ತುಮಕೂರು: ಸಂಪುಟ ಪುನಾರಚನೆಯ ಸುಳಿವು ಇದೆ. ಈ ಮುನ್ಸೂಚನೆ ಇರೋದರಿಂದಲೇ 30 ಜನ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಿದ್ದಲ್ವಾ ಎಂದು ಹೇಳುವ ಮೂಲಕ ಸಂಪುಟ ಪುನಾರಚನೆ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಅಧಿಕೃತಗೊಳಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೂರ್ನಾಲ್ಕು ಬಾರಿ ಶಾಸಕರಾದವರು ಸಚಿವ ಸ್ಥಾನ ಕೇಳೋದು ಅವರ ಹಕ್ಕು ಅದರಲ್ಲಿ ತಪ್ಪೇನಿಲ್ಲ. ಆದರೆ ಸಿಎಂ ಬದಲಾವಣೆ ವಿಚಾರ ಆಗಲಿ ಅಥವಾ ಸಂಪುಟ ಪುನಾರಚನೆ ಆಗಲಿ ಎಲ್ಲವೂ …
Read More »ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್ ರದ್ದು
ಮುಂಬೈ: ರಾಜ್ಯದ ಎಲ್ಲಾ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮರಾಠಿ ಭಾಷಾ ಜ್ಞಾನವನ್ನು ಕಡ್ಡಾಯಗೊಳಿಸಲಾಗಿದೆ. ಚಾಲಕರು ಕಡ್ಡಾಯವಾಗಿ ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು, ಇಲ್ಲದಿದ್ದರೆ ಅವರ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು ಈ ನಿಯಮವನ್ನು ಮಹಾರಾಷ್ಟ್ರ ದಿನವಾದ ಮೇ 1 ರಿಂದ ರಾಜ್ಯಾದ್ಯಂತ ಕಡ್ಡಾಯವಾಗಿ ಜಾರಿಗೊಳಿಸುವುದಾಗಿ ಪುನರುಚ್ಚರಿಸಿದ್ದಾರೆ. ಪ್ರತಾಪ್ ಸರ್ನಾಯಕ್ ಅವರು ಮಾತನಾಡಿ, ಮಹಾರಾಷ್ಟ್ರ ದಿನಾಚರಣೆಯ ಜೊತೆಜೊತೆಗೆ …
Read More »ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದಕ್ಕಾಗಿ ಶಾಸಕ ಆಸಿಫ್ ರಾಜು ಸೆಟ್ ಅವರಿಗೆ ಕೃತಜ್ಞತೆ ಸಲ್ಲಿಸಿದ ಚಾವಟಗಲ್ಲಿ ನಿವಾಸಿಗಳು
ಬೆಳಗಾವಿ ಬೆಳಗಾವಿ ಉತ್ತರ ಮತಕ್ಷೇತ್ರದ ಚಾವಟಗಲ್ಲಿ ರೇಹಿವಾಸಿಗಳು ತಮಗೆ ಕುಡಿಯುವ ನೀರಿನ ಸೌಲಭ್ಯ ನೀಡಿದ್ದಕ್ಕಾಗಿ ಹಾಗು ಬಹಳ ವರ್ಷಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಹದಿಗೊಟ್ಟು ಇರುವ ಕಾರಣದಿಂದಾಗಿ ಚಾವುಟದಲ್ಲಿ ನಿವಾಸಿಗಳಿಗೆ ಕುಡಿಯುವ ನೀರಿಗಾಗಿ ಪರದಾಟ ಮಾಡುವ ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸಿಫ್ ರಾಜು ಸೇಟ್ ಗಮನಿಸಿ ಚವಟಗಲ್ಲಿ ನಿವಾಸಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದಕ್ಕಾಗಿ ಅಲ್ಲಿ ಮಹಿಳಾ ಸಂಘಟನೆ ಹಾಗೂ ವಿವಿಧ ನಾಗರಿಕರು ಬೆಳಗಾವಿ ಉತ್ತರ ಮತಕ್ಷೇತ್ರದ …
Read More »ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ
ಬಳ್ಳಾರಿ: ವಿಜಯನಗರ ಜಿಲ್ಲೆಯ ಹಲವೆಡೆ ಸುರಿದ ಗುಡುಗು ಸಹಿತ ಭಾರಿ ಮಳೆಗೆ ಹಲವು ಅವಾಂತರ ಸೃಷ್ಟಿಯಾಗಿವೆ. ಮಳೆಯಿಂದ ಜಿಲ್ಲೆಯ ಕೆಲವೆಡೆ ಪಪ್ಪಾಯ, ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳು ಹಾಳಾಗಿವೆ. ಮತ್ತೊಂದೆಡೆ ಸಿಡಿಲಿಗೆ ಜಮೀನನಲ್ಲಿ ಕಟ್ಟಿ ಹಾಕಿದ್ದ ಎತ್ತು ಬಲಿಯಾಗಿದೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮರದೇವರಗುಡ್ಡ ಗ್ರಾಮದಲ್ಲಿ ಮಳೆಗೆ ಪಪ್ಪಾಯ, ಅಡಿಕೆ ಸೇರಿ ತೋಟಗಾರಿಕೆ ಬೆಳೆ ಸಂಪೂರ್ಣ ನಾಶವಾಗಿದೆ. ಕಟಾವಿಗೆ ಬಂದಿದ್ದ ಪಪ್ಪಾಯ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ರೈತ ಬೀರಪ್ಪ …
Read More »17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ
ಬೆಂಗಳೂರು: 17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾಗಿರುವ ತಾಯಿ. ಕಾರುಣ್ಯ ತಾಯಿಯಿಂದ ಹತ್ಯೆಯಾದ ಮಗಳು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಟ್ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ನೋಡಲು ತನ್ನಂತೆ ಇಲ್ಲ ಎಂದು ಮಗನನ್ನೇ ಕೊಲೆಗೈದ ತಂದೆ
ವಿಜಯಪುರ: ಮಗ (Son) ನೋಡಲು ತನ್ನಂತೆ ಇಲ್ಲ ಎಂಬ ಕಾರಣಕ್ಕೆ ಮಗನನ್ನೇ ಪಾಪಿ ತಂದೆ ಕೊಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ಹತ್ಯೆಯಾದ ಬಾಲಕ. ಮಲ್ಲಿಕಾರ್ಜುನ ಅರಕೇರಿ ಮಗನನ್ನೇ ಹತ್ಯೆ ಮಾಡಿದ ತಂದೆ. ಕಳೆದ ಮಾರ್ಚ್ 16ರಂದು ಪುತ್ರನನ್ನು ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ ಮಲ್ಲಿಕಾರ್ಜುನ. 6 ವರ್ಷದ ಪುತ್ರ ಸಿದ್ದಾರ್ಥ ನೋಡಲು …
Read More »ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ – ಯತ್ನಾಳ್
ವಿಜಯಪುರ: ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ದಾವಣಗೆರೆ ಪಂಚಮಸಾಲಿ ಪೀಠದ ಬಗ್ಗೆ ಮಾತನಾಡಿದ ಅವರು, ಎರಡು ಪೀಠದ ಟ್ರಸ್ಟ್ಗಳು ನಂಬಿಕೆ ಕಳೆದುಕೊಂಡಿವೆ. ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ. ಎರಡು ಕಡೆ ಇದೇ ನಡೆಯುತ್ತಿದೆ. ಇದನ್ನ ಖಾಸಗಿ ಆಸ್ತಿ ಮಾಡಿಕೊಂಡವರಿದ್ದಾರೆ. ಇವರಿಂದ ಸಮಾಜಕ್ಕೆ ನ್ಯಾಯ ಸಿಗಲ್ಲ. ಪ್ರಾಮಾಣಿಕರು, ಸಮಾಜಕ್ಕಾಗಿ ಕೆಲಸ ಮಾಡುವವರು ಯಾರು ಟ್ರಸ್ಟ್ನಲ್ಲಿ …
Read More »ಆಸ್ಪತ್ರೆಯಲ್ಲಿ ಸಿರಿಂಜ್ ಮರುಬಳಕೆ – ಪಾಕ್ನ 331 ಮಕ್ಕಳಿಗೆ HIV ಸೋಂಕು
ಇಸ್ಲಾಮಾಬಾದ್: ಪಾಕಿಸ್ತಾನ ಆಸ್ಪತ್ರೆಯಲ್ಲಿ ಸಿರಿಂಜ್ ಮರುಬಳಕೆಯಿಂದ 331 ಮಕ್ಕಳಿಗೆ ಹೆಚ್ಐವಿ (HIV) ಸೋಂಕು ತಗುಲಿರುವ ಆಘಾತಕಾರಿ ವಿಚಾರ ತನಿಖೆಯಿಂದ ಬಹಿರಂಗಗೊಂಡಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಅಸುರಕ್ಷಿತ ಇಂಜೆಕ್ಷನ್ ಪದ್ಧತಿಗಳು ಮುಂದುವರೆದಿವೆ. ಮಕ್ಕಳಲ್ಲಿ ಹೆಚ್ಐವಿ ಪ್ರಕರಣಗಳು ಹೆಚ್ಚಾದ ನಂತರ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ರಹಸ್ಯ ದೃಶ್ಯಾವಳಿಗಳು ಮತ್ತು ಅಧಿಕೃತ ದತ್ತಾಂಶವನ್ನು ಆಧರಿಸಿದ ಸಂಶೋಧನೆಗಳು, THQ ಟೌನ್ಸಾ ಆಸ್ಪತ್ರೆಯಲ್ಲಿ ಸೋಂಕು ನಿಯಂತ್ರಣದಲ್ಲಿನ ವ್ಯವಸ್ಥಿತ ವೈಫಲ್ಯಗಳನ್ನು ಸೂಚಿಸುತ್ತವೆ. ಅಲ್ಲಿ …
Read More »ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ
ಧಾರವಾಡ: ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್ ಜಯಂತಿ ದಿನವಾದ ಇಂದು ಧಾರವಾಡದ ಜಯನಗರದಲ್ಲಿ ಪ್ರತಿಭಟನೆ ನಡೆಸಿದ ಉದ್ಯೋಗಾಕಾಂಕ್ಷಿಗಳನ್ನ ಪೊಲೀಸರು ವಶಕ್ಕೆ ಪಡೆದ್ದಾರೆ. ಸಮಾನ ಮನಸ್ಕರ ತಂಡ, ರೈತ ಸಂಘಟನೆ ಹಾಗೂ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅದಕ್ಕಾಗಿ ಪೊಲೀಸರ ಅನುಮತಿಯನ್ನೂ ಕೇಳಿದ್ದರು. ಅಂಬೇಡ್ಕರ್ ಜಯಂತಿ ಹಿನ್ನೆಲೆ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಿರಲಿಲ್ಲ. ಹೀಗಿದ್ದರೂ ಅನೇಕರು ಧಾರವಾಡದ ಜಯನಗರದಲ್ಲಿ ಪ್ರತಿಭಟನೆ ನಡೆಸಿದ್ದರು. ಇದರಿಂದ ಪೊಲೀಸರು …
Read More »ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ ಮಾಡಲು “ಬುದ್ಧ, ಬಸವ, ಅಂಬೇಡ್ಕರ್ ನಿವೇಶನ ಹಂಚಿಕೆ” ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಡಾ.ಬಾಬಾಸಾಹೇಬ್ ಜನ್ಮದಿನಾಚರಣೆ ಅಂಗವಾಗಿ ನಗರದ ಡಾ.ಅಂಬೇಡ್ಕರ್ ಉದ್ಯಾನದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದೇಶದಲ್ಲೇ ಮೊದಲ …
Read More »
Laxmi News 24×7