ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪ್ರದೋಷ್ ಮಾಫಿ ಸಾಕ್ಷಿಯಾಗುವ ಪ್ರಕ್ರಿಯೆಗೆ ಸಂಬಂಧಿಸಿದ ಆದೇಶವನ್ನು ತಡೆಹಿಡಿಯುವಂತೆ ಕೋರಿ ನಟ ದರ್ಶನ್ ಪರ ವಕೀಲರು ಸೆಷನ್ಸ್ ಕೋರ್ಟ್ಗೆ ಹೊಸ ಅರ್ಜಿ ಸಲ್ಲಿಸಿದ್ದಾರೆ. ಇಂದು ನಡೆದ ಅರ್ಜಿಯ ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ಪ್ರದೋಷ್ ಪರ ವಕೀಲರು ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರ ನಡುವೆ ತೀವ್ರ ವಾದ-ಪ್ರತಿವಾದ ನಡೆಯಿತು. ದರ್ಶನ್ …
Read More »ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ 6 ಬಾಲಕರು ದುರ್ಮರಣ
ಹೈದರಾಬಾದ್: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಆರು ಬಾಲಕರು ಸಾವನ್ನಪ್ಪಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್ನ ಸಮೀಪದ ಪೆದ್ದ ಕಂಜರ್ಲ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ದತ್ತಿ ಸಂಸ್ಥೆಯೊಂದು ನಡೆಸುತ್ತಿರುವ ಹಾಸ್ಟೆಲ್ನಲ್ಲಿ ಈ ಬಾಲಕರು ವಾಸವಾಗಿದ್ದರು. ಗಣೇಶ ವಿಸರ್ಜನೆ ವೇಳೆ 8 ಬಾಲಕರು ಕೆರೆಗೆ ಬಿದ್ದಿದ್ದರು. ಅದರಲ್ಲಿ ಇಬ್ಬರು ಕೆರೆಯಿಂದ ಮೇಲೆ ಎದ್ದು ಬಂದಿದ್ದಾರೆ. ಇನ್ನುಳಿದ 6 ಮಂದಿ ಸಾವನ್ನಪ್ಪಿದ್ದಾರೆ. ಈ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು …
Read More »ಪ್ರೀತಿಸಿ ಮದುವೆ – ಲಾಡ್ಜ್ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ
ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್ಗೆ ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಲಾಡ್ಜ್ನಲ್ಲಿ ನಡೆದಿದೆ. ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ವಿದ್ಯಾ (23) ಮೃತ ಮಹಿಳೆ. ಆಕೆಯ ಪತಿ ಆನಂದ್ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಐಡಿ ಕಾರ್ಡ್ನ ಟ್ಯಾಗ್ನಿಂದ ಕತ್ತು ಬಿಗಿದು ಉಸಿರುಗಟ್ಟಿಸಿ ವಿದ್ಯಾಳನ್ನು ಕೊಲೆ ಮಾಡಲಾಗಿದೆ. ಬಳಿಕ ಆಕೆಯ ಮೊಬೈಲ್ ತೆಗೆದುಕೊಂಡು ಆನಂದ್ ಲಾಡ್ಜ್ನಿಂದ …
Read More »ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ
ಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಮಸೀದಿ ಹಾಗೂ ಮದರಸಾದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ತಲಾಂದದಿಂದ ಹೊರಟ ಮೆರವಣಿಗೆಯು ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದಾಗ, ಮಾರ್ಗಮಧ್ಯದಲ್ಲಿದ್ದ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾದ ಮೇಲೆ ಅಪರಿಚಿತರು ಕಲ್ಲುಗಳನ್ನು ತೂರಿದ್ದಾರೆ. ಮುರಿನಕಟ್ಟೆ …
Read More »ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ – ಇನ್ಸ್ಪೆಕ್ಟರ್ ಧನಂಜಯ್ ಪರ ಯತೀಂದ್ರ ಬ್ಯಾಟಿಂಗ್
ಮೈಸೂರು: ಜಿಲ್ಲೆಯ ಟಿ.ನರಸೀಪುರ ಇನ್ಸ್ಪೆಕ್ಟರ್ ಧಮ್ಕಿ ವಿಚಾರದ ಬಗ್ಗೆ 5 ದಿನಗಳ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೌನ ಮುರಿದಿದ್ದು, ಧನಂಜಯ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ಸ್ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ. ಅವರು ಬುದ್ಧಿವಾದ ಹೇಳಿದ್ದಾರೆ. ಬುದ್ಧಿವಾದ ಹೇಳುವ ದಾಟಿ ಸ್ವಲ್ಪ ಬದಲಾಗಿದೆ ಅಷ್ಟೇ. ಅದನ್ನ ಬಿಟ್ಟು ಬೇರೆ ಯಾವುದೇ ತಪ್ಪು ಮಾಡಿಲ್ಲ. ತಪ್ಪೇ ಮಾಡದ ಇನ್ಸ್ಪೆಕ್ಟರ್ ಮೇಲೆ ಕ್ರಮ ಯಾಕೆ …
Read More »ಬಡವರಿಗೆ ನಿವೇಶನ; ತಿಂಗಳಾಂತ್ಯದೊಳಗೆ ಭೂಮಿ ಗುರುತಿಸುವ ಕಾರ್ಯ ಪೂರ್ಣಗೊಳಿಸಿ: ಪರಮೇಶ್ವರ್
ಬೆಂಗಳೂರು: ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಇಂದು ವಿಧಾನಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮ ಘೋಷಣೆಯಾದ ಬಳಿಕ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಯೋಜನೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕೆಲ ಜಿಲ್ಲೆಗಳಲ್ಲಿ ಭೂಮಿ ಗುರುತಿಸುವ ಕೆಲಸ ಆಗಿಲ್ಲ. ನಿವೇಶನ ಸಿದ್ಧಪಡಿಸಲು ಭೂಮಿ ಗುರುತಿಸುವ …
Read More »ಧ್ವನಿವರ್ಧಕಕ್ಕೆ ಅನುಮತಿ ನೀಡದ ಪೊಲೀಸರು; ಗೌರಿ-ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
ಹಾಸನ: ಗಣಪತಿ ವಿಸರ್ಜನೆ ವೇಳೆ ಧ್ವನಿವರ್ಧಕ ಬಳಕೆಗೆ ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮೆರವಣಿಗೆಯನ್ನು ಅರ್ಧಕ್ಕೆ ನಿಲ್ಲಿಸಿ ತೆರಳಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲವು ವರ್ಷಗಳಿಂದ ಮಾರನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಗಣಪತಿಯನ್ನು ಪ್ರತಿಷ್ಠಾಪಿಸಿಕೊಂಡು ಬರುತ್ತಿದ್ದಾರೆ. ಈ ವರ್ಷವೂ ಗೌರಿ-ಗಣಪತಿಯನ್ನು ಪ್ರತಿಷ್ಠಾಪಿಸಿ ಇಂದು ಅದ್ಧೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲು ಗ್ರಾಮಸ್ಥರು ತೆರಳುತ್ತಿದ್ದರು. ಒಂದು ಟ್ರ್ಯಾಕ್ಟರ್ನಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಗ್ರಾಮಸ್ಥರು ಮೆರವಣಿಗೆ ನಡೆಸುತ್ತಿದ್ದರು. …
Read More »ಮರ ಬಿದ್ದು ಕಾಡಾನೆ ಮರಿಗೆ ಗಂಭೀರ ಗಾಯ – ಮರಿಯಾನೆ ಎಬ್ಬಿಸಲು ತಾಯಿಯಾನೆ ಪರದಾಟ
ಚಾಮರಾಜನಗರ: ಮರ ಉರುಳಿ ಬಿದ್ದು ಕಾಡಾನೆ ಮರಿ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತ ಅರಣ್ಯದ ಪುಣಜನೂರು ವಲಯದಲ್ಲಿ ನಡೆದಿದೆ. ಮರಿಯಾನೆ ಮೇಲೆ ಬಿದ್ದಿದ್ದ ಮರವನ್ನು ಅರಣ್ಯ ಸಿಬ್ಬಂದಿ ಜೆಸಿಬಿ ಮೂಲಕ ತೆರವುಗೊಳಿಸಿದ್ದು, ಗಾಯಗೊಂಡ ಆನೆಗೆ ಚಿಕಿತ್ಸೆ ನೀಡಲು ಯತ್ನಿಸುತ್ತಿದ್ದಾರೆ. ಆದರೆ ತಾಯಿಯಾನೆ ಮರಿಯಾನೆಯನ್ನು ಬಿಟ್ಟು ಕದಲದ ಕಾರಣ ಚಿಕಿತ್ಸೆ ನೀಡಲು ಕಷ್ಟವಾಗಿದೆ. ತಾಯಿಯಾನೆಯನ್ನು ಎಷ್ಟೇ ಓಡಿಸಲು ಪ್ರಯತ್ನಪಟ್ಟರೂ ಕೂಡ ಪ್ರಯೋಜನವಾಗಲಿಲ್ಲ. ಇತ್ತ ಮರಿಯಾನೆ …
Read More »ಬೆಳಗಾವಿ ಗ್ರಾಮ ಪಂಚಾಯಿತಿಯಲ್ಲಿ ತಂದೆ, ಮಗಳ ಬರ್ಬರ ಹತ್ಯೆ
ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಹತ್ಯೆಯಾದ ದುರ್ದೈವಿ. ಘಟನೆಯಲ್ಲಿ ರುದ್ರಪ್ಪ ಅವರ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ರುದ್ರಪ್ಪ ಹಾಗೂ ಅವರ …
Read More »ಪಪ್ಪಾಯ ಹಣ್ಣಿನಲ್ಲಿ ಮೂಡಿದ ಗಣೇಶಾಕೃತಿ – ರೈತ ಕುಟುಂಬದಲ್ಲಿ ಸಂತಸ
ಬಳ್ಳಾರಿ: ಗಣಪತಿ ಹಬ್ಬದ ಸಂದರ್ಭದಲ್ಲಿ ಪಪ್ಪಾಯಿ ಹಣ್ಣಿನಲ್ಲಿ ಗಣೇಶನ ರೂಪ ಕಂಡು ರೈತ ಕುಟುಂಬ ಅಚ್ಚರಿಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಮಡಗು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ರೈತ ಬಸವರಾಜ್ ಎನ್ನುವವರ ತೋಟದಲ್ಲಿನ ಪಪ್ಪಾಯದಲ್ಲಿ ಗಣೇಶಾಕೃತಿ ಕಂಡುಬಂದಿದೆ. ಸಹೋದರನಿಗೆ ಹಣ್ಣು ನೀಡಲು ರೈತ ಬಸವರಾಜ್ ಪಪ್ಪಾಯ ಕಿತ್ತು ತಂದಿದ್ದ. ಈ ವೇಳೆ ತಂದಿದ್ದ ಪಪ್ಪಾಯದಲ್ಲಿ ಗಣೇಶಾಕೃತಿ ಕಂಡುಬಂದಿದ್ದು, ಕುಟುಂಬಸ್ಥರು ಸಂತಸ ಪಟ್ಟಿದ್ದಾರೆ. ಆನಂತರ ಪಪ್ಪಾಯಿಯನ್ನೇ ಗಣೇಶನ ರೂಪವೆಂದು ಭಾವಿಸಿದ …
Read More »
Laxmi News 24×7