Breaking News

ರಾಜ್ಯ ಸರ್ಕಾರಿ ನೌಕರರಿಗೆ ಇಲ್ವಾ ಗ್ಯಾರಂಟಿ?

ಬೆಂಗಳೂರು: ರಾಜ್ಯ ಸರ್ಕಾರ  ಇದೀಗ ಗ್ಯಾರಂಟಿ ಇಕ್ಕಟ್ಟಿನಲ್ಲಿ ಸಿಲುಕಿದೆ. ಸದ್ಯ ಗ್ಯಾರಂಟಿ ಪರಿಷ್ಕರಣೆ ನಡೆಯುತ್ತಿದ್ದು, ಇದೇ ಹೊತ್ತಲ್ಲಿ ಸರ್ಕಾರಿ ನೌಕರರನ್ನು ಗ್ಯಾರಂಟಿ ಯೋಜನೆಗಳಿಂದ ಹೊರಗಿಡಲು ಚಿಂತನೆ ನಡೆಸಿದೆ. ಗ್ಯಾರಂಟಿ ಪ್ರಾಧಿಕಾರ ಈ ಬಗ್ಗೆ ಚಿಂತನೆ ನಡೆಸಿದ್ದು, ಸರ್ಕಾರಿ ನೌಕರರ ಕುಟುಂಬಗಳನ್ನು ಗ್ಯಾರಂಟಿ ಯೋಜನೆಗಳಿಂದ ಕಡಿತಗೊಳಿಸುವ ಬಗ್ಗೆ ಚರ್ಚಿಸುತ್ತಿದೆ. ಸದ್ಯ ಪ್ರಾಧಿಕಾರವು ಸರ್ಕಾರಿ ನೌಕರರಿಗೆ ಸ್ವಯಂ ಪ್ರೇರಿತವಾಗಿ ಗ್ಯಾರಂಟಿ ಸೌಲಭ್ಯ ಬಿಟ್ಟುಕೊಡಿ ಎಂದು ಸಲಹೆ ನೀಡಿದೆ. ಈ ಕುರಿತು ಗ್ಯಾರಂಟಿ ಪ್ರಾಧಿಕಾರದ …

Read More »

ಜೈಲಿನಲ್ಲಿ ಪ್ರಾಣಾಯಾಮ, ಶವಾಸನ ಮಾಡಿದ ದರ್ಶನ್‌

ಬೆಂಗಳೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆಯಅಂಗವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೂ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೊಲೆ ಪ್ರಕರಣದ ಆರೋಪಿಯಾಗಿ ಸದ್ಯ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಈ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದಾರೆ. ಕಾರಾಗೃಹದ ಎಲ್ಲಾ ಕೈದಿಗಳಿಗಾಗಿ ಸಾಮೂಹಿಕ ಯೋಗಾಭ್ಯಾಸ ಹಮ್ಮಿಕೊಳ್ಳಲಾಗಿತ್ತು. ಆದರೆ, ತಮಗೆ ತೀವ್ರ ಬೆನ್ನು ನೋವಿನ ಸಮಸ್ಯೆ ಇದೆ ಎಂದು ಹೇಳಿದ್ದ ನಟ ದರ್ಶನ್, ಆರಂಭದಲ್ಲಿ ಯೋಗ ದಿನಾಚರಣೆಯಲ್ಲಿ …

Read More »

ಮೈಸೂರು ರೈಲು ನಿಲ್ದಾಣದಲ್ಲಿ 40ಕ್ಕೂ ಹೆಚ್ಚು ಶಂಕಿತ ಬಾಂಗ್ಲಾ ವಲಸಿಗರು ಪತ್ತೆ – ತೀವ್ರ ವಿಚಾರಣೆ

ಮೈಸೂರು: ಮೈಸೂರು ರೈಲು ನಿಲ್ದಾಣದಲ್ಲಿ  40ಕ್ಕೂ ಹೆಚ್ಚು ಶಂಕಿತ ಬಾಂಗ್ಲಾ ವಲಸಿಗರುಪತ್ತೆಯಾಗಿದ್ದು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇವರನ್ನು ಗುರುತಿಸಿ ಪೊಲೀಸರಿಗೆಮಾಹಿತಿ ನೀಡಿದ್ದಾರೆ. ಕೊಲ್ಕತ್ತಾದಿಂದ ವಾರಕ್ಕೊಮ್ಮೆ ಸಂಚರಿಸುವ ಹೌರಾ ಎಕ್ಸ್‌ಪ್ರೆಸ್ ರೈಲಿನ ಮೂಲಕ ಇವರು ಮೈಸೂರಿಗೆ ಬಂದಿರುವುದಾಗಿ ತಿಳಿದುಬಂದಿದೆ. ರೈಲು ನಿಲ್ದಾಣದಲ್ಲಿ ಕಾರ್ಯಕರ್ತರು ಅವರ ಗುರುತಿನ ಚೀಟಿಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಹಲವರ ಬಳಿ ಇದ್ದ ಗುರುತಿನ ಚೀಟಿಗಳ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕೆಲವು ದಾಖಲೆಗಳು ನಕಲಿಯಾಗಿರುವ …

Read More »

ಅಡ್ಡ ಮತದಾನ ಮಾಡಿದ್ದು ಸಾಬೀತಾದರೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಚಂದ್ರು ಲಮಾಣಿ

ಗದಗ: ಪ್ರಾಮಾಣಿಕವಾಗಿ ಎನ್‌ಡಿಎಅಭ್ಯರ್ಥಿಗೆ ಮತ ಹಾಕಿದ್ದೇನೆ. ಧರ್ಮಸ್ಥಳ ಮಂಜುನಾಥನ ಮೇಲೆ ಮಾತ್ರವಲ್ಲ, ಯಾವುದೇ ದೇವರ ಮೇಲೆ ಪ್ರಮಾಣ ಮಾಡಲು ಹೇಳಿದರೂ ಮಾಡುತ್ತೇನೆ. ಅಡ್ಡ ಮತದಾನ  ಮಾಡಿದ್ದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕಡಾ. ಚಂದ್ರು ಲಮಾಣಿ ಹೇಳಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿ, ಯಾವುದೇ ಆಧಾರವಿಲ್ಲದೆ ನಮ್ಮ ಹೆಸರು ಹರಿದಾಡುತ್ತಿದೆ. ಸತ್ಯಶೋಧನಾ ಸಮಿತಿಯಲ್ಲಿ …

Read More »

ಈ ವರ್ಷದಿಂದಲೇ ವಿದ್ಯಾರ್ಥಿ ಚುನಾವಣೆ ಆರಂಭಿಸುತ್ತೇವೆ: ಡಿ.ಕೆ ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ನಿಲ್ಲಿಸಿರುವ ವಿದ್ಯಾರ್ಥಿ ಚುನಾವಣೆಯನ್ನು  ಈ ವರ್ಷದಿಂದಲೇ ಆರಂಭಿಸುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್‌  ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ, ಅಧಿಕಾರ ಹಸ್ತಾಂತರಿಸಿ ಅವರು ಮಾತಾಡಿದರು. ಈ ವೇಳೆ ವಿದ್ಯಾರ್ಥಿ ಚುನಾವಣೆ ಆರಂಭಿಸುವ ಬಗ್ಗೆ ಅವರು ಮಾಹಿತಿ ನೀಡಿದರು. ಈ ವೇಳೆ ತಾವು ಅಧಿಕಾರ ವಹಿಸಿಕೊಂಡ ದಿನವನ್ನು ನೆನಪಿಸಿಕೊಂಡರು. ನನಗೆ 2020ರ ಮಾ.10 ರಂದು ಸೋನಿಯಾ ಗಾಂಧಿ ಪಕ್ಷದ ಅಧಿಕಾರ ನೀಡಿದ್ದರು. ಆಗ …

Read More »

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಅನುಮಾನಾಸ್ಪದ ಸಾವು

ದಾವಣಗೆರೆ: ಇಲ್ಲಿನ ಕೈದಾಳೆ ಗ್ರಾಮದಲ್ಲಿ ಪ್ರೀತಿಸಿ ಮದುವೆಯಾಗಿದ್ದ  ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗ್ರಾಮದ ನಿವಾಸಿಯಾಗಿದ್ದ ಅಮೂಲ್ಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ. ಈಕೆ ಅದೇ ಗ್ರಾಮದ ಧನುಷ್ (19) ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಇಬ್ಬರು ಕ್ಲಾಸ್‌ಮೇಟ್‌ ಆಗಿದ್ದರು. ಇವರ ಪ್ರೀತಿಗೆ ಜಾತಿ ಕಾರಣಕ್ಕೆ ಕುಟುಂಬಸ್ಥರು ವಿರೋಧಿಸಿದ್ದರು. ಆದರೆ ಇಬ್ಬರೂ ಪೊಲೀಸ್‌ ಭದ್ರತೆಯಲ್ಲಿ ಮದುವೆಯಾಗಿದ್ದರು. ಮದುವೆಯಾಗಿ ಒಂದೇ ವರ್ಷದಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಯುವತಿಯ ಪೋಷಕರು ಆಕೆಯ ಪತಿ …

Read More »

ಕ್ಯೂರಿಂಗ್ ಮಾಡುವಾಗ ವಿದ್ಯುತ್‌ ಶಾಕ್‌ – ಸ್ಥಳದಲ್ಲೇ ಆರ್‌ಎಫ್‌ಓ ಸಾವು

ಹಾಸನ: ಕ್ಯೂರಿಂಗ್ ಮಾಡುವಾಗ ವಿದ್ಯುತ್‌ ಶಾಕ್‌ನಿಂದ  ಅರಣ್ಯ ಇಲಾಖೆ  ಆರ್‌ಎಫ್‌ಓ ಸಾವನ್ನಪ್ಪಿರುವ ಘಟನೆ ಹಾಸನ  ನಗರದ ಸತ್ಯಮಂಗಲ ಬಡಾವಣೆಯಲ್ಲಿ ನಡೆದಿದೆ. ಜಗದೀಶ್.ಪಿ (46) ಮೃತಪಟ್ಟ ಅರಣ್ಯಾಧಿಕಾರಿ.‌ ಕುಣಿಗಲ್‌ನಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ನೂತನ ಮನೆ ನಿರ್ಮಿಸುತ್ತಿದ್ದರು. ಇಂದು (ಜೂ.21) ಮನೆಯ ಗೋಡೆಗೆ ನೀರು ಹಾಕುವಾಗ ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 2015 ರಿಂದ 2020 ರವರೆಗೆ ಹಾಸನ ಜಿಲ್ಲೆಯಲ್ಲಿ ಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿದ್ದರು. ಜಗದೀಶ್.ಪಿ ಸಾವಿಗೆ ಅರಣ್ಯ‌ …

Read More »

ಯಲ್ಲಾಪುರದಲ್ಲಿ ಹಂದಿಜ್ವರಕ್ಕೆ ವ್ಯಕ್ತಿ ಬಲಿ

ಕಾರವಾರ: ಯಲ್ಲಾಪುರ ತಾಲೂಕಿನ ಚವತ್ತಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಹಂದಿಜ್ವರಕ್ಕೆ ಬಲಿಯಾಗಿದ್ದಾರೆ. ಮೃತರನ್ನು ರಾಜು ಮಂಜಗೌಡ (41) ಎಂದು ಗುರುತಿಸಲಾಗಿದೆ. ಜೂ.8 ರಂದು ಅವರು ಅಸ್ವಸ್ಥರಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿರಸಿ ಮಾರಿಕಾಂಬಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೂ ಅವರಿಗೆ ಕಾಯಿಲೆ ಉಲ್ಬಣಗೊಂಡಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಯಲ್ಲಾಪುರ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದ್ದು, …

Read More »

51 ವರ್ಷಗಳಿಂದ ಹಿಡಕಲ್ ಜಲಾಶಯದಲ್ಲಿ ಮುಳುಗಡೆಯಾಗಿದ್ದ ದೇವಸ್ಥಾನ ಮತ್ತೆ ಗೋಚರ!

ಬೆಳಗಾವಿ: ಮುಂಗಾರು ಮಳೆ ವಿಳಂಬವಾಗಿ ಬೆಳಗಾವಿ ಜಿಲ್ಲೆಯ ಪ್ರಸಿದ್ಧ ಹಿಡಕಲ್ ಜಲಾಶಯದ ಒಡಲು ಬರಿದಾಗುತ್ತಿರುವ ಬೆನ್ನಲ್ಲೇ, ಪ್ರಕೃತಿಯ ವಿಚಿತ್ರವೋ ಎಂಬಂತೆ ಇತಿಹಾಸವೊಂದು ಕಣ್ಣಮುಂದೆ ಮರುಕಳಿಸಿದೆ. ಕಳೆದ 51 ವರ್ಷಗಳಿಂದ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಐತಿಹಾಸಿಕ ವಿಠ್ಠಲ ದೇವಸ್ಥಾನವು ಈಗ ಮತ್ತೆ ಸಂಪೂರ್ಣವಾಗಿ ಗೋಚರಿಸಿದ್ದು, ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸಿದೆ. ಹುಕ್ಕೇರಿ ತಾಲೂಕಿನ ಹುನ್ನೂರು ಗ್ರಾಮದಲ್ಲಿದ್ದ ಈ ವಿಠ್ಠಲ ದೇವಸ್ಥಾನವನ್ನು 1928 ರಲ್ಲಿ ನಿರ್ಮಿಸಲಾಗಿತ್ತು. ತದನಂತರ 1978 ರಲ್ಲಿ ಹಿಡಕಲ್ ಜಲಾಶಯದ …

Read More »

ಮನೆಯ ಬೀಗ ಮುರಿದು ಕಳ್ಳತನ – 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ದೋಚಿ ಪರಾರಿ

ಬೀದರ್: ಎಲ್ಲರೂ ಮದುವೆಗೆ ಹೋಗಿದ್ದಾಗ ಮನೆಯ ಬೀಗ ಮುರಿದು 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ಲಕ್ಷಾಂತರ ಮೌಲ್ಯದ ಬೆಳ್ಳಿ ಆಭರಣಗಳು, 1.50 ಲಕ್ಷ ನಗದು ದೋಚಿ  ಕಳ್ಳರು ಪರಾರಿಯಾದ ಘಟನೆ ಬೀದರ್  ತಾಲೂಕಿನ ಚಿದ್ರಿ ಗ್ರಾಮದಲ್ಲಿ ನಡೆದಿದೆ. 150 ಗ್ರಾಂ ಚಿನ್ನದ ಆಭರಣಗಳು, 100 ಗ್ರಾಂ ಬೆಳ್ಳಿ ಆಭರಣಗಳು ಮತ್ತು 1.50 ಲಕ್ಷ ನಗದು ದೋಚಿ ಖದೀಮರು ಪರಾರಿಯಾಗಿದ್ದಾರೆ. ಮನೆಯವರು ಎಲ್ಲರೂ ಸಂಬಂಧಿಕರ ಮದುವೆ ಸಮಾರಂಭಕ್ಕೆ ಹೋಗಿದ್ದಾಗ ರಾಜಕುಮಾರ …

Read More »