Breaking News

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ದುರದುಂಡಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ …

Read More »

ಶಹಾಪುರದಲ್ಲಿ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ! ಸ್ಥಳೀಯಾಡಳಿತ, ಪೊಲೀಸರೂ ಮೌನ

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಸಾಮಾಜಿಕ ಬಹಿಷ್ಕಾರದ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ಸ್ವಕುಳಿಸಾಳಿ ಸಮುದಾಯದ 12 ಕುಟುಂಬಗಳಿಗೆ ತಮ್ಮದೇ ಸಮುದಾಯದಿಂದ ಬಹಿಷ್ಕಾರ ಹಾಕಲಾಗಿದ್ದು, ಕಳೆದ ಎಂಟು ವರ್ಷಗಳಿಂದ ಈ ಕುಟುಂಬಗಳು ಸಂಕಷ್ಟದ ಜೀವನ ನಡೆಸುತ್ತಿವೆ. ಸಮುದಾಯಕ್ಕೆ ಸೇರಿದ ಸಂಘದ ಆಸ್ತಿ ಹಾಗೂ ಆದಾಯದ ಲೆಕ್ಕ ಕೇಳಿದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಹಿಷ್ಕೃತ ಕುಟುಂಬಗಳು ಆರೋಪಿಸಿವೆ. ಶಹಾಪುರದಲ್ಲಿರುವ ಜೀಹ್ವೆಶ್ವರ ಕಲ್ಯಾಣ ಮಂಟಪ ಹಾಗೂ …

Read More »

ಧಾರವಾಡ | ಕೊರಿಯನ್ ಗೇಮ್‍ ಗೀಳಿಗೆ ಯುವಕ ಬಲಿ

ಧಾರವಾಡ: ಕೊರಿಯನ್ ಗೇಮ್‍ ಗೀಳಿಗೆ ಯುವಕನೊಬ್ಬ ಬಲಿಯಾದ ಘಟನೆ ಧಾರವಾಡ ನಗರದ ಮಂಗಳಗಟ್ಟಿ ಪ್ಲಾಟ್‍ನಲ್ಲಿ ನಡೆದಿದೆ. ನೇಣಿಗೆ ಶರಣಾದ ಯುವಕನನ್ನು ವಿಕಾಸ್ (20) ಎಂದು ಗುರುತಿಸಲಾಗಿದೆ. ಫೆ.6 ರಂದು ಯುವಕ ಶರಣಾಗಿದ್ದ. ಸಾವಿನ ನಂತರ ಮೊಬೈಲ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮೊಬೈಲ್ ಪರಿಶೀಲನೆ ವೇಳೆ ಕೊರಿಯನ್ ಗೆಮ್ಸ್ ಪತ್ತೆಯಾಗಿದೆ. ಕೊರಿಯನ್ ಗೆಮ್ಸ್‌ಗೆ ವಿಕಾಸ್ ಅಡಿಕ್ಟ್ ಆಗಿದ್ದ‌ ಎಂಬ ವಿಚಾರ ತನಿಖೆ ವೇಳೆ ತಿಳಿದು ಬಂದಿದೆ. ಪಿಯುಸಿ ಸೈನ್ಸ್ ಮುಗಿಸಿ ಮನೆಯಲ್ಲೇ …

Read More »

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಚಿಕ್ಕಬಳ್ಳಾಪುರ: ನಿರ್ಮಾಣ ಹಂತದ ಮನೆ ತೆರವು ಮಾಡಲು ಮುಂದಾಗಿದ್ದಕ್ಕೆ ವ್ಯಕ್ತಿಯೋರ್ವ ತಹಶೀಲ್ದಾರ್  ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆ ಮಂಚೇನಹಳ್ಳಿ  ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಧಕೃಷ್ಣ ಜಿ ಎಂಬವರು ಆಂಟಿಬಯೊಟಿಕ್ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಕ್ಕೂ ಮುನ್ನ ರಾಧಾಕೃಷ್ಣ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ತನ್ನ ಸಾವಿಗೆ ಮಂಚೇನಹಳ್ಳಿ ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾಡಳಿತ ಕಾರಣ ಎಂದು ಡೆತ್ …

Read More »

ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

ಬೆಂಗಳೂರು: ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ ಎಂದು ಬಿಜೆಪಿ  ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್‌ ಸಾಧನಾ ಸಮಾವೇಶದ ವಿಚಾರಕ್ಕೆ ವ್ಯಂಗ್ಯವಾಡಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್‌ನ (Congress) ಸಾವಿರ ದಿನಗಳ ಸಾಧನಾ ಸಮಾವೇಶದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ, ಮೋದಿ ಸರ್ಕಾರದ್ದು ಕಾಯಕವೇ ಕೈಲಾಸ ನೀತಿ. ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ. ಅವರ ಯೋಜನೆಗಳು ರಾಜ್ಯದ ಜನರಿಗೆ ಕಾಯುವುದೇ ಕೈಲಾಸ …

Read More »

ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

ಬೀದರ್: ಮನೆಯ ಮುಂದೆ ಆಟ ಆಡುವ ಸಮಯದಲ್ಲಿ ಚರಂಡಿಗೆ  ಬಿದ್ದು ಬಾಲಕ  ಸಾವನ್ನಪ್ಪಿದ ಘಟನೆ ಬೀದರ್  ತಾಲೂಕಿನ ಮಲ್ಲಿಕ್‌ಮರ್ಜಾಪುರ ಗ್ರಾಮದಲ್ಲಿ ನಡೆದಿದೆ. 5 ವರ್ಷದ ಅವಿನಾಶ್ ಮೃತ ಬಾಲಕ. ಆಟವಾಡುವ ವೇಳೆ ಮನೆಯ ಮುಂದಿನ ಚರಂಡಿ ಕಾಲುವೆಗೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಶುಕ್ರವಾರ ಸಂಜೆ 6 ಗಂಟೆಯಿಂದ ಕಾಣೆಯಾಗಿದ್ದ ಬಾಲಕನಿಗಾಗಿ ಕುಟುಂಬಸ್ಥರು ಹುಡುಕಾಡುತ್ತಿದ್ದರು. ಆದರೆ ಬಾಲಕನ ಸುಳಿವು ಪತ್ತೆಯಾಗಿರಲಿಲ್ಲ. ಬಳಿಕ ಮನೆಯ ಮುಂದಿನ …

Read More »

ಶಿವರಾತ್ರಿ ಸಂಭ್ರಮಕ್ಕೆ ಅರಮನೆ ಸಜ್ಜು – ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರು ಕಾತರ

ಮೈಸೂರು: ಇಲ್ಲಿನ ಅರಮನೆ ಆವರಣದಲ್ಲಿ ಶಿವರಾತ್ರಿ  ಆಚರಣೆಗೆ ಸಿದ್ಧತೆ ಶುರುವಾಗಿದೆ. ಶಿವರಾತ್ರಿ ಪ್ರಯುಕ್ತ ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿಗೆ ಧರಿಸುವ ಚಿನ್ನದ ಮುಖವಾಡವನ್ನ ಸರ್ಕಾರಿ ಖಜಾನೆಯಿಂದ ಹೊರ ತೆಗೆಯಲಾಗಿದೆ. ವರ್ಷಕೊಮ್ಮೆ ಮಾತ್ರ ಚಿನ್ನದ ಕೊಳಗ ಧಾರಣೆ ಆಗುತ್ತದೆ. ಬರೋಬ್ಬರಿ 11 ಕೆಜಿ ತೂಕದ ಚಿನ್ನದ ಕೊಳಗವಿದು. ಯದುವಂಶದ ಜಯಚಾಮರಾಜೇಂದ್ರ ಒಡೆಯರ್ ಅವರು ಕಾಣಿಕೆ ರೂಪದಲ್ಲಿ 1953 ರಲ್ಲಿ ನೀಡಿರುವ ಚಿನ್ನದ ಮುಖವಾಡ ಇದಾಗಿದೆ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಜನಿಸಿದ ನೆನಪಿನಾರ್ಥ ಮುಖವಾಡ …

Read More »

16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್‌

ಚಾಮರಾಜನಗರ: ಅಪಘಾತ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಹದಿನಾರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿಯನ್ನ ಚಾಮರಾಜನಗರ ಗ್ರಾಮಾಂತರ ಪೊಲೀಸರು  ಬಂಧಿಸಿದ್ದಾರೆ. ನಂಜನಗೂಡು ಪಟ್ಟಣ ನೀಲಕಂಠ ನಗರದ ಸಫಿ ಬಿನ್ ಸೈಯದ್ ಮಹಮ್ಮದ್ ಎಂಬ ಆಟೋ ಚಾಲಕ  2010 ರಿಂದ ಪೊಲೀಸರ ಕೈಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಸಫಿಗೆ ಅಪಘಾತ ಪ್ರಕರಣವೊಂದರಲ್ಲಿ ಚಾಮರಾಜನಗರ ಜೆಎಂಎಫ್‌ಸಿ ನ್ಯಾಯಾಲಯ 2010 ರಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. …

Read More »

ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತನ್ನವನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಂಗಳದಲ್ಲಿ …

Read More »

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಗರಂ

ಬೆಂಗಳೂರು ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡ್ಬೇಕೆಂಬ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ಸದ್ಯ ರಾಜ್ಯದಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಸದ್ಯ ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ  ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ …

Read More »