Breaking News

ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಯಲಹಂಕದಲ್ಲಿ  ನಡೆದಿದ್ದು, ಪತಿ  ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಶೃತಿ (22) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿವಾಹಿತೆ. ಪತಿ ಪವನ್ ಕಲ್ಯಾಣ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಪವನ್ ಕಲ್ಯಾಣ್ ಕುಟುಂಬದವರಿಂದ ನಿರಂತರ ವರದಕ್ಷಿಣೆ ಕಿರುಕುಳ ಆರೋಪವನ್ನು ಶೃತಿ ಕುಟುಂಬಸ್ಥರು ಹೊರಿಸಿದ್ದಾರೆ. ವರದಕ್ಷಿಣೆ ಕಿರುಕುಳ ಹಿನ್ನೆಲೆ ಶೃತಿ ಹಾಗೂ ಪತಿ ಕುಟುಂಬಸ್ಥರ ನಡುವೆ ಕಲಹ …

Read More »

ಅಕ್ರಮ ಸಿಲಿಂಡರ್‌ ದಾಸ್ತಾನು 4 ಕೇಸ್‌ ದಾಖಲು

ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್‌ನಿಂದ ಭಾರತದಲ್ಲಿ ಎಲ್‌ಪಿಜಿ   ಕೊರತೆ ಎದುರಾಗಿದೆ. ಅಕ್ರಮ ಸಿಲಿಂಡರ್‌ ದಾಸ್ತಾನು, ಬ್ಲಾಕ್‌ನಲ್ಲಿ ಹೆಚ್ಚಿನ ಬೆಲೆಗೆ ಸಿಲಿಂಡರ್‌ ಮಾರಾಟ ಹಾವಳಿ ಹೆಚ್ಚಾಗುತ್ತಿದೆ. ಬೆಂಗಳೂರಲ್ಲಿ ಅಕ್ರಮ ಸಿಲಿಂಡರ್‌ ದಾಸ್ತಾನು ಮಾಡಿದ್ದಕ್ಕೆ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪೀಣ್ಯ, RMC ಯಾರ್ಡ್, ಕೆಂಗೇರಿ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗಾಟಗಾರರು ಅಕ್ರಮವಾಗಿ ಸಿಲಿಂಡರ್‌ ದಾಸ್ತಾನು ಮಾಡಿದ್ದರು. ಬೆಂಗಳೂರಲ್ಲಿ ಎಲ್‌ಪಿಜಿ ಅಭಾವದಿಂದ ಹೋಟೆಲ್‌ ಉದ್ಯಮಕ್ಕೆ ಭಾರಿ ಪೆಟ್ಟು ಬಿದ್ದಿದೆ. ಹಲವೆಡೆ …

Read More »

3.23 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಪೂಜೆ ನೆರವೇರಿಸಿ ಚಾಲನೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುವೆಂಪು ನಗರದ ಕೆ.ಎಲ್.ಇ ಇಂಟರ್ನ್ಯಾಷನಲ್ ಸ್ಕೂಲ್ ನ ಮುಖ್ಯ ರಸ್ತೆ ಹಾಗೂ ಜಯನಗರದ ಪ್ರಮುಖ ರಸ್ತೆಗಳ ನಿರ್ಮಾಣಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸುಮಾರು 3.23 ಕೋಟಿ ರೂ.ಗಳ ವೆಚ್ಚದಲ್ಲಿ ರಸ್ತೆಗಳು ನಿರ್ಮಾಣಗೊಳ್ಳಲಿವೆ. ನಿಗದಿತ ಸಮಯದಲ್ಲಿ, ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ವೇಳೆ ಸ್ಥಳೀಯ ನಿವಾಸಿಗಳು …

Read More »

ನವೀಕೃತ ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನ ಉದ್ಗಾಟಿಸಿದ :ಸಚಿವ‌ ಪ್ರಿಯಾಂಕ್ ಖರ್ಗೆ

ಕಲಬುರಗಿ : ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ಥಳೀಯ ಶಾಸಕ ಡಾ.ಅವಿನಾಶ ಜಾಧವ ಅವರೊಂದಿಗೆ ಅರಣ್ಯ ಇಲಾಖೆಯಿಂದ ಚಿಂಚೋಳಿ ಬಳಿಯ ಪೋಲಕಪಲ್ಲಿಯಲ್ಲಿ ಸುಮಾರು 1.30 ಕೋಟಿ ರೂ.‌ ವೆಚ್ಚದಲ್ಲಿ ನವೀಕೃತ ಸಾಲು ಮರದ ತಿಮ್ಮಕ್ಕ ವೃಕ್ಷವನ ಇಂದು  (ಶನಿವಾರ) ಉದ್ಘಾಟಿಸಿದರು. ನಂತರ ಅಧಿಕಾರಿಗಳೊಂದಿಗೆ ವನದಲ್ಲಿ ಒಂದು ಸುತ್ತು ಹಾಕಿ ವಿವಿಧ ಸಸ್ಯ ರಾಶಿಗಳನ್ನು ವೀಕ್ಷಿಸಿದರು. ಲೋಟಸ್ ಎಕೋ ಪಾಂಡ್ ಬಳಿ ಪೋಟೋ ಗೆ ಪೋಸ್ ನೀಡಿದರು. ಇದೇ …

Read More »

ಎರಡು ದಿನಗಳ ಉಚಿತ ಶ್ರವಣ ಪರೀಕ್ಷಾ ಶಿಬಿರ

ಬೆಳಗಾವಿ: ಯುಗಾದಿ ಹಬ್ಬದ ಅಂಗವಾಗಿ ವಿಶ್ವ ಸ್ಪೀಚ್ ಆ್ಯಂಡ್ ಹಿಯರಿಂಗ್ ಎಯ್ಡ್ ಸೆಂಟರ್ ವತಿಯಿಂದ ಮಾ.15 ಮತ್ತು 16ರಂದು ಬೆಳಗ್ಗೆ 10.30ರಿಂದ ಸಂಜೆ 6.30ರ ವರೆಗೆ ನಗರದ ಛತ್ರಪತಿ ಶಿವಾಜಿ ರಸ್ತೆಯಲ್ಲಿರುವ ರೇಡಿಯೋ ಕಾಂಪ್ಲೆಕ್ಸ್‌ದಲ್ಲಿ ಉಚಿತ ಶ್ರವಣ ಪರೀಕ್ಷಾ ಶಿಬಿರ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಎಲ್ಲ ವಯೋಮಾನದವರಿಗೂ ಉಚಿತವಾಗಿ ಕಿವಿ ಕೇಳುವಿಕೆ (ಶ್ರವಣ) ಪರೀಕ್ಷೆ ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಶ್ರವಣ ಸಮಸ್ಯೆಗಳು ಕಂಡು ಬರುತ್ತಿದೆ. ಮಕ್ಕಳಿಂದ ವಯೋವೃದ್ಧರ ತನಕ ಕಡಿಮೆ …

Read More »

ಬೈಕ್ ಅಪಘಾತ ಯುವಕ ಬಲಿ

ಚಿಕ್ಕೋಡಿ : ರಸ್ತೆಯಲ್ಲಿ ಗುಂಡಿ ತಪ್ಪಿ ಹೋಗಿ ಮುಂದೆ ಬರುತ್ತಿದ್ದ ಇನ್ನೊಂದು ಬೈಕ್‌ಗೆ ಪರಸ್ಪರ ಡಿಕ್ಕಿಯಾದ ಪರಿಣಾಮ ವಡ್ರಾಳ ಗ್ರಾಮದ ನಿವಾಸಿ ಸತೀಶ ಬಾಳೇಶ ಪಾಟೀಲ(೨೩) ಮೃತನಾಗಿದ್ದರೆ, ಇನ್ನೋರ್ವ ಬೈಕ್ ಸವಾರ ಹಾಲಟ್ಟಿ ನಿವಾಸಿ ರೋಹಣ ಸುಕ್ಕುನಟ್ಟಿ ಗಂಭೀರ ಘಟನೆ ಗೋಟುರ- ವಿಜಯಪುರ ರಾಷ್ಟ್ರೀಯ ಹೆದ್ದಾರಿ 548ಬಿಯಲ್ಲಿನ ಹತ್ತರವಾಟ ಗೇಟ್ ಬಳಿ ಶನಿವಾರ ನಡೆದಿದೆ. ಮೃತ ಯುವಕ ಸತೀಶ ಪಾಟೀಲ ವಡ್ರಾಳಿ ಕಡೆಯಿಂದ ಚಿಕ್ಕೋಡಿ ಕಡೆಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ ಈ …

Read More »

ಚಿಲಬಾವಿಯ ಅಕ್ರಮ ಮರಳು ಅಡ್ಡೆ ಮೇಲೆ ಸಿಪಿಐ ಜಾವೀದ್ ಮುಶಾಪುರೆ ನೇತೃತ್ವದಲ್ಲಿ ದಾಳಿ: 110 ಮೆಟ್ರಿಕ್ ಟನ್ ಮರಳು ಜಪ್ತಿ

ಬೆಳಗಾವಿ ಜಿಲ್ಲೆಯ ಚಿಲಬಾವಿ ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಮರಳು ಅಡ್ಡೆಯ ಮೇಲೆ ವಿವಿಧ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಸಂಜೆ ನಡೆದ ಈ ದಿಢೀರ್ ದಾಳಿಯಲ್ಲಿ ಬರೋಬ್ಬರಿ 110 ಮೆಟ್ರಿಕ್ ಟನ್ ಮರಳನ್ನು ವಶಪಡಿಸಿಕೊಳ್ಳಲಾಗಿದ್ದು, ಅಕ್ರಮ ದಂಧೆಕೋರರಿಗೆ ಬಿಸಿ ಮುಟ್ಟಿಸಲಾಗಿದೆ. ​ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಬಾವಿ ಗ್ರಾಮದ ಹದ್ದಿಯಲ್ಲಿ ಅಕ್ರಮ ಮರಳು ಸಂಗ್ರಹದ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ, ಇಂದು ಸಂಜೆ 5 ಗಂಟೆ …

Read More »

ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ

 ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇಲ್ಲಿಯವರೆಗೆ 150ಕ್ಕೂ ಅಧಿಕ ದೇವಸ್ಥಾನ ನಿರ್ಮಾಣ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಗರದಲ್ಲಿ ಶನಿವಾರ ಉಚಗಾಂವ್ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು  ಕೇವಲ ಹಿಂದುತ್ವದ ಭಾಷಣ ಮಾಡುತ್ತಾರೆ. ಹಿಂದುತ್ವಕ್ಕಾಗಿ ಏನು ಮಾಡಿದ್ದಾರೆ?ಅವರಿಗೆ ಅಧಿಕಾರ ಮಾತ್ರ ಬೇಕಾಗಿದೆ. ಹಿಂದು – ಮುಸ್ಲಿಂ, …

Read More »

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

ರಾಮನಗರ: ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರೋ ಒಡಿಶಾದ ಕಾಂಗ್ರೆಸ್‌ ಶಾಸಕರನ್ನು ಭೇಟಿ ಮಾಡಲು ರೆಸಾರ್ಟ್‌ಗೆ ಬಂದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವೀರಪ್ಪನ್ ಪುತ್ರಿ ವಿದ್ಯಾರಾಣಿ ಭೇಟಿ ಮಾಡಿದ್ದಾರೆ‌. ಶಿವಕುಮಾ‌ರ್ ಅವರು ರೆಸಾರ್ಟ್‌ಗೆ ಬರುವುದಕ್ಕೆ ಮುಂಚೆಯೇ ವಿದ್ಯಾ ತಮ್ಮ ಬೆಂಬಲಿಗರೊಂದಿಗೆ ಬಂದು ಕಾಯುತ್ತಾ ಕುಳಿತಿದ್ದರು. ಡಿಸಿಎಂ ಬಂದು ಕಾರಿನಿಂದ ಇಳಿಯುತ್ತಿದ್ದಂತೆಯೇ ಸ್ಥಳೀಯ ಕಾಂಗ್ರೆಸ್ ನಾಯಕರು ಅವರನ್ನು ಮುತ್ತಿಕೊಂಡರು. ಇದೇ ವೇಳೆ, ಮುಖಂಡರೊಬ್ಬರು ವಿದ್ಯಾ ಅವರನ್ನು ಡಿಸಿಎಂ ಬಳಿ ಕರೆದು …

Read More »

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

ಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ  ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದ ಐವರನ್ನು ಬಂಧಿಸಿದ್ದಾರೆ. …

Read More »