ಬೆಂಗಳೂರು: ನೀಟ್ ಮರು ಪರೀಕ್ಷೆ ತಕ್ಷಣವೇ ಆಗಲಿ ಅಂತ ಬಿಜೆಪಿ ನಾಯಕ,ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಒತ್ತಾಯ ಮಾಡಿದ್ದಾರೆ. ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಮರು ಪರೀಕ್ಷೆ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನೀಟ್ ಪರೀಕ್ಷೆ ವಿಚಾರದಲ್ಲಿ ಪೇಪರ್ ಲೀಕ್ ಆಗಿದೆ ಅಂತ ಕೆಲ ಪ್ರದೇಶದಲ್ಲಿ ವರದಿಯಾಗಿದೆ. ಮರು ಪರೀಕ್ಷೆ ಮಾಡೋದಾಗಿ NTA ಹೇಳಿದೆ. ರೀ ಷಡ್ಯೂಲ್ ಮಾಡಿ ಸಮಯ ವ್ಯರ್ಥವಾಗದಂತೆ ಮಾಡಿ ಎಂದರು. ಪ್ರಶ್ನೆ ಪತ್ರಿಕೆ ಸೋರಿಕೆ …
Read More »KPSC ಹಾಳಾಗೋಕೆ ಕಾಂಗ್ರೆಸ್ ಕಾರಣ, ಇವರ ಅವಧಿಯಲ್ಲಿ ಎಷ್ಟು ಬಾರಿ ಪೇಪರ್ ಲೀಕ್ ಆಗಿದೆ: ಹೆಚ್ಡಿಕೆ ಕಿಡಿ
ಬೆಂಗಳೂರು: ಕೆಪಿಎಸ್ಸಿ ಹಾಳಾಗೋಕೆ ಕಾಂಗ್ರೆಸ್ ಕಾರಣ, ಇವರ ಅವಧಿಯಲ್ಲಿ ಎಷ್ಟು ಬಾರಿ ಪೇಪರ್ ಲೀಕ್ ಆಗಿದೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನೀಟ್ ಮರು ಪರೀಕ್ಷೆ ವಿಚಾರವಾಗಿ ವಿಪಕ್ಷಗಳ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜ್ಯದಲ್ಲಿ ಎಷ್ಟು ಬಾರಿ ಪರೀಕ್ಷೆ ಮುಂದೆ ಹಾಕಿದ್ದೀರಾ? ಕಾಂಗ್ರೆಸ್ ಕಾಲದಲ್ಲಿ ಎಷ್ಟು ಅನಾಹುತ ಆಗಿಲ್ಲ? ನಮ್ಮ ರಾಜ್ಯದಲ್ಲಿ ಕೆಪಿಎಸ್ಸಿ ಸಂಸ್ಥೆಯನ್ನು ಸರಿಪಡಿಸಲು ಆಗಲಿಲ್ಲ. ಕೆಪಿಎಸ್ಸಿ ಬಗ್ಗೆ ಜನ ಯಾವ …
Read More »ಮಂತ್ರಾಲಯ ರಾಯರ ಮಠದಲ್ಲಿ ಹುಂಡಿ ಎಣಿಕೆ – 20 ದಿನದಲ್ಲಿ 2.78 ಕೋಟಿ ಕಾಣಿಕೆ ಸಂಗ್ರಹ
ರಾಯಚೂರು: ಕಲಿಯುಗದ ಕಾಮಧೇನು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಏಪ್ರಿಲ್ ಹಾಗೂ ಮೇ ತಿಂಗಳಿನ 20 ದಿನಗಳ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 2.78 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಏಪ್ರಿಲ್ ಹಾಗೂ ಮೇ ತಿಂಗಳಿನ 20 ದಿನಗಳಲ್ಲಿ ಕೋಟ್ಯಾಂತರ ರೂಪಾಯಿ ಕಾಣಿಕೆ ಹರಿದು ಬಂದಿದೆ. ಒಟ್ಟು 2,78,19,526 ರೂ. ಕಾಣಿಕೆ ಹರಿದು ಬಂದಿದ್ದು, ಇದರಲ್ಲಿ 2,69,28,176 ರೂ. ಕರೆನ್ಸಿ ನೋಟುಗಳು. 8,91,350 ರೂ. …
Read More »ವ್ಯೂ ಪಾಯಿಂಟ್ ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳ ಸಾವು
ತಿರುವನಂತಪುರಂ: ವ್ಯೂ ಪಾಯಿಂಟ್ ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಮಂಕಡದಲ್ಲಿ ನಡೆದಿದೆ. ಇಂದು ಸಂಜೆ 5:30 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಲ್ಲಪುರಂ ನ ಮಂಕಡ ವೆಳ್ಳಿಲ ಕಡುಕಾ ಸಿಟಿ ನಂಬೂರಿಕಾಡ್ ವ್ಯೂ ಪಾಯಿಂಟ್ಗೆ ಆಗಮಿಸಿದ್ದ ವೇಳೆ ಸಿಡಿಲು ಬಡಿದು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ರಹೀಸ್ (20), ಬಹಾಸ್ (18), ಸಿಯಾದ್ (18), ಫಹದ್(22) ಮೃತರು. ರೋಶನ್ (20), 2- ಇಶಾತ್ …
Read More »NEET-UG case | 10 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಖರೀದಿಸಿ 15 ಲಕ್ಷಕ್ಕೆ ಮಾರಿದ್ದ ವೈದ್ಯನ ಮಗ ಅರೆಸ್ಟ್
ನವದೆಹಲಿ: ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಮಂಗಳವಾರ ಬ್ಯಾಚುಲರ್ ಆಫ್ ಆಯುರ್ವೇದ ಮೆಡಿಸಿನ್ ಅಂಡ್ ಸರ್ಜರಿ ವಿದ್ಯಾರ್ಥಿಯನ್ನ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವಿದ್ಯಾರ್ಥಿಯನ್ನ ಶುಭಂ ಖೈರ್ನರ್ (30) ಎಂದು ಗುರುತಿಸಲಾಗಿದೆ. ಈತ ʻಊಹೆ ಪ್ರಶ್ನೆಪತ್ರಿಕೆʼ ಯನ್ನು ಪುಣೆ ಮೂಲದ ಶಂಕಿತನಿಂದ 10 ಲಕ್ಷ ರೂ.ಗೆ ಖರೀದಿಸಿ, ಹರಿಯಾಣದ ಮೂಲದ ವ್ಯಕ್ತಿಗೆ 15 ಲಕ್ಷ ರೂ.ಗೆ ಮಾರಾಟ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. …
Read More »ಮಾದಪ್ಪನ ಭಕ್ತರಿಗೆ ಶಿವರಾತ್ರಿ, ಯುಗಾದಿ ವೇಳೆಯಷ್ಟೇ ಕಾಲ್ನಡಿಗೆ ಬರಲು ಅವಕಾಶ: ಸಚಿವ ಖಂಡ್ರೆ
ಚಾಮರಾಜನಗರ: ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಸಾವು ಪ್ರಕರಣ ಹಿನ್ನೆಲೆ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ಮುಂದೆ ಮಾದಪ್ಪನ ಬೆಟ್ಟಕ್ಕೆ ವರ್ಷವಿಡೀ ಪಾದಯಾತ್ರೆಗೆ ನಿಷೇಧ ಹೇರಲಾಗಿದೆ. ಮಹದೇಶ್ವರ ಬೆಟ್ಟಕ್ಕೆ ಯುಗಾದಿ ಮತ್ತು ಶಿವರಾತ್ರಿ ವೇಳೆ ಮಾತ್ರ ಪಾದಯಾತ್ರೆಗೆ ಅವಕಾಶ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆಸೂಚನೆ ಕೊಟ್ಟಿದ್ದಾರೆ. ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ ಹಿನ್ನೆಲೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು …
Read More »ಬ್ಯಾನರ್ ರಾಜಕೀಯಕ್ಕೆ ಬ್ರೇಕ್ ಹಾಕಿದ ಟಿವಿಕೆ – ಪಕ್ಷದ ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ
ಚೆನ್ನೈ: ರಸ್ತೆಬದಿ, ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಬ್ಯಾನರ್, ಪೋಸ್ಟರ್ಗಳನ್ನು ಹಾಕಬೇಡಿ ಎಂದು ಪಕ್ಷದ ಕಾರ್ಯಕರ್ತರು, ನಾಯಕರಿಗೆ ಸಿಎಂ ವಿಜಯ್ ನೇತೃತ್ವದ ಟಿವಿಕೆ ಮನವಿ ಮಾಡಿದೆ. ಪಕ್ಷದ ಕಾರ್ಯಕರ್ತರು ಹುಟ್ಟುಹಬ್ಬ, ಕುಟುಂಬ ಕಾರ್ಯಕ್ರಮಗಳು ಅಥವಾ ಇತರೆ ಆಚರಣೆಗಳ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುವುದು, ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಬ್ಯಾನರ್, ಪೋಸ್ಟರ್ಗಳು ಅಥವಾ ಫ್ಲೆಕ್ಸ್ಗಳನ್ನು ಹಾಕಬಾರದು ಎಂದು ಟಿವಿಕೆ (ತಮಿಳಗ ವೆಟ್ರಿ ಕಳಗಂ) ಸ್ಪಷ್ಟ ಸೂಚನೆ ನೀಡಿದೆ. ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ …
Read More »ಕಾರದಗಾ ಗ್ರಾಮದಲ್ಲಿ 110 ಕೆ.ವಿ. ಸ್ಟೇಶನ್ ಕಾಮಗಾರಿಗೆ 22 ಕೋಟಿ ರೂ ಮಂಜೂರು:ಶಾಸಕಿ ಶಶಿಕಲಾ ಜೊಲ್ಲೆ
ನಿಪ್ಪಾಣಿ ಕ್ಷೇತ್ರದ ಕಾರದಗಾ ಗ್ರಾಮದಲ್ಲಿ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾದ 110 ಕೆ.ವಿ.ವಿದ್ಯುತ್ ಸ್ಟೇಷನ್ ಕಾಮಗಾರಿಗಾಗಿ 22 ಕೋಟಿ ರೂ ಅನುದಾನ ಮಂಜೂರಾಗಿದ್ದು ಅಧಿಕಾರಿಗಳೊಂದಿಗೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಜನಪ್ರಿಯ ಶಾಸಕರಾದ ಸೌ.ಶಶಿಕಲಾ ಜೊಲ್ಲೆ ಜಿ ಹಾಗೂ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ,ಸ್ಥಳವನ್ನು ವೀಕ್ಷಿಸಿದರು.ಅದಷ್ಟು ಬೇಗನೆ ಭೂಮಿ ಪೂಜೆ ನೆರವೇರಿಸಲಾಗುವುದು. ರೈತರಿಗೆ ಸಕಾಲಕ್ಕೆ ವಿದ್ಯುತ್ ಒದಗಿಸುವುದು ಮತ್ತು ಕಡಿಮೆ ವೋಲ್ಟೇಜ್ …
Read More »ಬೆಳಗಾವಿ: ಲವರ್ ಜೊತೆ ಸೇರಿ ಪತಿ ಮನೆಯಲ್ಲಿ ಕಳ್ಳತನ ಮಾಡಿದ ಪತ್ನಿ ಅರೆಸ್ಟ್
ಬೆಳಗಾವಿ: ಪ್ರಿಯಕರನ ಜೊತೆಗೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಪತ್ನಿ ಹಾಗೂ ಪ್ರಿಯಕರ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಮಹಿಳೆ ತನ್ನ ಪ್ರಿಯಕರನ ಜೊತೆಗೆ ಸೇರಿ ಮನೆಯಲ್ಲಿಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿನಡೆದಿದೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತ ಪ್ರೇಮಿಗಳು. ಹಸೀನಾ ತನ್ನ ಲವರ್ ಜೊತೆ ಸೇರಿ ಪತಿಯ ಮನೆಯಲ್ಲಿದ್ದ 21 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ. 11 …
Read More »ಅಪಘಾತದಿಂದ ಸಾವನ್ನಪ್ಪಿದ ನಿಶ್ಚಿತಾರ್ಥಾವಾಗಿದ್ದ ಯುವಕ : ಆತ್ಮಹತ್ಯೆಗೆ ಶರಣಾದ ಯುವತಿ
“ನನ್ನ ಸಾವಿನ ನಂತರ ನನ್ನ ಅಂತ್ಯಸಂಸ್ಕಾರವನ್ನು ಆತನ ಅಂತ್ಯಕ್ರಿಯೆ ನಡೆದ ಜಾಗದಲ್ಲೇ ಮಾಡಬೇಕು…” ಹೀಗೆಂದು ಡೆತ್ನೋಟ್ ಬರೆದಿಟ್ಟು ಯುವತಿಯೊಬ್ಬಳು ಸಾವಿಗೆ ಶರಣಾದ ಹೃದಯವಿದ್ರಾವಕ ಘಟನೆ ಕಾಸರಗೋಡಿನ ಕಿದೂರಿನಲ್ಲಿ ನಡೆದಿದೆ. ಮದುವೆ ನಿಶ್ಚಿತಾರ್ಥವಾಗಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಮನನೊಂದು ಈಕೆ ಈ ನಿರ್ಧಾರ ಕೈಗೊಂಡಿದ್ದಾಳೆ. ಘಟನೆಯ ಹಿನ್ನೆಲೆ: ಮೃತ ಯುವತಿಯನ್ನು ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಎಂದು ಗುರುತಿಸಲಾಗಿದೆ. ಈಕೆಗೆ ನಾಲ್ಕು ತಿಂಗಳ ಹಿಂದಷ್ಟೇ ತಮಿಳುನಾಡು ನಿವಾಸಿ, ಬ್ಯಾಂಕ್ ಉದ್ಯೋಗಿ …
Read More »
Laxmi News 24×7