ರಾಮನಗರ: ಬಿಡದಿಯ ವಂಡರ್ಲಾ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರೋ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ರೆಸಾರ್ಟ್ಗೆ ಬಂದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವೀರಪ್ಪನ್ ಪುತ್ರಿ ವಿದ್ಯಾರಾಣಿ ಭೇಟಿ ಮಾಡಿದ್ದಾರೆ. ಶಿವಕುಮಾರ್ ಅವರು ರೆಸಾರ್ಟ್ಗೆ ಬರುವುದಕ್ಕೆ ಮುಂಚೆಯೇ ವಿದ್ಯಾ ತಮ್ಮ ಬೆಂಬಲಿಗರೊಂದಿಗೆ ಬಂದು ಕಾಯುತ್ತಾ ಕುಳಿತಿದ್ದರು. ಡಿಸಿಎಂ ಬಂದು ಕಾರಿನಿಂದ ಇಳಿಯುತ್ತಿದ್ದಂತೆಯೇ ಸ್ಥಳೀಯ ಕಾಂಗ್ರೆಸ್ ನಾಯಕರು ಅವರನ್ನು ಮುತ್ತಿಕೊಂಡರು. ಇದೇ ವೇಳೆ, ಮುಖಂಡರೊಬ್ಬರು ವಿದ್ಯಾ ಅವರನ್ನು ಡಿಸಿಎಂ ಬಳಿ ಕರೆದು …
Read More »ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್
ಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದ ಐವರನ್ನು ಬಂಧಿಸಿದ್ದಾರೆ. …
Read More »ವೈಯರ್ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್
ಬೆಂಗಳೂರು: ವೈಯರ್ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯನ್ನು ವಿವಾಹಿತ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ನಡೆದಿದೆ. ಕೊಡಗು ಮೂಲದ ರಂಜಿತಾಳನ್ನು (23) ಆರೋಪಿ ಅಯ್ಯಪ್ಪ ಕೊಲೆ ಮಾಡಿದ್ದಾನೆ. ಇಬ್ಬರು ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದರು ಎಂದು ತಿಳಿದುಬಂದಿದೆ. ಆರೋಪಿ ಅಯ್ಯಪ್ಪನಿಗೆ ಈ ಮೊದಲೇ ಮದುವೆಯಾಗಿತ್ತು. ಆದರೆ ಮದುವೆಯಾಗಿರುವ ವಿಷಯ ಯುವತಿಗೆ ತಿಳಿದಿರಲಿಲ್ಲ. ಇದೀಗ ಈ ವಿಚಾರ ತಿಳಿದು ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಗಲಾಟೆ ತಾರಕಕ್ಕೇರಿ ಆರೋಪಿ ವೈಯರ್ನಿಂದ …
Read More »ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ. ಗುರುವಾರ (ಮಾ.12) ಬೀರೂರು ಪಟ್ಟಣದಲ್ಲಿ ಭಾವಸಾರ ಸಮಾಜದ ವಿಶ್ವನಾಥ ಎಂಬುವವರು ನಿಧನರಾಗಿದ್ದರು. ಮೃತ ವಿಶ್ವನಾಥ್ ಅವರಿಗೆ ಮಕ್ಕಳೇ ಇರಲಿಲ್ಲ. ಅವರ ಸಹೋದರರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಹೀಗಾಗಿ ಮೃತ ವಿಶ್ವನಾಥ್ ಸಹೋದರನ ಮಗಳು ಐಶ್ವರ್ಯ ಅವರೂ ನನ್ನ …
Read More »ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ
ಬೀದರ್: ಇರಾನ್ ಮತ್ತು ಇಸ್ರೆಲ್ ವಾರ್ನಿಂದ ರಾಜ್ಯ ಸೇರಿದಂತೆ ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಎಮರ್ಜೆನ್ಸಿಗೆ ಪ್ರಧಾನಿ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ ಎಂದು ಬೀದರ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಲಿಂಡರ್ ಎಮರ್ಜೆನ್ಸಿ ಕುರಿತು ಬೀದರ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುದ್ಧ ಪ್ರಾರಂಭವಾಗೋದಕ್ಕೂ ಮೊದಲು ಇಸ್ರೆಲ್ನಲ್ಲಿ ಏನು ಕೆಲಸ ಇತ್ತು, ಏಕಾಏಕಿ ಡೊಮೆಸ್ಟಿಕ್ ಮತ್ತು ಕಮರ್ಷಿಯಲ್ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದ್ರಿ. ಏನು …
Read More »ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC
ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆಯಲ್ಲಿ ಅಕ್ರಮ ಅರೋಪ ಕೇಳಿದ ಬಂದ ಹಿನ್ನೆಲೆ ಸಂದರ್ಶನ ದಿನಾಂಕವನ್ನ ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿಕೆ ಮಾಡಿದೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ ಸಂಬಂಧ 1:3 ಸಂದರ್ಶನಕ್ಕೆ KPSC ಪಟ್ಟಿ ಬಿಡುಗಡೆ ಮಾಡಿತ್ತು. ಮಾ.23ರಿಂದ ಸಂದರ್ಶನಕ್ಕೆ ದಿನಾಂಕ ನಿಗದಿ ಮಾಡಲಾಗಿತ್ತು. ಅಕ್ರಮದ ಆರೋಪ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂದರ್ಶನವನ್ನ ಮುಂದೂಡಿಕೆ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಸಂದರ್ಶನ ಮುಂದೂಡಿಕೆ ಮಾಡಿದ್ದು, ಸಂದರ್ಶನದ ದಿನಾಂಕ KPSCಯಿಂದ ಮುಂದೆ ತಿಳಿಸಲಾಗುವುದು ಅಂತ ಮಾಹಿತಿ ನೀಡಲಾಗಿದೆ.
Read More »ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತಾನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯುದ್ಧದ ಸಮಯದಲ್ಲಿ ರಾಜಕೀಯ ಮಾಡಬಾರದು. ಈ ಸಮಯದಲ್ಲಿ ರಾಜಕೀಯ ಬಿಟ್ಟು ಮಾತಾಡಬೇಕು. ಯುದ್ಧದಿಂದ ಸಮಸ್ಯೆ ಆಗಿದೆ. ಸಚಿವ ಮುನಿಯಪ್ಪ ಸರಿಯಾಗಿ ಮಾತನಾಡುತ್ತಾರೆ. ಅವರು ಕೇಂದ್ರದಲ್ಲಿ ಮಂತ್ರಿ ಆಗಿದ್ದವರು. ಅವರಿಗೆ ಎಲ್ಲವೂ ಗೊತ್ತಿದೆ. ಸಿದ್ದರಾಮಯ್ಯ ಬೇರೆ …
Read More »ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ
ಶಿವಮೊಗ್ಗ: ನಗರದ ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ. ಮಾಹಿತಿಯ ಪ್ರಕಾರ, ಇಂಡಿಗೋ ಸಂಸ್ಥೆಯು ಏಪ್ರಿಲ್ 30ರ ವರೆಗಷ್ಟೇ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಿದ್ದು, ಮೇ 1ರಿಂದ ಯಾವುದೇ ಬುಕ್ಕಿಂಗ್ ಲಭ್ಯವಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ. ಕಾರಣವೇನು? ಇತ್ತೀಚೆಗೆ ಅಹಮದಾಬಾದ್ನಲ್ಲಿ ನಡೆದ ವಿಮಾನ …
Read More »ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗೆ ಆಹುತಿ
ಚಿಕ್ಕಮಗಳೂರು: ತಾಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ 2 ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ ಸಂಪತ್ತು, ಜೀವ ಸಂಕುಲಕ್ಕೆ ಸಂಚಕಾರ ಎದುರಾಗಿದೆ. ಭದ್ರಾ ಅಭಯಾರಣ್ಯ ವ್ಯಾಪ್ತಿಗೆ ಕಾಡ್ಗಿಚ್ಚು ಹಬ್ಬಿರೋದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಮುತ್ತೋಡಿ ಅರಣ್ಯ ವ್ಯಾಪ್ತಿಯ ಎಮ್ರಹಳ್ಳಿ ಮತ್ತು ಹೊಸಕಾನ್ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡದೆ. ಬಿಸಿಲ ಬೇಗೆಗೆ ಒಣಗಿದ ತರಗೆಲೆಗಳು ಮತ್ತು ಹುಲ್ಲಿನಿಂದಾಗಿ ಕ್ಷಣಾರ್ಧದಲ್ಲೇ ಕಿಲೋ …
Read More »ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ
ದಾವಣಗೆರೆ: ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 4.75 ಲಕ್ಷ ರೂ. ಮೌಲ್ಯದ 320 ಕ್ವಿಂಟಲ್ ಮೆಕ್ಕೆ ಜೋಳ ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವೀರಬಸಪ್ಪ ಅವರಿಗೆ ಸೇರಿದ ಎರಡು ಎಕರೆಯಲ್ಲಿ ಬೆಳೆದ 70 ಕ್ವಿಂಟಲ್ ಮೆಕ್ಕೆ ಜೋಳಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. 1 ಲಕ್ಷದ 25 ಸಾವಿರ ರೂ. ನಷ್ಟವಾಗಿದೆ. ಅದೇ ರೀತಿ ಗ್ರಾಮದ ಬಸಪ್ಪ ಅವರು …
Read More »
Laxmi News 24×7