Breaking News

ಹುಸಿ ಬಾಂಬ್ ಕರೆಗಳು, ಇಮೇಲ್ ಪತ್ತೆ ಹಚ್ಚೋದು ಕಷ್ಟ- ಪ್ರಿಯಾಂಕ್ ಖರ್ಗೆ

ಬೆಂಗಳೂರು : ಹುಸಿ ಬಾಂಬ್ ಕರೆಗಳು , ಇಮೇಲ್‌ಗಳನ್ನು ಪತ್ತೆ ಹಚ್ಚುವುದು ಕಷ್ಟದ ಕೆಲಸ. ಆದರೂ ಹುಸಿ ಬಾಂಬ್ ಕರೆಗಳ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ  ತಿಳಿಸಿದ್ದಾರೆ. ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಬಂದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆಗಾಗ ಇಂತಹ ಹುಸಿ ಬೆದರಿಕೆಗಳು ಬರುತ್ತದೆ. ವಿಮಾನ ನಿಲ್ದಾಣ ಇರಬಹುದು, ಥರ್ಮಲ್ ಪವರ್ ಪ್ಲ್ಯಾಂಟ್ ಇರಬಹುದು.‌ ಎಚ್ಚೆತ್ತುಕೊಂಡು ಸೂಕ್ತ ಕ್ರಮ ತೆಗೆದುಕೊಂಡಿದ್ದೇವೆ ಎಂದರು. …

Read More »

ಮೌಲ್ವಿಗಳಿಗೆ ಅವಮಾನ ಆರೋಪ – ಪುನೀತ್ ಕೆರೆಹಳ್ಳಿ ಬಂಧನ

ಹಾಸನ: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪದ ಮೇಲೆ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯವರನ್ನು  ಕುಮಾರಸ್ವಾಮಿ ಲೇಔಟ್ ಪೊಲೀಸರು  ಬಂಧಿಸಿದ್ದಾರೆ. ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಅಬ್ದುಲ್ ರಜಾಕ್ ಎಂಬವರು ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ, ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ಅವರ ನಿವಾಸದ ಮೇಲೆ ಪೊಲೀಸರು ದಾಳಿ ಮಾಡಿ, ಬಂಧಿಸಿ ಕರೆದೊಯ್ದಿದ್ದಾರೆ. ಬಂಧನದ ವೇಳೆ ಸರ್ಕಾರದ ವಿರುದ್ಧ ಅವರು ಕಿಡಿಕಾರಿದ್ದಾರೆ. ನನಗೆ ಜೀವ ಬೆದರಿಕೆ ಇದೆ, …

Read More »

ಗುಂಪು-ಗುಂಪಾಗಿ ಕಾಣಿಸಿಕೊಂಡ ಕಾಡಾನೆ ಹಿಂಡು – ಡ್ರೋನ್ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆ – ಮಾನವ ಸಂಘರ್ಷ ತೀವ್ರಗೊಳ್ಳುತ್ತಿದೆ. ಈ ಮಧ್ಯೆ ಕಾಡಾನೆಗಳ ಹಿಂಡು ಕಾಣಿಸಿಕೊಂಡಿರುವುದು ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿರಾಜಪೇಟೆ ತಾಲೂಕಿನ ಕುಕ್ಲೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ. ಈ ಸುಂದರ ದೃಶ್ಯ ಪ್ರಕೃತಿ ಹಾಗೂ ಪ್ರಾಣಿಪ್ರಿಯರಿಗೆ ಮುದ ನೀಡಿದ್ರೂ, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ. ಪಾಳುಬಿದ್ದ ಗದ್ದೆಯ ಮಧ್ಯೆ ಸಂಚರಿಸುತ್ತಿದ್ದ ಕಾಡಾನೆಗಳ ವಿಡಿಯೋವನ್ನ ಸ್ಥಳೀಯರು ಡ್ರೋನ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಈ ದೃಶ್ಯ ಇದೀಗ ಸಾಮಾಜಿಕ …

Read More »

ಕೋಲಾರದಲ್ಲಿ ಸಮುದಾಯ ಭವನ, ಅಗನವಾಡಿಗಳಲ್ಲೇ ಕುಳಿತು ಮತಪಟ್ಟಿ ಪರಿಷ್ಕರಣೆ!

ಕೋಲಾರ: ಚುನಾವಣಾ ಆಯೋಗದ ಮಹತ್ವದ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಕೋಲಾರ ನಗರದಲ್ಲಿ ಭರದಿಂದ ಸಾಗುತ್ತಿದ್ದು ಸಮುದಾಯ ಭವನಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕ್ರಿಯೆ ನಡೆಸುತ್ತಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವ ಬದಲು ಹೊಸದೊಂದು ಪರ್ಯಾಯ ವ್ಯವಸ್ಥೆಯನ್ನು ಕಂಡುಕೊಂಡಿದ್ದಾರೆ. ಬಡಾವಣೆಗಳ ಒಂದೆಡೆ ಕುಳಿತು ಸಾರ್ವಜನಿಕರನ್ನು ತಾವಿದ್ದ ಜಾಗಕ್ಕೆ ಕರೆಸಿಕೊಂಡು ಅರ್ಜಿ ಭರ್ತಿ ಮಾಡುವ ಕೆಲಸವನ್ನು ಸಿಬ್ಬಂದಿ …

Read More »

ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಖಾಸಗಿ ಕಚೇರಿಗಳಲ್ಲಿ SIR

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಖಾಸಗಿ ಕಚೇರಿಗಳಲ್ಲಿ ಟೇಬಲ್ ಹಾಕಿಕೊಂಡು ಸಾಮೂಹಿಕವಾಗಿ ಪ್ರಕ್ರಿಯೆ ನಡೆಸಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ಆಯೋಗದ ನಿಯಮಾವಳಿಗಳ ಪ್ರಕಾರ, ಪ್ರತಿಯೊಬ್ಬ ಬಿಎಲ್‌ಒ ಕಡ್ಡಾಯವಾಗಿ ಮತದಾರರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪರಿಶೀಲಿಸಬೇಕು ಮತ್ತು ನಿಗದಿತ ಅರ್ಜಿಗಳನ್ನು ವಿತರಿಸಬೇಕು. ಆದರೆ ಬಿಟಿಎಂ ಲೇಔಟ್‌ನ ಕೆಲ ಅಧಿಕಾರಿಗಳು ತಮ್ಮ …

Read More »

ಸಿಎಂ ಆಗಿ ತಿಂಗಳು ಪೂರ್ಣ – ಸಿದ್ದರಾಮಯ್ಯ ಜೊತೆ ಡಿಕೆಶಿ ಫ್ಯಾಮಿಲಿ ಬ್ರೇಕ್‌ಫಾಸ್ಟ್‌

ಬೆಂಗಳೂರು: ಸಿಎಂ ಆಗಿ ತಿಂಗಳು ಪೂರ್ಣಗೊಂಡ ಹಿನ್ನೆಲೆ ಸಿಎಂ ಡಿಕೆ ಶಿವಕುಮಾರ್  ಅವರು ಕುಟಂಬ ಸಮೇತರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಉಪಹಾರದ ಜೊತೆ ಮಾತುಕತೆ ನಡೆಸಿದರು. ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್, ಪತ್ನಿ ಉಷಾ ಹಾಗೂ ಸಹೋದರ ಡಿಕೆ ಸುರೇಶ್ ಅವರು ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಈ ವೇಳೆ ಡಿಕೆಸು ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಒಟ್ಟಿಗೆ ಉಪಹಾರ …

Read More »

ರೇಣುಕಾಸ್ವಾಮಿ ಕೇಸ್‌ನ ಸಾಕ್ಷಿಗೆ ಬೆದರಿಕೆ – ತನಿಖೆ ವೇಳೆ ಕೆಲ ವಿಚಾರಗಳು ಬೆಳಕಿಗೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ  ಪ್ರಕರಣದ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದ ಕೇಸ್‌ನಲ್ಲಿ ವಿಚಾರಣೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಆರೋಪಿ ಪುನೀತ್‌ ಸೇರಿದಂತೆ ಮೂವರು ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಮೂವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು. ವಿಚಾರಣೆ ವೇಳೆ ಪುನೀತ್‌ ಹೈಡ್ರಾಮಾ ಮಾಡಿದ್ದು, ಕೆಲವು ವಿಚಾರಗಳು ಬಯಲಾಗಿವೆ. ಸಾಕ್ಷಿಧಾರ ಸಂದೀಪ್, ತುಮಕೂರಿನ ಖಾಸಗಿ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಜೂ.25ರಂದು ಆಕರ್ಷ್ ಎಂಬಾತ …

Read More »

ಆಮಿಷವೊಡ್ಡಿ ಮತಾಂತರಕ್ಕೆ ಯತ್ನ ಆರೋಪ- ಪ್ರಾರ್ಥನೆ ವೇಳೆ ಬಜರಂಗದಳ ಕಾರ್ಯಕರ್ತರ ಎಂಟ್ರಿ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಬಡ ಕುಟುಂಬಗಳಿಗೆ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಕ್ಕೇರಿ ಗ್ರಾಮದ ಬಡ ಕುಟುಂಬಗಳನ್ನು ಗುರಿಯಾಗಿಸಿಕೊಂಡು, ವಿವಿಧ ಆಮಿಷಗಳನ್ನು ಒಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂಬ ಮಾಹಿತಿ ಹಿಂದೂ ಪರ ಸಂಘಟನೆಗಳಿಗೆ ಲಭ್ಯವಾಗಿತ್ತು. ಮತಾಂತರ ಪ್ರಕ್ರಿಯೆ ನಡೆಯುತ್ತಿದೆ ಎನ್ನಲಾದ ಕುಟುಂಬ ಸದಸ್ಯರ ಮನೆಗೆ ಬಜರಂಗದಳದ ಕಾರ್ಯಕರ್ತರು ದಿಢೀರ್ ಭೇಟಿ ನೀಡಿದ್ದಾರೆ. ಈ ವೇಳೆ …

Read More »

ಕಲ್ಯಾಣ ಮಂಟಪದಲ್ಲಿ ಎಸ್‌ಐಆರ್ – ಮುಖ್ಯ ಚುನಾವಣಾಧಿಕಾರಿಯಿಂದ ಬಿಎಲ್‌ಒಗಳಿಗೆ ನೋಟಿಸ್ ಜಾರಿ

ರಾಮನಗರ: ಕಲ್ಯಾಣ ಮಂಟಪವೊಂದರಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಪ್ರಕ್ರಿಯೆ ನಡೆಸಿದ ಬೂತ್ ಮಟ್ಟದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ತನಿಖೆ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ಅ ವರು ರಾಮನಗರ  ಜಿಲ್ಲಾಧಿಕಾರಿ ಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು, ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ರಾಮನಗರ ಡಿಸಿಗೆ ನಿರ್ದೇಶನ …

Read More »

ಹನಿಮೂನ್ ಹಂತಕಿ ಸೋನಮ್‌ಗೆ ಬಿಗ್ ರಿಲೀಫ್ – ಬೇಲ್ ರದ್ದಿಗೆ ಸುಪ್ರೀಂ ನಕಾರ

ನವದೆಹಲಿ: ಹನಿಮೂನ್‌ಗೆ ಹೋದಾಗ ಪತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಹಂತಕಿ ಸೋನಮ್ ರಘುವಂಶಿಗೆ ನೀಡಿದ್ದ ಜಾಮೀನು ರದ್ದಿಗೆ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಮೇಘಾಲಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಶೀಲ್ ನಾಗು ಅವರಿದ್ದ ಪೀಠವು, ಸೋನಂಗೆ ನೀಡಿದ ಜಾಮೀನು ಆದೇಶಕ್ಕೆ ತಡೆ ನೀಡುವ ಬಗ್ಗೆ ಒಲವು ತೋರಿಸಿತ್ತು. ಆದರೆ ಆರೋಪಿ ಈಗಾಗಲೇ …

Read More »