Breaking News

ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲಿ ಪಂಚರ್ ದಂಧೆ – ಕಿಡಿಗೇಡಿಗಳು ಕೊನೆಗೂ ಲಾಕ್‌!

ಬೆಂಗಳೂರು: ರಸ್ತೆಯಲ್ಲಿ ಬೇಕೆಂದೇ ಮೊಳೆಗಳನ್ನು ಚೆಲ್ಲಿ ಬೈಕ್ ಮತ್ತು ಕಾರುಗಳನ್ನು ಪಂಚರ್ ಮಾಡುತ್ತಿದ್ದ ಇಬ್ಬರು ಖದೀಮರನ್ನು ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳು ಜಾಲಹಳ್ಳಿಯ ಎಂಇಎಸ್ ರಿಂಗ್ ರಸ್ತೆ ಬದಿಯಲ್ಲಿ ಪಂಚರ್ ಶಾಪ್ ನಡೆಸುತ್ತಿದ್ದರು ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ತಮ್ಮ ಅಂಗಡಿಗೆ ವ್ಯಾಪಾರ ಹೆಚ್ಚಿಸಿಕೊಳ್ಳುವ ದುರಾಸೆಯಿಂದ, ಇವರು ಬೈಕ್‌ನಲ್ಲಿ ಬಂದು ರಸ್ತೆಯುದ್ದಕ್ಕೂ ಕೆಜಿಗಟ್ಟಲೆ ಮೊಳೆಗಳನ್ನು ಚೆಲ್ಲಿ ಹೋಗುತ್ತಿದ್ದರು. ಸವಾರರು ಪಂಚರ್ ಆದ ವಾಹನಗಳನ್ನು ತಳ್ಳಿಕೊಂಡು …

Read More »

ಶಾಲೆಗೆ ತೆರಳುವಾಗ ಥಾರ್‌ ಡಿಕ್ಕಿ – 10 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

ನೆಲಮಂಗಲ: ತನ್ನ ದೊಡ್ಡಮ್ಮನ ಜೊತೆಗೆ ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಗಳೂರು  ಹೊರವಲಯದ ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದ ಬಳಿ ನಡೆದಿದ್ದು 10 ವರ್ಷದ ಲಿಖಿತಾ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಲಿಖಿತ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ತಾಯಿ ತಿಂಡಿ ಮಾಡಿಸಿ ಕೆಲಸಕ್ಕೆ ತೆರಳಿದ್ದಾರೆ. ನಂತರ …

Read More »

ಬಾಲರಾಮನ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ರಿಂದ ಪ್ರಧಾನಿಗೆ ಸಿದ್ಧವಾಗಿದೆ ವಿಶೇಷ ಉಡುಗೊರೆ

ಮೈಸೂರು: ಆ.1ರಂದು ಪ್ರಧಾನಿ ನರೇಂದ್ರ ಮೋದಿ  ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರಧಾನಿಗೆ ಬಾಲರಾಮನ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌  ಅವರು ವಿಶೇಷ ಉಡುಗೊರೆಯೊಂದನ್ನು ನೀಡಲಿದ್ದಾರೆ. ಆ.1ರಂದು ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿಗಳಿಗೆ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ಸ್ವಾಮಿ ವಿವೇಕಾನಂದರ ಏಕಶಿಲಾ ಮೂರ್ತಿಯನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ಈ ಮೂರ್ತಿ 8.5 ಕೆಜಿ ತೂಕದ, 1.5 ಅಡಿ ಎತ್ತರದ ವಿಯೆಟ್ನಾಂ ಮಾರ್ಬಲ್‌ನಲ್ಲಿ …

Read More »

ಕೊಡಗಿನಲ್ಲಿ ಗಾಳಿ ಮಳೆ ಆರ್ಭಟ ಜೋರು – ಹಾರಂಗಿ ಜಲಾಶಯದಿಂದ 5,365 ಕ್ಯೂಸೆಕ್ ನೀರು ಕಾವೇರಿ ನದಿಗೆ

ಮಡಿಕೇರಿ: ಕೊಡಗಿನಲ್ಲಿ  ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಿದ ಹಿನ್ನೆಲೆ, 5,365 ಕ್ಯೂಸೆಕ್‌ ನೀರನ್ನ ಕಾವೇರಿ ನದಿಗೆ  ಹರಿಸಲಾಗಿದೆ. ಬುಧವಾರದಿಂದ ಜಿಲ್ಲೆಯಾದ್ಯಂತ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿದ್ದು, ನದಿ, ತೋರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಿರಂತರ ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟವೂ ಏರಿಕೆಯಾಗಿದ್ದು, ಹಾರಂಗಿ ಜಲಾಶಯಕ್ಕೆ  ಒಳಹರಿವು ಹೆಚ್ಚಿದೆ. ನಿರಂತರ ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ನದಿಯ ತಗ್ಗು ಪ್ರದೇಶಗಳಲ್ಲಿ …

Read More »

ಪಶ್ಚಿಮ ಘಟ್ಟದಲ್ಲಿ ವರುಣನ ಅಬ್ಬರ – ಹಾಲ್ನೊರೆಯಂತೆ ಧುಮ್ಮುಕ್ಕುತ್ತಿದೆ ಗೋಕಾಕ್ ಫಾಲ್ಸ್

ಬೆಳಗಾವಿ: ಕಳೆದ ಕೆಲವು ದಿನಗಳ ವಿರಾಮದ ಬಳಿಕ ಇದೀಗ ಪಶ್ಚಿಮ ಘಟ್ಟದಲ್ಲಿ  ವರುಣನ ಅಬ್ಬರ ಜೋರಾಗಿದೆ. ಘಟಪ್ರಭಾ ನದಿಗೆ  ಜೀವಕಳೆ ಬಂದಿದ್ದು, ಗೋಕಾಕ್ ಫಾಲ್ಸ್, ಬಟವಾಡೆ ಜಲಪಾತದಲ್ಲಿ ನೀರು ಹಾಲ್ನೊರೆಯಂತೆ ಧುಮ್ಮುಕ್ಕುತ್ತಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗೋಕಾಕ್ ಜಲಪಾತವು  ಮೈದುಂಬಿ ಹರಿಯುತ್ತಿದೆ. ಮಳೆ ಹೆಚ್ಚಾದ ಹಿನ್ನೆಲೆ ದೃಶ್ಯ ವೈಭವವೇ ಸೃಷ್ಟಿಯಾಗಿದ್ದು, 171 ಅಡಿ ಮೇಲಿನಿಂದ ನೀರು ಹಾಲ್ನೊರೆಯಂತೆ ಧುಮ್ಮುಕ್ಕುತ್ತಿದೆ. ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಜಲಪಾತಗಳಿಗೆ ಜೀವಕಳೆ ಬಂದಿದೆ. …

Read More »

ಎಸ್‌ಐಆರ್‌ ಸಮೀಕ್ಷೆ| ಅಧಿಕಾರಿಯ ಮೇಲೆ ಹಲ್ಲೆ – ರಕ್ತ ಬರುವಂತೆ ಹೊಡೆದಿದ್ದ ಡಿಜೆಹಳ್ಳಿಯ ಇಬ್ಬರು ಅರೆಸ್ಟ್‌

ಬೆಂಗಳೂರು: ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ  ಕೆಲಸಕ್ಕೆ ತೆರಳಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾರಬ್ ಮತ್ತು ದಸ್ತಗೀರ್ ಬಂಧಿತ ಆರೋಪಿಗಳು. ಬುಧವಾರ ಮಧ್ಯಾಹ್ನ ಸುಮಾರು 1:30 ರ ವೇಳೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ  ಹಾಗೂ ಸ್ಲಂ ಡೆವಲಪ್‌ಮೆಂಟ್ ಬೋರ್ಡ್‌ನ ಅಧಿಕಾರಿಗಳ ತಂಡವು ಡಿ.ಜೆ. ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ ಮಸೀದಿ …

Read More »

ಸತ್ಯದ ಅನ್ವೇಷಣೆಯ ಮೂಲಕ ಜ್ಞಾನ ಸಂಪಾದಿಸಿ ಜೀವನದಲ್ಲಿ ಅಳವಡಿಸಿಕೊಳ್ಳುವವರೇ ನಿಜವಾದ ಶಿಷ್ಯರು: ಡಾ. ಎಂ.ಪಿ. ಚಂದ್ರಿಕಾ

ಬಾಗಲಕೋಟೆ,: ಗುರು ಪೂರ್ಣಿಮೆಯು ಗುರು–ಶಿಷ್ಯ ಪರಂಪರೆಯ ಮಹತ್ವವನ್ನು ಸಾರುವ ಪವಿತ್ರ ಹಬ್ಬವಾಗಿದ್ದು, ಜ್ಞಾನ ನೀಡಿದ ಗುರುಗಳಿಗೆ ಕೃತಜ್ಞತೆ ಅರ್ಪಿಸುವ ದಿನವಾಗಿದೆ. ಸತ್ಯದ ಅನ್ವೇಷಣೆಯ ಮೂಲಕ ಜ್ಞಾನವನ್ನು ಸಂಪಾದಿಸಿ, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವವರೇ ನಿಜವಾದ ಶಿಷ್ಯರು ಎಂದು ಬಿ.ವಿ.ವಿ. ಸಂಘದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಎಂ.ಪಿ. ಚಂದ್ರಿಕಾ ಹೇಳಿದರು. ನಗರದ ಬಿ.ವಿ.ವಿ. ಸಂಘದ ನೂತನ ಸಭಾಭವನದಲ್ಲಿ ಬುಧವಾರ ನಡೆದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ೨೦೨೬–೨೭ನೇ ಶೈಕ್ಷಣಿಕ ಸಾಲಿನ …

Read More »

ಜ್ಞಾನಯಾನಕ್ಕೆ ದೀಪ ಹಚ್ಚಿ, ಬದುಕಿನ ಪಯಣದಲ್ಲಿ ಜೊತೆ ನಿಲ್ಲುವವರೇ ಗುರುಗಳು: ಶ್ರೀಮತಿ ಮಂಗಳಗೌರಿ ಹೆಗ್ಡೆ

ವಿದ್ಯಾರ್ಥಿಗಳಿಂದ ಗುರುವಿನ ಮಹತ್ವ ಸಾರುವ ಸೊಗಸಾದ ನೃತ್ಯ ಪ್ರದರ್ಶನ ಬಾಗಲಕೋಟೆ: ನಮ್ಮ ಜೀವನದ ಜ್ಞಾನಯಾನಕ್ಕೆ ದೀಪ ಹಚ್ಚಿ, ಬದುಕಿನ ಪಯಣದಲ್ಲಿ ಮಾರ್ಗದರ್ಶನ ನೀಡಿ ಜೊತೆ ನಿಲ್ಲುವವರೇ ಗುರುಗಳು. ಗುರು ಎಂದರೆ ಕೇವಲ ಅಕ್ಷರ ಜ್ಞಾನವನ್ನು ಕಲಿಸುವವರಲ್ಲ; ಜೀವನದ ಏಳುಬೀಳುಗಳಲ್ಲಿ ಸೂಕ್ತ ಮಾರ್ಗದರ್ಶನ ನೀಡಿ, ಸನ್ಮಾರ್ಗದಲ್ಲಿ ಮುನ್ನಡೆಸುವವರೂ ಗುರುಗಳೇ ಆಗಿದ್ದಾರೆ ಎಂದು ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯ ಪ್ರಾಚಾರ್ಯೆ ಮಂಗಳಗೌರಿ ಹೆಗ್ಡೆ ಹೇಳಿದರು. ಬುಧವಾರ ವಿದ್ಯಾಗಿರಿಯ ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯಲ್ಲಿ …

Read More »

ಎಸ್‌ಐಆರ್‌ ಸಮೀಕ್ಷೆ| ಅಧಿಕಾರಿಯ ಮೇಲೆ ಹಲ್ಲೆ – ರಕ್ತ ಬರುವಂತೆ ಹೊಡೆದಿದ್ದ ಡಿಜೆಹಳ್ಳಿಯ ಇಬ್ಬರು ಅರೆಸ್ಟ್‌

ಬೆಂಗಳೂರು: ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ  ಕೆಲಸಕ್ಕೆ ತೆರಳಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾರಬ್ ಮತ್ತು ದಸ್ತಗೀರ್ ಬಂಧಿತ ಆರೋಪಿಗಳು. ಬುಧವಾರ ಮಧ್ಯಾಹ್ನ ಸುಮಾರು 1:30 ರ ವೇಳೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸ್ಲಂ ಡೆವಲಪ್‌ಮೆಂಟ್ ಬೋರ್ಡ್‌ನ ಅಧಿಕಾರಿಗಳ ತಂಡವು ಡಿ.ಜೆ. ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ …

Read More »

ಸುಪ್ರೀಂನಿಂದ ಜಾಮೀನು ರದ್ದು – ಮೇಘಾಲಯ ಕೋರ್ಟ್‌ಗೆ ಶರಣಾದ ಹನಿಮೂನ್ ಹಂತಕಿ

ಶಿಲ್ಲಾಂಗ್: ಹನಿಮೂನ್‌ಗೆ ಹೋಗಿದ್ದಾಗ ಪ್ರಿಯಕರನೊಟ್ಟಿಗೆ ಸೇರಿ ಪತಿಯನ್ನು ಹತ್ಯೆಗೈದ ಪ್ರಕರಣದ ಆರೋಪಿ ಸೋನಮ್ ರಘುವಂಶಿ  ಸುಪ್ರೀಂಕೋರ್ಟ್ ಆದೇಶದಂತೆ ಇಂದು (ಜು.30) ಶಿಲ್ಲಾಂಗ್‌ನ ವಿಚಾರಣಾ ನಾಯ್ಯಾಲಯದ ಮುಂದೆ ಶರಣಾಗಿದ್ದಾಳೆ. ಈ ಕುರಿತು ಈಸ್ಟ್ ಖಾಸಿ ಹಿಲ್ಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸೈಯಮ್ ಮಾಹಿತಿ ನೀಡಿದ್ದು, ಮಂಗಳವಾರ (ಜು.28) ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಸುಪ್ರೀಂ ಆದೇಶವೇನು? ವಿಚಾರಣೆಗೆ ಅಡ್ಡಿಯಾಗಬಹುದು ಎಂಬ ಕಾರಣ ನೀಡಿ ಸೋನಮ್‌ಗೆ ನೀಡಲಾಗಿದ್ದ ಜಾಮೀನನ್ನು …

Read More »