Breaking News

ಬಾಕಿ ಇರುವ ಒಂದು ಸಚಿವ ಸ್ಥಾನ: ಮೂವರಲ್ಲಿ ಯಾರ ತಕ್ಕಡಿ ಮೇಲಾಗುತ್ತೆ ನೋಡೋಣ ಎಂದ ಸಚಿವ ಸತೀಶ್ ಜಾರಕಿಹೊಳಿ

ಸಿಎಂ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಒಂದು ಸಚಿವ ಸ್ಥಾನ ಮಾತ್ರ ಖಾಲಿ ಇದ್ದು, ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಭಾರಿ ಪೈಪೋಟಿ ನಡೆಯುತ್ತಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಉಮಾಶ್ರೀ, ಗಾಯತ್ರಿ ಶಾಂತೇಗೌಡ ಈ ಸ್ಥಾನದಲ್ಲಿ ರೇಸ್​ನಲ್ಲಿದ್ದಾರೆ. ಮೂವರಲ್ಲಿ ಯಾರಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂದು ದೇ ಸದ್ಯಕ್ಕಿರುವ ಕುತೂಹಲ. ಇದೇ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದಾರೆ. ಬೆಳಗಾವಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿ …

Read More »

ಸರ್ದಾರ್ ಪ್ರೌಢಶಾಲೆ ಆವರಣದಲ್ಲಿ ನೂತನ ‘ಚೆಸ್ ಪಾರ್ಕ್’ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಸರ್ದಾರ್ ಪ್ರೌಢಶಾಲೆಯ ಆವರಣದಲ್ಲಿ ನಿರ್ಮಿಸಲಾದ ನೂತನ ‘ಚೆಸ್ ಪಾರ್ಕ್’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಚಿವರು, ವಿದ್ಯಾರ್ಥಿಗಳಲ್ಲಿ ಚೆಸ್ ಆಟದ ಬಗ್ಗೆ ಆಸಕ್ತಿ ಬೆಳೆಸುವುದರ ಜೊತೆಗೆ, ತಾರ್ಕಿಕ ಚಿಂತನೆ, ಏಕಾಗ್ರತೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಲು ಇಂತಹ ಚೆಸ್ ಪಾರ್ಕ್‌ಗಳು ಸಹಕಾರಿಯಾಗಲಿವೆ. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆ ಹಾಗೂ ಬೌದ್ಧಿಕ ಚಟುವಟಿಕೆಗಳಿಗೆ ಪೂರಕ ವಾತಾವರಣ ಕಲ್ಪಿಸಿರುವುದು ಶ್ಲಾಘನೀಯವಾಗಿದೆ. ಈ …

Read More »

ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಎಂ.ಕೆ.ಹುಬ್ಬಳ್ಳಿ: ಎಂ.ಕೆ.ಹುಬ್ಬಳ್ಳಿಯ ಪ್ರತಿಷ್ಠಿತ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಖಾನೆಯ ಅಧ್ಯಕ್ಷ ಚನ್ನರಾಜ ಹಟ್ಟಿಹೊಳಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ಹೋರಾಟವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟಗಾರರು ಕಂಡಿದ್ದ ಸಮೃದ್ಧ, ಶಾಂತಿಯುತ ಹಾಗೂ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸು ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ …

Read More »

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

ಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಬೆಂಗಳೂರಿನ ಆರ್.ಆರ್. ನಗರದಲ್ಲಿ ಕೆ.ಡಿ.ಸಿ. ಡೆಂಟಲ್ ಕೇರ್ ಹಾಗೂ ಪಿ-ಕ್ಯಾನ್ಸರ್ ಸೆಂಟರ್ ವತಿಯಿಂದ ಆಯೋಜಿಸಲಾಗಿರುವ ‘ಉಚಿತ ಬಾಯಿ ಆರೋಗ್ಯ ತಪಾಸಣಾ ಶಿಬಿರ’ಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ನಡೆಯಲಿರುವ ಈ ಅಭಿಯಾನವು ಸಾರ್ವಜನಿಕರಲ್ಲಿ ಬಾಯಿ …

Read More »

ಬೆಳಗಾವಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ಬೆಳಗಾವಿ: 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿದರು. ಪೊಲೀಸರು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ಸತೀಶ ಜಾರಕಿಹೊಳಿ ಅವರಿಗೆ ಗೌರವ ವಂದನೆ ಸ್ವೀಕರಿಸಿದರು. ಅಂಧ ಮಕ್ಕಳು, ಮಹಾನಗರ ಪಾಲಿಕೆ ಪೌರ ಕಾರ್ಮಿಕರ ತಂಡವು ಪಥಸಂಚಲನದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು. ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಬೆಳಗಾವಿ ಜಿಲ್ಲೆಯ ಪಾತ್ರವು ಕಡಿಮೆ ಇಲ್ಲ. ಅಪ್ರತಿಮ ಹೋರಾಟಗಾರರು, …

Read More »

ವಂದೇ ಮಾತರಂ ಹಾಡುವುದನ್ನು ತಡೆಯಲು ಸೋನಿಯಾ ಗಾಂಧಿ ಯತ್ನ: ಬಿಜೆಪಿ ಆರೋಪ

ನವದೆಹಲಿ: ಇಲ್ಲಿನ ಕಾಂಗ್ರೆಸ್‌  ಪಕ್ಷದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಸೋನಿಯಾ ಗಾಂಧಿ ವಂದೇ ಮಾತರಂನ  ಪೂರ್ಣ ಆವೃತ್ತಿಯನ್ನು ಹಾಡಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ಸುಧಾಂಶು ತ್ರಿವೇದಿ, ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಲಾಗುತ್ತಿರುವ ಮೊದಲ ಸ್ವಾತಂತ್ರ್ಯ ದಿನ ಇದು. ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಮಾತರಂ ಹಾಡುತ್ತಿದ್ದಾಗ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ‘ಸೂಪರ್-ಪ್ರೆಸಿಡೆಂಟ್’ ರಾಹುಲ್ ಗಾಂಧಿ …

Read More »

ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ – ದ್ವಿಚಕ್ರ ವಾಹನಗಳಿಗೆ 80 ರೂ. ದರ

ಬೆಂಗಳೂರು: ರಾಜ್ಯದಲ್ಲಿ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಲಾಗಿದೆ. ಸಾರಿಗೆ ಇಲಾಖೆ ದರ ಏರಿಕೆ ಆದೇಶವನ್ನು ಪ್ರಕಟಿಸಿದೆ. ವಾಯು ಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳಲ್ಲಿ ಪಿಯುಸಿ ಪತ್ರ ನೀಡುವಾಗ ನಡೆಯುವ ಪರೀಕ್ಷಾ ಶುಲ್ಕದಲ್ಲಿ ಪರಿಷ್ಕರಣೆ ಆಗಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ಯಾವುದಕ್ಕೆ ಎಷ್ಟು ದರ? ದ್ವಿಚಕ್ರ ವಾಹನ: 65 ರೂ.ನಿಂದ 80 ರೂ.ಗೆ ಏರಿಕೆ ಆಟೋರಿಕ್ಷಾ: 75 ರೂ. – 80 ರೂ. ಪೆಟ್ರೋಲ್, ಎಲ್‌ಪಿಜಿ ಮತ್ತು …

Read More »

ಹರ್ ಘರ್ ತಿರಂಗಾ – ಹರ್ ಮನ್ ತಿರಂಗಾಕ್ಕೆ ಪ್ರೇರಣೆಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ದೆಹಲಿ ಮತ್ತು ಹುಬ್ಬಳ್ಳಿ ಕಾರ್ಯಾಲಯದಲ್ಲಿ 80ನೇ ಸ್ವಾತಂತ್ರ‍್ಯೋತ್ಸವವನ್ನು ಅತ್ಯಂತ ಅರ್ಥಪೂರ್ಣವಾಗಿ ಸಡಗರ, ಸಂಭ್ರಮದಿಂದ ವಿಶಿಷ್ಠವಾಗಿ ಆಚರಿಸಲಾಯಿತು ದೆಹಲಿಯ ಗೃಹ ಕಚೇರಿಯಲ್ಲಿ ಸಚಿವರು ರಕ್ಷಣಾ ಸಿಬ್ಬಂದಿ ಮತ್ತು ಸಹೋದ್ಯೋಗಿಗಳ ಜೊತೆ ಸೇರಿ ಧ್ವಜಾರೋಹಣ ನೆರವೇರಿಸಿದರೆ, ಹುಬ್ಬಳ್ಳಿ ಕಚೇರಿಯಲ್ಲಿ ‘ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ, ಸಮಾನ ಅವಕಾಶ ಲಭಿಸಬೇಕೆಂಬ ಆಶಯ-ಸಂದೇಶದೊಂದಿಗೆ ಸವಿತಾ ಸಮಾಜ, ಹಡಪದ ಸಮಾಜದ ಮುಖಂಡರಿಂದಲೇ ಧ್ವಜಾರೋಹಣ ನೆರವೇರಿಸಿ ಪ್ರೇರಣೆಯಾದರು. ದೆಹಲಿಯ …

Read More »

ಧಾರವಾಡ | ಫಸಲ್ ಬಿಮಾ ಯೋಜನೆಯಲ್ಲಿ ಭಾರೀ ಗೋಲ್ಮಾಲ್‌ – 9 ಕೋಟಿಗೂ ಹೆಚ್ಚು ಹಣ ವಂಚನೆ

ಧಾರವಾಡ: ಮಳೆ ಹೆಚ್ಚಾದರೆ ಅಥವಾ ಮಳೆಯೇ ಇಲ್ಲದೇ ಬೆಳೆ ನಷ್ಟವಾದರೆ ವಿಮೆ  ಸಹಾಯ ಪಡೆಯಬಹುದು ಎಂದು ರೈತರು ಬೆಳೆ ವಿಮೆ ಮಾಡಿಸುತ್ತಾರೆ. ಆದರೆ ಇದೇ ಬೆಳೆ ವಿಮೆ ಯೋಜನೆಯಲ್ಲಿ ಭಾರೀ ವಂಚನೆ ಧಾರವಾಡ  ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. 2025-26 ಸಾಲಿನಲ್ಲಿ ಈ ತಬಕದಹೊನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 12,271 ಜನ ರೈತರು (farmers) ಬೆಳೆ …

Read More »

ದೇವರಮನೆ ಬೆಟ್ಟದಲ್ಲಿ ಬೆಂಗಳೂರಿನ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

ಚಿಕ್ಕಮಗಳೂರು: ಮೂಡಿಗೆರೆಯ ದೇವರಮನೆ ಬೆಟ್ಟಕ್ಕೆ ಬಂದಿದ್ದ ಬೆಂಗಳೂರು ಮೂಲದ ಯುವಕನೊಬ್ಬ ಹೃದಯಾಘಾತದಿಂದಸಾವನ್ನಪ್ಪಿದ್ದಾನೆ. ನರೇಶ್ (26) ಮೃತ ಯುವಕ. ನರೇಶ್ ಮೂಲತಃ ಕಲಬುರುಗಿ ಜಿಲ್ಲೆಯವನು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ವೀಕ್ ಎಂಡ್ ಆಗಿದ್ದರಿಂದ ಸ್ನೇಹಿತರ ಜೊತೆ ಬೆಂಗಳೂರಿನಿಂದ ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡ ತಾಣಕ್ಕೆ ಬಂದಿದ್ದ. ದೇವರಮನೆ ಬೆಟ್ಟದ ಸೌಂದರ್ಯ ಸವಿದು ಹಿಂದಿರುಗುವಾಗ ರಸ್ತೆ ಮಧ್ಯೆ ತುಂತುರು ಮಳೆಯಲ್ಲಿ ಕೋಟ್ ಹಾಕಿಕೊಳ್ಳಲು ನರೇಶ್ ಬೈಕ್ ನಿಲ್ಲಿಸಿದ್ದ. ಈ ವೇಳೆ …

Read More »