ಬೆಂಗಳೂರು: ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಆಗೋವರೆಗೂ ತಮಿಳುನಾಡಿಗೆ ನೀರು ಬಿಡಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಖಡಕ್ಕಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸಬೇಕೆಂಬ CWMA ಆದೇಶ ಕುರಿತು ಪ್ರತಿಕ್ರಿಯಿಸಿದರು. ಸದ್ಯಕ್ಕೆ ಕುಡಿಯೋ ನೀರಿಗೆ ಸಮಸ್ಯೆಯಿಲ್ಲ, ಆದ್ರೆ ರೈತರಿಗೆ ಬೆಳೆ ಬೆಳೆಯೋಕೆ ನೀರು ಕೊಡಲು ಆಗಲ್ಲ ಎಂದಿದ್ದಾರೆ. CWMA ನೀರು ಬಿಡೋಕೆ ಹೇಳಿದೆ. ಕಳೆದ 30 ವರ್ಷಗಳಿಂದ …
Read More »ಕೂಲಿ ಹಣ ಕೇಳಿದ್ದಕ್ಕೆ ಕಾಂಗ್ರೆಸ್ ಮುಖಂಡನಿಂದ ಬೆದರಿಕೆ ಆರೋಪ – ವ್ಯಕ್ತಿ ಆತ್ಮಹತ್ಯೆ
ಕಲಬುರಗಿ: ಗುತ್ತಿಗೆ ಪಡೆದ ಕೆಲಸದ ಹಣ ಕೇಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡನ ಬೆದರಿಕೆಗೆ ಹೆದರಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ನಡೆದಿದೆ. ರಟಕಲ್ ಗ್ರಾಮದ ನಿವಾಸಿ ಖದೀರ್ ಪಾಷಾ (38) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕೆಲಸಗಾರ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅರವಿಂದ್ ಚವ್ಹಾಣ್ ಹಾಗೂ ಅವರ ಅಳಿಯ ಅಮಿತ್ ರಾಠೋಡ್ ವಿರುದ್ಧ ದೂರು ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, …
Read More »ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಭೇಟಿ
ಬಾಗಲಕೋಟೆ: ಹಿಂದೂಪರ ಕಾರ್ಯಕರ್ತ, ಗೋರಕ್ಷಕ ಹಾಗೂ ‘ರಾಷ್ಟ್ರಪಡೆ’ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರು ಗುರುವಾರ ಸಂಜೆ ಬವಿವ ಸಂಘದ ಕಾರ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಡಾ. ವೀರಣ್ಣ ಚರಂತಿಮಠ ಅವರು ಪುನೀತ್ ಕೆರೆಹಳ್ಳಿಯವರನ್ನು ಆತ್ಮೀಯವಾಗಿ ಸ್ವಾಗತಿಸಿ, ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು. ಬಳಿಕ ಇಬ್ಬರೂ ಪರಸ್ಪರ ಆರೋಗ್ಯ ವಿಚಾರಗಳೊಂದಿಗೆ ಸಮಕಾಲೀನ ಸಾಮಾಜಿಕ ಹಾಗೂ …
Read More »ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ
ಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ 1ರಂದು ಶನಿವಾರ ಮಧ್ಯಾಹ್ನ 4 ಗಂಟೆಗೆ ಕಾಲೇಜಿನ ನೂತನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕರ್ನಾಟಕದ ಪ್ರತಿಷ್ಠಿತ ಬಿವಿವಿ ಸಂಘದ ವಿದ್ಯಾಸಂಸ್ಥೆಯಾದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು 63 ವರ್ಷಗಳ ಶೈಕ್ಷಣಿಕ ಪಯಣವನ್ನು ಯಶಸ್ವಿಯಾಗಿ ಪೂರೈಸಿದ್ದು, ದೇಶದ ಪ್ರಮುಖ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಾಲೇಜು 2007ರಲ್ಲಿ ಯುಜಿಸಿ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ …
Read More »ಯೋಗೇಶ್ ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಜಾಮೀನು ಮಂಜೂರು
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೀವಾವಧಿ ಶಿಕ್ಷೆಯನ್ನೂ ಅಮಾನತ್ತಿನಲ್ಲಿಟ್ಟಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಅಮಾನತ್ತಿನಲ್ಲಿ ಇರಿಸಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ನೀಡಿ, ವಿನಯ್ ಕುಲಕರ್ಣಿ …
Read More »ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ
ಉಡುಪಿ: ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಹತ್ಯೆಗೀಡಾದ ವ್ಯಕ್ತಿ. ಕುಂದಾಪುರದ ಚರ್ಚ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 3:30 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು. ತಮ್ಮ ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ಅವರು ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. …
Read More »ಕೊಡಗಿನಲ್ಲಿ ಮಳೆಯ ಅಬ್ಬರ – ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಳೆ (Rain) ಗಳು ತುಂಬಿ ಹರಿಯುತ್ತಿವೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2,857.88 ಅಡಿಗಳಿಗೆ ತಲುಪಿದೆ. ಜಲಾಶಯಕ್ಕೆ 4,008 ಕ್ಯೂಸೆಕ್ ನೀರು ಒಳಹರಿವು …
Read More »ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗು ಕೊಂದ ಪಾಪಿ ಪತಿ
ಬಳ್ಳಾರಿ: ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗುವನ್ನು ಕೊಂದು ಪತಿ ಪರಾರಿಯಾಗಿರುವ ಘಟನೆ ಬಳ್ಳಾರಿ ನಗರದ ಅಂದ್ರಾಳ್ ಪ್ರದೇಶದಲ್ಲಿ ನಡೆದಿದೆ. ಆರೋಪಿ ಪತಿ ಹೊನ್ನೂರಸ್ವಾಮಿ ಪತ್ನಿ ರಾಜೇಶ್ವರಿ ಹಾಗೂ ಮಗಳು ಅಶ್ವಿನಿಯನ್ನು ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹದಿಂದಾಗಿ ಸುತ್ತಿಗೆಯಿಂದ ಹೊಡೆದು ಪತ್ನಿ ಹಾಗೂ ಮಗುವನ್ನು ಕೊಂದು ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ …
Read More »ʻಕಾವೇರಿ ಕಿಚ್ಚುʼ – ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಿಕೆಗೆ ಸಿಎಂ ಡಿಕೆಶಿ ಮನವಿ
ಬೆಂಗಳೂರು: ಆ.13 ರಂದು ʻಕರ್ನಾಟಕ ಬಂದ್ʼ ಘೋಷಣೆಯಾದ ಬೆನ್ನಲ್ಲೇ ತಮಿಳುನಾಡು ಸಿಎಂ ವಿಜಯ್ ಅವರ ಭೇಟಿ ಮುಂದೂಡಿಕೆಗೆ ಸಿಎಂ ಡಿಕೆ ಶಿವಕುಮಾರ್ r ಮನವಿ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡಿಸಿ ಮಾತನಾಡಿದ ಅವರು, ಇಂತಹ ವಾತಾವರಣರಲ್ಲಿ ವಿಜಯ್ ಅವರನ್ನ ಕರೆಸೋದು ಸೂಕ್ತ ಅಲ್ಲ, ನಾನು ಅವರನ್ನ ಕರೆಸೋದು, ಯಾರೋ ಕೂಗೋದು, ಮುತ್ತಿಗೆ ಹಾಕೋದು ಸರಿಯಲ್ಲ. ಕೆಲವರು ಅವರ ಭೇಟಿ ವಿಚಾರದಲ್ಲಿ ನಡೆದುಕೊಳ್ಳುತ್ತಿರುವುದು ಸರಿ ಇಲ್ಲ, ನನಗೇಕೋ ಸಮಾಧಾನ ತರಿಸುತ್ತಿಲ್ಲ ಎಂದು …
Read More »ನಿಮ್ಮ ವಿರುದ್ಧ ಯಾವುದೇ ಕೆಲಸ ಮಾಡಲ್ಲ, ದಯವಿಟ್ಟು ಬಂದ್ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ
ಬೆಂಗಳೂರು: ನಿಮ್ಮ ವಿರುದ್ಧ ಯಾವುದೇ ಕೆಲಸ ಮಾಡೋದಿಲ್ಲ. ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ, ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಹೋರಾಟ ಮಾಡ್ತಿವೆ. ಹೋರಾಟ ಮಾಡೋದು ತಪ್ಪಲ್ಲ, ಆದ್ರೆ ವಾಸ್ತವಾಂಶ ಗೊತ್ತಿರಲಿ. ರಾಜ್ಯದ ಹಿತ ರಕ್ಷಣೆಗೆ ನಾವಿದ್ದೇವೆ, ನೀವೆಲ್ಲ ಸೇರಿ ನಮಗೆ ಅಧಿಕಾರ ಕೊಟ್ಟಿದ್ದೀರಿ, …
Read More »
Laxmi News 24×7