Breaking News

SIR ನಮೂನೆ ಹಿಂದಿರುಗಿಸಲು ಇಂದೇ ಕೊನೆಯ ದಿನ; ತಪ್ಪಿದ್ರೆ ಮತದಾರರ‌ ಪಟ್ಟಿಯಿಂದ ಹೆಸರು ಡಿಲೀಟ್

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಣತಿ ನಮೂನೆ ವಾಪಸ್ ನೀಡಲು ಇಂದು (ಆ. 17) ಸಂಜೆ 4 ಗಂಟೆಯವರೆಗೆ ಮಾತ್ರ ಅವಕಾಶ ಇದೆ. ಈಗಾಗಲೇ ಬೂತ್ ಮಟ್ಟದ ಅಧಿಕಾರಿ (BLO) ಮೂಲಕ ಗಣತಿ ನಮೂನೆ ಪಡೆದಿದ್ದರೆ, ಅದರಲ್ಲಿ ಬೇಕಾದ ಮಾಹಿತಿಯನ್ನು ಭರ್ತಿ ಮಾಡಿ, ಸಹಿ ಮಾಡಿ ಇಂದು ಸಂಜೆ 4 ಗಂಟೆಯೊಳಗೆ ಸಂಬಂಧಪಟ್ಟ BLOಗೆ ವಾಪಸ್ ನೀಡಬೇಕು. ಹೆಸರು ರದ್ದಾಗಿದ್ದರೆ ಏನು ಮಾಡಬೇಕು? SIR ಪ್ರಕ್ರಿಯೆಯಲ್ಲಿ …

Read More »

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು – ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

ವಿಜಯಪುರ: ಭೀಮಾ ತೀರದಲ್ಲಿ  ಮತ್ತೊಮ್ಮೆ ನೆತ್ತರು ಹರಿದಿದೆ. ನಿವೃತ್ತ ಶಿಕ್ಷಕನ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ವಿಜಯಪುರ  ಜಿಲ್ಲೆಯ ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ನಡೆದಿದೆ. ಸಿದ್ದಪ್ಪ ಅಂಜುಟಗಿ (63) ಹತ್ಯೆಯಾದ ನಿವೃತ್ತ ಶಿಕ್ಷಕ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹತ್ಯೆ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಇಂಡಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ …

Read More »

ಅಪಾರ್ಟ್‌ಮೆಂಟ್ ಮನೆ ಬೀಗ ಮುರಿದು 1.55 ಲಕ್ಷ ಮೌಲ್ಯದ ಲ್ಯಾಪ್‌ಟಾಪ್, ಮೊಬೈಲ್ ಕಳವು

ಹುಬ್ಬಳ್ಳಿ: ಅಪಾರ್ಟ್‌ಮೆಂಟ್‌ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಬೀಗ ಮುರಿದು ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್ ಕದ್ದೊಯ್ದಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ವಿದ್ಯಾನಗರದ ಶಿರೂರ ಪಾರ್ಕ್‌ನ ಸೃಷ್ಟಿ ಎಲೈಟ್ ಅಪಾರ್ಟ್‌ಮೆಂಟ್‌ನಲ್ಲಿ ಈ ಕಳ್ಳತನ ನಡೆದಿದೆ. ಶದರ್‌ಕುಮಾರ ಮೌರ್ಯ ಎಂಬುವರ ಮನೆಗೆ ಬೀಗ ಹಾಕಿದ್ದ ವೇಳೆ ಕಳ್ಳರು ಕೃತ್ಯ ಎಸಗಿದ್ದಾರೆ. ಮನೆಯ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶಿಸಿದ ಕಳ್ಳರು, 1.55 ಲಕ್ಷ ಮೌಲ್ಯದ ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್ …

Read More »

ಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನ

ಚಂಡೀಗಢ: ರಜೆ ಮೇಲೆ ಮನೆಗೆ ಬಂದಿದ್ದ ಗಡಿ ಭದ್ರತಾ ಪಡೆ ಯೋಧನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಆಕೆ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾಳೆ ಎಂದು ಬಿಂಬಿಸಲು ಯತ್ನಿಸಿರುವ ಘಟನೆ ಪಂಜಾಬ್‌ನ  ಹೋಶಿಯಾರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಾಮಾ ಎಂದು ಗುರುತಿಸಲಾಗಿದೆ. ಸುಮಾರು 12 ವರ್ಷಗಳ ಹಿಂದೆ ವಿವಾಹವಾಗಿದ್ದ ಈ ದಂಪತಿಗೆ ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ರಾಮಾ ಕುಟುಂಬದವರು ನೀಡಿರುವ ದೂರಿನ ಪ್ರಕಾರ, ಆಕೆಯ …

Read More »

ಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷ; ಮನೆಗಳ ಬಳಿಯೇ ಮರಿಗಳ ಓಡಾಟ

ಗದಗ: ತುಂಗಭದ್ರಾ ನದಿ ಸಮೀಪದಲ್ಲಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಮೊಸಳೆ ಹಾಗೂ ಮೊಸಳೆ ಮರಿಗಳು ಪದೇಪದೆ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಗ್ರಾಮದ ದುರಗಪ್ಪ ಸ್ವಾಮಿ ಎಂಬುವರ ಮನೆಯ ಹಿತ್ತಲಿನ ಬಳಿ ಇಂದು ಮೊಸಳೆ ಕಾಣಿಸಿಕೊಂಡಿದೆ. ಇದನ್ನು ನೋಡಿದ ಸ್ಥಳೀಯರು ಕೂಗಾಡುತ್ತಿದ್ದಂತೆ ದೊಡ್ಡ ಮೊಸಳೆ ಅಲ್ಲಿಂದ ತಪ್ಪಿಸಿಕೊಂಡಿದೆ. ಆದರೆ, ಒಂದು ಮೊಸಳೆ ಮರಿಯನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಗ್ರಾಮದ ಸುತ್ತಮುತ್ತ ಪದೇಪದೆ ಮೊಸಳೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಜನರು ಭಯದಲ್ಲಿದ್ದಾರೆ. …

Read More »

ಗಂಡ ಅಂತ್ಯಸಂಸ್ಕಾರಕ್ಕೆ ಬರಬಾರದು – ಡೆತ್‌ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ವರದಕ್ಷಿಣೆ  ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ. ಮಮತಾಶ್ರೀ (26) ಮೃತ ದುರ್ದೈವಿ. ಕಳೆದ 5 ವರ್ಷಗಳ ಹಿಂದೆ ಮೋಹನ್ ರೆಡ್ಡಿ ಹಾಗೂ ಮಮತಾಶ್ರೀ ವಿವಾಹವಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಗಂಡು ಮಗುವಿದ್ದು, ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ವಾಸವಾಗಿದ್ದರು. ಕಳೆದ ಕೆಲ ದಿನಗಳಿಂದ ಪತಿ-ಪತ್ನಿ ನಡುವೆ ವೈಮನಸ್ಸು ಹಾಗೂ ಕೌಟುಂಬಿಕ ಕಲಹದಿಂದ …

Read More »

2 ಕೋಟಿ ಮೌಲ್ಯದ ಕಟ್ಟಿಂಗ್ ಟೂಲ್ಸ್ ಕಳ್ಳತನ – ಐವರು ಅರೆಸ್ಟ್‌

ಚಿಕ್ಕಬಳ್ಳಾಪುರ: ಖಾಸಗಿ ಕಂಪನಿಗೆ ಸೇರಿದ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಕಟ್ಟಿಂಗ್ ಟೂಲ್ಸ್ ಕಳ್ಳತನ ಪ್ರಕರಣವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೋಮಶೇಖರ್, ಚಂದ್ರಶೇಖರ್, ಧನುಷ್, ನಾಗಭೂಷಣ್ ಹಾಗೂ ಹರೀಶ್ ಬಂಧಿತ ಆರೋಪಿಗಳು. ಆರೋಪಿಗಳಿಂದ  ಸುಮಾರು 80 ಲಕ್ಷ ರೂ. ಮೌಲ್ಯದ ಕಟ್ಟಿಂಗ್ ಟೂಲ್ಸ್‌ಗಳನ್ನ  ಪೊಲೀಸರು ಜಪ್ತಿ ಮಾಡಿದ್ದಾರೆ. 2025ನೇ ಸಾಲಿನ ಆಡಿಟ್ ವೇಳೆ ಕಂಪನಿಯ ಸ್ಟಾಕ್‌ನಲ್ಲಿ ವ್ಯತ್ಯಾಸ ಕಂಡುಬಂದಿದ್ದು, …

Read More »

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಅಳಿವೆಯಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್‌ವೊಂದು ಹೂಳಿನಲ್ಲಿ ಸಿಲುಕಿ ಮುಳುಗಡೆಯಾಗಿದೆ. ಅದೃಷ್ಟವಶಾತ್ ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರನ್ನು ರಕ್ಷಿಸಲಾಗಿದೆ. ತದಡಿ ಬಂದರಿನಿಂದ ಮೋಹನ್ ಕಿಮಾನಿ ಎಂಬುವರಿಗೆ ಸೇರಿದ ‘ಶ್ರೀದೇವಿ’ ಹೆಸರಿನ ಬೋಟ್‌ ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ತದಡಿ ಅಳಿವೆಯಲ್ಲಿನ ಹೂಳಿನಲ್ಲಿ ಸಿಲುಕಿಕೊಂಡಿದೆ. ಇದರಿಂದ ಬೋಟ್‌ನ ತಳಭಾಗಕ್ಕೆ ಹಾನಿಯಾಗಿದ್ದು, ಬಳಿಕ ಅಳಿವೆಯಲ್ಲೇ ಬೋಟ್‌ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು. ಕೂಡಲೇ ಸ್ಥಳೀಯ …

Read More »

ಕಾನೂನು ಹೇಳಿದಂತೆ ನಡೆಯುತ್ತೇವೆ – ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರು: ‘ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಮಾಜಿ‌‌ ಸಿಎಂ‌ ಕುಮಾರಸ್ವಾಮಿ ಅವರು ನೈಸ್ ಯೋಜನೆಗೆ ಸಂಬಂಧಿಸಿದಂತೆ ಬರೆದ ಪತ್ರದ ಬಗ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಪತ್ರ ಬರೆದಿರುವುದು ನಿಜ.‌ ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ …

Read More »

ಕೊಲೆ ಆರೋಪಿ ಪವಿತ್ರಾಗೌಡ ಜೈಲಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪವಿತ್ರಾಗೌಡ ರನ್ನ ಬ್ಯಾರಕ್ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ ಆರೋಪಿಯನ್ನ 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್ ಮಾಡಲಾಗಿದೆ. ಮೂಲಕ ಪವಿತ್ರಗೌಡಗೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಶಾಕ್ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್  ಕೋರ್ಟ್‌ನಲ್ಲಿದೆ. ಟ್ರಯಲ್ ನಡೆಯುವಾಗ ಎಲ್ಲಾ ಆರೋಪಿಗಳು ವಿಸಿ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಬೇಕು. ಕಳೆದ ಮೂರು ದಿನಗಳ ಹಿಂದೆ ಎಲ್ಲಾ ಆರೋಪಿಗಳು ಹಾಜರಾದ ಬಳಿಕ …

Read More »