ಮೇ 28ರಂದು ಬಕ್ರೀದ್ ಹಬ್ಬವಿದ್ದು ಅಂದು ಬೆಳಗಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗೋ ಹತ್ಯೆ ನಡೆಯುವ ಸಾಧ್ಯತೆ ಇದೆ. ಬೆಳಗಾವಿಯ ಕಂಜರಗಲ್ಲಿ, ಕ್ಯಾಂಪ್ ,ಕಸಾಯಿಗಲ್ಲಿ ಮುಂತಾದ ಕಡೆ ಇವು ಹೆಚ್ಚಾಗಿ ನಡೆಯುತ್ತದೆ. 33 ಕೋಟಿ ದೇವತೆಗಳಿವೆ ಎಂದು ನಂಬಿ ನಾವು ಗೋಮಾತೆಯನ್ನು ಪೂಜಿಸುತ್ತೇವೆ .ಭಾರತವು ಗೋ ಆಧಾರಿತ ಕೃಷಿ ದೇಶವಾಗಿದ್ದು ಗೋ ಹತ್ಯೆಯನ್ನು ತಡೆಯುವುದು ತಡೆಯುವುದು ನಮ್ಮ ಎಲ್ಲರ ಕರ್ತವ್ಯ ಆಗಿದೆ. ಸುಪ್ರೀಮ್ ಕೋರ್ಟಿನ ಆದೇಶ ಸಹಿತ ಇದೆ. ತಮ್ಮ ಸರಹದ್ದಿನಲ್ಲಿ …
Read More »ಸಾಯುವ ಮೊದಲು ಪ್ರಭಾಕರ್ ಕೋರೆಗೆ ವೈದ್ಯ ಕಳುಹಿಸಿದ್ದ ಕೊನೆಯ ಸಂದೇಶ ಏನು..?
ಬೆಳಗಾವಿ : ಕೆಎಲ್ಇ ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ದಿನೇಶ್ ಭಟ್ಕಳ್ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಡಾ. ದಿನೇಶ್ ಲಕ್ಷ್ಮಣ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು, ಹಲವು ವರ್ಷಗಳಿಂದ ವೈದ್ಯಕೀಯ ಸೇವೆ ಸಲ್ಲಿಸಿ ನಂತರ ಬೆಳಗಾವಿಯಲ್ಲಿ ನೆಲೆಸಿದ್ದರು. ವಿಪರ್ಯಾಸವೆಂದರೆ ಸಾಯುವ ಮೊದಲು ವೈದ್ಯ ಕೆಎಲ್ಇ ಮಾಜಿ …
Read More »ಸಾಕು ತಾಯಿಯನ್ನೇ ಓಡಿಸಿಕೊಂಡು ಹೋದ ಮಗ ಕಲಿಯುಗದ ಘೋರ ದುರಂತ: ಹೆತ್ತ ತಂದೆಗೆ ದ್ರೋಹ ಬಗೆದು, ಸಾಕು ತಾಯಿಯನ್ನೇ ಮದುವೆಯಾದ ಮಗ!
“ಪ್ರೀತಿಗೆ ಕಣ್ಣಿಲ್ಲ, ವಯಸ್ಸಿನ ಮಿತಿಯಿಲ್ಲ” ಅಂತಾರೆ. ಆದರೆ ಹರಿಯಾಣದಲ್ಲಿ ನಡೆದಿರೋ ಈ ಘಟನೆಯನ್ನು ಕೇಳಿದ್ರೆ, ಪ್ರೀತಿಯ ಹೆಸರಲ್ಲಿ ಮನುಷ್ಯ ಇಷ್ಟೊಂದು ಕೆಳಮಟ್ಟಕ್ಕೆ ಇಳಿಯಲು ಸಾಧ್ಯವೇ? ಸಂಬಂಧಗಳ ಪವಿತ್ರತೆಯೇ ಮಣ್ಣು ಪಾಲಾಯಿತೇ? ಅನಿಸುವುದು ಗ್ಯಾರಂಟಿ. ಇಲ್ಲೊಬ್ಬ ಮಗ, ತನ್ನ ಹೆತ್ತ ತಂದೆಯ ಎರಡನೇ ಪತ್ನಿಯನ್ನೇ (ಸಾಕು ತಾಯಿಯನ್ನು) ಪ್ರೀತಿಸಿ, ಆಕೆಯೊಂದಿಗೆ ರಾತ್ರೋರಾತ್ರಿ ಮನೆ ಬಿಟ್ಟು ಓಡಿಹೋಗಿ ಕೋರ್ಟ್ನಲ್ಲಿ ಮದುವೆಯಾಗಿದ್ದಾನೆ! ಘಟನೆಯ ಶಾಕಿಂಗ್ ಹಿನ್ನೆಲೆ ಇಲ್ಲಿದೆ: ಈ ಕಟು ಸತ್ಯ ನಡೆದಿರುವುದು ಹರಿಯಾಣದ …
Read More »ಬಾದಾಮಿ ಅಗಸ್ತ್ಯ ಹೊಂಡದಲ್ಲಿ ಈಜಲು ಹೋದ ಯುವಕ ನಾಪತ್ತೆ
ಬಾಗಲಕೋಟೆ: ಜಿಲ್ಲೆಯ ಬಾದಾಮಿ ಪಟ್ಟಣದ ಐತಿಹಾಸಿಕ ಅಗಸ್ತ್ಯ ಹೊಂಡದಲ್ಲಿ ಈಜಲು ಹೋಗಿ 19 ವರ್ಷದ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬಾದಾಮಿಯ ಜಯನಗರ ನಿವಾಸಿ ಮನೋಜ್ ಪ್ರಕಾಶ್ ಕಂಬ್ಳೇಕರ್ (19) ನಾಪತ್ತೆಯಾದ ಯುವಕ. ಮನೋಜ್ ಹೊಂಡದ ಬದಿ ತನ್ನ ಬಟ್ಟೆಗಳನ್ನು ಕಳಚಿಟ್ಟು, ಈಜಲು ಹೊಂಡಕ್ಕೆ ಹಾರಿದ್ದಾನೆ ಎನ್ನಲಾಗಿದೆ. ಮನೋಜ್ ನೀರಿನಿಂದ ಮೇಲಕ್ಕೆ ಬರದೇ ಇದ್ದಾಗ ಸಾರ್ವಜನಿಕರು 112 ಪೊಲೀಸ್ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. …
Read More »ವರದಕ್ಷಿಣೆ ಕಿರುಕುಳ ಆರೋಪ – ನೇಣು ಬಿಗಿದು ಕಾನ್ಸ್ಟೇಬಲ್ ಪತ್ನಿ ಆತ್ಮಹತ್ಯೆ
ಬೆಂಗಳೂರು: ಪೊಲೀಸ್ ಕ್ವಾರ್ಟಸ್ನಲ್ಲೇ ನೇಣುಬಿಗಿದುಕೊಂಡು ಕಾನ್ಸ್ಪೇಬಲ್ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ. ಲಕ್ಷ್ಮೀ ಪ್ರಿಯಾ (26) ಆತ್ಮಹತ್ಯೆಗೆ ಶರಣಾದ ಮಹಿಳೆ. ಮೃತಳ ತಂದೆ ಕುಮಾರ್ ಆರಾಧ್ಯ ಅವರು ನೀಡಿದ ದೂರಿನ ಮೇರೆಗೆ ಹೆಚ್ಎಎಲ್ ಠಾಣೆಯ ಕಾನ್ಸ್ಟೇಬಲ್ ರಾಜೇಶ್ ಹಾಗೂ ತಂದೆ-ತಾಯಿ ಸೇರಿದಂತೆ ನಾಲ್ವರ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. …
Read More »ಕುಟುಂಬ ಸಮೇತ ರಾಯರ ದರ್ಶನ ಪಡೆದ ಕೆ.ಎಸ್.ಈಶ್ವರಪ್ಪ
ರಾಯಚೂರು: ಮಾಜಿ ಸಚಿವ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರಿಂದು ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಸಲ್ಲಿಸಿದ್ದಾರೆ. ಪತ್ನಿ, ಪುತ್ರ, ಸೊಸೆ, ಮೊಮ್ಮಕ್ಕಳ ಜೊತೆ ಮಠಕ್ಕೆ ಆಗಮಿಸಿದ ಕೆ.ಎಸ್.ಈಶ್ವರಪ್ಪ ಅವರು ಮಂತ್ರಾಲಯ ರಾಯರ ಮಠದಲ್ಲಿ ಗುರುರಾಯರ ವೃಂದಾವನ ದರ್ಶನ ಪಡೆದು ಪುನೀತರಾಗಿದ್ದಾರೆ. ಮಂಚಾಲಮ್ಮ ದೇವಿ ದರ್ಶನ ಪಡೆದು ಬಳಿಕ ರಾಯರ ವೃಂದಾವನಕ್ಕೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ. ರಾಯರ ಭಕ್ತರಾಗಿರುವ ಈಶ್ವರಪ್ಪ ಆಗಾಗ ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ಭೇಟಿ ನೀಡುತ್ತಾರೆ. …
Read More »ವಿಮಾನ ಟಿಕೆಟ್ ಬುಕ್ಕಿಂಗ್ ಶುಲ್ಕ ದುಪ್ಪಟ್ಟು – ತನಿಖೆಗೆ ಜೋಶಿ ಆದೇಶ
ನವದೆಹಲಿ: ವಿಮಾನ ಪ್ರಯಾಣಿಕರಿಗೆ ಆನ್ಲೈನ್ ಟಿಕೆಟ್ ಬುಕ್ಕಿಂಗ್ ವೇದಿಕೆಗಳು ದುಪ್ಪಟ್ಟು ಶುಲ್ಕ ವಿಧಿಸುತ್ತಿದ್ದು, ತಕ್ಷಣವೇ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು CCPA (ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ) ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆನ್ಲೈನ್ ಟಿಕೆಟ್ ಬುಕ್ಕಿಂಗ್ ವೇದಿಕೆಗಳು ವಿಮಾನಯಾನ ಸಂಸ್ಥೆಗಳು ವಿಧಿಸುವುದಕ್ಕಿಂತ ದುಪ್ಪಟ್ಟು ಶುಲ್ಕ ಸುಲಿಗೆ ಮಾಡುತ್ತಿರುವುದನ್ನು ಗ್ರಾಹಕರೊಬ್ಬರು ಬಯಲಿಗೆಳೆದಿದ್ದಾರೆ. ಇದನ್ನು ಗಮನಿಸಿದ ಸಚಿವರು ತನಿಖೆ ನಡೆಸಿ ವಂಚನೆ ವಿರುದ್ಧ …
Read More »ಶಾಸಕ ಗಣೇಶ ಹುಕ್ಕೇರಿ ಪ್ರಯತ್ನದಿಂದ 50 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಚಾಲನೆ
ಚಿಕ್ಕೋಡಿ:ರಾಮಪೂರ ಗ್ರಾಮದಲ್ಲಿ ರಸ್ತೆ & ಚರಂಡಿ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರು ಮಾಡುವಂತೆ ಗ್ರಾಮಸ್ಥರು ನನ್ನಲ್ಲಿ ಹಾಗೂ ಮಾನ್ಯ ಶ್ರೀ ಪ್ರಕಾಶ ಬಾ ಹುಕ್ಕೇರಿ, ನವದೆಹಲಿ ವಿಶೇಷ ಪ್ರತಿನಿಧಿಗಳು ಹಾಗೂ ವಿಧಾನ ಪರಿಷತ ಸದಸ್ಯರಲ್ಲಿ ಮನವಿ ಮಾಡಿಕೊಂಡಿರುವ ಪ್ರಯುಕ್ತ ಸನ್ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಯೋಜನೆಯಡಿ ರೂ.50.00 ಲಕ್ಷಗಳ ಅನುದಾನವನ್ನು ರಾಮಪೂರ ಗ್ರಾಮ ಪರಿಮಿತಿಯಲ್ಲಿ ರಸ್ತೆ & ಚರಂಡಿ ನಿರ್ಮಾಣಕ್ಕೆ ಮಂಜೂರು ಮಾಡಿಲಾಗಿದ್ದು, ಇವತ್ತು ಈ ಕಾಮಗಾರಿಗೆ ಗ್ರಾಮಸ್ಥರಿಂದ …
Read More »ಅಕ್ರಮ ಬಾಂಗ್ಲಾ ವಲಸಿಗರೆಂಬ ಶಂಕೆ; 20ಕ್ಕೂ ಹೆಚ್ಚು ಕಾರ್ಮಿಕರ ತಪಾಸಣೆ ನಡೆಸಿದ ಬೆಳಗಾವಿ ಪೊಲೀಸರು
ಬೆಳಗಾವಿ: ನಗರದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಇದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಕೇಂದ್ರ ಬಸ್ ನಿಲ್ದಾಣದಿಂದ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು, ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. “ಹುಬ್ಬಳ್ಳಿಯಲ್ಲಿ ಕೆಲವರ ತಪಾಸಣೆಯಾಗಿದ್ದು, ಮೂರು ಬಸ್ಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಬೆಳಗಾವಿ ನಗರಕ್ಕೆ ಬಂದಿದ್ದಾರೆ” ಎಂದು ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್ ನೇತೃತ್ವದ ತಂಡವು ಅನುಮಾನ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ …
Read More »ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ : 80ಕ್ಕೂ ಅಧಿಕ ಮಂದಿ ಸಾವು
ಬೀಜಿಂಗ್: ಚೀನಾದ ಪ್ರಮುಖ ಕಲ್ಲಿದ್ದಲು ಉತ್ಪಾದನಾ ಪ್ರದೇಶವಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಗಣಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 82 ಜನರು ಸಾವನ್ನಪ್ಪಿದ್ದಾರೆ ಎಂದು ಚೀನಾದ ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ದುರಂತ ಸಂಭವಿಸಿದಾಗ ಒಟ್ಟು 247 ಕಾರ್ಮಿಕರು ಗಣಿಯ ಆಳದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಮುಂಜಾನೆಯ ಹೊತ್ತಿಗೆ 201 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಇನ್ನೂ ಗಣಿಯ ಆಳದಲ್ಲಿ ಸಿಲುಕಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಘಟನೆಯ ತೀವ್ರತೆ …
Read More »
Laxmi News 24×7