Breaking News

ಸಿಎಂ ಸ್ಥಾನ ಬದಲಾವಣೆ ಚರ್ಚೆ ಸಹಜ

ಬೆಳಗಾವಿ : ಎಲ್ಲ ಸರ್ಕಾರದಲ್ಲೂ ಸಿಎಂ ಬದಲಾವಣೆ ಚರ್ಚೆಗಳಾಗಿವೆ. ಬಿಜೆಪಿ ಅವಧಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಿದೆ. ಎಲ್ಲ ಸರ್ಕಾರದಲ್ಲೂ ಸಿಎಂ ಸ್ಥಾನದ ಆಕಾಂಕ್ಷಿಗಳು ಕೇಳಿಯೇ ಕೇಳುತ್ತಾರೆ. ತಂದೆಯವರೇ ಐದು ವರ್ಷದ ಅವಧಿ ಮುನ್ನಡೆಸಿಕೊಂಡು ಹೋಗಲಿ ಎಂಬುದು ನಮ್ಮ ವೈಯಕ್ತಿಕ ಬೇಡಿಕೆಯಾಗಿದ್ದು, ಈ ಚರ್ಚೆಗಳಿಗೆ ಮುಖ್ಯಮಂತ್ರಿಯೇ ಸ್ಪಷ್ಟನೆ ಕೊಟ್ಟಿರುವುದರಿಂದ ಹೆಚ್ಚಿಗೆ ಮಾತನಾಡಲಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಬೈಲಹೊಂಗಲ ತಾಲೂಕಿನ ಸುಖದೇವಾನಂದ ಮಠದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ …

Read More »

ಪರಿಷ್ಕೃತ ಕೈಗಾರಿಕಾ ತುಟ್ಟಿಭತ್ಯೆ ಶೀಘ್ರ ಜಮೆಗೆ ನಿವೃತ್ತರಾದ ಪಿಂಚಣಿದಾರರ ಆಗ್ರಹ

ಬೆಳಗಾವಿ: ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್‌ನಿಂದ ನಿವೃತ್ತರಾದ ಪಿಂಚಣಿದಾರರಿಗೆ ಸರ್ಕಾರದಿಂದ ಬರಬೇಕಿರುವ ಪರಿಷ್ಕೃತ ಕೈಗಾರಿಕಾ ತುಟ್ಟಿಭತ್ಯೆ ಶೀಘ್ರ ಜಮೆ ಮಾಡುವಂತೆ ಆಗ್ರಹಿಸಿ ನಗರದ ಬಿಎಸ್‌ಎನ್‌ಎಲ್ ಕಚೇರಿ ಎದುರು ಗುರುವಾರ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತೀಯ ಬಿಎಸ್‌ಎನ್‌ಎಲ್ ಪಿಂಚಣಿದಾರರ ಸಂಘ ಸೇರಿದಂತೆ ಒಟ್ಟು 12 ಸಂಘಟನೆಗಳ ನೇತೃತ್ವದಲ್ಲಿ ಇಲ್ಲಿನ ಪ್ರಧಾನ ಕಚೇರಿ ಎದುರು ಸೇರಿದ ಪಿಂಚಣಿದಾರರು ತಮ್ಮ ಬೇಡಿಕೆಗಳನ್ನು ಶೀಘ್ರವೇ ಈಡೇರಿಸದೇ ಹೋದಲ್ಲಿ ಏ.30ರಂದು ದೇಶಾದ್ಯಂತ ಎಲ್ಲ ಬಿಎಸ್‌ಎನ್‌ಎಲ್ ಕಚೇರಿಗಳ ಎದುರು …

Read More »

ನಷ್ಟದಲ್ಲಿರುವ ಉದ್ಯಮಗಳಿಗೆ ಡಿಸಿಸಿ ಬ್ಯಾಂಕ್ ಸಾಲ ನೀಡದಂತೆ ಆಗ್ರಹ

ಬೆಳಗಾವಿ : ಬಿಡಿಸಿಸಿ ಬ್ಯಾಂಕ್ ಜಿಲ್ಲೆಯಲ್ಲಿ ನಷ್ಟದಲ್ಲಿರುವ ಕೆಲವು ಕಾರ್ಖಾನೆ ಮತ್ತು ಉದ್ಯಮಗಳಿಗೆ ಕೋಟ್ಯಂತರ ರೂಪಾಯಿ ಸಾಲ ಕೊಡಲು ಮುಂದಾಗಿದ್ದ, ಇದು ಬ್ಯಾಂಕಿನ ಭವಿಷ್ಯಕ್ಕೆ ಮಾರಕವಾಗಲಿದ್ದು, ಆಡಳಿತ ಮಂಡಳಿ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ಆಗ್ರಹಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಮುಂಬರುವ ಸಭೆಯಲ್ಲಿ ಸಾಲ ಮಂಜೂರಾತಿಗಾಗಿ ಈಗಾಗಲೇ ಅನೇಕ ಸಕ್ಕರೆ ಕಾರ್ಖಾನೆಗಗಳು ಹಾಗೂ ಕೆಲ ರಾಜಕಾರಣಿಗಳು ಜಮೀನು …

Read More »

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು ಅತ್ಯಂತ ಪ್ರಖರವಾಗಿವೆ ಎಂದು ಹಿರಿಯ ಸಾಹಿತಿ ಡಾ.ರಾಘವೇಂದ್ರ ಪಾಟೀಲ ಹೇಳಿದರು. ಡಾ.ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ಹಾಗೂ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಗುರುವಾರ ಮಹಾಂತ ಭವನದಲ್ಲಿ ಏರ್ಪಡಿಸಿದ್ದ ಡಾ.ಬೆಟಗೇರಿ ಕೃಷ್ಣ್ಣಶರ್ಮ ಜಯಂತಿ ಹಾಗೂ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ನವೋದಯದ ಪ್ರತಿಭಾವಂತ ಕವಿಯಾಗಿದ್ದ ಕೃಷ್ಣಶರ್ಮರು ಕಾವ್ಯಗಳಲ್ಲಿ ಸ್ತ್ರೀಗೆ …

Read More »

ಖಾನಾಪುರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೊಲೀಸರ ನಡೆಗೆ ಖಂಡನೆ

ಬೆಳಗಾವಿ : ಅಪರಾಧ ಚಟುವಟಿಕೆಗಳ ಹಿನ್ನೆಲೆವುಳ್ಳವರಿಗೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ಈಚೆಗೆ ಜರುಗಿದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಶಾಂತಿ ಸಭೆಯಲ್ಲಿ ಪ್ರಾತಿನಿಧ್ಯ ನೀಡಿರುವುದನ್ನು ಖಂಡಿಸಿ ಖಾನಾಪುರ ಪಟ್ಟಣದಲ್ಲಿ ಗುರುವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರಿಗೆ ಮನವಿ ಸಲ್ಲಿಸಿದರು. ಸಮಾಜಕ್ಕೆ ಸಂಬಂಧಿಸಿದಂತೆ ಯಾವುದೇ ಒಂದು ಸಭೆಗಳಿದ್ದಾಗ, ಆಯಾ ಊರಿನ ಅಥವಾ ಸಮುದಾಯದ ಹಿರಿಯರನ್ನು ಆಹ್ವಾನಿಸುವ …

Read More »

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

ಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡಿದ್ದು, ಇದಕ್ಕೆ  ಪೂರಕವಾದ ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ರಾಷ್ಟ್ರೀಯ ಯೋಜನಾ ಸಮನ್ವಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೂರು ವರ್ಷಗಳ ಈ ಯೋಜನೆ ಕುರಿತು ವಿಸ್ತೃತ ಕ್ರಿಯಾಯೋಜನೆ ರೂಪಿಸಿ ಇತರೆ …

Read More »

ರಾಜ್ಯದ 368 ನ್ಯಾಯಾಧೀಶರ ವರ್ಗಾವಣೆ! ವಿನಯ್ ಕುಲಕರ್ಣಿ ದೋಷಿ ಆದೇಶಿಸಿದ ಜಡ್ಜ್ ಕೂಡ ಟ್ರಾನ್ಸ್​ಫರ್​

ಬೆಂಗಳೂರು: ಆಡಳಿತಾತ್ಮಕ ಉದ್ದೇಶಗಳಿಗಾಗಿ ರಾಜ್ಯದ್ಯಂತ 368 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಎಂದು ಹೈಕೋರ್ಟ್​ ಗುರುವಾರ (ಏ.16) ಆದೇಶ ಹೊರಡಿಸಿದೆ. ಈ ವರ್ಗಾವಣೆ ಪಟ್ಟಿಯಲ್ಲಿ 114 ಜಿಲ್ಲಾ ನ್ಯಾಯಾಧೀಶರು, 139 ಸಿವಿಲ್​ ನ್ಯಾಯಾಧೀಶರು ಮತ್ತು 115 ಹಿರಿಯ ಸಿವಿಲ್​ ನ್ಯಾಯಾಧೀಶರು ಸೇರಿದ್ದು, ವಿನಯ್​ ಕುಲಕರ್ಣಿ ದೋಷಿ ಎಂದು ತೀರ್ಪು ನೀಡಿದ್ದ ಗಜಾನನ ಭಟ್​ ಕೂಡ ವರ್ಗಾವಣೆ ಆಗಿರುವುದು ಗಮನಾರ್ಹ. ಈ ಆದೇಶವು ಜೂ. 1ರಿಂದ ಜಾರಿಗೆ ಬರಲಿದೆ. ಹೈಕೋರ್ಟ್​ನ ಹಾಲಿ ರಿಜಿಸ್ಟ್ರಾರ್​ ಜನರಲ್​ …

Read More »

ಏಪ್ರಿಲ್‌ 20 ರಂದು ಬೆಳಗಾವಿಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ

ಬೆಳಗಾವಿ: ಬೆಳಗಾವಿ ತಾಲೂಕಿನ ಚಂದನ ಹೊಸೂರ ಗ್ರಾಮದಲ್ಲಿ ಏಪ್ರಿಲ್ 20 ಮತ್ತು 21 ರಂದು ಎರಡು ದಿನಗಳ ಕಾಲ ಪಾವನಕ್ಷೇತ್ರ ಬಡೇಕೊಳ್ಳಮಠದ ಶ್ರೀ ನಾಗಯ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಬಸವ ಜಯಂತಿ ನಿಮಿತ್ತ ಕೊಳ್ಳಬಸವ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹಗಳು ಜರುಗಲಿವೆ. ಸೋಮವಾರ ದಿ. 20 ರಂದು ಮುಂಜಾನೆ 8 ಗಂಟೆಗೆ ವೇದಮೂರ್ತಿ ಶ್ರೀ ಮಹೇಶ ಸ್ವಾಮಿಗಳು ಇವರಿಂದ ಕೊಳ್ಳಬಸವ ನಾಗಲಿಂಗೇಶ್ವರನಿಗೆ ಅಭೀಷೇಕ ಜರುಗುವುದು. ಬಸವ ಜಯಂತಿ ಮೆರವಣಿಗೆ ಹಾಗೂ …

Read More »

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ ಕಡಿಮೆ ಆಗಲಿದ್ದು, ಕುಡಿಯುವ ನೀರಿಗೆ  ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ  ಅವರು ಡಿಸಿ-ಸಿಇಓಗಳಿಗೆ ಸೂಚನೆ ಕೊಟ್ದಿದ್ದಾರೆ. ವಿಧಾನಸೌಧದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ, ಸಿಇಓಗಳ ಜೊತೆ ಸಭೆ ನಡೆಸಿದರು. ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …

Read More »

ಚಾಣಕ್ಯನನ್ನು ಉಲ್ಲೇಖಿಸಿ ಅಮಿತ್‌ ಶಾಗೆ ನಗುನಗುತ್ತಲೇ ತಿವಿದ ಪ್ರಿಯಾಂಕಾ- ಗೊಳ್ಳೆಂದು ನಕ್ಕ ಗೃಹಮಂತ್ರಿ

ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಚರ್ಚೆಯಲ್ಲಿ ವಯನಾಡು ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ವಾದ್ರಾಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರನ್ನು ಉದ್ದೇಶಿಸಿ ಇಂದು ಚಾಣಕ್ಯ  ಬದುಕಿದ್ದರೆ ನಿಮ್ಮ ರಾಜಕೀಯ ಚತುರತೆಯನ್ನು ನೋಡಿ ಆತನಿಗೆ ಆಘಾತವಾಗುತ್ತಿತ್ತು ಎಂದು ಟಾಂಗ್‌ ಕೊಟ್ಟಿದ್ದಾರೆ. ಮಹಿಳಾ ಮೀಸಲಾತಿ ಬೆಂಬಲಿಸಿ ಮಾತನಾಡಿದ ಅವರು, ತಮ್ಮ ಪಕ್ಷವು ಮಹಿಳಾ ಪ್ರಾತಿನಿಧ್ಯವನ್ನು ವಿರೋಧಿಸುತ್ತಿಲ್ಲ. ಆದರೆ ಮಸೂದೆಯ ಸಮಯ ಮತ್ತು ರಚನೆಯ ಹಿಂದಿನ ರಾಜಕೀಯ ಉದ್ದೇಶವನ್ನು ಪ್ರಶ್ನಿಸುತ್ತಿದೆ …

Read More »