ಬೆಂಗಳೂರು: ವಾಟ್ಸಪ್ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ ಎಂದು ತೆರೆಯಲು ಹೋಗುವ ಮುನ್ನ ಎಚ್ಚರವಾಗಿರಿ. ಮದುವೆ ಆಹ್ವಾನ ಪತ್ರಿಕೆ ಬಂದಿದೆ ಎಂದು ನಂಬಿ ಫೈಲ್ ಓಪನ್ (APK File Scam) ಮಾಡಿದ ಸರ್ಕಾರಿ ಅಧಿಕಾರಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಸುಮಾರು 9.96 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸೈಬರ್ ವಂಚಕರು ಜನರನ್ನು ಮೋಸಗೊಳಿಸಲು ದಿನದಿಂದ ದಿನಕ್ಕೆ ಹೊಸ ಹೊಸ ತಂತ್ರಗಳನ್ನು ಬಳಸುತ್ತಿದ್ದಾರೆ. ವಾಟ್ಸಪ್ಗೆ ಬರುವ ಅಪರಿಚಿತ ಲಿಂಕ್ ಅಥವಾ ಫೈಲ್ಗಳನ್ನು …
Read More »ಫುಟ್ಪಾತ್ ತೆರವಿಗೆ ಜನರು ಸಹಕಾರ ಕೊಡಬೇಕು: ಪರಮೇಶ್ವರ್
ಬೆಂಗಳೂರು: ನಗರದಲ್ಲಿ ಮಾಡ್ತಿರೋ ಫುಟ್ಪಾತ್ ತೆರವಿಗೆ ಜನರು ಸಹಕಾರ ಕೊಡಬೇಕು ಅಂತ ಡಿಸಿಎಂ ಪರಮೇಶ್ವರ್ ಮನವಿ ಮಾಡಿದ್ದಾರೆ. ಶಿವಾಜಿ ನಗರದಲ್ಲಿ ಫುಟ್ಪಾತ್ ತೆರವು ಮಾಡಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಫುಟ್ಪಾತ್ ತೆರವಿಗೆ ಜನ ಸಹಕಾರ ಕೊಡಬೇಕು. ಫುಟ್ಪಾತ್ ಅಂದರೆ ಏನು? ಫುಟ್ಪಾತ್ ಅನ್ನು ಅಂಗಡಿ ಪಾತ್ ಮಾಡಿದ್ರೆ ಹೇಗೆ? ಅಂತ ಪ್ರಶ್ನೆ ಮಾಡಿದ್ದಾರೆ. ಶಿವಾಜಿ ನಗರದಲ್ಲಿ ತೆರವು ಮಾಡಲು ಹೋದಾಗ ಅಧಿಕಾರಿಗಳ …
Read More »ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿ ಅರೆಸ್ಟ್
ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯುವಕ ಯತ್ನಿಸಿದ್ದಾನೆ. 23 ವರ್ಷದ ಸುರೇಶ್ ಬಂಧಿತ ಯುವಕ. ತಂದೆ ತಾಯಿ ಕೂಲಿ ಕೆಲಸಕ್ಕೆ ಹೋಗಿರುವಾಗ ಮನೆಗೆ ನುಗ್ಗಿದ ಆರೋಪಿ, ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿಯ ಕೂಗಾಟ ಕೇಳಿ ಅಕ್ಕಪಕ್ಕದ ಮನೆಯವರು ಬಂದಿದ್ದಾರೆ. ಯುವಕನನ್ನು ಹಿಡಿದು ಹುಲ್ಲಹಳ್ಳಿ ಠಾಣೆ …
Read More »ಒಂದೇ ದಿನ ಚಿತ್ರದುರ್ಗದಲ್ಲಿ ನಾಲ್ವರು ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬೀದಿ ನಾಯಿಗಳ (Stray Dog Attack) ದಾಳಿ ಮತ್ತೆ ಆತಂಕ ಮೂಡಿಸಿದೆ. ನಗರದ ಚೇಳಗುಡ್ಡ ಮತ್ತು ನೆಹರು ನಗರ ಬಡಾವಣೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಪುಟ್ಟ ಮಕ್ಕಳು ನಾಯಿಗಳ ದಾಳಿಗೆ ಒಳಗಾಗಿ ಗಾಯಗೊಂಡಿದ್ದಾರೆ. ಮನೆ ಮುಂದೆ ಆಟವಾಡುತ್ತಿದ್ದ ಸುಮಾರು ಐದುರಿಂದ ಆರು ವರ್ಷದ ಮಕ್ಕಳ ಮೇಲೆ ಏಕಾಏಕಿ ಬೀದಿ ನಾಯಿಗಳು ದಾಳಿ ನಡೆಸಿವೆ. ದಾಳಿಯಿಂದ ಮಕ್ಕಳ ಮುಖ, ಕೈ, ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ …
Read More »ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ – ರೈತರ ಮೊಗದಲ್ಲಿ ಮೂಡಿದ ಸಂತಸ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಬಿರುಸುಗೊಂಡಿದೆ. ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಕಾವೇರಿ ಜಲಾನಯನ ಪ್ರದೇಶದ ಜನರಲ್ಲಿ ಹರ್ಷ ತಂದಿದೆ. ಕೊಡಗು ಜಿಲ್ಲೆಯಲ್ಲಿ ಮತ್ತೆ ಆರಂಭವಾದ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ಕೆಲ ದಿನಗಳಿಂದ ಮಳೆ ಕೊರತೆಯಿಂದ ಜಲಾಶಯದ ನೀರಿನ ಮಟ್ಟ ಕುಸಿದಿದ್ದರೂ, ಇದೀಗ ಕಳೆದ …
Read More »ಚೆನ್ನಮ್ಮ ಸಮಾಧಿ ಬಳಿ ದೇವೇಗೌಡರ ಭಾವುಕ ನಮನ; ಜ್ಯೋತಿ ಆರದಂತೆ ವಿಶೇಷ ವ್ಯವಸ್ಥೆ
ಹಾಸನ: ಪತ್ನಿ ಚೆನ್ನಮ್ಮ ಅವರ ಅಗಲಿಕೆಯ ನೋವಿನ ನಡುವೆಯೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕುಟುಂಬ ಸಮೇತ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಚೆನ್ನಮ್ಮ ಅವರ ಸಮಾಧಿ ಸ್ಥಳಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅವರೊಂದಿಗೆ ಪುತ್ರರಾದ ಎಚ್.ಡಿ. ರೇವಣ್ಣ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪುತ್ರಿಯರಾದ ಅನಸೂಯ, ಶೈಲಜಾ ಹಾಗೂ …
Read More »ಪ್ರಧಾನಿ ನಿವಾಸದ ಎದುರು ರಾಹುಲ್, ಪ್ರಿಯಾಂಕಾ ಧರಣಿ – ಮೋದಿ, ಅಮಿತ್ ಶಾ, ಪ್ರಧಾನ್ ರಾಜೀನಾಮೆಗೆ ಪಟ್ಟು
ನವದೆಹಲಿ: ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇಂದು (ಮಂಗಳವಾರ) ಪ್ರಧಾನಿ ಮೋದಿ ಅವರ ನಿವಾಸದ ಎದುರು ಧರಣಿ ನಡೆಸಿದರು. ರಾಹುಲ್ ಗಾಂಧಿ ಅವರೊಂದಿಗೆ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ , ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಕೆ.ಹೆಚ್ ಮುನಿಯಪ್ಪ ಸೇರಿದಂತೆ …
Read More »ಆಕೆಗೆ ಮೂಡ್ ಬಂದು ನನ್ನನ್ನ ಅಪ್ಪಿ ಚುಂಬಿಸಿದ್ದಳು – ವಿಷ ಸೇವಿಸಿದ್ದ ಪಿಎಸ್ಐ ಟ್ರೈನಿ ಡೆತ್ನೋಟ್ನಲ್ಲಿ ಬಯಲಾಯ್ತು ರಹಸ್ಯ!
ಹೈದರಾಬಾದ್: ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿ ಯಲ್ಲಿ ತರಬೇತಿ ಪಡೆಯುತ್ತಿರುವ ಐಪಿಎಸ್ ಪ್ರೊಬೇಷನರಿಯೊಬ್ಬರು, ಸಹ ತರಬೇತಿ ಅಧಿಕಾರಿ ನೀಡಿರುವ ಕಿರುಕುಳ ಆರೋಪಗಳ ನಡುವೆಯೇ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತರಬೇತಿ ಅಧಿಕಾರಿ ಉದಯ ಕೃಷ್ಣ ರೆಡ್ಡಿ ಅವರು ಭಾನುವಾರ ಸಂಜೆ ನಗರದ ತಮ್ಮ ಸ್ನೇಹಿತರೊಬ್ಬರ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಇದು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶವಾಗಿತ್ತೇ ಅನ್ನೋದು ಇನ್ನೂ ದೃಢವಾಗಿಲ್ಲ. …
Read More »RSSಗೆ ಪ್ರಿಯಾಂಕ್ ಖರ್ಗೆ ಅವಹೇಳನ ಪ್ರಕರಣ – ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಮತ್ತೆ ಸಮನ್ಸ್
ಬೆಂಗಳೂರು: ಆರ್ಎಸ್ಎಸ್ ವಿರುದ್ಧ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮತ್ತೆ ಸಮನ್ಸ್ ಜಾರಿ ಮಾಡಿದೆ. ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ತೇಜಸ್ ಗೌಡ ಎಂಬುವವರು ಕಳೆದ ವರ್ಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ರು. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಇಂದು ಗೃಹಸಚಿವ ಪ್ರಿಯಾಂಕ್ ಖರ್ಗೆ, ಮಹಮ್ಮದ್ ನಲಪಾಡ್ ಖುದ್ದು ಹಾಜರಾತಿಗೆ ಕೋರ್ಟ್ ಸೂಚಿಸಿತ್ತು. ಆದರೆ …
Read More »ಪತ್ರಕರ್ತರಿಗೆ ಕೌಶಲ ಮತ್ತು ಜ್ಞಾನ ಅಗತ್ಯ : ಕುಲಕರ್ಣಿ
ಬಾಗಲಕೋಟೆ (21): ಪತ್ರಿಕೋದ್ಯಮದಲ್ಲಿ ಎಐ ಮುಂದಿನ ದಿನಮಾನಗಳಲ್ಲಿ ಪ್ರಭಾವ ಬೀರಬಹುದು ಆದರೆ ಕೌಶಲ ಮತ್ತು ಜ್ಞಾನ ಇದ್ದವನು ಉತ್ತಮ ಪತ್ರಕರ್ತನಾಗಬಲ್ಲ ಎಂದು ಹಿರಿಯ ಪತ್ರಕರ್ತರಾದ ಬಂಡು ಕುಲಕರ್ಣಿ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಭವಿಷ್ಯದ ಪತ್ರಿಕೋದ್ಯಮದಲ್ಲಿ ಎಐ ಬಳಕೆ ವಿಷಯದ ಕುರಿತು ಮಾತನಾಡಿದ ಅವರು …
Read More »
Laxmi News 24×7