ನವದೆಹಲಿ: ಅಮೆರಿಕ ಡಾಲರ್ ದುರ್ಬಲತೆ, ಅಮೆರಿಕದ ಬಡ್ಡಿದರಗಳಲ್ಲಿ ಆಗುತ್ತಿರುವ ಬದಲಾವಣೆ ಹಾಗೂ ಸುರಕ್ಷಿತ ಹೂಡಿಕೆ ಹುಡುಕಾಟ ಹೀಗೆ ಅನೇಕ ಕಾರಣಗಳಿಂದ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಎಂಸಿಎಕ್ಸ್ನಲ್ಲಿ ಫ್ಯೂಚರ್ ಚಿನ್ನ, ಬೆಳ್ಳಿ ದರ ಏರಿಕೆಯಾಗಿದೆ. ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ ನಲ್ಲಿ ಶುಕ್ರವಾರ (ಇಂದು) ಮಧ್ಯಾಹ್ನ 3:10ರ ವೇಳೆಗೆ ಚಿನ್ನದ ಫ್ಯೂಚರ್ಸ್ ಬೆಲೆ 10 ಗ್ರಾಂಗೆ ಸುಮಾರು 1,61,196 ರೂ.ನಷ್ಟಕ್ಕೆ ತಲುಪಿತ್ತು. ಹಿಂದಿನ ಮುಕ್ತಾಯದ ಬೆಲೆಗೆ ಹೋಲಿಸಿದರೆ …
Read More »`ಮಹಾ’ ದುರಂತ – ಮಗನನ್ನ ರಕ್ಷಿಸಲು ಹೋದ ತಂದೆ, ಬಳಿಕ ತಾಯಿ; ಮೂವರೂ ಸಾವು
ಮುಂಬೈ: ಮಹಾರಾಷ್ಟ್ರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಬೆಟ್ಟದ ಅಂಚಿನಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸುತ್ತಿದ್ದ ಯುವಕನನ್ನ ರಕ್ಷಿಸಲು ಮುಂದಾದ ತಂದೆ, ಬಳಿಕ ತಾಯಿ ಕೂಡ ಬೆಟ್ಟದಿಂದ ಬಿದ್ದು ಮೃತಪಟ್ಟಿದ್ದಾರೆ. 18/19 ವರ್ಷದ ಮಗ ಸೇರಿದಂತೆ ಒಂದೇ ಕುಟುಂಬದ ಮೂವರು ದುರಂತ ಸಾವಿಗೀಡಾಗಿದ್ದಾರೆ. ಮೃತರನ್ನು ನಗರದ ಜಲ್ತಾ ಫಾಟಾ ಪ್ರದೇಶದ ನಿವಾಸಿಗಳಾದ ಮುರಳೀಧರ್ ಚಾಂದ್ಗುಡೆ (48), ಅವರ ಪತ್ನಿ ಸಂಗೀತಾ ಹಾಗೂ ಪುತ್ರ ಕುನಾಲ್ ಎಂದು ಪೊಲೀಸರು ಗುರುತಿಸಿದ್ದಾರೆ. ಹೊಸ …
Read More »ಬ್ಯಾಂಕ್ ಎದುರೇ ಗುಂಡಿಕ್ಕಿ ಪತ್ನಿ ಕೊಲೆ | ಟೊಮ್ಯಾಟೋ ಕೊಳೆತಿದ್ದಕ್ಕೆ ಹಲ್ಲೆ ಮಾಡಿದ್ದ: ಕರಾಳ ಸತ್ಯ ಬಿಚ್ಚಿಟ್ಟ ಮೃತಳ ಸಹೋದರಿ
ಲಕ್ನೋ: ಇಲ್ಲಿನ ಬ್ಯಾಂಕ್ವೊಂದರ ಹೊರಗೆ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಗುಂಡಿಟ್ಟು ಹತ್ಯೆ ಮಾಡಿ, ಬಳಿಕ ತನ್ನ ತಂಗಿಯನ್ನೂ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದಾಗಿಯೇ ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ. ಮೃತ ಮಹಿಳೆಯ ಸಹೋದರಿ ಹಾಗೂ ಯೂಟ್ಯೂಬರ್ ಪ್ರಗ್ಯಾ ಮಿಶ್ರಾ ಅವರು ಪತಿ ಮಾನಸ್ ವಾಜಪೇಯಿ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡ ಅವರು, ಮೃತ ಪತ್ನಿ ದಿವ್ಯಾ ಅನುಭವಿಸಿದ್ದ ದೌರ್ಜನ್ಯ ಮತ್ತು …
Read More »ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸಚಿವ ಸಂಪುಟ ಶಿಫಾರಸು
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟವು ರಾಜ್ಯಪಾಲರಿಗೆ ಅಧಿಕೃತವಾಗಿ ಶಿಫಾರಸು ಮಾಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈ ಹಿಂದೆ ಹೊರಡಿಸಿದ್ದ ಅಮಾನತು ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದ ಬೆನ್ನಲ್ಲೇ, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ವಾರದ ರಾಜ್ಯಪಾಲರ ಅಮಾನತು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ …
Read More »ಮಂಜಿನ ನಗರಿ ಮಡಿಕೇರಿ ದಸರಾಕ್ಕೆ 2 ಕೋಟಿ ಘೋಷಿಸಿದ ರಾಜ್ಯ ಸರ್ಕಾರ
ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ ಘೋಷಣೆಯಾಗಿದೆ. ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ದಸರಾ ಸಮಿತಿಯ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ ಬೆನ್ನಲ್ಲೇ ಘೋಷಣೆ ಹೊರಬಿದ್ದಿದೆ. ಮಡಿಕೇರಿಯ ಐತಿಹಾಸಿಕ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂ. ಅನುದಾನ ಘೋಷಿಸಿದೆ. ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಅವರ ನೇತೃತ್ವದಲ್ಲಿ ದಸರಾ ಸಮಿತಿಯ …
Read More »SIR ವೇಳೆ ಮ್ಯಾಪಿಂಗ್ ಆಗದ 43.84 ಲಕ್ಷ ಮತದಾರರಿಗೆ ನೋಟಿಸ್
ಬೆಂಗಳೂರು: ಕರ್ನಾಟಕದಲ್ಲಿ ಎಸ್ಐಆರ್ ಮೊದಲ ಹಂತ ಮುಕ್ತಾಯ ಆಗಿದೆ. ಈಗ ಮತ್ತೊಂದು ಹಂತದ ಪ್ರಕ್ರಿಯೆಗೆ ಮುಂದಾಗಿದ್ದು, ಮ್ಯಾಪಿಂಗ್ ಆಗದ ಗೊಂದಲಮಯ ಆಗಿರುವ ಮತದಾರರಿಗೆ ನೋಟಿಸ್ ನೀಡಲಿದ್ದಾರೆ. ಒಟ್ಟು 1.07 ಕೋಟಿ ಮತದಾರರನ್ನು ಎಎಸ್ಡಿಡಿಒ ಅಂತಾ ಗುರುತು ಮಾಡಲಾಗಿದ್ದು, ಈ ಪೈಕಿ 43,84 ಲಕ್ಷ ಮತದಾರರಿಗೆ ನೋಟಿಸ್ ಬರಲಿದೆ. ಈ ಮತದಾರರು ಗುರತು, ಪೌರತ್ವ ಮತ್ತು ಜನ್ಮದಿನಾಂಕ ಸಾಬೀತುಪಡಿಸಬೇಕಿದೆ. 43.84 ಲಕ್ಷ ಮತದಾರರ ಪೈಕಿ 23.45 ಲಕ್ಷ ಮತದಾರರು ಮ್ಯಾಪಿಂಗ್ ಲಭ್ಯವಿಲ್ಲ. …
Read More »ಕೆಇಎ ನೇಮಕಾತಿ: ಆ.22ಕ್ಕೆ ಕಡ್ಡಾಯ ಕನ್ನಡ ಪರೀಕ್ಷೆ
ಬೆಂಗಳೂರು: ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಡ್ಡಾಯ ಕನ್ನಡ ಪರೀಕ್ಷೆ ಆ.22ರಂದು ನಗರದಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡದಿರುವ ಅಭ್ಯರ್ಥಿಗಳು ನೇಮಕಾತಿ ಸಂದರ್ಭದಲ್ಲಿ ಕನ್ನಡ ಕಡ್ಡಾಯ ಪರೀಕ್ಷೆ ಬರೆಯಬೇಕು ಎನ್ನುವುದು ನಿಯಮ. ಆ ಪ್ರಕಾರ ಸುಮಾರು 6 ಸಾವಿರ ಮಂದಿ ಶನಿವಾರ (ಆ.22) ಪರೀಕ್ಷೆ ಬರೆಯಲಿದ್ದಾರೆ …
Read More »IRCTC ನಿರ್ದೇಶಕರಾಗಿ ಆಯ್ಕೆಯಾದ ಸಚಿನ್ ಸಬ್ನಿಸ್ ಅವರಿಗೆ ಸನ್ಮಾನ
ಬೆಳಗಾವಿ: ಭಾರತೀಯ ರೈಲ್ವೆ ಪ್ರವಾಸೋದ್ಯಮ ನಿಗಮದ (IRCTC) ನಿರ್ದೇಶಕರಾಗಿ ಆಯ್ಕೆಯಾಗಿರುವ ಬೆಳಗಾವಿಯ ಹಿರಿಯ ಉದ್ಯಮಿ ಸಚಿನ್ ಸಬ್ನಿಸ್ ಅವರನ್ನು ಬೆಳಗಾಮ್ ಚೆಂಬರ್ ಆಫ್ ಕಾಮರ್ಸ್ ವತಿಯಿಂದ ಗುರುವಾರ ಸನ್ಮಾನಿಸಲಾಯಿತು. ಚೆಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ಸ್ವಪ್ನಿಲ್ ಶಹ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿನ್ ಸಬ್ನಿಸ್ ಅವರನ್ನು ಅಭಿನಂದಿಸಿ, ಅವರ ಮುಂದಿನ ಜವಾಬ್ದಾರಿಯ ಯಶಸ್ವಿ ನಿರ್ವಹಣೆಗೆ ಶುಭ ಹಾರೈಸಲಾಯಿತು. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಉದ್ಯಮ, ವ್ಯಾಪಾರ ಹಾಗೂ ಪ್ರವಾಸೋದ್ಯಮ ಕ್ಷೇತ್ರದ …
Read More »ದೇವಸ್ಥಾನ ನಿರ್ಮಾಣದ ಎರಡನೇ ಹಂತದ ಕಾಮಗಾರಿಗೆ ಚೆಕ್ ಹಸ್ತಾಂತರಿಸಿದ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ.: ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬಾಳೇಕುಂದ್ರಿ ಬಿ.ಕೆ. ಗ್ರಾಮದಲ್ಲಿ ಸುಮಾರು ₹1.20 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಎರಡನೇ ಹಂತದ ಕಾಮಗಾರಿಗಾಗಿ ಬಿಡುಗಡೆಯಾದ ಅನುದಾನದ ಚೆಕ್ ಅನ್ನು ಶುಕ್ರವಾರ ದೇವಸ್ಥಾನದ ಟ್ರಸ್ಟ್ ಕಮಿಟಿಯ ಪದಾಧಿಕಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಅವರು ಹಸ್ತಾಂತರಿಸಿದರು. ಗ್ರಾಮದ ಪ್ರಮುಖ ಧಾರ್ಮಿಕ …
Read More »ಪೆಲೆಟ್ ಗನ್ ಬಳಕೆ – ರಾಹುಲ್ ಗಾಂಧಿ ಪ್ರತಿಭಟನೆಗೆ ಮಣಿದ ದೆಹಲಿ ಪೊಲೀಸ್; FIR ದಾಖಲು
ನವದೆಹಲಿ: ರಾಷ್ಟ್ರ ರಾಜಧಾನಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆ ಹೊರಗೆ ರಾಹುಲ್ ಗಾಂಧಿ ನೇತೃತ್ವದ ಧರಣಿ ಕಾವು ಪಡೆದುಕೊಳ್ಳುತ್ತಿದ್ದಂತೆ ದೆಹಲಿ ಪೊಲೀಸರು ಪೆಲೆಟ್ ಗನ್) ಬಳಕೆ ದೂರಿನ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ನೀಟ್ ಪ್ರತಿಭಟನೆಯ ವೇಳೆ ನಡೆದ ಪೆಲೆಟ್ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತ ವಿದ್ಯಾರ್ಥಿಯೊಂದಿಗೆ ಸಂಸತ್ ರಸ್ತೆಯ ಪೊಲೀಸ್ ಠಾಣೆಗೆ ತೆರಳಿ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಧರಣಿ ಕುಳಿತಿದ್ದರು. ಸಂಸದೆ ಪ್ರಿಯಾಂಕಾ ಗಾಂಧಿ …
Read More »
Laxmi News 24×7