Breaking News

ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ನರಗುಂದ ಬಂದ್

ಗದಗ: ಬರ ಘೋಷಣೆ, ಬರ ಪರಿಹಾರ, ಬೆಳೆ ವಿಮೆ ಪರಿಹಾರ, ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಘೋಷಿಸುವಂತೆ ಆಗ್ರಹಿಸಿ ಜಿಲ್ಲೆಯ ನರಗುಂದ  ಪಟ್ಟಣ ಬಂದ್‌ಗೆ ಇಂದು (ಸೆ.12) ಕರೆ ನೀಡಲಾಗಿದೆ. ಗದಗ  ಜಿಲ್ಲೆಯ ವಿವಿಧ ರೈತ ಸಂಘಟನೆಗಳು, ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವೇದಿಕೆ ಸೇರಿದಂತೆ ಅನೇಕ ಸಂಘಟನೆಗಳು ಒಟ್ಟಾಗಿ ನರಗುಂದ ಬಂದ್‌ಗೆ ಕರೆ ನೀಡಿವೆ. ಸದ್ಯ ಬಸ್ ಸಂಚಾರ, ವ್ಯಾಪಾರ, ವಹಿವಾಟು, ಅಂಗಡಿ ಬಂದ್ ಮಾಡಲಾಗಿದೆ. ಹುಬ್ಬಳ್ಳಿ-ನರಗುಂದ-ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ …

Read More »

ಗೌರಿಯ ಪೂಜೆಗೆ ಬೇಕೇ ಬೇಕು ಈ ವಿಶೇಷ ಪುಷ್ಪ – ಅದ್ಯಾವುದು ಗೊತ್ತಾ?

ಗಣೇಶ ಹಬ್ಬದಲ್ಲಿ  ಗಣೇಶನ ಪೂಜೆಗಿಂತ ಮೊದಲು ತಾಯಿ ಗೌರಿಯ ಪೂಜೆ ಮಾಡಲಾಗುತ್ತದೆ. ಹೆಣ್ಣುಮಕ್ಕಳು ಗೌರಿಯ ಮೂರ್ತಿಯನ್ನು ಅಲಂಕರಿಸಿ ಪೂಜಿಸುವುದು ವಾಡಿಕೆ. ಗೌರಿಯ ಪೂಜೆಗೆ ವಿಶೇಷವಾಗಿ ಗೌರಿ ಹೂವು ಬೇಕೇ ಬೇಕು. ಕಾಡಿನಲ್ಲಿ ಬೆಳೆಯುವ ಗೌರಿ ಹೂವನ್ನು ( ಹಿರಿಯರು ಮನೆಗೆ ತರುತ್ತಾರೆ. ಎತ್ತರಕ್ಕೆ ಎಲ್ಲೆಲ್ಲೋ ಬೆಳೆಯುವ ಗೌರಿ ಹೂವು ನೋಡಲು ಬಲು ಸುಂದರವಾಗಿರುತ್ತದೆ. ಆದರೆ ಕೈಗೆಟುಕದಂತಿರುತ್ತದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಬೆಳೆಯುವ ಈ ಗಿಡದಲ್ಲಿ ಮಳೆಗಾಲದ ಅಗಸ್ಟ್-ಸೆಪ್ಟಂಬರ್, ಅಂದರೆ ಶ್ರಾವಣ-ಭಾದ್ರಪದ ಮಾಸದಲ್ಲಿ …

Read More »

ಸಾಲು ಸಾಲು ರಜೆ – ಊರಿನತ್ತ ಜನರ ದಂಡು; ನವಯುಗ ಟೋಲ್ ಬಳಿ ಟ್ರಾಫಿಕ್‌ ಜಾಮ್‌

ಬೆಂಗಳೂರು: ವೀಕೆಂಡ್‌ ಮತ್ತು ಗಣೇಶ ಹಬ್ಬದ ಸಾಲು ಸಾಲು ರಜೆಗಳಿಂದಾಗಿ ಬೆಂಗಳೂರಿನಿಂದ ಸಾವಿರಾರು ಜನ ತಮ್ಮ ತಮ್ಮ ಊರುಗಳತ್ತ ಜನ ಹೊರಟಿದ್ದಾರೆ. ಇದರಿಂದ ಪ್ರಮುಖ ಮಾರ್ಗಗಳಲ್ಲಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಶನಿವಾರ, ಭಾನುವಾರ ಮತ್ತು ಸೋಮವಾರ ಗಣೇಶ ಹಬ್ಬ ಹಿನ್ನೆಲೆ ಜನ ಊರುಗಳತ್ತ ಹೊರಟಿದ್ದಾರೆ. ಗೋವರ್ಧನ್, ಮೈಸೂರು ರೋಡ್, ಟಿನ್ ಫ್ಯಾಕ್ಟರಿ, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಭಾರೀ ಜನ ಸೇರಿದ್ದಾರೆ. ನವಯುಗ ಟೋಲ್ ಬಳಿ …

Read More »

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

ನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮಾದನಾಯಕನಹಳ್ಳಿ ಪೊಲೀಸರು ಸೂಚಿಸಿದ್ದಾರೆ. ಫೋಟೋ ಎಡಿಟಿಂಗ್ ಹೆಸರಿನಲ್ಲಿ ಸೈಬರ್ ವಂಚಕರು ಸಾರ್ವಜನಿಕರನ್ನ ವಂಚಿಸುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಜನಜಾಗೃತಿ ಮೂಡಿಸಿದ್ದಾರೆ. 80ರ ದಶಕದ ಫೋಟೋಗಳ ಮಾದರಿಯಲ್ಲಿ ತಮ್ಮ ಫೋಟೋಗಳನ್ನ ಎಡಿಟ್ ಮಾಡಿಸಿಕೊಳ್ಳಲು ಸಾರ್ವಜನಿಕರು ವಿವಿಧ ಆ್ಯಪ್‌ಗಳು ಹಾಗೂ ಆನ್‌ಲೈನ್‌ ಲಿಂಕ್‌ಗಳನ್ನು ಬಳಸುತ್ತಿದ್ದಾರೆ. ಆದರೆ, ಇಂತಹ ಸಂದರ್ಭದಲ್ಲಿ ಅಪರಿಚಿತ …

Read More »

ಪರಪುರುಷನೊಂದಿಗೆ ಲವ್ವಿಡವ್ವಿ – ಹಾಸಿಗೆ ಹಿಡಿದ ಪತಿ ಕೊಂದು ಹೃದಯಾಘಾತ ಅಂತ ನಾಟಕವಾಡಿದ್ದ ಹೈನಾತಿ

ಬೆಂಗಳೂರು: ಪ್ರೀತಿ ಎಂಬುದು ಮಾಯೆ.. ಈ ಪ್ರೀತಿಗೆ ಕಣ್ಣಿಲ್ಲ ಅಂತಾರೆ ನಿಜ, ಆದ್ರೆ ಕೆಲವೊಮ್ಮೆ ಪ್ರೀತಿಗೆ ಹೃದಯವೂ ಇರೋದಿಲ್ಲ, ಅದು ತನ್ನ ಪ್ರೇಮಿಯನ್ನ ಬಿಟ್ಟು ಉಳಿದವರಿಗಾಗಿ ಕಲ್ಲಿನಷ್ಟೇ ಕಠೋರವಾಗಿರುತ್ತೆ. ಇದಕ್ಕೆ ಈಗ ಬೆಂಗಳೂರಿನಲ್ಲಿ ನಡೆದಿರೋ ಕೊಲೆ ಪ್ರಕರಣವೇ ಸಾಕ್ಷಿಯಾಗಿದೆ. ಪ್ರಿಯಕರ ಹಾಗೂ ತನ್ನ ತಾಯಿ ಜೊತೆ ಸೇರಿ ಪಾರ್ಶ್ವವಾಯು ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಪತಿಯನ್ನ ಕೊಲೆ ಮಾಡಿರುವ ಘಟನೆ ಆವಲಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಿತ್ತಗನೂರಿನ ಯಲ್ಲಪ್ಪ ಗಾರ್ಡನ್ …

Read More »

ಬೇರೆ ಯಾವುದೇ ದೇಶದಲ್ಲಿ ಹೀಗೆ ನಡೆಯೋದಿಲ್ಲ – ಸತೀಶ್‌ ಜಾರಕಿಹೊಳಿ ಪರ ವಿಜಯ್‌ ಮಲ್ಯ ಬ್ಯಾಟಿಂಗ್‌

ನವದೆಹಲಿ: ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ  ಅವರಿಗೆ ಜಾರಿ‌ ನಿರ್ದೇಶನಾಲಯ  ಶಾಕ್‌ ಕೊಟ್ಟಿದೆ. ಜಾರಕಿಹೊಳಿ ಅವರ ಕುಟುಂಬಕ್ಕೆ ಸೇರಿದ 21 ಸ್ಥಳಗಳಲ್ಲಿ ಇಡಿ ಶೋಧಕಾರ್ಯಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪ್ರಕಟಣೆ ಮೂಲಕ ಹಂಚಿಕೊಂಡಿದ್ದು, ಲೋಕೋಪಯೋಗಿ ಇಲಾಖೆಯಲ್ಲೂ ಅವ್ಯವಹಾರ ನಡೆದಿರೋದನ್ನ ಬಹಿರಂಗಪಡಿಸಿದೆ. ಈ ಮಾಹಿತಿಯನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಉದ್ಯಮಿ ವಿಜಯ್‌ ಮಲ್ಯ , ಸತೀಶ್‌ ಜಾರಕಿಹೊಳಿ ಪರ ಬ್ಯಾಟ್‌ ಬೀಸಿದ್ದಾರೆ. ʻಜಾರಿ ನಿರ್ದೇಶನಾಲಯ …

Read More »

ಮಸೀದಿ ಇರೋ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿಡಿಸ್ತೀನಿ: ಇನ್ಸ್‌ಪೆಕ್ಟರ್‌ ಧಮ್ಕಿ

ಮೈಸೂರು: ಮಸೀದಿ ಮುಂದೆ ಹೋಗಿ ಪಟಾಕಿ ಸಿಡಿಸಿದ್ರೆ ಏನ್‌ ಆಗುತ್ತೆ, ಮಸೀದಿ ಮುಂದೆಯೇ ಗಣೇಶ ಮೆರವಣಿಗೆ ಹೋಗಬೇಕು ಎನ್ನುವ ಆಗಿಲ್ಲ. ಎಂದು ಗಣೇಶ ಹಬ್ಬ ಮಾಡುವ ಯುವಕರಿಗೆ ಮೈಸೂರು ಜಿಲ್ಲೆಯ ಟಿ ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ ವಾರ್ನಿಂಗ್ ಕೊಟ್ಟಿದ್ದಾರೆ ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವಿಚಾರದಲ್ಲಿ ಯುವಕರ ಗುಂಪಿಗೆ ಈ ವಾರ್ನಿಂಗ್ ನೀಡಿದ್ದಾರೆ. ನಾವು ಹಾಕಿಕೊಡುವ ಮಾರ್ಗದಲ್ಲೇ ಹೋಗಬೇಕು. ಮಸೀದಿ ಮುಂದೆ ಮೆರವಣಿಗೆ ಹೋಗುವಂತಿಲ್ಲ. ಅಕಸ್ಮಾತ್ ಹೋದರ ಹೇಳಲ್ಲ ಮಾಡಿ …

Read More »

ಸೆ.14ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ನಿಷೇಧ

ಬೆಂಗಳೂರು: ಜಿಬಿಎ  ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14ರಂದು ಮಾಂಸ ಮಾರಾಟ  ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಸೋಮವಾರ (ಸೆ.14) ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಗರದ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ನಡೆಸುವಂತಿಲ್ಲ. ಅಲ್ಲದೇ, ಮಾಂಸದ ಅಂಗಡಿಗಳು ಹಾಗೂ ಮಳಿಗೆಗಳಲ್ಲೂ ಮಾಂಸ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಸೆಪ್ಟೆಂಬರ್ 14ರಂದು ಜಿಬಿಎ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆ ಸಂಪೂರ್ಣ ಬಂದ್ ಆಗಲಿದೆ.

Read More »

ಕ್ಸ್ ಸಭೆಗೂ ಮುನ್ನ ಮಹತ್ವದ ನಿರ್ಧಾರ ಘೋಷಿಸಿದ ಚೀನಾ – 6 ವರ್ಷಗಳ ನಂತರ ಭಾರತಕ್ಕೆ ಏರ್ಲೈನ್ಸ್ ಸೇವೆ ಪುನಾರಂಭ

ನವದೆಹಲಿ: ಭಾರತದ ಆತಿಥ್ಯದಲ್ಲಿ ದೆಹಲಿಯಲ್ಲಿ 18ನೇ ಬ್ರಿಕ್ಸ್ ಶೃಂಗಸಭೆ ಆರಂಭವಾಗಿದ್ದು, ಜಾಗತಿಕ ರಾಜಕೀಯ, ಆರ್ಥಿಕತೆ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಇಂಧನ ಭದ್ರತೆ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಚರ್ಚೆಯ ಕೇಂದ್ರವಾಗಿವೆ. ಹಲವು ಜಾಗತಿಕ ನಾಯಕರ ಜೊತೆಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿದ್ದು ಇನ್ನೇನು ಕೆಲವೇ ಹೊತ್ತಿನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿಂಗ್‌ಪಿಂಗ್  ಜೊತೆಗೆ ಮಾತುಕತೆ ನಡೆಸಲಿದ್ದಾರೆ. ದೆಹಲಿಯಲ್ಲಿ ಬ್ರಿಕ್ಸ್ ಶೃಂಗಸಭೆಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಶೃಂಗಸಭೆಯ ಪ್ರಮುಖ ಆಕರ್ಷಣೆಯಾಗಿರುವುದು …

Read More »

ಒಂದೇ ವೇಲ್‌ನಲ್ಲಿ ನೇಣಿಗೆ ಕೊರಳೊಡ್ಡಿದ ಆಂಟಿ & ಯುವಕ – ಲವ್‌ಗೆ ಕುಟುಂಬಸ್ಥರು ವಿರೋಧಿಸಿದ್ದಕ್ಕೆ ಆತ್ಮಹತ್ಯೆ ಶಂಕೆ

ಕಲಬುರಗಿ: ನೇಣು ಬಿಗಿದುಕೊಂಡು ಯುವಕ ಹಾಗೂ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ತಾಪುರ  ತಾಲೂಕಿನ ಸಂಕನೂರು ಗ್ರಾಮದ ಹೊರವಲಯದಲ್ಲಿರುವ ಗುಡ್ಡದಲ್ಲಿ ನಡೆದಿದೆ. ಚಿತ್ತಾಪುರ ಪಟ್ಟಣದ ಶರಣಮ್ಮ (32) ಹಾಗೂ ಯಾದಗಿರಿ ಜಿಲ್ಲೆ ಬಾಚವಾರ ಗ್ರಾಮದ ಬಸವರಾಜ್ (21) ಆತ್ಮಹತ್ಯೆ ಶರಣಾದ ದುರ್ದೈವಿಗಳು. ಇವರಿಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಗೆ  ಕುಟುಂಬಸ್ಥರು ವಿರೋಧಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ಮೂರು ದಿನದ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಗಳು …

Read More »