Breaking News

E20 ಪೆಟ್ರೋಲ್‌ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ – ನಿತಿನ್ ಗಡ್ಕರಿ ಸವಾಲು

ನವದೆಹಲಿ: ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಟೀಕೆಗಳ ಮಧ್ಯೆ ಇ20 ಪೆಟ್ರೋಲ್‌ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸವಾಲು ಹಾಕಿದ್ದಾರೆ. ಮಂಗಳವಾರ ವಿಕಸಿತ್ ಭಾರತ್ ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ ಅವರು, ಎಥನಾಲ್ ಮಿಶ್ರಿತ ಪೆಟ್ರೋಲ್ ಬಗ್ಗೆ ತಪ್ಪು ಮಾಹಿತಿ ಮತ್ತು ಸುಳ್ಳು ಪ್ರತಿಪಾದನೆಗಳು ಹರಡಲಾಗುತ್ತಿದೆ ಎಂದು ಆರೋಪಿಸಿದರು. ಇ20 ಪೆಟ್ರೋಲ್‌ನಿಂದ ಸಮಸ್ಯೆ ಎದುರಿಸುತ್ತಿರುವ …

Read More »

ವೈದ್ಯರ ಮೇಲೆ ಹಲ್ಲೆ – ಶಿವಸೇನೆ ಕಾರ್ಪೊರೇಟರ್ ಸೇರಿ ಆರು ಮಂದಿ ವಿರುದ್ಧ FIR, ಮೂವರ ಬಂಧನ

ಮುಂಬೈ: ಇಲ್ಲಿನ ಥಾಣೆ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಶಿವಸೇನೆ ಕಾರ್ಪೊರೇಟರ್  ಸೇರಿ ಆರು. ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಮೂವರನ್ನು ಬಂಧಿಸಿದ್ದಾರೆ ಶಿವಸೇನೆ ಕಾರ್ಪೊರೇಟರ್ ರಮೇಶ್ ಸುಕ್ರಿಯಾ ಮಹಾತ್ರೆ ಹಾಗೂ ಅವರ ಐವರು ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಗರ್ಭಿಣಿಯೊಬ್ಬರಿಗೆ ಹೆರಿಗೆ ಬಳಿಕ ಜನಿಸಿದ ಶಿಶುವಿನ ಆರೋಗ್ಯ ಗಂಭೀರವಾಗಿತ್ತು. ಥಾಣೆಯ ಡೊಂಬಿವ್ಲಿಯಲ್ಲಿರುವ ಕಲ್ಯಾಣ-ಡೊಂಬಿವ್ಲಿ …

Read More »

11 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಬಂಗಾಳ ಪೊಲೀಸರ ಎನ್‌ಕೌಂಟರ್‌ಗೆ ಆರೋಪಿ ಬಲಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ  ನಡೆದಿದ್ದ 11 ವರ್ಷದ ಅಪ್ರಾಪ್ತ ಬಾಲಕಿಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿದ್ದಾರೆ. ರಾಜ್ಯಾದ್ಯಂತ ಭಾರಿ ಆಕ್ರೋಶ ಮೂಡಿಸಿದ್ದ ಈ ಘಟನೆಯ ಪ್ರಮುಖ ಆರೋಪಿಯ ಪ್ರವಾಶ್‌ ಮೊಂಡಲ್‌ನನ್ನು ತನಿಖೆಯ ಭಾಗವಾಗಿ ಸ್ಥಳ ಮಹಜರಿಗೆ  ಕರೆದೊಯ್ದಾಗ, ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಆರೋಪಿ …

Read More »

ಸಿ.ಟಿ. ರವಿ ಮೊದಲು ವಾಯ್ಸ್ ಸ್ಯಾಂಪಲ್ ಕೊಟ್ಟು ಆಮೇಲೆ ಮಾತನಾಡಲಿ: ಪ್ರಿಯಾಂಕ್ ತಿರುಗೇಟು

ಬೆಂಗಳೂರು: ಸಿ.ಟಿ. ರವಿ ಅವರು ಮೊದಲು ತಮ್ಮ ವಾಯ್ಸ್ ಸ್ಯಾಂಪಲ್ ನೀಡಿ, ಆ ಬಳಿಕ ಬೇರೆಯವರ ಬಗ್ಗೆ ಮಾತನಾಡಲಿ ಎಂದು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆಖಾರವಾಗಿ ತಿರುಗೇಟು ನೀಡಿದ್ದಾರೆ. ತೇಜಸ್ ಗೌಡ ( ಅವರ ಮನೆಗೆ ಗೃಹ ಸಚಿವರೇ ಪೊಲೀಸರನ್ನು ಕಳುಹಿಸಿ ಬೆದರಿಕೆ ಹಾಕಿಸಿದ್ದಾರೆ ಎಂಬ ಸಿ.ಟಿ. ರವಿ ಅವರ ಆರೋಪಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ ಬಿಜೆಪಿಯ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಿ.ಟಿ. ರವಿ, …

Read More »

ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಪೋಷಕರಿಂದ ವಾರ್ಡನ್‌ಗೆ ಥಳಿತ

ಚಿಕ್ಕಬಳ್ಳಾಪುರ: ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿ ಬಳಿಯ ಖಾಸಗಿ ವಸತಿ ಶಾಲೆಯಲ್ಲಿ 12 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಗನ ಸಾವಿಗೆ ಶಾಲೆಯ ದೈಹಿಕ ಶಿಕ್ಷಕರ ಹಲ್ಲೆ ಹಾಗೂ ಅತಿಯಾದ ಒತ್ತಡವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಯಲಹಂಕ ತಾಲೂಕಿನ ಸುಬೇದಾರ್ ಪಾಳ್ಯದ ಗುರುಕಿರಣ್ ಮೃತ ವಿದ್ಯಾರ್ಥಿ. ಆತ ಕಾಡಯರಪ್ಪನಹಳ್ಳಿ ಬಳಿಯ ಸ್ಟರ್ಲಿಂಗ್ ಇಂಗ್ಲಿಷ್ ವಸತಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಇಂದು (ಜು.8) …

Read More »

ಮದ್ವೆಯಾದ ಐದೇ ತಿಂಗಳಿಗೆ ಹೆಲ್ಮೆಟ್‌ನಿಂದ ಹೊಡೆದು ಪತ್ನಿಯ ಹತ್ಯೆಗೈದ ಪತಿ

ಹುಬ್ಬಳ್ಳಿ: ಪತ್ನಿಯನ್ನು ಹೆಲ್ಮೆಟ್‌ನಿಂದ ಹೊಡೆದು ಪತಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿ  ಹೊರವಲಯ ತಾರಿಹಾಳ ಗ್ರಾಮದಲ್ಲಿ ನಡೆದಿದೆ. ಮೂಲತಃ ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನ ಹಳೆಮನಿ (19) ಕೊಲೆಯಾದ ಪತ್ನಿ. ಶಿವರಾಜ್ ಕೊಲೆ ಮಾಡಿದ ಪತಿ ಎನ್ನಲಾಗಿದೆ. ಮಾಹಿತಿಯ ಪ್ರಕಾರ, ಕಳೆದ ಫೆಬ್ರವರಿಯಲ್ಲಿ ವಿವಾಹವಾಗಿದ್ದ ಈ ದಂಪತಿ ತಾರಿಹಾಳ ಗ್ರಾಮದಲ್ಲಿ ವಾಸವಾಗಿದ್ದರು. ಇಂದು ಬೆಳಿಗ್ಗೆ ಗಂಡ-ಹೆಂಡತಿ ನಡುವಿನ ವಾಗ್ವಾದ ಶುರುವಾಗಿತ್ತು. ಬಳಿಕ ಗಲಾಟೆ ತಾರಕಕ್ಕೇರಿದ್ದು, ಪತಿ ಶಿವರಾಜ್ ಹೆಲ್ಮೆಟ್‌ನಿಂದ …

Read More »

ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ಪರಿಶೀಲನೆ; ಕ್ರಮದ ಭರವಸೆ ನೀಡಿದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ರಾಜ್ಯದಲ್ಲಿ ಚರ್ಚೆಯಾಗಿರುವ ಬೆನ್ನಲ್ಲೇ, ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ಈಗ ನನ್ನ ಗಮನಕ್ಕೆ ಬಂದಿದೆ. ಮೊದಲು ಸಂಪೂರ್ಣ ಮಾಹಿತಿ ತರಿಸಿಕೊಳ್ಳುತ್ತೇನೆ. ಪರಿಶೀಲನೆ ನಡೆಸಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು. ಹುಣಸೂರು ಶಾಸಕ …

Read More »

ಉಗ್ರ ಸಂಘಟನೆಗಳ ಜೊತೆ ನಂಟು – ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್‌ಐಎ ದಾಳಿ

ಬಳ್ಳಾರಿ: ಕೌಲ್ ಬಜಾರ್ ನಿವಾಸಿ ಅಬ್ದುಲ್ ಸಲಾಮ್ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ  ಅಧಿಕಾರಿಗಳು ಇಂದು ದಿಢೀರ್ ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ನಡೆಸಿದ ಅಧಿಕಾರಿಗಳ ತಂಡ ಮಹತ್ವದ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದಿದೆ. ಆನ್‌ಲೈನ್ ಮೂಲಕ ಧರ್ಮ ಪ್ರಚೋದನೆ ಹಾಗೂ ಮೂಲಭೂತವಾದವನ್ನು ಹರಡಿ, ನಿಷೇಧಿತ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಹಿನ್ನೆಲೆಯಲ್ಲಿಆಂಧ್ರಪ್ರದೇಶದ ಎನ್‌ಟಿಆರ್  ಜಿಲ್ಲೆಯಲ್ಲಿ ರೆಹಮತುಲ್ಲ ಷರಿಫ್ ಎಂಬಾತನ ವಿರುದ್ಧ ದಾಖಲಾಗಿತ್ತು. ತನಿಖೆಯ ವೇಳೆ …

Read More »

ನಡೆದುಕೊಂಡು ಹೋಗುತ್ತಿದ್ದಾಗ ಲಾರಿ ಡಿಕ್ಕಿ – ವಿದ್ಯಾರ್ಥಿನಿ ಗ್ರೇಟ್ ಎಸ್ಕೇಪ್

ತುಮಕೂರು: ಲಾರಿಯೊಂದು  ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದರೂ ವಿದ್ಯಾರ್ಥಿನಿ ಬದುಕುಳಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದ ಐಬಿ ಸರ್ಕಲ್‌ನಲ್ಲಿ  ನಡೆದಿದೆ. ವೇಗವಾಗಿ ಬಂದ ಲಾರಿ ನಿಯಂತ್ರಣ ಕಳೆದುಕೊಂಡು ಮೊದಲು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಗುದ್ದಿದೆ. ಲಾರಿಯ ಚಕ್ರ ವಿದ್ಯಾರ್ಥಿನಿಯ ಮೇಲೆ ಹರಿಯದೆ, ವಾಹನದ ಮಧ್ಯಭಾಗದಲ್ಲಿ …

Read More »

ಅಂಬುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ – 6 ಅಪ್ರಾಪ್ತರು ಪೊಲೀಸರ ವಶಕ್ಕೆ

ಬೆಂಗಳೂರು: ಅಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ಜುಲೈ 4ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ಕೆಲ ಯುವಕರು ರಸ್ತೆಯ ಮಧ್ಯೆ ವೀಲಿಂಗ್ ಮಾಡುತ್ತಾ ಅಂಬುಲೆನ್ಸ್‌ಗೂ ದಾರಿ ಬಿಡದೆ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದರು. ಈ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಯಶವಂತಪುರ ಸಂಚಾರಿ …

Read More »