Breaking News

ಬಿಜೆಪಿ ಅವಧಿಯ ಅಭಿವೃದ್ಧಿ ಕೆಲಸಗಳೆ ಗೆಲುವಿಗೆ ಶ್ರೀರಕ್ಷೆ : ಪಿ. ರಾಜೀವ

ಬಿಜೆಪಿಯಿಂದ ಉಪ ಚುನಾವಣಾ ಪೂರ್ವ ಭಾವಿ ಸಭೆ ಬಾಗಲಕೋಟೆ : ಕಳೆದ ಮೂರು ವರ್ಷಗಳ ಅಭಿವೃದ್ಧಿ ಶೂನ್ಯ, ಬರಿ ಹಗರಣಗಳ ಕಾಂಗ್ರೆಸ್ಸ ಸರಕಾರದಿಂದ ಜನ ಬೇಸತ್ತು ಹೋಗಿದ್ದು ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಲು ಬಾಗಲಕೋಟೆ ಜನ ತುದಿಗಾಲಿನ ಮೇಲೆ ನಿಂತಿದ್ದಾರೆ, ಇಲ್ಲಿ ಕ್ಷೇತ್ರದ ಅಭಿವೃದ್ಧಿಯೇ ನಮ್ಮ ಮಂತ್ರವಾಗಿದೆ ಎಂದು ರಾಜ್ಯ ಪ್ರದಾನ ಕಾರ್ಯದರ್ಶಿ ಪಿ. ರಾಜೀವ್ ಹೇಳಿದರು, ಅವರು ನವನಗರದ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆದ …

Read More »

ಸಿದ್ದರಾಮಯ್ಯ ಸಂಧಾನ ಯಶಸ್ವಿ: ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಫೈನಲ್

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ  ಘೋಷಣೆಯಾಗು ತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ‘ಕುಟುಂಬ ರಾಜಕಾರಣ’ದ ಬಿಸಿ ತಟ್ಟಿದ್ದು, ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಹೌದು…ಮಾಜಿ ಶಾಸಕ ಎಚ್.ವೈ. ಮೇಟಿ ಅವರ ಕುಟುಂಬದಲ್ಲಿ ಟಿಕೆಟ್‌ಗಾಗಿ ಭಿನ್ನಮತ ಸ್ಪೋಟಗೊಂಡಿತ್ತು. ಇದರ ಬೆನ್ನಲ್ಲೇ ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ, ಮಹಾದೇವಿ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಇಂದು (ಮಾರ್ಚ್ 18) ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಮೇಟಿ …

Read More »

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

ಮೈಸೂರು: ಮುಂದಿನ ಚುನಾವಣೆಯಲ್ಲಿ  ಜೆಡಿಎಸ್  ಪಕ್ಷದಿಂದಲೇ ನನ್ನ ಸ್ಪರ್ಧೆ ಎಂದು ಮೈಸೂರಿನ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ  ಸ್ಪಷ್ಟಪಡಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ  ಜಯಪುರ ಗ್ರಾಮದಲ್ಲಿ ಮಾತನಾಡಿದ ಅವರು, ಜೆಡಿಎಸ್ ಬಿಡುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ಜೆಡಿಎಸ್ ಪಕ್ಷದಿಂದ ಟಿಕೆಟ್ ಕೊಡದಿದ್ದರೆ ಕ್ಷೇತ್ರದ ಜನ ಹೇಳಿದಂತೆ ಕೇಳುತ್ತೇನೆ ಎಂದು ಕ್ಷೇತ್ರದ ಜನರ ಮುಂದೆ ಭಾವನಾತ್ಮಕ ದಾಳ ಉರುಳಿಸಿದ್ದಾರೆ. ನಾನು ಜೆಡಿಎಸ್ ಪಕ್ಷದಲ್ಲೇ ಇದ್ದೇನೆ, ಇರುತ್ತೇನೆ. ಟಿಕೆಟ್ ಕೊಡದಿದ್ರೆ ಮತದಾರರು ನೀವು ಏನು …

Read More »

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

ಕೋಲಾರ: ಹೃದಯಾಘಾತಕ್ಕೊಳಗಾಗಿ ಪೊಲೀಸ್ ಮುಖ್ಯಪೇದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ  ನಡೆದಿದೆ. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ತೂಕ ಕಡಿಮೆ ಮಾಡುವ ಹಿನ್ನೆಲೆ ವೆಂಕಟರಮಣಪ್ಪ ಡಯಟ್ ಸೇರಿದಂತೆ ಔಷಧ ತೆಗೆದುಕೊಳ್ಳುತ್ತಿದ್ದರು. ಇಂದು ಮುಂಜಾನೆ ಮನೆಯಲ್ಲೇ ಹೃದಯಾಘಾತಕ್ಕೊಳಗಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

Read More »

ಬೆಳಗಾವಿ ಮಹಾನಗರ ಪಾಲಿಕೆಗೆ ಮೇಯರ್ ಉಪಮೇಯರ್ ಆಯ್ಕೆ

ಬೆಳಗಾವಿ ಮಹಾನಗರ ಪಾಲಿಕೆಗೆ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ್, ಉಪಮೇಯರ್ ಸ್ಥಾನಕ್ಕೆ ಹನುಮಂತ ಕೊಂಗಾಲಿ ಆಯ್ಕೆ ಕೋರ ಕಮಿಟಿ ಸಭೆ ನಡೆಸಿ ಮೇಯರ್, ಉಪಮೇಯರ್ ಸ್ಥಾನಗಳಿಗೆ ಹೆಸರು ಅಂತಿಮ 24ನೇ ಅವಧಿಗೆ ಮೇಯರ್ ಆಗಿ ನೇಕಾರರು ಸಮಾಜದ ಪ್ರೀತಿ ಕಾಮಕರ್ ಮೇಯರ್ ಉಪ ಮೇಯರ್ ಸ್ಥಾನಕ್ಕೆ ಲಿಂಗಾಯತ ಸಮಾಜದ ಹನುಮಂತ ಕೊಂಗಾಲಿ ಆಯ್ಕೆ ಬೆಳಗಾವಿಯಲ್ಲಿ ಶಾಸಕ ಅಭಯ್ ಪಾಟೀಲ ಹೇಳಿಕೆ ಪ್ರೀತಿ ಕಾಮಕರ್, ಹನುಮಂತ ಕೊಂಗಾಲಿ ಉಪಮೇಯರ್ ಆಗಿ ಆಯ್ಕೆ …

Read More »

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಎಸ್‌ಐಟಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನ ಸಿವಿಲ್ ಕೋರ್ಟ್‌ಗೆ ಎಸ್‌ಐಟಿ 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಅಶ್ಲೀಲ ವಿಡಿಯೋ ಹಂಚಲು ಆರೋಪಿಗಳು 70 ಪೆನ್‌ಡ್ರೈವ್ ಖರೀದಿಸಿದ್ದರು. ಹಾಸನದಲ್ಲೇ 70 ಪೆನ್‌ಡ್ರೈವ್ ಖರೀದಿ ಮಾಡಿರುವುದು ತನಿಖೆಯಿಂದ ಬಯಲಾಗಿದೆ. ಪ್ರಕರಣದಲ್ಲಿ 52 …

Read More »

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

ಹಾವೇರಿ: ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್  ಮತ್ತು ಟ್ರೇಲರ್ ನಡುವೆ ಸಿಲುಕಿ ಚಾಲಕ  ಸಾವನ್ನಪ್ಪಿರುವ ಘಟನೆ ಹಾವೇರಿ  ತಾಲೂಕಿನ ಮರೋಳ ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ತಾಂಡಾದ ನಿವಾಸಿ ದೇವರಾಜ್ ಲಮಾಣಿ (26) ಮೃತ ಚಾಲಕ. ದೇವರಾಜ್ ಬೆಳಗ್ಗೆ ಎರಡೂವರೆ ಸಾವಿರ ಇಟ್ಟಿಗೆ ತುಂಬಿಕೊಂಡು ಮರೋಳ ಗ್ರಾಮಕ್ಕೆ ಬಂದಿದ್ದ. ಈ ವೇಳೆ ಏಕಾಏಕಿ ಟ್ರ‍್ಯಾಕ್ಟರ್‌ನ ಎಂಜಿನ್ ಮೇಲೆ ಎದ್ದು ನಡುವಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಗುತ್ತಲ ಪೊಲೀಸರು ಭೇಟಿ …

Read More »

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

ಬೆಂಗಳೂರು: ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ  ಭೇಟಿ ನೀಡುವ ಯಾತ್ರಿಗಳಿಗೆ ತಲಾ 5 ಸಾವಿರ ಸಹಾಯಧನ ಯೋಜನೆ ಜಾರಿ ಮಾಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ  ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ನ ಮಂಜೇಗೌಡ ಪ್ರಶ್ನೆಗೆ ಉತ್ತರ ನೀಡಿದ ಅವರು, ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಿಗಳಿಗೆ ತಲಾ 5 ಸಾವಿರ ಸಹಾಯಧನ ಯೋಜನೆ ಜಾರಿ ಮಾಡಲಾಗಿದೆ. ಇದಕ್ಕಾಗಿ ಸರ್ಕಾರ 5 ಕೋಟಿ ಹಣ ಮೀಸಲು ಇಡಲಾಗಿದೆ. …

Read More »

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ಒಂದು ವಾರ ಹೋಟೆಲ್‌ಗಳು  ಗ್ಯಾಸ್ ಸಿಲಿಂಡರ್‌ಗಾಗಿ  ಸಹಕಾರ ಕೊಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ  ಹೋಟೆಲ್ ಅಸೋಸಿಯೇಷನ್‌ಗೆ ಮನವಿ ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಡೊಮೆಸ್ಟಿಕ್ ಸಿಲಿಂಡರ್ ಸಮಸ್ಯೆ ಇಲ್ಲ. ಎಷ್ಟು ಸಪ್ಲೈ ಆಗಬೇಕೋ ಅಷ್ಟು ಆಗಿದೆ. ಗೃಹ ಬಳಕೆ ನಿಲ್ಲಿಸೋದಿಲ್ಲ. 3 ಲಕ್ಷಕ್ಕೂ ಹೆಚ್ಚು ಸಿಲಿಂಡರ್ ಬಳಕೆ ಆಗುತ್ತಿದೆ. ಅದನ್ನ ಕೊಡುತ್ತಿದ್ದೇವೆ. ಕಮರ್ಷಿಯಲ್ ಗ್ಯಾಸ್ …

Read More »

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

ಬೆಂಗಳೂರು: ಗ್ಯಾಸ್ ವಿತರಣೆಗೆ ಕರ್ನಾಟಕ ಸರ್ಕಾರದಿಂದ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಪ್ರಾಮುಖ್ಯತೆ ನೀಡಿದ್ದು, ಶೇ.100 ಗ್ಯಾಸ್ ವಿತರಣೆಗೆ ಸೂಚನೆ ನೀಡಿದೆ. ಆದರೆ, ಹೋಟೆಲ್‌ಗಳಿಗೆ ಕೇವಲ 10% ಗ್ಯಾಸ್ ವಿತರಣೆಗೆ ಸೂಚಿಸಲಾಗಿದೆ. ನಾಳೆಯಿಂದ ಗ್ಯಾಸ್ ವಿತರಣೆಗೆ ಸರ್ಕಾರ ಸೂಚಿಸಿದೆ. ಅಗತ್ಯ ವಲಯಗಳಿಗೆ ಪ್ರಮುಖ ಆದ್ಯತೆ ನೀಡಲಾಗಿದೆ. ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಪರ್ಸೆಂಟೇಜ್ ಗ್ಯಾಸ್ ವಿತರಿಸಬೇಕೆಂದು ಏಜೆನ್ಸಿ ಕಂಪನಿಗಳಿಗೆ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ಯಾವ್ಯಾವ …

Read More »