Breaking News

ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಗೆ ಪೂರಕ; ಮಳೆ ಕೊರತೆ ಎದುರಿಸಲು ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ ಡಾ.ಜಿ. ಪರಮೇಶ್ವರ್

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಈ ಬಾರಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ಹಾಗೂ ಮೇವಿನ ಕೊರತೆಯಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಹೊಸ ಆಲೋಚನೆಗಳೊಂದಿಗೆ ಆಡಳಿತ …

Read More »

13 ಕೆಜಿ ಚಿನ್ನ, 9 ಕೆಜಿ ಬೆಳ್ಳಿ, ಗೋಡೆಯಲ್ಲಿ ಬಚ್ಚಿಟ್ಟಿದ್ದ 1.62 ಕೋಟಿ ಹಣ ಜಪ್ತಿ – ನಿವೃತ್ತ ARTO ಆಸ್ತಿ ಕಂಡು ಅಧಿಕಾರಿಗಳೇ ದಂಗು

ಲಕ್ನೋ: ಉತ್ತರ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಲಿತ್ ಕುಮಾರ್  ಅವರ ಲಕ್ನೋ ನಿವಾಸದ ಮೇಲೆ ವಿಜಿಲೆನ್ಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ನಿವೃತ್ತ ಅಧಿಕಾರಿ ಬಳಿ ಸಿಕ್ಕ ಆಸ್ತಿ ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ. ಸುಮಾರು 26 ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆ ಬಳಿಕ ಲಲಿತ್‌ ಮನೆಯಿಂದ 13 ಕೆಜಿ ಚಿನ್ನ, …

Read More »

ಶಿಕ್ಷಕಿ ಬೈದರೆಂಬ ಆರೋಪ; ಮನನೊಂದು ನೇಣಿಗೆ ಶರಣಾದ 8ನೇ ತರಗತಿ ವಿದ್ಯಾರ್ಥಿನಿ

ಬೆಂಗಳೂರು: ಶಿಕ್ಷಕಿ ಬೈದರೆಂಬ ವಿಚಾರಕ್ಕೆ ಮನನೊಂದು 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ಈ ದುರ್ಘಟನೆ ನಡೆದಿದೆ. ಮಧುಶ್ರೀ ಮೃತ ವಿದ್ಯಾರ್ಥಿನಿ. ಆಕೆ ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಗ್ಗೆ ಪೋಷಕರು ಎದ್ದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ, ‘ಶಾಲೆಯಲ್ಲಿ …

Read More »

ಎಸ್‌ಐಆರ್ ಕಾರ್ಯಕ್ಕೆ ನೆಟ್‌ವರ್ಕ್ ಸಮಸ್ಯೆ – ಮೊಬೈಲ್ ಹಿಡಿದು ಬೆಟ್ಟ ಏರಿದ ಬಿಎಲ್‌ಒಗಳು

ರಾಯಚೂರು: ಲಿಂಗಸುಗೂರು  ತಾಲೂಕಿನಲ್ಲಿ ಎಸ್‌ಐಆರ್‌‌ ಕಾರ್ಯದಲ್ಲಿ ತೊಡಗಿರುವ ಬಿಎಲ್‌ಒಗಳು ಮೊಬೈಲ್‌ಗೆ ನೆಟ್‌ವರ್ಕ್ ಇಲ್ಲದೇ ಪರದಾಡಿದ್ದಾರೆ. ನೆಟ್‌ವರ್ಕ್‌ಗಾಗಿ ಮೊಬೈಲ್‌ಹಾಗೂ ದಾಖಲೆಗಳನ್ನು ಹಿಡಿದು ಬೆಟ್ಟ ಏರಿದ್ದಾರೆ. ಬೆಟ್ಟ ಪ್ರದೇಶದ ಗೋಲಪಲ್ಲಿ, ಸುಗೂರುದೊಡ್ಡಿ ಗ್ರಾಮದಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದ ಆನ್‌ಲೈನ್‌ನಲ್ಲಿ ಮಾಹಿತಿ ಭರ್ತಿಮಾಡಲು ಬಿಎಲ್‌ಒಗಳು ಎತ್ತರದ ಬೆಟ್ಟಗಳನ್ನು ಏರಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ದೇವಮ್ಮ, ರಾಧಾ ಗೌಡಪ್ಪ ಅವರು ಮೂರು ಅಂಗನವಾಡಿ ಕೇಂದ್ರ ವ್ಯಾಪ್ತಿಯ 350 ಮನೆಗಳ ಎಸ್‌ಐಆರ್ ಕಾರ್ಯ ನಡೆಸಿದ್ದಾರೆ. ನಗರ ಪ್ರದೇಶದಲ್ಲಿ ಕೆಲವೆಡೆ ಮನೆ …

Read More »

ಎಸ್‌ಐಆರ್‌ ವಿಚಾರಕ್ಕೆ ತಹಶೀಲ್ದಾರ್, ಪಿಡಿಒಗಳ ಮಧ್ಯೆ ಗಲಾಟೆ – ಏಕವಚನದಲ್ಲೇ ವಾಗ್ವಾದ

ಬೆಳಗಾವಿ: ಎಸ್‌ಐಆರ್‌  ವಿಚಾರಕ್ಕೆ ತಹಶೀಲ್ದಾರ್ ಹಾಗೂ ಪಿಡಿಒಗಳ  ಮಧ್ಯೆ ಗಲಾಟೆಯಾದ ಘಟನೆ ಖಾನಾಪುರದಲ್ಲಿ ನಡೆದಿದೆ. ಜಿಲ್ಲಾಧಿಕಾರಿ ಸೂಚನೆಯಂತೆ ಖಾನಾಪುರ ತಹಶೀಲ್ದಾರ್ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಎಸ್‌ಐಆರ್ ವಿಚಾರ ಚರ್ಚಿಸುವಾಗ ಪಿಡಿಒ ತಹಶೀಲ್ದಾರ್ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಪರಸ್ಪರ ಏಕವಚನದಲ್ಲೇ ಗಲಾಟೆ ಮಾಡಿಕೊಂಡಿದ್ದಾರೆ. ತಕ್ಷಣವೇ ಸಭೆಯಿಂದ ಹೊರಬಂದ ಪಿಡಿಒಗಳು ತಹಶೀಲ್ದಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಹಶೀಲ್ದಾರ್ ದರ್ಪ ತೋರಿಸುತ್ತಿದ್ದಾರೆ ಎಂದು ಕೆಲ ಪಿಡಿಒಗಳು ಆರೋಪಿಸಿದ್ದಾರೆ. ಈಬಗ್ಗೆ ಪ್ರತಿಕ್ರಿಯಿಸಿರುವ …

Read More »

ಬಿಡದಿ ಟೌನ್‌ಶಿಪ್ ಜಟಾಪಟಿ – ರೈತರ ಹೋರಾಟಕ್ಕೆ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಬೆಂಬಲ

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ರೈತರು  ನಡೆಸುತ್ತಿರುವ ಪ್ರತಿಭಟನೆ ಸದ್ಯ 485ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಭೈರಮಂಗಲ ಗ್ರಾಮದಲ್ಲಿ ನಡೆಯುತ್ತಿರುವ ರೈತರ ಈ ಸುದೀರ್ಘ ಹೋರಾಟಕ್ಕೆ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ  ಭಾಗವಹಿಸಿ, ತಮ್ಮ ಪೂರ್ಣ ಬೆಂಬಲವನ್ನು ಘೋಷಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ರೈತರ ಅಹವಾಲು ಮತ್ತು ಸಮಸ್ಯೆಗಳನ್ನು ಆಲಿಸಿದ ಸಂತೋಷ್ ಹೆಗ್ಡೆಗೆ, ತಮ್ಮ ಭೂಮಿಯನ್ನು ಉಳಿಸಿಕೊಡುವಂತೆ ರೈತರು ಮನವಿ ಮಾಡಿದರು. ಈ ವೇಳೆ ಸಂತೋಷ್ …

Read More »

ವಸತಿ ಶಾಲೆಯಲ್ಲಿ ಬಾಲಕ ಅನುಮಾನಾಸ್ಪದ ಸಾವು ಕೇಸ್ – ದೈಹಿಕ ಶಿಕ್ಷಕ ಪೊಲೀಸರ ವಶಕ್ಕೆ

ಬೆಂಗಳೂರು: ವಸತಿ ಶಾಲೆಯಲ್ಲಿ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೈಹಿಕ ಶಿಕ್ಷಕನನ್ನು ವಶಕ್ಕೆ ಪಡೆದಿದ್ದಾರೆ. ಮೃತ ಗುರುಕಿರಣ್ ಪೋಷಕರು ಶಾಲಾ ಆಡಳಿತ ಮಂಡಳಿ ಹಾಗೂ ದೈಹಿಕ ಶಿಕ್ಷಕನ ವಿರುದ್ಧ ಬಾಗಲೂರು ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದರು. ದೂರಿನನ್ವಯ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಇದೀಗ ದೈಹಿಕ ಶಿಕ್ಷಕ ನಾರಾಯಣ್‌ನನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ರಣರಣಗವಾಗಿದ್ದ ಶಾಲಾ ಮೈದಾನ: ಬುಧವಾರ (ಜು.8) ಅನುಮಾನಾಸ್ಪದವಾಗಿ ಬಾಲಕ ಸಾವನ್ನಪ್ಪಿದ್ದಕ್ಕೆ ದೈಹಿಕ …

Read More »

ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಮತ್ತೆ ಶಾಕ್‌ ಕೊಟ್ಟಿದ್ದಾರೆ. ಫುಟ್‌ಪಾತ್‌ ತೆರವು ಕಾರ್ಯಾಚರಣೆ ನಿಲ್ಲೋದಿಲ್ಲ, ಮುಂದುವರೆಸೋದಾಗಿ ಸಚಿವ ಕೃಷ್ಣ ಬೈರೇಗೌಡ  ಖಡಕ್‌ ಸೂಚನೆ ಕೊಟ್ಟಿದ್ದಾರೆ. ಮತ್ತೊಂದು ಕಡೆ ಬೆಂಗಳೂರಿನ  ಹಲವು ಕಡೆ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ವ್ಯಾಪಾರಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮತ್ತೊಂದು ಹೋರಾಟಕ್ಕೂ ಬೀದಿಬದಿ ವ್ಯಾಪಾರ ಸಮಿತಿ ಸಜ್ಜಾಗ್ತಿದೆ. ಕಳೆದ 8 ದಿನಗಳಿಂದ ಬೆಂಗಳೂರಿನಲ್ಲಿ ಫುಟ್‌ಪಾತ್‌ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಾ ಇದೆ. ಸುಮಾರು 430 …

Read More »

ಪ್ರೇಯಸಿಗಾಗಿ ಅಮೆರಿಕದಲ್ಲಿ ಪತ್ನಿ ಕೊಲೆ; ಡೆಡ್‌ಬಾಡಿ ಫೋಟೋ ಲವ್ವರ್‌ಗೆ ಕಳಿಸಿದ ಭಾರತೀಯ ಮೂಲದ ಟೆಕ್ಕಿ

ವಾಷಿಂಗ್ಟನ್‌: ಅಮೆರಿಕದಲ್ಲಿ ಭಾರತೀಯ ಮೂಲದ ಟೆಕ್ಕಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ,  ಭಾರತದಲ್ಲಿದ್ದ ತನ್ನ ಪ್ರೇಮಿಗೆ ಮೃತದೇಹದ ಫೋಟೋ ಕಳುಹಿಸಿರುವ ಘಟನೆ ಬೆಳಕಿಗೆ ಬಂದಿದೆ. 30 ವರ್ಷದ ಅವಿನಾಶ್ ನಾರ್ನೆ ಬಂಧಿತ ಆರೋಪಿ. 27 ವರ್ಷದ ರಾಜಿತಾ ಸಬ್ಬಿನೇನಿ ಮೃತ ಮಹಿಳೆ. ಇಬ್ಬರೂ ಅಮೆರಿಕದಲ್ಲಿ ವಾಸವಾಗಿದ್ದು, 7 ತಿಂಗಳ ಹಿಂದೆಯೇ ಈ ಘಟನೆ ನಡೆದಿದೆ. ಅಕ್ಟೋಬರ್ 27, 2025ರಂದು ಅವಿನಾಶ್ ಪೊಲೀಸರಿಗೆ ಕರೆ ಮಾಡಿ, ನನ್ನ ಪತ್ನಿ ಬಾತ್‌ರೂಮ್‌ನಲ್ಲಿ ಲಾಕ್ …

Read More »

ಸರ್ಕಾರಿ ಕೆಲಸಕ್ಕಾಗಿ 7 ಲಕ್ಷ ಸುಪಾರಿ ಕೊಟ್ಟು ಅಮ್ಮನನ್ನೇ ಮುಗಿಸಿದ ಮಗಳು

ಜೈಪುರ: ಆಸ್ತಿ ಹಾಗೂ ಸರ್ಕಾರಿ ಕೆಲಸಕ್ಕಾಗಿ ಹಂತಕರಿಗೆ 7 ಲಕ್ಷ ರೂ. ಸುಪಾರಿ ಕೊಟ್ಟು ಮಗಳೇ ಅಮ್ಮನನ್ನು ಕೊಲೆ ಮಾಡಿಸಿದ ಪ್ರಕರಣ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಆಯುಷಿ ಶರ್ಮಾ (23) ಆಸ್ತಿ ಮತ್ತು ತಾಯಿಯ ಸರ್ಕಾರಿ ಉದ್ಯೋಗಕ್ಕಾಗಿ ತನ್ನ ಚಿಕ್ಕಪ್ಪ ಮೋಹನ್ ಸ್ವರೂಪ್ ಮತ್ತು ಸೋದರಸಂಬಂಧಿ ಬಲರಾಮ್ ಅಲಿಯಾಸ್ ರವಿ ಜೊತೆ ಸೇರಿ ಈ ಸಂಚು ರೂಪಿಸಿದ್ದಳು. ಬಳಿಕ ಕೊಲೆಗಾಗಿ ಬಾಡಿಗೆ ಹಂತಕರನ್ನು ನೇಮಿಸಿದ್ದಳು. ಅದರಂತೆ ಸುಪಾರಿ ಹಂತಕರು ಸ್ಕಾರ್ಪಿಯೋ ಎಸ್‌ಯುವಿಯಿಂದ …

Read More »