Breaking News

ಬೆಳಗಾವಿಯಲ್ಲೇ ಮುಂಗಾರು ಅಧಿವೇಶ: ಸಚಿವ ಹೆಚ್.ಕೆ. ಪಾಟೀಲ್

ರಾಜ್ಯ ಸರ್ಕಾರದ ಮುಂಬರುವ ಜಂಟಿ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲೇ ನಡೆಸಲಾಗುವುದು, ಈ ವಿಚಾರದಲ್ಲಿ ಸಾರ್ವಜನಿಕರಿಗೆ ಯಾವುದೇ ಗೊಂದಲ ಬೇಡ ಮತ್ತು ಸ್ಥಳ ಬದಲಾವಣೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಗದಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಅಧಿವೇಶನ, ಇಂಧನ ದರ ಏರಿಕೆ ಹಾಗೂ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು …

Read More »

ಉಳವಿ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ ಗ್ರಾಮೀಣ ಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಕ್ಷೇತ್ರ ಉಳವಿ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶ್ರೀ ಚನ್ನಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಹಾಗೂ ನಾಡಿನ ಉಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರಮುಖ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಉಪಸ್ಥಿತರಿದ್ದರು.

Read More »

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಳಗಾವಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ  ಖಂಡಿಸಿ ಬೆಳಗಾವಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿದರು.‌ ಇಂದು ನಗರದ ಕನ್ನಡ ಸಾಹಿತ್ಯ ಭವನದಿಂದ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರ್ತಿಕ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಲಾಯಿತು. ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಬಳಿಕ ಸಂಸದ ಜಗದೀಶ್ ಶೆಟ್ಟರ್ ಕಚೇರಿಗೆ ನುಗ್ಗಲು ಯತ್ನಿಸಿದರು. ಪೊಲೀಸರು ಬ್ಯಾರಿಕೇಟ್ …

Read More »

ಸರ್ಕಾರ ನಿರ್ಮಿಸಿದ್ದ ಕನ್ನಡ ಭವನ ಖಾಸಗಿ ಸಂಸ್ಥೆಗೆ ಹಸ್ತಾಂತರ!

ಬೆಳಗಾವಿ : ಸರ್ಕಾರದ ಕೋಟ್ಯಂತರ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಂಡ ಬೆಳಗಾವಿಯ ಕನ್ನಡ ಭವನವನ್ನು ಖಾಸಗಿ ಸಂಘಕ್ಕೆ ಹಸ್ತಾಂತರಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್  ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರಿಗೆ ರಾಜ್ಯ ಕಸಾಪ ನೋಟೀಸ್ ಜಾರಿ ಮಾಡಿದೆ. ಬೆಳಗಾವಿಯ ಒಂಬತ್ತು ಕನ್ನಡಪರ ಸಂಘಟನೆಗಳು ನೀಡಿದ ದೂರಿನ ಮೇರೆಗೆ ರಾಜ್ಯ ಕಸಾಪ ಆಡಳಿತಾಧಿಕಾರಿ ಕೆ.ಎ. ದಯಾನಂದ ಅವರು ಈ ಕಠಿಣ ಕ್ರಮ ಕೈಗೊಂಡಿದ್ದಾರೆ. ಸುಮಾರು ₹5 ಕೋಟಿ ವೆಚ್ಚದ …

Read More »

ಐತಿಹಾಸಿಕ ಬಾವಿಗೆ ಕಾಯಕಲ್ಪ

ಬೆಳಗಾವಿ: ಬೆಳಗಾವಿ ನಗರ ಹಾಗೂ ಸುತ್ತಲಿನ ಭಾಗದಲ್ಲಿರುವ ಹಳೇ ತೆರೆದ ಬಾವಿಗಳನ್ನು ಪುನರುತ್ಥಾನಗೊಳಿಸುವ ಸಂಕಲ್ಪ ಮಾಡಿರುವ ಪ್ಯಾಸ್ ಫೌಂಡೇಷನ್, ಮುತಗಾದಲ್ಲಿರುವ 200 ವರ್ಷ ಹಳೆಯ ಬಾವಿಯ ಪುನಶ್ಚೇತನಕ್ಕೆ ಚಾಲನೆ ನೀಡಿದೆ. ಕೆಎಲ್‌ಇ ಎನ್‌ಎಸ್‌ಎಸ್ ಯೂನಿಟ್‌ನ ಸ್ವಯಂ ಸೇವಕರು, ಪ್ಯಾಸ್ ಫೌಂಡೇಷನ್ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳು ಶ್ರಮದಾನದ ಮೂಲಕ ಬಾವಿಯೊಳಗಿನ ಹೂಳು, ಕಲ್ಲುಗಳು ಮತ್ತು ಕಸ-ಕಡ್ಡಿಗಳನ್ನು ಸ್ವಚ್ಛಗೊಳಿಸಿದರು. ಶಿವಲಿಂಗದ ಆಕಾರದಲ್ಲಿರುವ ಬಾವಿಗೆ ಸಾಂಸ್ಕೃತಿಕ ಹಿನ್ನೆಲೆಯೂ ಇದೆ. ಮುತಗಾ, ಕಂಚವೀರ ನಗರ …

Read More »

ನಾಳೆ ಸಂಘಟನೆಗಳಿಂದ ಬೆಳಗಾವಿ ಮಹಾನಗರ ಪಾಲಿಕೆಗೆ ಮುತ್ತಿಗೆ: ಚಂದರಗಿ

ಬೆಳಗಾವಿ: ‘ಇಲ್ಲಿನ ಮಹಾನಗರ ಪಾಲಿಕೆ ಪರಿಷತ್‌ ಸಭೆಯಲ್ಲಿ ಕರ್ನಾಟಕ ಪರವಾದ ನಿರ್ಣಯ ಅಂಗೀಕರಿಸಬೇಕು’ ಎಂದು ಆಗ್ರಹಿಸಿ ಮೇ 26ರಂದು ವಿವಿಧ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಪಾಲಿಕೆಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ. ಅಂದಿನ ಹೋರಾಟದಲ್ಲಿ ಭಾಗವಹಿಸಲು ಕನ್ನಡ ಹೋರಾಟಗಾರರಾದ ವಾಟಾಳ್‌ ನಾಗರಾಜ, ಸಾ.ರಾ. ಗೋವಿಂದು, ಕೆ.ಆರ್. ಕುಮಾರ ಹಾಗೂ ಮಂಜುನಾಥ ದೇವ ಅವರು ಬೆಳಗಾವಿಗೆ ಆಗಮಿಸುವರು. ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪುನರ್ ಸ್ಥಾಪನೆಗೊಂಡ ಹಲ್ಮಿಡಿ ಶಾಸನದ ಪೂಜಾ ಕಾರ್ಯಕ್ರಮದಲ್ಲಿ …

Read More »

ಭೀಕರ ಕಾರು‌ ದುರಂತ : 8 ಜನರು ಸಾವು

ಪ್ರವಾಸಿಗರ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 8 ಜನರು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರು ಆಳವಾದ ಕಂದಕಕ್ಕೆ ಉರುಳಿದೆ.ಅಂಬೆನಾಲಿ ಘಾಟ್ ಬಳಿ ಈ ಅಪಘಾತ ಸಂಭವಿಸಿದೆ. ಸ್ಥಳೀಯರು ಈ ಕಂದಕವು ಸುಮಾರು 1,000 ಅಡಿ ಆಳದಲ್ಲಿದೆ ಎಂದು ಅಂದಾಜಿಸಿದ್ದಾರೆ. ಇಲ್ಲಿಯವರೆಗೆ ಎರಡು ಶವಗಳನ್ನು ಹೊರತೆಗೆಯಲಾಗಿದೆ. ಪೋಲಾದ್‌ಪುರ ಪೊಲೀಸರು, ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಕಂದರದ ತೀವ್ರ …

Read More »

ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಕಾಮಗಾರಿ ವಿಳಂಬ: ಪ್ರಯಾಣಿಕರಿಗೆ ಸಂಕಷ್ಟ

ಬೆಳಗಾವಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಕೈಗೆತ್ತಿಕೊಂಡ ಎಸ್ಕ್‌ಲೇಟರ್‌, ಲಿಫ್ಟ್‌ ಮತ್ತು ಪಾದಚಾರಿ ಸೇತುವೆ(ಫುಟ್‌ ಓವರ್‌ ಬ್ರಿಡ್ಜ್‌) ಕಾಮಗಾರಿ ಇನ್ನೂ ಮುಗಿಯದ ಕಾರಣ, ಪ್ರಯಾಣಿಕರ ಪರದಾಟ ಮುಂದುವರಿದಿದೆ. ರೈಲ್ವೆ ನಿಲ್ದಾಣ ಪ್ರವೇಶಿಸಿ ಒಂದು ಬದಿಯ ಪ್ಲಾಟ್‌ಫಾರಂನಿಂದ ಮತ್ತೊಂದು ಬದಿ ಪ್ಲಾಟ್‌ಫಾರಂಗೆ ತೆರಳಲು ಪ್ರಯಾಣಿಕರು ನರಕಯಾತನೆ ಅನುಭವಿಸಬೇಕಾದ ಪರಿಸ್ಥಿತಿ ಇದೆ. ಬೆಳಗಾವಿ ರೈಲ್ವೆ ನಿಲ್ದಾಣವು ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಸಂಪರ್ಕ ಕೊಂಡಿ. ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಹಲವು …

Read More »

ಅಕ್ರಮ ಗೋ ಸಾಗಾಟ ತಡೆಗೆ ಆಗ್ರಹ

ಬೆಳಗಾವಿ : ಗೋವಾ ಮತ್ತು ಮಹಾರಾಷ್ಟ್ರ ಗಡಿಗೆ ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಬಕ್ರೀದ್ ಸಂದರ್ಭದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಯಲಿದ್ದು, ಇದನ್ನು ತಡೆಯಲು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಚೆಕ್‌ಪೋಸ್ಟ್ ಆರಂಭಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಎಚ್‌ಪಿ ನೇತೃತ್ವದಲ್ಲಿ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜರುಗಿದ ರ‌್ಯಾಲಿಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಪ್ರಮುಖರು ಹಾಗೂ …

Read More »

ವಕ್ಫ್ ಆಸ್ತಿಗಳ ರಕ್ಷಣೆಗೆ ಹೋರಾಡುತ್ತಿದ್ದ ಹಿರಿಯ ವಕೀಲನ ಭೀಕರ ಕೊಲೆ! ಮುಂಜಾನೆ ವಾಕಿಂಗ್ ವೇಳೆ ಕಾರು ಹತ್ತಿಸಿ ಜಿಹಾದ್?

ಹೈದರಾಬಾದ್: ವಕ್ಫ್ ಆಸ್ತಿಗಳ ಅತಿಕ್ರಮಣ ಮತ್ತು ಖಾಸಗೀಕರಣದ ವಿರುದ್ಧ ನ್ಯಾಯಾಲಯದಲ್ಲಿ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದ ಹಿರಿಯ ವಕೀಲ ಖಾಝಾ ಮೊಯಿಝುದ್ದೀನ್‌ (63) ಅವರನ್ನು ಶನಿವಾರ ಮುಂಜಾನೆ ಕಾರು ಢಿಕ್ಕಿ ಹೊಡೆಸಿ ಅತ್ಯಂತ ದಾರುಣವಾಗಿ ಕೊಲೆ ಮಾಡಲಾಗಿದೆ. ಮೇಲ್ನೋಟಕ್ಕೆ ಇದು ಸಾಮಾನ್ಯ ಅಪಘಾತದಂತೆ ಕಂಡರೂ, ಇದರ ಹಿಂದೆ ದೊಡ್ಡ ಭೂಮಾಫಿಯಾ ಕೈವಾಡವಿದ್ದು, ಇದೊಂದು “ಯೋಜಿತ ಮತ್ತು ವ್ಯವಸ್ಥಿತ ಕೊಲೆ” ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಕೇವಲ 20 ಅಡಿ …

Read More »