ಬೆಂಗಳೂರು: ದೇಶದ್ಯಾಂತ (ಸೆ. 11) ಶುಕ್ರವಾರ ಬ್ಯಾಂಕ್ ಯೂನಿಯನ್ಗಳು ಮುಷ್ಕರಕ್ಕೆ ಕರೆ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ಗಳು ಬಂದ್ ಆಗಲಿವೆ. ಈ ತಿಂಗಳು ವಾರದ ಎರಡನೇ ಶನಿವಾರಕ್ಕೂ ಒಂದು ದಿನ ಮೊದಲೇ ಬ್ಯಾಂಕ್ ರಜೆ ಇರಲಿದೆ. ವಾರಕ್ಕೆ ಐದು ದಿನಗಳ ಕೆಲಸದ ವಿಧಾನ, ಪಿಂಚಣಿಯ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆ ಇಟ್ಟಿದ್ದು, ಪರಿಣಾಮ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ಶುಕ್ರವಾರ ದೇಶದಾದ್ಯಂತ ಮುಷ್ಕರಕ್ಕೆ …
Read More »ಕರ್ನಾಟಕದಲ್ಲಿ ಉರ್ದು ಮಾಧ್ಯಮ ಶಿಕ್ಷಣದ ಸ್ಥಿತಿಗತಿ ಅಧ್ಯಯನ ವರದಿ-2025 ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಕರ್ನಾಟಕದಲ್ಲಿ ಉರ್ದು ಮಾಧ್ಯಮದಲ್ಲಿ ಶಿಕ್ಷಣದ ಸ್ಥಿತಿಗತಿ, ಸಮಸ್ಯೆಗಳು ಹಾಗೂ ಅಗತ್ಯ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸಿದ್ಧಪಡಿಸಿರುವ `ಅಧ್ಯಯನ ವರದಿ-2025′ ಅನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಇಂದು ಸ್ವೀಕರಿಸಿದರು. ಅಂಜುಮನ್ ತರ್ಖಿ ಉರ್ದು (ಹಿಂದ್), ಕರ್ನಾಟಕ, ಬೆಂಗಳೂರು ವತಿಯಿಂದ ಸಿದ್ಧಪಡಿಸಲಾಗಿರುವ ವರದಿಯನ್ನು ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರ ಕಚೇರಿಯಲ್ಲಿ ಸಚಿವರಿಗೆ ಹಸ್ತಾಂತರಿಸಲಾಯಿತು. ಕರ್ನಾಟಕದಲ್ಲಿ ಉರ್ದು ಮಾಧ್ಯಮದ ಶಿಕ್ಷಣದ ಪ್ರಸ್ತುತ ಸ್ಥಿತಿಗತಿ, ವಿದ್ಯಾರ್ಥಿಗಳು ಹಾಗೂ …
Read More »ಶಾಸ್ತ್ರದ ಮಾತು ನಂಬಿ ಊರನ್ನೇ ತೊರೆದ ಗೌಳಿ ಕುಟುಂಬಗಳು – ಸಾವಿನ ಭಯಕ್ಕೆ ಗ್ರಾಮವೇ ಖಾಲಿ
ಕಾರವಾರ: ಶಾಸ್ತ್ರದಲ್ಲಿ ಹೇಳಿದ ಮಾತುಗಳನ್ನು ನಂಬಿ, ನಿರಂತರ ಸಾವುಗಳ ಭಯದಿಂದ ಗೌಳಿ ಸಮುದಾಯದ ಕುಟುಂಬಗಳು ಗ್ರಾಮವನ್ನೇ ತೊರೆಯುತ್ತಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಬಾಡಗುಂದದಲ್ಲಿ ನಡೆದಿದೆ. ಬಾಡಗುಂದ ಗ್ರಾಮದಲ್ಲಿ ಒಟ್ಟು 18 ಗೌಳಿ ಕುಟುಂಬಗಳ 103 ಮಂದಿ ವಾಸಿಸುತ್ತಿದ್ದರು. ಆದರೆ, ದೀಗ 13 ಕುಟುಂಬಗಳ 74 ಮಂದಿ ಗ್ರಾಮ ತೊರೆದಿದ್ದಾರೆ. ಉಳಿದ ಕುಟುಂಬಗಳೂ ಗ್ರಾಮ ತೊರೆಯಲು ಸಿದ್ಧತೆ ನಡೆಸುತ್ತಿವೆ ಎನ್ನಲಾಗಿದೆ. ನಿರಂತರ ಸಾವುಗಳಿಂದ ಆತಂಕ ತಲೆತಲಾಂತರದಿಂದ ಗೌಳಿ …
Read More »ಆಂಧ್ರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು
ಚಿಕ್ಕಬಳ್ಳಾಪುರ: ಬಾಡಿಗೆ ರೂಮ್ನಲ್ಲಿ ವಾಸವಾಗಿದ್ದ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಆಂಧ್ರಪ್ರದೇಶದ ಹಿಂದೂಪುರ ಮೂಲದ 21 ವರ್ಷದ ಸಾಯಿ ತರುಣ್ ರೆಡ್ಡಿ ಮೃತ ವಿದ್ಯಾರ್ಥಿ. ಮುಂಜಾನೆ ಎಂದಿನಂತೆ ಕಾಲೇಜಿಗೆ ತೆರಳಬೇಕಿದ್ದ ವಿದ್ಯಾರ್ಥಿ ರೂಮ್ನಲ್ಲೇ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಚಿಕ್ಕಬಳ್ಳಾಪುರದ ಗಂಗಮ್ಮಗುಡಿ ರಸ್ತೆಯಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದ ಸಾಯಿ ತರುಣ್, ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ …
Read More »ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಅಂತ್ಯ – ಪುತ್ರಿ, ಗೋಕಾಕ್ ಮನೆಯಲ್ಲಿ 3 ಕೋಟಿ ರೂ. ಸೀಜ್
ಬೆಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಸಿಲುಕಿರುವ ಸಚಿವ ಸತೀಶ್ ಜಾರಕಿಹೊಳಿ 36 ಗಂಟೆಗಳ ವಿಚಾರಣೆ ಎದುರಿಸಿದ್ದು, ಇ.ಡಿ ದಾಳಿ ಅಂತ್ಯಗೊಂಡಿದೆ. ಬುಧವಾರ ತಡರಾತ್ರಿ 2 ಗಂಟೆವರೆಗೆ ವಿಚಾರಣೆ ನಡೆಸಿದ್ದ ಇಡಿ, ಇಂದು ಬೆಳಗ್ಗೆ 6 ಗಂಟೆಯಿಂದಲೂ ಮತ್ತೆ ಇ.ಡಿ ದಾಳಿ ಆರಂಭಿಸಿತ್ತು. ವಿಚಾರಣೆ ವೇಳೆ ವಿದೇಶ ವ್ಯವಹಾರಗಳ ಬಗ್ಗೆ ಜಾರಕಿಹೊಳಿ ಮಾಹಿತಿ ನೀಡದಿರುವುದರಿಂದ ಸಂಕಷ್ಟ ಎದುರಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಇನ್ನು, ಬೆಂಗಳೂರು, ಬೆಳಗಾವಿ, ಗೋಕಾಕ್ನಲ್ಲಿ 18 …
Read More »ನಾವೆಲ್ಲ ಒಟ್ಟಾಗಿ ರಾಜ್ಯದಲ್ಲಿ ರೈತರು, ದಲಿತರು, ಹಿಂದೂಗಳ ಪರ ಸರ್ಕಾರ ತರಬೇಕು: ವಿಜಯೇಂದ್ರ ಕರೆ
ಬಳ್ಳಾರಿ: ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಸರ್ಕಾರ ‘ವಂದೇ ಮಾತರಂ’ ಗೀತೆಯನ್ನ ಮೊಟಕುಗೊಳಿಸಿದೆ. ರೈತರು, ದಲಿತರು ನಾವೆಲ್ಲ ಒಟ್ಟಾಗಿ ಹಿಂದೂಗಳ ಪರ ಇರುವ ಸರ್ಕಾರವನ್ನ ಅಧಿಕಾರಕ್ಕೆ ತರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕರೆ ನೀಡಿದರು. ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ಆಯೋಜಿಸಲಾಗಿದ್ದ `ಬಳ್ಳಾರಿ ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪಾದಯಾತ್ರೆಯಲ್ಲಿ ಭಾಗವಹಿಸಿದ …
Read More »ಜಾನಪದ ವಿಶ್ವವಿದ್ಯಾಲಯದಲ್ಲಿ ಅನುಮತಿ ಇಲ್ಲದೆ ಹೊಸ ಪಠ್ಯಕ್ರಮ; 8 ಕೋರ್ಸ್ಗಳು ರದ್ದು
ಹಾವೇರಿ: ಜಿಲ್ಲೆಯ ಜನಪದ ವಿಶ್ವವಿದ್ಯಾಲಯದಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ಅನುಮತಿ ಪಡೆಯದೆ ಪ್ರಾರಂಭಿಸಿದ್ದ 8 ಕೋರ್ಸ್ಗಳನ್ನು ಉನ್ನತ ಶಿಕ್ಷಣ ಇಲಾಖೆ ರದ್ದು ಮಾಡುವಂತೆ ಆದೇಶಿಸಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಗೊಟಗೋಡಿ ಬಳಿ ಇರುವ ಜನಪದ ವಿಶ್ವವಿದ್ಯಾಲಯದಲ್ಲಿ ಒಂದಿಲ್ಲಾ ಒಂದು ಯಡವಟ್ಟು ನಡೆಯುತ್ತಾ ಬಂದಿವೆ. ಸರ್ಕಾರ ಮತ್ತು ರಾಜ್ಯಪಾಲರ ಅನುಮೋದನೆ ಪಡೆಯದೆ, ನಿಯಮಾವಳಿ ರಚಿಸಿದೆ, 2018-19 ರಲ್ಲಿ ಸ್ನಾತಕೋತ್ತರ 8 ಕೊರ್ಸ್ಗಳನ್ನ ಪ್ರಾರಂಭ ಮಾಡಿತ್ತು. ಈಗ ವಿಶ್ವವಿದ್ಯಾಲಯ 2018-19ರಿಂದ ಎಂ.ಎ …
Read More »ನದಿ ನೀರನ್ನ ಕಲುಷಿತಗೊಳಿಸಿದ್ರೆ ಕಾರ್ಖಾನೆ ಮುಚ್ಚಿಸುತ್ತೇವೆ: ರಾಮಲಿಂಗಾರೆಡ್ಡಿ ಎಚ್ಚರಿಕೆ
ಬೆಂಗಳೂರು: ನದಿ ನೀರನ್ನ ಕಲುಷಿತಗೊಳಿಸಿದ್ರೆ ಕಾರ್ಖಾನೆಗಳನ್ನ ಮುಚ್ಚಿಸುತ್ತೇವೆ ಎಂದು ಅರಣ್ಯ ಹಾಗೂ ಪರಿಸರ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಿಂದ ಕುಡಿಯಲು ಯೋಗ್ಯವಲ್ಲದ ನೀರು ಬರ್ತಿದೆ ಅಂತಾ ಎನ್ಜಿಟಿಗೆ ತಮಿಳುನಾಡಿನವರು ಕೇಸ್ ಹಾಕಿದ್ದಾರೆ. ಅ.14 ರಂದು ಕೇಸ್ ಇದೆ. BWSSB (ಜಲಮಂಡಳಿ) ಅಧ್ಯಕ್ಷರ ಜೊತೆಗೆ ಮಾತುಕತೆ ನಡೆಸಿದ್ದೇನೆ. ನದಿ ಪಕ್ಕದ ಫ್ಯಾಕ್ಟರಿಗಳಿಗೆ ವಾರ್ನ್ ಮಾಡ್ತೇನೆ. ಎಸ್ಟಿಪಿ ಅಳವಡಿಸಬೇಕು, ನದಿ ನೀರನ್ನ ಕಲುಷಿತ ಮಾಡಿದ್ರೇ …
Read More »ತಂತ್ರಜ್ಞಾನ ಬಳಸಿ, ಖುದ್ದು ಹಾಜರಾತಿ ಸಮಸ್ಯೆಯಾಗುತ್ತೆ – ಸೆ.16ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಅನ್ನು ಸೆಷನ್ಸ್ ಕೋರ್ಟ್ ಈಗಾಗಲೇ ಟ್ರಯಲ್ ನಡೆಸುತ್ತಿದೆ. ಸೆಷನ್ ಕೋರ್ಟ್ ವಜಾಗೊಳಿಸಿದ್ದ ವಿಚಾರಣೆಗೆ ಖುದ್ದು ಹಾಜರಾಗಬೇಕೆಂಬ ದರ್ಶನ್ ಅರ್ಜಿ ಈಗ ಹೈಕೋರ್ಟ್ನಲ್ಲಿದ್ದು , ಸೆ.16ಕ್ಕೆ ವಿಚಾರಣೆ ಮುಂದೂಡಿದೆ. ಖುದ್ದು ಹಾಜರಾತಿ ಬಗ್ಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ನ್ಯಾ.ವಿ.ಶ್ರೀಶಾನಂದ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿ, ಖುದ್ದು ಹಾಜರಾತಿಗೆ ಅವಕಾಶ …
Read More »ಬಾವಿಗೆ ಬಿದ್ದು ಮಹಿಳೆ ಅನುಮಾನಾಸ್ಪದ ಸಾವು
ಚಿಕ್ಕಬಳ್ಳಾಪುರ: ಬಾವಿಗೆ ಬಿದ್ದು ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕುಡುವತಿ ಗ್ರಾಮದಲ್ಲಿ ನಡೆದಿದೆ. ಕಲ್ಪನ (39) ಸಾವನ್ನಪ್ಪಿರುವ ಮಹಿಳೆ. ಕಳೆದ 20 ವರ್ಷಗಳ ಹಿಂದೆ ಕುಡುವತಿ ಗ್ರಾಮದ ತಮ್ಮೇಗೌಡ ಜೊತೆ ಕಲ್ಪನ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದರು. ಇತ್ತೀಚಿಗೆ ಅನಾರೋಗ್ಯದಿಂದ ಕಲ್ಪನ ಕುಡುವತಿ ಗ್ರಾಮದ ತವರು ಮನೆಯಲ್ಲಿದ್ದರು. ಕೌಟುಂಬಿಕ ಕಲಹ ಹಿನ್ನೆಲೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ …
Read More »
Laxmi News 24×7