Breaking News

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ

ಬೆಂಗಳೂರು: ನಾಳೆ (ಏ.9) ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗಲಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇಲಾಖೆ ವೆಬ್‌ಸೈಟ್ https://karresults.nic.in ಫಲಿತಾಂಶ ಲಭ್ಯವಾಗಲಿದೆ ಜೊತೆಗೆ …

Read More »

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ  ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ಪ್ರಕಟಿಸಲಿದೆ. ಕಳೆದ 6 ತಿಂಗಳಿಂದ ಪ್ರಕರಣದ ವಿಚಾರಣೆ ನಡೆಸುತ್ತಾ ಇದ್ದ ನ್ಯಾಯಾಲಯ ಸಂಪೂರ್ಣ ವಾದ-ಪ್ರತಿವಾದ ಆಲಿಸಿತ್ತು. ಮಾರ್ಚ್ ಕೊನೆಯ ವಾರದಲ್ಲಿ ವಾದ ಸಂಪೂರ್ಣವಾಗಿ ಆಲಿಸಿದ್ದ ನ್ಯಾಯಾಲಯ ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಏಪ್ರಿಲ್ 2 ರಂದು ಎಲ್ಲರೂ …

Read More »

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸರ್ಜಾಪುರ  ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಹಾಕಿ, ಪ್ರತಿಭಟನೆ ಮಾಡಿದ್ದ 80 ಜನರ ವಿರುದ್ಧ ಎಫ್‌ಐಆರ್  ದಾಖಲಾಗಿದೆ. ಪಿಡಿಓ ಅವರು ಪೊಲೀಸ್ ಠಾಣೆಯಲ್ಲಿ ನೀರು ಕೇಳಿದ 80 ಜನ ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಈ ಹಿನ್ನೆಲೆ ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶಿಸಿದ್ದಾರೆ. ರಾಯಚೂರಿನಲ್ಲಿಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು …

Read More »

ಕದಂಬರ ಉಪರಾಜಧಾನಿ ಹಲಸಿಯಲ್ಲಿ ಮಹಾಲಕ್ಷ್ಮೀ ಜಾತ್ರೆ: ಭಕ್ತಿ ಭಾವದ ಹೊನ್ನಾಟದಲ್ಲಿ ಮಿಂದೆದ್ದ ಭಕ್ತಸಾಗರ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಹಲಸಿ ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಅತ್ಯಂತ ಅದ್ಧೂರಿಯಾಗಿ ನೆರವೇರುತ್ತಿದೆ. ಕದಂಬರ ಕಾಲದ ಈ ಉಪರಾಜಧಾನಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ದೇವಿಯ ಹೊನ್ನಾಟ ನಡೆಯುವ ಮೂಲಕ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ಸಿಕ್ಕಿದ್ದು, ಗ್ರಾಮದಾದ್ಯಂತ ಹಬ್ಬದ ವಾತಾವರಣ ಮನೆಮಾಡಿದೆ. ಖಾನಾಪುರ ತಾಲೂಕಿನ ಕದಂಬರ ಕಾಲದ ಐತಿಹಾಸಿಕ ಉಪರಾಜಧಾನಿ ಹಲಸಿ ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರೆಯು ಅತ್ಯಂತ ಸಡಗರ ಹಾಗೂ ಭಕ್ತಿ ಭಾವದಿಂದ ಪ್ರಾರಂಭವಾಯಿತು. ಇಂದು ಬೆಳ್ಳಂಬೆಳಿಗ್ಗೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಜಲಕ್ಷಾಮದ ಭೀತಿ: ಬೇಸಿಗೆ ಆರಂಭದಲ್ಲೇ ಘಟಪ್ರಭಾ ನದಿ ಖಾಲಿ ಖಾಲಿ!

ಉತ್ತರ ಕರ್ನಾಟಕದ ರೈತರ ಮತ್ತು ಸಾರ್ವಜನಿಕರ ಜೀವನಾಡಿ ಘಟಪ್ರಭಾ ನದಿ ಈಗ ಬರಿದಾಗುತ್ತಿದೆ. ಮಹಾರಾಷ್ಟ್ರದಲ್ಲಿ ಹುಟ್ಟಿ ಕರುನಾಡಿನಾದ್ಯಂತ ಹರಿಯುವ ಈ ನದಿ, ಬೇಸಿಗೆಯ ಆರಂಭದಲ್ಲೇ ಬತ್ತಿ ಹೋಗುತ್ತಿರುವುದು ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಜನರಲ್ಲಿ ಆತಂಕ ಮೂಡಿಸಿದೆ. ಹಿಡಕಲ್ ಜಲಾಶಯದ ನೀರಿನ ಮಟ್ಟದಲ್ಲೂ ಗಣನೀಯ ಇಳಿಕೆಯಾಗಿದ್ದು, ಮುಂದಿನ ದಿನಗಳು ಕಷ್ಟಕರವಾಗುವ ಮುನ್ಸೂಚನೆ ಸಿಗುತ್ತಿದೆ. ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಸಹಸ್ರಾರು ಹಳ್ಳಿಗಳಿಗೆ ಕುಡಿಯುವ ನೀರು ಹಾಗೂ ಕೃಷಿಗೆ ಆಧಾರವಾಗಿರುವ ಘಟಪ್ರಭಾ …

Read More »

ಅಶೋಕ ಚಂದರಗಿ ನೇತೃತ್ವದ ಕನ್ನಡ ಸಂಘಟನೆಗಳ ಹೋರಾಟಕ್ಕೆ ಸಂದ ಜಯ ರಾಜ್ಯೋತ್ಸವ ಅನುದಾನ ದುರ್ಬಳಕೆ ತನಿಖೆಗೆ ಸರ್ಕಾರ ಆದೇಶ

ಬೆಳಗಾವಿಯ ಹಿರಿಯ ಹೋರಾಟಗಾರ ಅಶೋಕ ಚಂದರಗಿ ನೇತೃತ್ವದಲ್ಲಿ ನಡೆದ ಕನ್ನಡ ಸಂಘಟನೆಗಳ ಹೋರಾಟಕ್ಕೆ ಕೊನೆಗೂ ದೊಡ್ಡ ಯಶಸ್ಸು ಸಿಕ್ಕಿದೆ. ರಾಜ್ಯೋತ್ಸವದ 50 ಲಕ್ಷ ರೂಪಾಯಿ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ತನಿಖೆ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ. ಬೆಳಗಾವಿ ಜಿಲ್ಲಾಡಳಿತವು ಕನ್ನಡ ಸಂಘಟನೆಗಳ ಸಲಹೆಗಳನ್ನು ಕಡೆಗಣಿಸಿ ಹಾಗೂ ಸರ್ಕಾರದ ಶರತ್ತುಗಳನ್ನು ಉಲ್ಲಂಘಿಸಿ ಕಾರ್ಯಕ್ರಮ ಆಯೋಜಿಸಿದ್ದರ ವಿರುದ್ಧ ಅಶೋಕ ಚಂದರಗಿ ಅವರ …

Read More »

ನಿರ್ಮಲಾ ಪ್ರಕಾಶ ಅವರಿಗೆ ರಂಗಸೃಷ್ಟಿಯ ರಂಗಗೌರವ ಪ್ರದಾನ

ಬೆಳಗಾವಿ: ವಿಶ್ವರಂಗಭೂಮಿ ದಿನಾಚರಣೆಯ ಹಿನ್ನೆಲೆಯಲ್ಲಿ ಹಿರಿಯ ರಂಗಕರ್ಮಿ ನಿರ್ಮಲಾ ಪ್ರಕಾಶ ಅವರಿಗೆ ಸೋಮವಾರ ರಂಗಸೃಷ್ಟಿಯ ಈ ವರ್ಷದ ರಂಗಗೌರವ ನೀಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಮಲಾ ಪ್ರಕಾಶ, ಜೀವನದಲ್ಲಿ ಒಳ್ಳೆಯದನ್ನು ಕಲಿಯಲು ಸಿಕ್ಕ ಅವಕಾಶ ಕಳೆದುಕೊಳ್ಳಬಾರದು. ನನ್ನ ಜೀವನದಲ್ಲಿ ಅದನ್ನು ಸದಾ ಅಳವಡಿಸಿಕೊಂಡಿದ್ದೇನೆ ಎಂದರು. ತಮ್ಮ ದೀರ್ಘ ರಂಗ ಅನುಭವವನ್ನು ಅವರು ಹಂಚಿಕೊಂಡರು. ಮುಖ್ಯ ಅತಿಥಿಯಾಗಿ ಆಗಿ ಆಗಮಿಸಿದ್ದ ಹಿರಿಯ …

Read More »

43 ವರ್ಷಗಳ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ ದೇವಿಯ ಮಂಟಪ ಸ್ಥಳದಲ್ಲಿ ಚನ್ನರಾಜ ಹಟ್ಟಿಹೊಳಿ ಪೂಜೆ

ಬೆಳಗಾವಿ: ಸುಮಾರು 43 ವರ್ಷಗಳ ದೀರ್ಘ ವಿರಾಮದ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ, ಗ್ರಾಮದಲ್ಲಿ ಧಾರ್ಮಿಕ ಉತ್ಸಾಹ ಮತ್ತು ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದೆ. ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ದೇವಿಯ ಮಂಟಪ ಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಿಯ ಅನುಗ್ರಹದಿಂದ ಜಾತ್ರಾ ಮಹೋತ್ಸವವು ಯಾವುದೇ ಅಡಚಣೆಗಳಿಲ್ಲದೆ, ಭಕ್ತಿಪೂರ್ವಕವಾಗಿ …

Read More »

ವರ್ಷದೊಳಗೆ 2.30 ಕೊಟಿ ರೂಪಾಯಿ ವೆಚ್ಚದ ಅಗ್ನಿಶಾಮಕ ಠಾಣೆ ಕಾಮಗಾರಿ ಪೂರ್ಣ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ 9.09 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮೂಡಲಗಿ- ತಾಲ್ಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಮಾಡಿದ್ದು, ವರ್ಷದೊಳಗೆ ಕಾಮಗಾರಿಯು ಪೂರ್ಣಗೊಳ್ಳಲಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬುಧವಾರ ಪಟ್ಟಣದ ದನಗಳ ಪೇಟೆಯ ಹತ್ತಿರ ಅಂದಾಜು 2.30 ಕೋಟಿ ರೂಪಾಯಿ ವೆಚ್ಚದಲ್ಲಿ (ಪಟಗುಂದಿ ರಸ್ತೆ) ನಿರ್ಮಾಣಗೊಳ್ಳಲಿರುವ ನೂತನ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ …

Read More »

ಘಟಪ್ರಭಾದಲ್ಲಿ ಕಾಶೀ ಯಾತ್ರೆಗೆ ಹೊರಟ ಭಕ್ತರಿಗೆ ಆತ್ಮೀಯ ಬೀಳ್ಕೊಡುಗೆ

ಸೋಮವಾರ ದಿನಾಂಕ 06-04-2026 ರಂದು ಘಟಪ್ರಭಾ ರೈಲು ನಿಲ್ದಾಣದಿಂದ ಹಲವಾರು ಭಕ್ತರು ಕಾಶಿ ಗಯಾ ಅಯೋಧ್ಯೆ ಸೇರಿದಂತೆ ಉತ್ತರ ಭಾರತದ ಪುಣ್ಯ ಕ್ಷೇತ್ರಗಳಿಗೆ ಭಾರತ ಸರಕಾರದ ಕ್ಷೇತ್ರ ದರ್ಶನ ಯೋಜನೆಯಲ್ಲಿ ಪ್ರಯಾಣ ಬೆಳೆಸಿದರು 14-04-2026 ರ ವರೆಗೆ ನಡೆಯುವ ಯಾತ್ರೆಯಲ್ಲಿ ಆತ್ಮೀಯರಾದ ಮಾರುತಿ ವಿಜಯನಗರ, ಮಹಾದೇವ ಯರನಾಳ, ರಾಜು ವಾಲಿಕಾರ ಮುಂತಾದವರು ಸೇರಿದಂತೆ ಹಲವಾರು ಭಕ್ತರು ಪ್ರಯಾಣ ಬೆಳೆಸಿದರು ಗುಬ್ಬಲಗುಡ್ಡ ಶ್ರೀ ಕೆಂಪಯ್ಯ ಸ್ವಾಮಿಗಳ ಮಠದ ಡಾ, ಮಲ್ಲಿಕಾರ್ಜುನ ಮಹಾಸ್ವಾಮಿಗಳು …

Read More »