ಚಿಕ್ಕೋಡಿ:ಮೂಲತಃ ಹಾವೇರಿ ಜಿಲ್ಲೆಯವರಾದ, ಸದ್ಯ ಚಿಕ್ಕೋಡಿ ತಾಲೂಕಿನ ನೇಜ ಗ್ರಾಮದ ವಾಸಿಗಳಾದ ಸಂಸ್ಕೃತಿ ಚಿಂತಕರಾದ ವೀರೇಶ ಗ. ಪಾಟೀಲ ಅವರ ಸುಪುತ್ರಿ ವಚನಾ ವೀರೇಶ ಪಾಟೀಲ(ವಯಸ್ಸು:2 ವರ್ಷ 1 ತಿಂಗಳು)ತಮ್ಮ ಅಗಾಧವಾದ ನೆನಪಿನ ಶಕ್ತಿಯ ಮೂಲಕ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ ಅಚೀವರ್ ಆಗಿ ಹೊರಹೊಮ್ಮಿದ್ದಾರೆ. ತಮ್ಮ ಅಪಾರ ಸ್ಮರಣ ಶಕ್ತಿಯಿಂದ ಎಲ್ಲರ ಗಮನ ಸೆಳೆದಿರುವ ವಚನಾ, ಹಲವು ವೈವಿಧ್ಯಮಯ ವಿಷಯಗಳನ್ನು ಸರಾಗವಾಗಿ ನೆನಪಿನಲ್ಲಿಟ್ಟುಕೊಳ್ಳುವ ಅಪರೂಪದ ಪ್ರತಿಭೆಯನ್ನು ಹೊಂದಿದ್ದಾರೆ ವಚನಾ …
Read More »ಐಪಿಸಿ ಕಂಪನಿಯಿಂದ 83 ಸಾವಿರ ಕೋಟಿ ರೂ. ಹೂಡಿಕೆಗೆ ಒಲವು: ಎಂ.ಬಿ ಪಾಟೀಲ್
ಬೆಂಗಳೂರು: ಡಿಜಿಟಲ್ ಮೂಲಸೌಕರ್ಯ, ನವೀಕರಿಸಬಹುದಾದ ಇಂಧನ ಮತ್ತು ಗ್ರೀನ್ ಹೈಡ್ರೋಜನ್ ವಲಯಗಳಲ್ಲಿ ಹೆಸರಾಗಿರುವ ಲಕ್ಸಂಬರ್ಗ್ ಮೂಲದ ಇನ್ನೋವೇಶನ್ ಪ್ಲಾಟ್ಫಾರಂ ಕ್ಯಾಪಿಟಲ್ ಕಂಪನಿಯು ರಾಜ್ಯದಲ್ಲಿ ಒಟ್ಟು ಮೂರು ಹಂತಗಳಲ್ಲಿ 83 ಸಾವಿರ ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ತೋರಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಸೋಮವಾರ ತಮ್ಮನ್ನು ಇಲ್ಲಿ ಭೇಟಿಯಾದ ಕಂಪನಿಯ ಉನ್ನತ ಮಟ್ಟದ ನಿಯೋಗದ ಜೊತೆ ಅವರು ಮಾತುಕತೆ ನಡೆಸಿದರು. ಕಂಪನಿಯ …
Read More »ಹಾವೇರಿ ಜಿಲ್ಲೆಗೆ 2 ತಿಂಗಳು ಪ್ರಮೋದ್ ಮುತಾಲಿಕ್ ಪ್ರವೇಶ ನಿರ್ಬಂಧ
ಹಾವೇರಿ: ಶಿಗ್ಗಾಂವಿ ಪಟ್ಟಣದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಖಂಡಿಸಿ ಈದ್ ಮಿಲಾದ್ ದಿನ ಬಂದ್ಗೆ ಕರೆ ನೀಡಲಾಗಿತ್ತು. ಈ ಬಂದ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಮೋದ್ ಮುತಾಲಿಕ್ ಅವರು ಇಂದಿನಿಂದ ಎರಡು ತಿಂಗಳ ಕಾಲ ಹಾವೇರಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ …
Read More »ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ – ಡಿಕೆಶಿ ಘೋಷಣೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್ 17ರಂದು ನಡೆಯಲಿರುವ ಪವಿತ್ರ ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕಾವೇರಿ ನೀರಾವರಿ ನಿಗಮದ ಮೂಲಕ ಈ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಮಾಡಿದ್ದ ಮನವಿಗೆ ಸ್ಪಂದಿಸಿರುವ ಡಿ.ಕೆ. ಶಿವಕುಮಾರ್ ಅನುದಾನ ಬಿಡುಗಡೆಗೆ ಸೂಚನೆ ನೀಡಿದ್ದಾರೆ. ಕಾವೇರಿ ತೀರ್ಥೋದ್ಭವವು ಕೊಡಗಿನ …
Read More »ಭೀಮಾ ನದಿಯಲ್ಲಿ ಸ್ನಾನ ಮಾಡಲು ಹೋದ ಯುವಕ ನಾಪತ್ತೆ
ಯಾದಗಿರಿ: ಭೀಮಾ ನದಿಯಲ್ಲಿ ಸ್ನಾನ ಮಾಡಲು ಹೋದ ಯುವಕ ನಾಪತ್ತೆಯಾಗಿರುವ ಘಟನೆ ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದ ಹೊರಭಾಗದಲ್ಲಿ ನಡೆದಿದೆ. ರಂಗಯ್ಯ (21) ನಾಪತ್ತೆಯಾದ ಯುವಕ. ಬೆಳೆಗೆ ಕ್ರಿಮಿನಾಶಕ ಸಿಂಪಡಣೆ ಮಾಡಿ ಸ್ನೇಹಿತರ ಜೊತೆ ಸ್ನಾನಕ್ಕೆ ತೆರಳಿದಾಗ ದುರ್ಘಟನೆ ಸಂಭವಿಸಿದೆ. ನಾಲ್ಕು ಜನ ಸ್ನೇಹಿತರು ನದಿಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಕಾಲು ಜಾರಿ ಬಿದ್ದ ಮೂವರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ನಾಪತ್ತೆಯಾದ ಇನ್ನೋರ್ವ ಯುವಕನಿಗಾಗಿ ಶೋಧ ಕಾರ್ಯ …
Read More »ಇನ್ಸ್ಟಾ ಪ್ರೇಯಸಿಗೆ ಎಂಗೇಜ್ಮೆಂಟ್; ಆರನೇ ಮಹಡಿಯಿಂದ ಜಿಗಿಯಲು ಮುಂದಾದ ಅಪ್ರಾಪ್ತ
ಬೆಂಗಳೂರು: ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿದ್ದ ಯುವತಿಗೆ ಎಂಗೇಜ್ಮೆಂಟ್ ಆಗಿದೆ ಎಂಬ ವಿಚಾರ ತಿಳಿದು ಅಪ್ರಾಪ್ತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಬೇಗೂರು ಬಳಿಯ ಅಕ್ಷಯ ನಗರದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತನಿಗೆ ಇನ್ಸ್ಟಾಗ್ರಾಮ್ ಮೂಲಕ ಯುವತಿಯ ಪರಿಚಯವಾಗಿತ್ತು. ಕಳೆದ ಮೂರು ತಿಂಗಳಿನಿಂದ ಇಬ್ಬರೂ ಫೋನ್ನಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಆದರೆ, ನಿನ್ನೆ ಸಂಜೆ ಯುವತಿ ಕರೆ ಮಾಡಿ, ನನಗೆ ಎಂಗೇಜ್ಮೆಂಟ್ ಆಗಿದೆ. ಇನ್ಮುಂದೆ ಫೋನ್ ಮಾಡಬೇಡ ಎಂದು ಹೇಳಿದ್ದಾಳೆ. ಇದರಿಂದ ಬೇಸರಗೊಂಡು ಬಾಲಕ …
Read More »ಕೋಲಾರದಲ್ಲಿ 1,71,034 ಮತದಾರರು ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೆ: ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್
ಕೋಲಾರ: ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಪೂರ್ಣಗೊಂಡಿದ್ದು, ಈ ಹಿಂದೆ ಜಿಲ್ಲೆಯಲ್ಲಿ 12,95,265 ಮತದಾರರಿದ್ದರು. ಈ ಪೈಕಿ ಎಸ್ಐಆರ್ ಪ್ರಕ್ರಿಯೆ ಬಳಿಕ 1,71,034 ಮತದಾರರು ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ತಿಳಿಸಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯದಮದರೊಂದಿಗೆ ಮಾತನಾಡಿದ ಅವರು, ಸದ್ಯ ಜಿಲ್ಲೆಯಲ್ಲಿ 11,24,231 ಮತದಾರರು ಕರಡು ಪಟ್ಟಿಯಲ್ಲಿದ್ದು, ಇವರಲ್ಲಿ 5,58,680 ಪುರುಷರು, 5,65,461 ಮಹಿಳೆಯರು ಹಾಗೂ 90 ಮಂದಿ ಇತರ …
Read More »ರಾಜ್ಯದ 224 ಕ್ಷೇತ್ರಗಳಲ್ಲಿ ಅಂತರ್ಜಲ ಹೆಚ್ಚಳಕ್ಕೆ ಶಿರಪುರ ಮಾದರಿ: ಅಜಯ್ ಸಿಂಗ್
ಕಲಬುರಗಿ: ರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆ, ಏತ ನೀರಾವರಿ ಯೋಜನೆ, ಬ್ರಿಡ್ಜ್ ಕಮ್ ಬ್ಯಾರೇಜ್, ಸರಣಿ ಚೆಕ್ ಡ್ಯಾಂ, ಗೋಕಟ್ಟಾ ನಿರ್ಮಾಣ ಸೇರಿದಂತೆ ಮಹಾರಾಷ್ಟ್ರದ ಶಿರಪುರ ಮಾದರಿಯಲ್ಲಿ ಅಂತರ್ಜಲ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ಹೇಳಿದರು. ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಅವರು, ಕೆಕೆಆರ್ಡಿಬಿ ಮಂಡಳಿ ಸಭಾಂಗಣದಲ್ಲಿ …
Read More »ಅವ್ರು IAS ಮಾಡಿದ್ರೆ ಜನ ನನ್ನನ್ನು 6 ಬಾರಿ ಶಾಸಕನನ್ನಾಗಿ ಮಾಡಿದ್ದಾರೆ: ಹಾಸನ ಡಿಸಿ ವಿರುದ್ಧ ರೇವಣ್ಣ ಕಿಡಿ
ಹಾಸನ: ಅವರು ಐಎಎಸ್ ಮಾಡಿದ್ರೆ ನನ್ನನ್ನು ಜನ ಆರು ಬಾರಿ ಗೆಲ್ಲಿಸಿ ಶಾಸಕನನ್ನಾಗಿ ಮಾಡಿದ್ದಾರೆ ಎಂದು ಹಾಸನ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಜಿಲ್ಲಾಧಿಕಾರಿ ಲತಾಕುಮಾರಿ ಅವರ ವಿರುದ್ಧ ಕಿಡಿಕಾರಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಾನು ಆರ್ಟಿಐನಲ್ಲಿ ಮೀಸಲಾತಿ ಪಟ್ಟಿ ತೆಗೆದುಕೊಂಡಿದ್ದೇನೆ. ಅವರಿಗೆ ವೈಯುಕ್ತಿಕ ಪೋನ್ ಕರೆ ಮಾಡಿದ್ದೇನೆ, ಅವರು ರಿಸೀವ್ ಮಾಡಿಲ್ಲ. ಜನಕ್ಕೆ ನೋವಾದಾಗ ನಾನು ಮಾತನಾಡಲೇಬೇಕು ಎಂದರು. ತಹಶೀಲ್ದಾರ್ ಯಾವ …
Read More »ಕಂಟ್ರಾಕ್ಟರ್ ಆಗಿ ಅದಾನಿ ಸಿಎಂ ಭೇಟಿಯಾಗಿದ್ದಾರೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸರ್ಕಾರಿ ಕಂಟ್ರಾಕ್ಟರ್ ಆಗಿ ಗೌತಮ್ ಅದಾನಿ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಿಎಂ-ಅದಾನಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದಾನಿ ಬಗ್ಗೆ ನಮ್ಮ ಅಭಿಪ್ರಾಯ ಏನೇ ಇರಬಹುದು. ನಮ್ಮ ಚಿತ್ತಾಪುರದಲ್ಲಿ ಎಸಿಸಿ ಸಿಮೆಂಟ್ ಫ್ಯಾಕ್ಟರಿ ಖರೀದಿ ಮಾಡಿದ್ದಾರೆ. ನಾನೇನಾದರೂ ಮಾಡಲು ಆಗುತ್ತಾ? ಕಾನೂನು ಪಾಲನೆ ಮಾಡಬೇಕು ಅಷ್ಟೇ. ಸಿಎಂ ಅವರನ್ನು ಭೇಟಿಯಾಗುವುದರಲ್ಲಿ ಏನಿದೆ ಎಂದು ಪ್ರಶ್ನಿಸಿದರು. ಅವರು …
Read More »
Laxmi News 24×7