Breaking News

ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ, ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಸಲಹೆ ನೀಡಿದ್ದಾರೆ. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಇಂದು ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಿಮ್ಮೆಲ್ಲರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ನೆಹರೂ ಅವರು ಒಂದು ಮಾತು …

Read More »

ಹಾಸನದಲ್ಲಿ ದೈತ್ಯ ಒಂಟಿಸಲಗ ಅನುಮಾನಾಸ್ಪದ ಸಾವು

ಹಾಸನ : ಅರಕಲಗೂಡು ತಾಲೂಕಿನ ನೆಲಬಳ್ಳಿ ಗ್ರಾಮದಲ್ಲಿ ದೈತ್ಯಾಕಾರದ ಒಂಟಿಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ (ಮಾ.15) ಬೆಳಕಿಗೆ ಬಂದಿದೆ. ಸುಮಾರು 25 ವರ್ಷದ ಗಂಡಾನೆಯ ಕಳೇಬರ ರೈತರ ಜಮೀನಿನಲ್ಲಿ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ವಿದ್ಯುತ್ ಶಾಕ್ ಅಥವಾ ಗುಂಡೇಟಿನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ರೈತರು ಬೆಳಗ್ಗೆ ತಮ್ಮ ಜಮೀನಿಗೆ ತೆರಳಿದಾಗ ಆನೆ ಕಳೇಬರ ಪತ್ತೆಯಾಗಿದೆ. ನಂತರ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ …

Read More »

ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರದ 40ನೇ ವಾರ್ಷಿಕೋತ್ಸವ

ಬೆಂಗಳೂರು : ಜಪಾನ್ ದೇಶದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಕೆಯಲ್ಲಿದ್ದರೂ ಉದ್ಯೋಗಾವಕಾಶಗಳು ವಿಕಾಸಗೊಳ್ಳುತ್ತಿದ್ದು, ಆಡಳಿತಾತ್ಮಕ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಭಾರತೀಯರಿಗೆ ಉದ್ಯೋಗಾವಕಾಶಗಳು ಹೆಚ್ಚಾಗುತ್ತಿವೆ ಎಂದು ಜಪಾನ್ ವಿದೇಶಾಂಗ ಸಚಿವಾಲಯದ ಸಲಹೆಗಾರ ಅಶೋಕ್ ಕುಮಾರ್ ಚಾವ್ಲಾ ತಿಳಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯ ಹಾಗೂ ಜಪಾನ್ ಕಾನ್ಸುಲೇಟ್ ಜನರಲ್ ಸಹಯೋಗದಲ್ಲಿ ಶನಿವಾರ ನಡೆದ ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರದ 40ನೇ ವಾರ್ಷಿಕೋತ್ಸವ ಹಾಗೂ ಜಪಾನ್​ನಲ್ಲಿ ಇಂದಿನ ಉದ್ಯೋಗಾವಕಾಶಗಳ ಕುರಿತಾದ ವಿಚಾರ ಸಂಕಿರಣದಲ್ಲಿ …

Read More »

ನೀರಿನಲ್ಲಿ ಮುಳುಗಿ ತಾತ ಮತ್ತು ಮೊಮ್ಮಕ್ಕಳ ಜಲಸಮಾಧಿ

ಮೈಸೂರು : ನೀರಿನಲ್ಲಿ ಮುಳುಗಿ ತಾತ ಮತ್ತು ಮೊಮ್ಮಕ್ಕಳು ಜಲಸಮಾಧಿಯಾಗಿರುವ ಘಟನೆ ತಿ. ನರಸೀಪುರ ಪಟ್ಟಣದಲ್ಲಿ ನಡೆದಿದೆ. ತಿ. ನರಸೀಪುರ ಪಟ್ಟಣದ ನಿವಾಸಿಗಳಾದ ಚೌಡಯ್ಯ (70) ಭರತ್ (13) ಧನುಷ್ (10) ಮೃತರು. ಪಟ್ಟಣದ ಕಾವೇರಿ ನದಿ ಬಳಿಗೆ ತೆರಳಿದ್ದ ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ. ಮೊಮ್ಮಕ್ಕಳನ್ನು ಕಂಡ ತಾತ ಚೌಡಯ್ಯ ಮಕ್ಕಳ ರಕ್ಷಣೆಗೆ ನದಿಗೆ ಇಳಿದಿದ್ದಾರೆ. ಈ ವೇಳೆ ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಚೌಡಯ್ಯನೂ ಮುಳುಗಿ ಸಾವನ್ನಪ್ಪಿದ್ದಾರೆ.ವಿಷಯ ತಿಳಿದ ನಂತರ …

Read More »

ಎಂ. ಪಿ ರೇಣುಕಾಚಾರ್ಯ ಅಂಡ್​ ಟೀಂ ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಂಗಮ ಸಮಾವೇಶ ನಡೆಸಲು ಪ್ಲಾನ್

ದಾವಣಗೆರೆ : ರಾಜ್ಯ ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ಬಣ ಬಡಿದಾಟ ಹೆಚ್ಚಾಗುತ್ತಿದೆ.‌ ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರರನ್ನು ಗುರಿಯಾಗಿಸಿಕೊಂಡು ಯತ್ನಾಳ್ ಬಣ ವಾಗ್ಬಾಣ ಬಿಡ್ತಿದೆ. ಇತ್ತ ಅದೇ ವಿಜಯೇಂದ್ರ ಹಾಗೂ ಬಿ ಎಸ್ ಯಡಿಯೂರಪ್ಪ ಅವರ ಪರವಾಗಿ ರೇಣುಕಾಚಾರ್ಯ ಅಂಡ್​​ ಟೀಂ ಟೊಂಕ ಕಟ್ಟಿ ನಿಂತಿದೆ. ಎಂ ಪಿ ರೇಣುಕಾಚಾರ್ಯ ಅವರ ಟೀಂ ‘ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಂಗಮ’ ಸಮಾವೇಶ ಮಾಡಲು ಪ್ಲಾನ್ ಮಾಡಿದೆ.‌ ಬರುವ ಮೇ 15 ರ …

Read More »

ದೈಹಿಕ ಹಲ್ಲೆಗೈದು ಸಹಿ ಪಡೆಯಲಾಗಿದೆ, ದಾಖಲಿಸಿರುವ ಹೇಳಿಕೆಗಳಿಗೆ ಸಮ್ಮತಿಯಿಲ್ಲ: ಡಿಆರ್‌ಐ ಎಡಿಜಿಗೆ ರನ್ಯಾ ರಾವ್ ಪತ್ರ

ಬೆಂಗಳೂರು : ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ರನ್ಯಾ ರಾವ್‌ ಅವರು ಜೈಲಿನಿಂದಲೇ ಡಿಆರ್‌ಐ ಅಡಿಷನಲ್ ಡೈರಕ್ಟರ್ ಜನರಲ್‌ಗೆ ಸುದೀರ್ಘವಾದ ಮನವಿ ಪತ್ರ ಬರೆದಿದ್ದಾರೆ. ಏಳು ಅಂಶಗಳ ಕುರಿತು ಪ್ರಸ್ತಾಪಿಸಿ ರನ್ಯಾ ರಾವ್ ಬರೆದಿರುವ ಮನವಿ ಪತ್ರವನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಡಿಆರ್‌ಐ ಎಡಿಜಿಯವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ರನ್ಯಾ ರಾವ್ ಮನವಿ ಪತ್ರದಲ್ಲೇನಿದೆ ? ದುಬೈನಿಂದ ಬಂದಿಳಿದ ನನ್ನ ವಿರುದ್ಧ ಚಿನ್ನ …

Read More »

ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ವಾಹನ

ಬೆಳಗಾವಿ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ವಾಹನ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಎಂಬಂತೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ನಡೆದಿದೆ. ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಹರಸಾಹಸಪಟ್ಟು ಕಾರಿನೊಳಗೆ ಸಿಲುಕಿದ್ದ ಇಬ್ಬರು ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಧಾರವಾಡ ಮೂಲದ ಪರಪ್ಪ ಬಾಳಿಕಾಯಿ, …

Read More »

ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸರ್ಕಾರ ನಿರ್ಧಾರ ಮಾಡಿದೆ.

ಬೆಂಗಳೂರು : “ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ ಜಾತಿ,‌ ಪಂಗಡವರಿಗೆ ಗುತ್ತಿಗೆ ಮೀಸಲಾತಿ ನೀಡುವಂತೆ ತಿದ್ದುಪಡಿ ಮಾಡಿದ್ದೆವು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ …

Read More »

ಕೆಪಿಸಿಸಿ ಅಧ್ಯಕ್ಷರು ಕರೆದಾಗ ಭಾಗವಹಿಸಲೇಬೇಕಾಗುತ್ತದೆ,:ಸತೀಶ್ ಜಾರಕಿಹೊಳಿ

ಬೆಂಗಳೂರು, 15 ಮಾರ್ಚ್ : ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಲೊಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಆಯೋಜಿಸಿದ ಔತಣಕೂಟದಲ್ಲಿ (Dinner party) ಭಾಗವಹಿಸಿದ್ದರ ಬಗ್ಗೆ ಮಾತಾಡುತ್ತಾ, ಅದರಲ್ಲಿ ಅಂಥ ವಿಶೇಷವೇನೂ ಇಲ್ಲ, ಕೆಪಿಸಿಸಿ ಅಧ್ಯಕ್ಷರು ಕರೆದಾಗ ಭಾಗವಹಿಸಲೇಬೇಕಾಗುತ್ತದೆ, ಬಿಜೆಪಿ ನಾಯಕರು ಹೇಳುವ ಮಾತುಗಳನ್ನು ನಂಬುವ ಅವಶ್ಯಕತೆ ಇಲ್ಲ, ಯಾಕೆಂದರೆ ಅವರು ಸಿದ್ದರಾಮಯ್ಯ ಎಷ್ಟುದಿನ ಮುಖ್ಯಮಂತ್ರಿಯಾಗಿರುತ್ತಾರೆ ಅಂತ ಹೇಳಿಕೆಗಳನ್ನು ನೀಡುತ್ತಿರುತ್ತಾರೆ, ಇವತ್ತೊಂದು ಹೇಳುತ್ತಾರೆ, ನಾಳೆ ಮತ್ತೊಂದು ಹೇಳುತ್ತಾರೆ ಎಂದು ಹೇಳಿದರು.

Read More »

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ

ಬೆಂಗಳೂರು : ಸಿಐಡಿ ಕರ್ನಾಟಕ, ಇನ್ಫೋಸಿಸ್ ಫೌಂಡೇಶನ್ ಆ್ಯಂಡ್ ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆಫ್ ಇಂಡಿಯಾ (ಡಿಎಸ್‌ಸಿಐ) ದಿಂದ ಜಂಟಿಯಾಗಿ ಸ್ಥಾಪಿಸಲ್ಪಟ್ಟಿರುವ ಸೈಬರ್ ಕ್ರೈಂ ಇನ್ವೆಸ್ಟಿಗೇಷನ್​ ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟರ್ (CCITR) ವತಿಯಿಂದ ಒಂದು ದಿನದ ಸೈಬರ್ ಅಪರಾಧ ತನಿಖಾ ಶೃಂಗಸಭೆ (ಸಿಐಡಿ ಡಿಕೋಡ್-2025)ನ್ನ ಇಂದು ಆಯೋಜಿಸಲಾಗಿತ್ತು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಶೃಂಗಸಭೆಯಲ್ಲಿ ಹೆಚ್ಚುತ್ತಿರುವ ಹೊಸ ಸೈಬರ್ ಅಪರಾಧಗಳು, ಜ್ಞಾನದ ಹಂಚಿಕೆ, ಕೌಶಲ್ಯಾಭಿವೃದ್ಧಿ ಹಾಗೂ ಸಹಯೋಗದ ಮೂಲಕ ಪರಿಹರಿಸುವ …

Read More »