Breaking News

ಅಂಬೋಲಿ ಕಣಿವೆಯಲ್ಲಿ ಕಣ್ಮರೆಯಾದ ನಿಪ್ಪಾಣಿ ವೈದ್ಯ: ತೀವ್ರಗೊಂಡ ಶೋಧ ಕಾರ್ಯಾಚರಣೆ

ಚಿಕ್ಕೋಡಿ: ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣವಾದ ಅಂಬೋಲಿಯ ಮಹಾದೇವಗಢ ಪಾಯಿಂಟ್‌ನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ನಿಪ್ಪಾಣಿ ತಾಲೂಕಿನ ಪ್ರಸಿದ್ಧ ವೈದ್ಯ ಡಾ. ಅಯೂಬ್ ಸಯ್ಯದ್ (೪೬) ಅವರು ಆಳವಾದ ಕಣಿವೆಗೆ ಬಿದ್ದು ಕಣ್ಮರೆಯಾಗಿದ್ದಾರೆ. ನಿಪ್ಪಾಣಿ ತಾಲೂಕಿನ ಜತ್ರಾಟ್ ನಿವಾಸಿಯಾಗಿರುವ ಡಾ. ಅಯೂಬ್ ಸಯ್ಯದ್ ಅವರು ಮಂಗಳವಾರ (ಆಗಸ್ಟ್ ೪) ತಮ್ಮ ಸ್ನೇಹಿತರೊಡನೆ ಅಂಬೋಲಿಗೆ ಪ್ರವಾಸ ಕೈಗೊಂಡಿದ್ದರು. ಸಂಜೆ ಸುಮಾರು ೫:೩೦ರ ಸುಮಾರಿಗೆ ಮಹಾದೇವಗಢ ಪಾಯಿಂಟ್‌ನಲ್ಲಿ ಸ್ನೇಹಿತರೊಂದಿಗೆ …

Read More »

ಧಾರವಾಡಗೆ ಬರುತ್ತಿದಂತೆ ಲಾಡ್‌ ಅವರಿಗೆ ರೈತರ ಪ್ರತಿಭಟನೆ ಬಿಸಿ

ಧಾರವಾಡಗೆ ಬರುತ್ತಿದಂತೆ ಲಾಡ್‌ ಅವರಿಗೆ ರೈತರ ಪ್ರತಿಭಟನೆ ಬಿಸಿ…. ಬರ ಜಿಲ್ಲೆಯೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ರೈತರಿಂದ ನೂತನ ಸಚಿವ ಸಂತೋಷ ಲಾಡ್‌ಗೆ ಮನವಿ. ಸಿಎಂ ಡಿಕೆಶಿಯವರ ಕ್ಯಾಬಿನೆಟ‌ನಲ್ಲಿ ಮಂತ್ರಿ ಸ್ಥಾನ ಪಡೆದುಕೊಂಡ ಬಳಿಕ ಮೊದಲ‌ ಬಾರಿಗೆ ಧಾರವಾಡ‌ಗೆ ಸಚಿವ ಸಂತೋಷ ಲಾಡ್ ಅವರು ಭೇಟಿ ನೀಡುತ್ತಿದಂತೆ, ಲಾಡ್ ಅವರಿಗೆ ರೈತರ ಪ್ರತಿಭಟನೆ ಬಿಸಿ ತಟ್ಟಿದೆ. ಹೌದು… ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಇಂದು ಧಾರವಾಡಗೆ ಮೊದಲ ಬಾರಿ ಆಗಮಿಸಿದ …

Read More »

ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಸಚಿವ ಸ್ಥಾನ ನೀಡುವಂತೆ ಪಂಜಿನ ಮೆರವಣಿಗೆ.

ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಸಚಿವ ಸ್ಥಾನ ನೀಡುವಂತೆ ಪಂಜಿನ ಮೆರವಣಿಗೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದ ಪ್ರತಿಭಟನೆ. ಕಾಂಗ್ರೇಸ್ ಮುಖಂಡ ಅಡಿವೇಶ ಇಟಗಿ ನೇತೃತ್ವದಲ್ಲಿ ಪ್ರತಿಭಟನೆ. ಹಿರೇಬಾಗೇವಾಡಿ ಬಸವೇಶ್ವರ ವೃತ್ತದಿಂದ ರಾಷ್ಟ್ರೀಯ ಹೆದ್ದಾರಿವರೆಗೆ ಪಂಜಿನ ಮೆರವಣಿಗೆ. ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ. ರಾಷ್ಟ್ರೀಯ ಹೆದ್ದಾರಿ ತಡೆಯಲಿಕೆ ಹೊರಟಿದ್ದವರನ್ನ ತಡೆದ ಪೊಲೀಸರು. ರಾಜ್ಯದ ಮಹಿಳಾ ಪ್ರಭಾವಿ ನಾಯಕಿಗೆ ಮಂತ್ರಿ ಸ್ಥಾನ …

Read More »

ಬೆಳಗಾವಿ ಜಿಲ್ಲೆಯ ಜನರಿಗೆ ಕಳೆದ ಕೆಲವು ದಿನಗಳಿಂದ ಆತಂಕ ಉಂಟುಮಾಡಿದ್ದ ಚಿರತೆ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದೆ.

ಬೆಳಗಾವಿ ಜಿಲ್ಲೆಯ ಜನರಿಗೆ ಕಳೆದ ಕೆಲವು ದಿನಗಳಿಂದ ಆತಂಕ ಉಂಟುಮಾಡಿದ್ದ ಚಿರತೆ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದೆ. ಸುತಗಟ್ಟಿ ಸಮೀಪ ಇಂದು, ಆಗಸ್ಟ್ 5, 2026ರಂದು ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದಿದೆ. ಕೆಲವು ದಿನಗಳ ಹಿಂದೆ ಶಿವಾಪುರ, ಹೊಸ ಇದ್ದಲ್ ಹೋಂಡ ಹಾಗೂ ಪರಿಶೆನಟ್ಟಿ ಕ್ರಾಸ್ ಸುತ್ತಮುತ್ತ ಚಿರತೆ ಸಂಚರಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ದೃಶ್ಯಗಳು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದ್ದವು. …

Read More »

ಮಂಗಾಯಿ ದೇವಿ ಜಾತ್ರೆ ವೇಳೆ ಪ್ರಾಣಿ-ಪಕ್ಷಿಗಳ ಬಲಿ ನಿಷೇಧ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ

ಮಂಗಾಯಿ ದೇವಿ ಜಾತ್ರೆ ವೇಳೆ ಪ್ರಾಣಿ-ಪಕ್ಷಿಗಳ ಬಲಿ ನಿಷೇಧ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ : ಬೆಳಗಾವಿ ನಗರದ ವಡಗಾಂವ್‌ನಲ್ಲಿ ಆಗಸ್ಟ್ 11ರಿಂದ ಆರಂಭವಾಗಲಿರುವ ವಾರ್ಷಿಕ ಮಂಗಾಯಿ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ, ದೇವಸ್ಥಾನದ ಆವರಣ ಹಾಗೂ ವಡಗಾಂವ್ ವ್ಯಾಪ್ತಿಯಲ್ಲಿ ಪ್ರಾಣಿ ಹಾಗೂ ಪಕ್ಷಿಗಳ ಬಲಿ ನೀಡುವುದನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿಷೇಧಿಸಿದ್ದಾರೆ. ಈ ಆದೇಶವು ಆಗಸ್ಟ್ 11ರಿಂದ ಜಾತ್ರೆ ಮುಕ್ತಾಯಗೊಳ್ಳುವವರೆಗೆ ಜಾರಿಯಲ್ಲಿರಲಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು …

Read More »

ದಿಗಂಬರ ಪಾಟೀಲ್ ವಿರುದ್ಧ ಕರವೇ ಆಕ್ರೋಶ: ಖಾನಾಪುರದಲ್ಲಿ ಹೆದ್ದಾರಿ ತಡೆದು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ!

ದಿಗಂಬರ ಪಾಟೀಲ್ ವಿರುದ್ಧ ಕರವೇ ಆಕ್ರೋಶ: ಖಾನಾಪುರದಲ್ಲಿ ಹೆದ್ದಾರಿ ತಡೆದು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ! ಸ್ವತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಹಾರಾಷ್ಟ್ರಕ್ಕೆ ಜೈಕಾರ ಕೂಗಿದ ದಿಗಂಬರ ಪಾಟೀಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಖಾನಾಪುರದಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಖಾನಾಪುರ-ಯಲ್ಲಾಪುರ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು, ಘಟನೆಗೆ ತಹಶೀಲ್ದಾರ್ ವಿರುದ್ಧ ಆಕ್ರೋಶ ಹೊರಹಾಕಿ ಕಚೇರಿಗೆ ಮುತ್ತಿಗೆ ಹಾಕಿದರು. ಖಾನಾಪುರ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ …

Read More »

ಬೆಳಗಾವಿಗೆ ಬಂತು ಹೈಟೆಕ್ ‘ಮೊಬೈಲ್ ಫೋರೆನ್ಸಿಕ್ ವ್ಯಾನ್’: ತನಿಖೆಗೆ ವೈಜ್ಞಾನಿಕ ಸ್ಪರ್ಶ!

ಬೆಳಗಾವಿಗೆ ಬಂತು ಹೈಟೆಕ್ ‘ಮೊಬೈಲ್ ಫೋರೆನ್ಸಿಕ್ ವ್ಯಾನ್’: ತನಿಖೆಗೆ ವೈಜ್ಞಾನಿಕ ಸ್ಪರ್ಶ! ಅಪರಾಧ ಪ್ರಕರಣಗಳ ತನಿಖೆಯನ್ನು ಮತ್ತಷ್ಟು ವೈಜ್ಞಾನಿಕ ಹಾಗೂ ಪರಿಣಾಮಕಾರಿಗೊಳಿಸಲು ಪೊಲೀಸ್ ಇಲಾಖೆ ಬಿಗ್ ಸ್ಟೆಪ್ ಇಟ್ಟಿದೆ. ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯದ ಸಹಯೋಗದೊಂದಿಗೆ ಬೆಳಗಾವಿ ನಗರಕ್ಕೂ ಅತ್ಯಾಧುನಿಕ ‘ಮೊಬೈಲ್ ಫೋರೆನ್ಸಿಕ್ ವ್ಯಾನ್’ ಸೇವೆ ಲಭ್ಯವಾಗಿದೆ. ಘಟನಾ ಸ್ಥಳದಲ್ಲೇ ಸಾಕ್ಷ್ಯ ಸಂಗ್ರಹಿಸಲು ಈ ವಾಹನದ ನೆರವಾಗಲಿದೆ. ಅಪರಾಧ ನಡೆದ ಸ್ಥಳದಲ್ಲೇ ವೈಜ್ಞಾನಿಕ ಸಾಕ್ಷ್ಯಗಳನ್ನು ಪತ್ತೆಹಚ್ಚಿ, ಸಂಗ್ರಹಿಸಿ, ಸಂರಕ್ಷಿಸುವ ಉದ್ದೇಶದಿಂದ …

Read More »

ಕೃಷಿ ಅಧಿಕಾರಿ ಹುದ್ದೆ ನೇಮಕಾತಿ ನಿಯಮ ತಿದ್ದುಪಡಿಗೆ ಆಗ್ರಹ; 21ನೇ ದಿನಕ್ಕೆ ಕಾಲಿಟ್ಟ ಕೃಷಿ ವಿವಿ ವಿದ್ಯಾರ್ಥಿಗಳ ಆಕ್ರೋಶ, ಉಪವಾಸ ಸತ್ಯಾಗ್ರಹ ಆರಂಭ!

ಧಾರವಾಡ: ಕೃಷಿ ಅಧಿಕಾರಿ ಹುದ್ದೆ ನೇಮಕಾತಿ ನಿಯಮ ತಿದ್ದುಪಡಿಗೆ ಆಗ್ರಹ; 21ನೇ ದಿನಕ್ಕೆ ಕಾಲಿಟ್ಟ ಕೃಷಿ ವಿವಿ ವಿದ್ಯಾರ್ಥಿಗಳ ಆಕ್ರೋಶ, ಉಪವಾಸ ಸತ್ಯಾಗ್ರಹ ಆರಂಭ! ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಇತರೆ ಇಲಾಖೆ ಹಾಗೂ ವಿಭಿನ್ನ ಪದವೀಧರರಿಗೂ ಅವಕಾಶ ನೀಡಿರುವುದನ್ನು ಖಂಡಿಸಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ಇಂದಿಗೆ 21ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಇದೀಗ ಅಹೋರಾತ್ರಿ ಉಪವಾಸ …

Read More »

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಎದುರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಪುಟ ಸಹೋದ್ಯೋಗಿಗಳಿಗೆ ತಕ್ಷಣವೇ ಫೀಲ್ಡ್‌ಗೆ ಇಳಿಯುವಂತೆ ಸೂಚಿಸಿದ್ದಾರೆ. ತಮಗೆ ವಹಿಸಲಾದ ಜಿಲ್ಲೆಗಳಿಗೆ ತಕ್ಷಣವೇ ಭೇಟಿ ನೀಡಿ, ತಾಲೂಕುವಾರು ಪರಿಶೀಲನೆ ನಡೆಸಿ ನೈಜ ಪರಿಸ್ಥಿತಿಯ ವರದಿಯನ್ನು ಸಲ್ಲಿಸಲು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ಪ್ರಾಕೃತಿಕ ವಿಕೋಪ ಮತ್ತು ಬರ ಸನ್ನಿವೇಶದ …

Read More »

ಗೋವಾ ಚುನಾವಣೆಗೆ ಕಾಂಗ್ರೆಸ್‌ನಿಂದ ಬಿಗ್ ಪ್ಲಾನ್: ಮೈತ್ರಿ ಸಮಿತಿಗೆ ಡಾ. ಅಂಜಲಿ ನಿಂಬಾಳ್ಕರ್ ನೇಮಕ!

ಗೋವಾ ಚುನಾವಣೆಗೆ ಕಾಂಗ್ರೆಸ್‌ನಿಂದ ಬಿಗ್ ಪ್ಲಾನ್: ಮೈತ್ರಿ ಸಮಿತಿಗೆ ಡಾ. ಅಂಜಲಿ ನಿಂಬಾಳ್ಕರ್ ನೇಮಕ! ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಭರ್ಜರಿ ಸಿದ್ಧತೆ ಆರಂಭವಾಗಿದೆ. ಮೈತ್ರಿ ಪಕ್ಷಗಳ ನಡುವೆ ಉತ್ತಮ ಸಮನ್ವಯ ಸಾಧಿಸಲು ‘ಗೋವಾ ಮೈತ್ರಿ ಸಮಿತಿ’ ರಚಿಸಲಾಗಿದ್ದು, ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಪ್ರಮುಖ ಜವಾಬ್ದಾರಿ ನೀಡಲಾಗಿದೆ. ಗೋವಾದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, …

Read More »