Breaking News

ಸಿದ್ದರಾಮಯ್ಯ ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರೋದು ಅತಿರೇಕ ಆಗ್ತಿದೆ – ಯತ್ನಾಳ್

ವಿಜಯಪುರ: ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರುವುದು ತಪ್ಪು, ಸಿದ್ದರಾಮಯ್ಯ ಅವರದ್ದು ಅತಿರೇಕ ಆಯ್ತು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ  ಅವರದ್ದು ಅತಿರೇಕ ಆಯ್ತು. ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರುವುದು ತಪ್ಪು. ಮಾಜಿ ಸಂಸದರ ಮೇಲೆ ಕಲ್ಲು ತೂರಾಟ ಮಾಡಿದವರು, ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಗಲಾಟೆ ಮಾಡಿದವರು, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ …

Read More »

ದುಬಾರೆ ದುರಂತ – ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ಕೇಸ್

ಮಡಿಕೇರಿ: ದುಬಾರೆ ಆನೆ ಕ್ಯಾಂಪ್‌ನಲ್ಲಿಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ  ವಿರುದ್ಧ ಉಪ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಎ ಹಾಗೂ ಕುಶಾಲನಗರ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ರಕ್ಷಿತ್ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಪ್ರಕರಣ ದಾಖಲಿಸಿದ್ದಾರೆ. ಮೇ 18ರಂದು ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದ …

Read More »

ಬಡವರ ಮತಗಳನ್ನು ತೆಗೆಯಲು SIR ಮೂಲಕ ಸಂಚು: ಡಿಕೆಶಿ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು, ಬಿಎಲ್ಎಗಳಿಗೆ ಎಸ್ಐಆರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದ ಕಾರಣಕ್ಕೆ ಸಭೆ ಕರೆಯಲಾಗುತ್ತಿದೆ. ಏಕೆಂದರೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಪ್ರತಿಯೊಬ್ಬರೂ ಸಹ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ …

Read More »

ಬೆಳಗಾವಿ| ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ

ಬೆಳಗಾವಿ: ಕೆಎಲ್‌ಇ ಆಸ್ಪತ್ರೆಯಲ್ಲಿ  ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ದಿನೇಶ್ ಭಟ್ಕಳ್  ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ.ದಿನೇಶ್ ಭಟ್ಕಳ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದವರು. ಆದರೆ, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಸುಮಾರು 40 ವರ್ಷಗಳ ಕಾಲ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಇವರಿಗೆ ಶ್ವಾಸಕೋಶ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಚಿಕಿತ್ಸೆಗಾಗಿಯೇ ತಮ್ಮೂರು ಬಿಟ್ಟು ಬೆಳಗಾವಿಯ ಟಿಳಕವಾಡಿಯ ಮಂಡೋಲಿ …

Read More »

51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ  ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 51 ಸಾವಿರ ಅತಿಥಿ ಶಿಕ್ಷಕರನ್ನು  ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. 2026-27ನೇ ಶೈಕ್ಷಣಿಕ ಸಾಲು ಮೇ ತಿಂಗಳಿನಿಂದಲೇ ಆರಂಭವಾಗುತ್ತಿರುವುದರಿಂದ, ಶಾಲೆಗಳ ಆರಂಭದಲ್ಲೇ ಶಿಕ್ಷಕರ ಕೊರತೆಯಾಗದಂತೆ ತಡೆಯಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢಶಾಲೆಗಳು11 ಸಾವಿರ …

Read More »

ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ

ಬೆಂಗಳೂರು: ನಗರದ ಮಡಿವಾಳ  ಪ್ರದೇಶದಲ್ಲಿ ಕಾಲೇಜು ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿರೋ ಯುವತಿ, ಓದಿನ ಜೊತೆಗೆ ಮೋಮೋಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಮೋಮೋಸ್ ಅಂಗಡಿ ಮಾಲೀಕರಾದ ಅತುಲ್, ಗೋಷ್ ಎಂಬವರು ಮೇ 11ರಂದು ಯುವತಿಯನ್ನು ಪಾರ್ಟಿಗೆ ಆಹ್ವಾನ ಮಾಡಿದ್ದರು. ಈ ವೇಳೆ ಮೋಮೋಸ್ ಅಂಗಡಿಯನ್ನು ಮಾರಾಟ ಮಾಡಲು ಮುಂದಾಗಿರೋ ವಿಚಾರ ತಿಳಿಸಿ ಹೈನಾಸ್ ಎಂಬ ಮಧ್ಯವರ್ತಿಯನ್ನು ಕರೆದಿದ್ದಾರೆ. ಅಂಗಡಿ ಮಾರಾಟದ ವಿಚಾರ ಚರ್ಚೆ …

Read More »

ಸಿದ್ದರಾಮಯ್ಯ-ಡಿಕೆಶಿ ನಡುವೆ ಖರ್ಗೆ ಜಗಳ ಮಾಡಿಸ್ತಿದ್ದಾರೆ – ರಾಧಾಮೋಹನ್ ದಾಸ್

ಬೆಂಗಳೂರು: ದೆಹಲಿಯಲ್ಲಿರುವ ಕಾಂಗ್ರೆಸ್  ಮುಖಂಡರಾದ ಖರ್ಗೆಯವರು ಮಂಗನ ಮಾದರಿಯಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಎಂಬ ಎರಡು ಬೆಕ್ಕುಗಳ ನಡುವೆ ಜಗಳ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ  ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್  ಅವರು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವರು ಜಗಳ ಮಾಡಿಕೊಂಡು ಇದ್ರೆ ತಾವು ಮುಖ್ಯಮಂತ್ರಿ ಆಗಲು ಅವಕಾಶ ಸಿಗಲಿ ಎಂದು ಖರ್ಗೆಯವರು …

Read More »

ಕೇರಳಂ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಕಾಂಗ್ರೆಸ್‌ ನಾಯಕ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ

ತಿರುನಂತಪುರಂ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕರೂ ಆಗಿರುವ ತಿರುವನಂಚೂರು ರಾಧಾಕೃಷ್ಣನ್  ಶುಕ್ರವಾರ (ಇಂದು) ಕೇರಳಂ 16ನೇ ವಿಧಾನಸಭೆಗೆ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸ್ಪೀಕರ್ ಜಿ. ಸುಧಾಕರನ್ ಮತ ಚಲಾಯಿಸದ ಕಾರಣ ರಾಧಾಕೃಷ್ಣನ್ 101 ಮತಗಳನ್ನ ಪಡೆದು ಸ್ಪೀಕರ್‌ ಸ್ಥಾನಕ್ಕೆ ಆಯ್ಕೆಯಾದರು. 140 ಸದಸ್ಯರಲ್ಲಿ ಹಂಗಾಮಿ ಸ್ಪೀಕರ್ ಜಿ. ಸುಧಾಕರನ್ ಚುನಾವಣಾ ಅಧಿಕಾರಿ ಆಗಿದ್ದ ಕಾರಣ ಮತದಾನದಿಂದ ದೂರ ಉಳಿದಿದ್ದರು. ಚಲಾವಣೆಯಾದ 139 ಮತಗಳಲ್ಲಿ, ಯುಡಿಎಫ್‌ನಿಂದ ಕಣಕ್ಕಿಳಿದ …

Read More »

ಕರ್ನಾಟಕದ ನಾಲ್ಕು ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಜೂನ್‌ 18 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ. ಜೂನ್ 8 ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕ, ಜೂನ್ 9 ನಾಮಪತ್ರ ಪರಿಶೀಲನೆ, ಜೂನ್ 11 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಕರ್ನಾಟಕ ಸೇರಿ ಹತ್ತು ರಾಜ್ಯಗಳಲ್ಲಿ ಖಾಲಿಯಾಗಲಿರುವ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 24 …

Read More »

ಗಂಡನ ಕಿರುಕುಳಕ್ಕೆ ಬೇಸತ್ತು ನಾಲ್ಕು ತಿಂಗಳ ಗರ್ಭಿಣಿ ಆತ್ಮಹತ್ಯೆ

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶೃತಿ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಎರಡು ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ …

Read More »