚಾರದಲ್ಲಿ ಸಿಎಂ ಡಿ.ಕೆ ಶಿವಕುಮಾರ್ (D.K Shivakumar) ರಾಜಕೀಯ ಮಾಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು (Pralhad Joshi) ಡಿಕೆಶಿ ವಿರುದ್ದ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬರ ಅಧ್ಯಯನ ತಂಡ ಕಳಿಸುವಂತೆ ಪ್ರಧಾನಿ ಮೋದಿ (Narendra Modi) ಅವರಿಗೆ ಸಿಎಂ ಪತ್ರ ಬರೆದ ವಿಚಾರಕ್ಕೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ, ರಾಜ್ಯ ಸರ್ಕಾರ ಮಳೆ ಎಷ್ಟು ಆಗಿದೆ. ಎಷ್ಟು ಆಗಬೇಕು, ಬಿತ್ತನೆ ಎಷ್ಟು ಆಗಿದೆ ಎಂದು ಕೇಂದ್ರಕ್ಕೆ ಮೊದಲು ಮಾಹಿತಿ ಕೊಡಲಿ. 12 ವರ್ಷಗಳಿಂದ ಕಾಂಗ್ರೆಸ್ ನೀತಿ ಮಳೆ ಜಾಸ್ತಿ ಆದ್ರೆ, ಕಡಿಮೆ ಆದ್ರೆ ಮೋದಿ ಕಾರಣ. ಜನಸಂಖ್ಯೆ ಜಾಸ್ತಿ ಆದ್ರೂ, ಕಡಿಮೆ ಆದ್ರೂ ಮೋದಿ ಕಾರಣ. ಈ ರೀತಿ ಮಾತಾಡೋ ಕೆಲಸ ಕಾಂಗ್ರೆಸ್ ಮಾಡ್ತಿದೆ. ಈ ಧೋರಣೆ ಕೈ ಬಿಡಬೇಕು. ಮೋದಿಗೆ ಕರ್ನಾಟಕದ ಜನ ಮತ ಹಾಕಿದ್ದಾರೆ. ಇಲ್ಲಿನ ಜನ ನಮ್ಮವರೇ. ಇದರಲ್ಲಿ ಬೇಧ ಮಾಡಲ್ಲ. ರಾಜಕೀಯ ಮಾಡೋದು ಬಿಟ್ಟು ಅಂಕಿಗಳನ್ನು ಕೇಂದ್ರ ಸರ್ಕಾರಕ್ಕೆ ಕೊಡಲಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಸ್ತೆ ಕಾಮಗಾರಿ ವೇಳೆ ಟೆಂಡರ್ ಉಲ್ಲಂಘನೆ; ಕರ್ತವ್ಯ ಲೋಪ – ಇಬ್ಬರು ಅಧಿಕಾರಿಗಳ ಅಮಾನತು d.k.shivakumar ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಳಂಬ ವಿಚಾರವಾಗಿ, ಕ್ಯಾಬಿನೆಟ್ ಮಾಡೋಕೆ ರಾಹುಲ್ ಗಾಂಧಿ ಇಷ್ಟು ದಿನ ನಾಪತ್ತೆ ಆಗಿದ್ರು. ಅವರು ಎಲ್ಲಿಗೆ ಹೋಗಿದ್ರು ಅಂತ ಯಾರಿಗಾದರು ಗೊತ್ತಾ? ಯಾವ ದೇಶದಲ್ಲಿ ಇದ್ದರು ಎಂದು ನಮಗೂ ಗೊತ್ತಿಲ್ಲ. ರಾಹುಲ್ ಗಾಂಧಿ ಕಳ್ಳತನದಲ್ಲಿ ಯಾಕೆ ವಿದೇಶಕ್ಕೆ ಹೋಗಬೇಕು ಅಂತ ಪ್ರಶ್ನಿಸಿದರು. More Read Rotary Kambala 2 ವಿವಾದಗಳ ನಡುವೆಯೇ ಕಂಬಳಕ್ಕೆ ಸರ್ಕಾರದಿಂದ ಗುಡ್ ನ್ಯೂಸ್ miscreants cut 600 areca trees at farm in davanagere one arrested ವೈಯಕ್ತಿಕ ದ್ವೇಷಕ್ಕೆ 600ಕ್ಕೂ ಹೆಚ್ಚು ಅಡಿಕೆ ಮರಗಳಿಗೆ ಕೊಡಲಿ – ದುಷ್ಕರ್ಮಿ ಅರೆಸ್ಟ್ Ballari PSI ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಯತ್ನ – ಪ್ರೊಬೆಷನರಿ ಪಿಎಸ್ಐ ಬಂಧನ ದಾಖಲಾತಿ ತೆಗೆಯೋದು IB ಕೆಲಸ. ಅವರು ಮಾಡ್ತಾರಾ, ಇಲ್ಲವಾ ನನಗೆ ಗೊತ್ತಿಲ್ಲ. ನಾವು ಅದನ್ನ ಮಾಡಲ್ಲ. ನಾನು ಇಂತಹ ದೇಶಕ್ಕೆ ಹೋಗಿದ್ದೇನೆ ಅಂತ ಹೇಳೋದು ಅವರ ಕೆಲಸ ಅಲ್ಲ. ಪ್ರಧಾನಿ ಕೇಂದ್ರದ ಮಂತ್ರಿಗಳು ವಿದೇಶಕ್ಕೆ ಹೋದಾಗ ಎಲ್ಲಿಗೆ ಹೋಗಿದ್ವಿ ಅಂತ ಹೇಳ್ತಾರೆ. ನೀವು ಯಾಕೆ ಹೇಳಲ್ಲ? 25 ದಿನಗಳಿಂದ ರಾಹುಲ್ ಗಾಂಧಿ ಎಲ್ಲಿದ್ದಾರೆ ಅಂತ ಯಾರಿಗೂ ಗೊತ್ತಿಲ್ಲ. ದೇಶದ ಜನರಿಂದ ಏನು ಮುಚ್ಚಿಡುತ್ತಿದ್ದೀರಾ ಎಂದು ಪ್ರಶ್ನಿಸಿದರು. ಅನೇಕ ಕಾರ್ಯಕ್ರಮ ರದ್ದು ಮಾಡಿ ಹೋಗಿದ್ದಾರೆ. ಎಲ್ಲಿಗೆ ಹೋಗಿದ್ದಾರೆ? ವಿರೋಧ ಪಕ್ಷದ ನಾಯಕ, ಎಂಪಿ, ಪ್ರತಿಷ್ಠಿತ ಗಾಂಧಿ ಕುಟುಂಬದವರು ಎಲ್ಲಿಗೆ ಹೋಗಿದ್ದೇವೆ ಅಂತ ಹೇಳೋ ಜವಾಬ್ದಾರಿ ಇಲ್ಲವಾ? ಯಾಕೆ ಹೇಳ್ತಿಲ್ಲ ಅಂತ ಅವರೇ ಹೇಳಬೇಕು ಎಂದು ಆಗ್ರಹಿಸಿದರು. ಬಿಡದಿ ಟೌನ್ಶಿಪ್ಗೆ (Bidadi Township) ಸಿಎಂ ಡಿ.ಕೆ ಶಿವಕುಮಾರ್ ಇಷ್ಟು ಆತುರವಾಗಿ ಮಾಡ್ತಿರೋದು ನೋಡಿದ್ರೆ ಇದರ ಹಿಂದೆ ಏನೋ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. 2019ರಿಂದ 2023ರವರೆಗೆ ಬಿಜೆಪಿ ಸರ್ಕಾರ ಇತ್ತು. ಆಗ ನಾವು ಮಾಡಲಿಲ್ಲ. ದೇವೇಗೌಡರು ಸಿಎಂ ಡಿ.ಕೆ ಶಿವಕುಮಾರ್ ಮೇಲೆ ದೊಡ್ಡ ಆರೋಪ ಮಾಡಿದ್ರು. ಅದಕ್ಕೆ ಅವರು ಉತ್ತರ ಕೊಟ್ಟಿಲ್ಲ. ಯಾಕೆ ಉತ್ತರ ಕೊಟ್ಟಿಲ್ಲ. ಸಿದ್ದರಾಮಯ್ಯ ಯಾಕೆ ಇದನ್ನ ಮಾಡಿಲ್ಲ. ಇದನ್ನ ಇಷ್ಟು ಆತುರವಾಗಿ ಮಾಡ್ತಿರೋದು ನೋಡಿದ್ರೆ ಇದರ ಹಿಂದೆ ಏನೋ ಇದೆ ಅಂತ ಆರೋಪ ಮಾಡಿದರು. ರೈತರ ಜೊತೆ ಯಾಕೆ ಸಿಎಂ ಮಾತಾಡ್ತಾ ಇಲ್ಲ. ಸಿಎಂ ಅವರು ದಾದಾಗಿರಿ ಮಾಡಿ ಕೆಲಸ ಮಾಡೋದಾ? ರಾಹುಲ್ ಗಾಂಧಿ ಬೇರೆ ರಾಜ್ಯಕ್ಕೆ ಹೋಗಿ ರೈತರ ಜೊತೆ ಇದ್ದೇನೆ ಅಂತಾರೆ. ಆದ್ರೆ ಇಲ್ಲಿ ಏನ್ ಮಾಡ್ತಾ ಇದ್ದಾರೆ. ದೇವೇಗೌಡರ ಆರೋಪಕ್ಕೆ ಉತ್ತರ ನೀಡಲಿ ಮೊದಲು ಅಂತ ಆಗ್ರಹ ಮಾಡಿದರು. ಸಿದ್ದರಾಮಯ್ಯ 3 ವರ್ಷ ಯಾಕೆ ಮಾಡಲಿಲ್ಲ. ಈಗ ಯಾಕೆ ಇಷ್ಟು ಮುತುವರ್ಜಿ ತೋರಿಸ್ತಾ ಇದ್ದಾರೆ. ಬಿಡದಿ ಟೌನ್ ಶಿಪ್ ಮಾಡಿದ್ರೆ ಮಾತ್ರ ಬೆಂಗಳೂರು ಅಭಿವೃದ್ಧಿ ಆಗೊಲ್ಲ. ಅಥವಾ ಒತ್ತಾಯ ಪೂರ್ವಕವಾಗಿ ಜನರ ಭೂಮಿಯನ್ನು ಕಸಿದು ಮಾಡೋದು ಅಲ್ಲ. ಜನರ ಮನವೊಲಿಕೆ ಮಾಡಬೇಕು. ಅದು ಬಿಟ್ಟು ನನ್ನ ಕಡೆ ಪೊಲೀಸ್ ಇದೆ. ನೀವು ಬೇಕಾದ್ದು ಮಾಡಿ ಅನ್ನೋದಾ? ಇದು ಪ್ರಜಾಪ್ರಭುತ್ವನಾ? ಅಂತ ಕಿಡಿಕಾರಿದರು. ರೈತರು ತಿರುಗಿ ಬಿದ್ದ ಕೂಡಲೇ ಈಗ ಒತ್ತಾಯ ಇಲ್ಲ ಅಂತಿದ್ದಾರೆ. ಯಾಕೆ ಜನರ ಜೊತೆ ಮಾತಾಡಿಲ್ಲ. ನೀವು ಮುಖ್ಯಮಂತ್ರಿ ಆದ್ರೆ ಸರ್ವಾಧಿಕಾರಿ ಅಲ್ಲ. ಪ್ರಜಾಪ್ರಭುತ್ವದಲ್ಲಿ ಮಾತುಕತೆ ನಡೆಯಬೇಕು. ಡಿ.ಕೆ ಶಿವಕುಮಾರ್ ರಾಜ್ಯದ ಸಿಎಂ. ಈ ರಾಜ್ಯದ ಮಹಾರಾಜರು ಅಲ್ಲ. ಇದನ್ನ ಅರ್ಥ ಮಾಡಿಕೊಂಡು ನಡೆನುಡಿ ಸರಿ ಮಾಡಿಕೊಳ್ಳಲಿ. ಭ್ರಷ್ಟಾಚಾರದ ಪರಮ ಆರೋಪಗಳು ಬರುತ್ತಿವೆ. ಇದರ ಬಗ್ಗೆ ಸ್ಪಷ್ಟನೆ ನೀಡಲಿ ಅಂತ ಆಗ್ರಹಿಸಿದರು. bidadi township land ಡಿ.ಕೆ ಶಿವಕುಮಾರ್ ಏನೋ ತಪ್ಪು ಮಾಡಿದ್ದಾರೆ. ಹೀಗಾಗಿ ಜೈಲಿನ ಬಗ್ಗೆ ಮಾತಾಡ್ತಾ ಇದ್ದಾರೆ. ಅವರನ್ನು ಯಾರು ಜೈಲಿಗೆ ಕಳಿಸೋ ವಿಚಾರ ಇಲ್ಲ. ಅವರು ಮಾಡಿದ ಭ್ರಷ್ಟಾಚಾರ, ತಪ್ಪಿನಿಂದ ಅವರು ಜೈಲಿಗೆ ಹೋದ್ರೆ ಯಾರು ಏನು ಮಾಡೋಕೆ ಆಗಲ್ಲ. ನಾವು ಅವರನ್ನು ಜೈಲಿಗೆ ಕಳಿಸೋ ಪ್ರಯತ್ನ ಮಾಡ್ತಾ ಇಲ್ಲ. ಇದೆಲ್ಲಾ ಅನುಕಂಪಕ್ಕೆ ಮಾಡ್ತಾ ಇರೋದು. ಯಾರೋ ವ್ಯಕ್ತಿ ತಪ್ಪು ಮಾಡಿದ್ರೆ ಜೈಲಿಗೆ ಹೋಗ್ತಾರೆ. ಹಾಗಾದರೆ ಏನಾದ್ರು ತಪ್ಪು ಮಾಡಿದ್ದೀರಾ? ನಿಮಗೆ ಭಯ ಇದೆ. ಈ ಭಯದಿಂದ ನೀವು ಹೊರಗೆ ಬನ್ನಿ ಅಂತ ಸಲಹೆ ಕೊಟ್ಟರು. ರಾಜ್ಯದಲ್ಲಿ ಜನರ ಹಿತ ಇಟ್ಟುಕೊಂಡು ಅಧಿಕಾರ ಮಾಡಿ. ರೈತರ ಜೊತೆ ಮಾತುಕತೆ ಮಾಡೊಲ್ಲ. ಅವರ ಮೇಲೆ ಕೇಸ್ ಹಾಕ್ತೀರಾ. ಸಿದ್ದರಾಮಯ್ಯ ಮಾಡಿದ್ದು ನೀವು ಯಾಕೆ ಮಾಡ್ತಾ ಇದ್ದೀರಾ. ಇದರ ಅರ್ಥ ಏನೋ ಡೀಲ್ ಆಗಿದೆ ಅಂತ ಅಲ್ಲವಾ. ಇದರ ಬಗ್ಗೆ ಯಾಕೆ ಉತ್ತರ ಕೊಡ್ತಿಲ್ಲ ಅಂತ ಕಿಡಿಕಾರಿದರು. ಸಿಎಂಗೆ ಪ್ರಶ್ನೆ ಕೇಳಿದ್ರೆ ರೋಷ ಉಕ್ಕಿ ಬರುತ್ತದೆ. ಮನುಷ್ಯ ತಪ್ಪು ಮಾಡಿದಾಗ ಹತಾಶೆಯಾಗಿ ಹೀಗೆ ಕೂಗಾಡ್ತಾರೆ. ಸಿಎಂ ಕೂಗಾಡೋದು ನೋಡಿದ್ರೆ ಏನೋ ತಪ್ಪು ಮಾಡಿದ್ದಾರೆ. ಅದಕ್ಕೆ ಜೈಲಿನ ಬಗ್ಗೆ ಮಾತಾಡ್ತಾ ಇದ್ದಾರೆ. ನಾವು ಯಾಕೆ ಜೈಲಿಗೆ ಹಾಕೋಣ. ನೀವು ಜನರನ್ನ ಜೈಲಿಗೆ ಹಾಕಿದ್ದು ಅಂತ ಕಿಡಿಕಾರಿದರು.
ಬೆಂಗಳೂರು: ಬರದ ವಿಚಾರದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ರಾಜಕೀಯ ಮಾಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಡಿಕೆಶಿ ವಿರುದ್ದ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬರ ಅಧ್ಯಯನ ತಂಡ ಕಳಿಸುವಂತೆ ಪ್ರಧಾನಿ ಮೋದಿ ಅವರಿಗೆ ಸಿಎಂ ಪತ್ರ ಬರೆದ ವಿಚಾರಕ್ಕೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ, ರಾಜ್ಯ ಸರ್ಕಾರ ಮಳೆ ಎಷ್ಟು ಆಗಿದೆ. ಎಷ್ಟು ಆಗಬೇಕು, ಬಿತ್ತನೆ ಎಷ್ಟು ಆಗಿದೆ ಎಂದು ಕೇಂದ್ರಕ್ಕೆ ಮೊದಲು ಮಾಹಿತಿ ಕೊಡಲಿ. 12 …
Read More »
Laxmi News 24×7