Breaking News

ಬೆಳಗಾವಿ ಜಿಲ್ಲೆಯ ಹಳ್ಳಿಗಳಲ್ಲಿ ಬೀಜೋಪಚಾರ ಆಂದೋಲನ

ಬೆಳಗಾವಿ: ಈ ಬಾರಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 7,52,312 ಹೆಕ್ಟೇರ್‌ ಬಿತ್ತನೆ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕಾಗಿ 37,543 ಕ್ವಿಂಟಲ್‌ನಷ್ಟು ವಿವಿಧ ಬೀಜಗಳು ಹಾಗೂ 1,27,413 ಮೆಟ್ರಿಕ್‌ ಟನ್‌ನಷ್ಟು ರಸಗೊಬ್ಬರಗಳ ಬೇಡಿಕೆ ಬಂದಿದೆ. ಕಳೆದ ಬಾರಿ ಕೂಡ ಇಷ್ಟೇ ಪ್ರಮಾಣದ ಬಿತ್ತನೆ ಗುರಿ ಹಾಗೂ ಬೀಜಗಳ ಬೇಡಿಕೆ ಇತ್ತು. ಆದರೆ, ಈ ಬಾರಿ ರಸಗೊಬ್ಬರ ಬೇಡಿಕೆ ಯಥೇಚ್ಚವಾಗಿ ಏರಿದೆ. ಈ ಬಾರಿ ವಿಶೇಷವಾಗಿ ಕೃಷಿ ಇಲಾಖೆಯಿಂದ ಬೀಜೋಪಚಾರ ಆಂದೋಲನ ಮಾಡಲಾಗುತ್ತಿದೆ. ಪ್ರತಿ …

Read More »

ಯಲ್ಲಮ್ಮನಗುಡ್ಡ ಕ್ಷೇತ್ರ; ಸಸಿ ನೆಟ್ಟು, ಪೋಷಿಸಲು ಶಾಸಕ ವಿಶ್ವಾಸ್ ವೈದ್ಯ ಕರೆ

ಉಗರಗೋಳ: ‘ರೇಣುಕಾ ಯಲ್ಲಮ್ಮನ ಕ್ಷೇತ್ರ ಬಂಡೆಗಲ್ಲುಗಳಿಂದ ಕೂಡಿರುವ ಪ್ರದೇಶ. ಇಲ್ಲಿ ಸಸಿ ನೆಟ್ಟು ಪೋಷಿಸುವುದು ಸವಾಲಿನ ಕೆಲಸ. ಹೀಗಾಗಿ ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸಲು ಶ್ರಮಿಸಬೇಕು’ ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷ, ಶಾಸಕ ವಿಶ್ವಾಸ್ ವೈದ್ಯ ಹೇಳಿದರು. ಯಲ್ಲಮ್ಮನ ಗುಡ್ಡದಲ್ಲಿ ಶನಿವಾರ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ, ಭದ್ರತಾ ಕೊಠಡಿಯ ಉದ್ಘಾಟನೆ, ಯಲ್ಲಮ್ಮನ ಗುಡ್ಡದ ಸೌಂದರ್ಯೀಕರಣ, ನೆರಳಿನ …

Read More »

ನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ: ಸಂಕೇಶ್ವರ ಬಂದ್‌ಗೆ ಉತ್ತಮ ಸ್ಪಂದನೆ

ಸಂಕೇಶ್ವರ: ಹುಕ್ಕೇರಿ ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆ ‘ಸಂಕೇಶ್ವರ ಬಂದ್’ ಕರೆಗೆ ಉತ್ತಮ ಸ್ಪಂದನೆ ದೊರೆಯಿತು. ನೀರಾವರಿ ಸೌಲಭ್ಯಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಲ್ಲಿನ ವರ್ತಕರು ಸಹಮತ ಸೂಚಿಸಿ, ಶನಿವಾರ ಬೆಳಿಗ್ಗೆಯಿಂದಲೇ ಪಟ್ಟಣದ ಅಂಗಡಿ- ಮುಂಗಟ್ಟು ಹಾಗೂ ಉದ್ಯಮಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚುವ ಮೂಲಕ ವ್ಯಾಪಾರಸ್ಥರು ರೈತರಿಗೆ ಸಾಥ್ ನೀಡಿದರು. ನೀರಾವರಿ ಸೌಲಭ್ಯಕ್ಕಾಗಿ ರೈತರು …

Read More »

ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಹೋರಾಟ: 12 ಕಾಂಗ್ರೆಸ್‌ ಸದಸ್ಯರು ರಾಜೀನಾಮೆ

ಧಾರವಾಡ: ‘ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ರಾಜ್ಯಪಾಲರು ಅನುಮೋದನೆ ನೀಡಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದ್ದು, ಪಾಲಿಕೆಯ 12ಕಾಂಗ್ರೆಸ್‌ ಸದಸ್ಯರು (ಒಬ್ಬರು ನಾಮನಿರ್ದೇಶಿತ ಸದಸ್ಯರು) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬ್ಲಾಕ್‌ (ವಿಧಾನಸಭಾ ಕ್ಷೇತ್ರ 71 ಮತ್ತು 74) ಕಾಂಗ್ರೆಸ್‌ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಎರಡನೇ ವಾರ್ಡ್‌ನ ಸದಸ್ಯೆ ಸೂರವ್ವ ಪಾಟೀಲ, ನಾಲ್ಕನೇ ವಾರ್ಡ್‌ನ ರಾಜಶೇಖರ ಕಮತಿ, 6ನೇ ವಾರ್ಡ್‌ನ …

Read More »

ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ದೆಹಲಿ: ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಕಳವಳ ಹಾಗೂ ಆಘಾತ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪ್ರಧಾನಿ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಘೋಷಿಸಿದ್ದಾರೆ. ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯ (PMO) ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಧಾನಿಯವರ ಸಂದೇಶವನ್ನು ಉಲ್ಲೇಖಿಸಿದೆ: “ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ …

Read More »

ಸುವರ್ಣಸೌಧದಲ್ಲೇ ಈ ಬಾರಿ ಮುಂಗಾರು ಅಧಿವೇಶನ?; ಜಿಲ್ಲಾಡಳಿತದಿಂದ ಭರ್ಜರಿ ಸಿದ್ಧತೆ!

ಬೆಳಗಾವಿ: ಪ್ರತಿ ವರ್ಷ ಚಳಿಗಾಲದಲ್ಲಿ ಮಾತ್ರ ಅಧಿವೇಶನ ಕಾಣುತ್ತಿದ್ದ ಬೆಳಗಾವಿಯ ಸುವರ್ಣಸೌಧ, ಈ ಬಾರಿ ಮುಂಗಾರು ಅಧಿವೇಶನಕ್ಕೆ ಸಾಕ್ಷಿಯಾಗುವುದು ಬಹುತೇಕ ಪಕ್ಕಾ ಆಗಿದೆ. ಡಿಸೆಂಬರ್ ತಿಂಗಳ ಚಳಿ, ವಸತಿ ಸೌಕರ್ಯ ಹಾಗೂ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು ಸರ್ಕಾರ ಈ ಹೊಸ ಪ್ಲ್ಯಾನ್ ಮಾಡಿದ್ದು, ಬೆಳಗಾವಿಯಲ್ಲೇ ಮುಂಗಾರು ಅಧಿವೇಶನ ನಡೆಸಲು ತೀರ್ಮಾನಿಸಿದೆ ಎನ್ನಲಾಗಿದೆ. ಅಧಿವೇಶನ ನಡೆಸುವ ಕುರಿತು ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ನಡೆಯುತ್ತಿರುವುದರಿಂದ, ಬೆಳಗಾವಿ ಜಿಲ್ಲಾಡಳಿತ ಕೂಡ ಈಗಿನಿಂದಲೇ ಎಚ್ಚೆತ್ತುಕೊಂಡಿದೆ. ಬೆಳಗಾವಿ …

Read More »

ಇಂದಿನಿಂದಲೇ ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಲಿದ್ದೇವೆ: ಬಾಲಚಂದ್ರ ಜಾರಕಿಹೊಳಿ

ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಏನೇ ಗಲಾಟೆಗಳಿದ್ದರೂ ಅವು ಇತ್ಯರ್ಥವಾಗಲಿವೆ. ಇಂದಿನಿಂದಲೇ ಎಲ್ಲರೂ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮರೆತು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಲಿದ್ದೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ನಬಿನ್ ಅವರು ರಾಜ್ಯ ನಾಯಕರ ಜತೆ ಪ್ರಮುಖ ಸಂಘಟನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕರು ಯಾರಿಗೆ ಏನು ಹೇಳಬೇಕೋ ಅದನ್ನ ಹೇಳಿದ್ದಾರೆ. ರಾಷ್ಟ್ರೀಯ …

Read More »

ಸಂತೆಯಲ್ಲಿ ನುಗ್ಗಿ ಕಳ್ಳತನ: ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನರು

ಗ್ರಾಮದಲ್ಲಿ  ವಾರದ ಸಂತೆಯ ವೇಳೆ ಜನಜಂಗುಳಿಯಲ್ಲಿ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಅಂತರರಾಜ್ಯ ಕಳ್ಳರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಶಮನವಾಡಿ ಗ್ರಾಮದಲ್ಲಿ ಎಂದಿನಂತೆ ವಾರದ ಸಂತೆ ನಡೆದಿತ್ತು. ಈ ವೇಳೆ ಸಾರ್ವಜನಿಕರ ಜನಸಂದಣಿಯನ್ನು ದುರುಪಯೋಗಪಡಿಸಿಕೊಂಡು ಜೇಬುಗಳ್ಳತನ ಹಾಗೂ ಸರಗಳ್ಳತನ ಮಾಡಲು ಯತ್ನಿಸುತ್ತಿದ್ದ ಐವರು ಕಳ್ಳರನ್ನು ಸ್ಥಳೀಯರು ಒಟ್ಟಿಗೆ ಸೇರಿಸಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಂತೆ ಮೈದಾನಕ್ಕೆ ಧಾವಿಸಿದ ಸದಲಗಾ ಠಾಣೆಯ ಪೊಲೀಸರು, ಆರೋಪಿಗಳನ್ನು ತಮ್ಮ ವಶಕ್ಕೆ …

Read More »

ಬೆಳಗಾವಿಯಲ್ಲಿ ಯುವಕನ ಭೀಕರ ಕೊಲೆ: ಆರೋಪಿಗಳು ಅರೆಸ್ಟ್

ಬೆಳಗಾವಿ: ಶನಿವಾರ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ವಡ್ಡರ ಓಣಿಯ ಕಳಸನ್ನವರ ಪ್ಲಾಟ್‌ನಲ್ಲಿ ನಡೆದಿದ್ದ ಯುವಕನ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು 24 ಗಂಟೆಯಲ್ಲೇ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಲಕ್ಷ್ಮಣ ಬಂಡಿವಡ್ಡರ (22) ಕೊಲೆಯಾದ ದುರ್ದೈವಿ. ಆರೋಪಿಗಳು ತಿಮ್ಮಣ್ಣನಿಗೆ ಚೂರಿಯಿಂದ ಬರ್ಬರವಾಗಿ ಇರಿದು ಪರಾರಿಯಾದ ತಕ್ಷಣ, ಆತ ರಕ್ತದ ಮಡುವಿನಲ್ಲೇ ಬಿದ್ದೂ ತನ್ನ ಸಂಬಂಧಿಕರ ಮನೆಗೆ ಫೋನ್ ಕರೆ ಮಾಡಿದ್ದನು. “ನನಗೆ ಯಾರೋ ಚಾಕು ಇರಿದಿದ್ದಾರೆ ಬನ್ನಿ” ಎಂದಿದ್ದಾನೆ. …

Read More »

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ರಾಷ್ಟ್ರೀಯ ಅಧ್ಯಕ್ಷರಿಂದ ಸಲಹೆ: ಸಿ.ಟಿ ರವಿ

ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್  ಅವರು ಸಲಹೆ ಮತ್ತು ಸೂಚನೆಗಳನ್ನು ನೀಡಿದರು ಎಂದು ಮಾಜಿ ಸಚಿವ ಸಿ.ಟಿ.ರವಿ  ಅವರು ಹೇಳಿದ್ದಾರೆ. ನಿತಿನ್ ನಬಿನ್ ಅವರೊಂದಿಗೆ ನಡೆದ ಸಭೆಯ ನಂತರ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‍ನ ವೈಫಲ್ಯಗಳನ್ನು ಜನರಿಗೆ ಎತ್ತಿತೋರಿಸಿ ಬಿಜೆಪಿ ವಿಶ್ವಾಸಾರ್ಹ ಪಕ್ಷ …

Read More »