ಬೆಳಗಾವಿ: ದಕ್ಷಿಣ ಕೊಂಕಣ ಎಜುಕೇಶನ್ ಸೊಸೈಟಿ ವತಿಯಿಂದ, ಲೋಕಮಾನ್ಯ ಮಲ್ಟಿಪರ್ಪಸ್ ಕೋ-ಆಪ್ ಸೊಸೈಟಿಯ ಸಹಯೋಗದಲ್ಲಿ ಮಾವು, ಅರಣ್ಯೋತ್ಪನ್ನ ಮತ್ತು ಪಾರಂಪರಿಕ ಆಹಾರ ಮೇಳವನ್ನು ಆಯೋಜಿಸಲಾಗಿದೆ. ಮೇ 15ರಿಂದ 17ರವರೆಗೆ ಬೆಳಗಾವಿಯ ಜಿಎಸ್ಎಸ್/ಆರ್ಪಿಡಿ ಕಾಲೇಜು ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಮಹೋತ್ಸವವು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಾರ್ವಜನಿಕರಿಗೆ ಮುಕ್ತವಾಗಿರಲಿದೆ. ಸ್ಥಳೀಯ ಮಾವಿನ ಹಣ್ಣುಗಳ ವಿವಿಧ ತಳಿಗಳು, ಅರಣ್ಯದಲ್ಲಿ ದೊರೆಯುವ ಋತುಮಾನಿಕ ಹಣ್ಣುಗಳು, ಸಸ್ಯಗಳು, …
Read More »ಜನರ ನೆಮ್ಮದಿಯ ಜೀವನವೇ ಲಕ್ಷ್ಮೀ ಹೆಬ್ಬಾಳಕರ್ ಅವರ ಗುರಿ : ಮೃಣಾಲ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ರಣಕುಂಡೆ ಗ್ರಾಮದೊಳಗಿನ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಬುಧವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ಸುಮಾರು 71 ಲಕ್ಷ ರೂ,ಗಳ ಅನುದಾನದಲ್ಲಿ ರಸ್ತೆಗಳು ನಿರ್ಮಾಣಗೊಳ್ಳಲಿವೆ. ನಿಗದಿತ ಸಮಯದಲ್ಲಿ ಗುಣಮಟ್ಟದ ರಸ್ತೆ ನಿರ್ಮಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಮೃಣಾಲ ಹೆಬ್ಬಾಳಕರ್ ಗುತ್ತಿಗೆದಾರರಿಗೆ …
Read More »ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ನಿರ್ಣಯ ಮಂಡಿಸುವಂತೆ ಕನ್ನಡಪರ ಸಂಘಟನೆ ಕಾರ್ಯಕರ್ತರ ಆಗ್ರಹ: ಮಹಾನಗರ ಪಾಲಿಕೆ ಮುಂದೆ ಹೈಡ್ರಾಮಾ
ಬೆಳಗಾವಿ ಕರ್ನಾಟಕದ ವಿಭಾಜ್ಯ ಅಂಗ ಎಂದು ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಗೊತ್ತವಳಿ ಅಂಗೀಕಾರ ಮಾಡಬೇಕು ಎಂದು ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದು, ಇಂದು ಪಾಲಿಕೆ ಮಹತ್ವದ ಸಭೆ ಹಿನ್ನೆಲೆ ಪೊಲೀಸ ಬಂದೋಬಸ್ತ್ ನಿಯೋಜಿಸಲಾಗಿದೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಮಹಾನಗರ ಪಾಲಿಕೆಯಲ್ಲಿ ನಿರ್ಣಯಕ್ಕೆ ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಇನ್ನೊಂದು ಕಡೆ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಎಂಇಎಸ್ ವಿರೋಧಿಸಿದೆ. ಹೀಗಾಗಿ ಪಾಲಿಕೆ ಸಭೆಯತ್ತ ಕುತೂಹಲ ಹೆಚ್ಚಿದೆ. ಕರ್ನಾಟಕದ …
Read More »ಬೆಳಗಾವಿಗೆ ಮೂರು ಹೋಸ ಎಕ್ಸ್ಪ್ರೆಸ್ ರೈಲುಗಳ ಆರಂಭ
ದಕ್ಷಿಣ ಮಧ್ಯ ರೈಲ್ವೆಯು ಹೈದರಾಬಾದ್, ಸಿಕಂದರಾಬಾದ್ ಮತ್ತು ಚರ್ಲಪಲ್ಲಿಯನ್ನು ಬೆಳಗಾವಿಯೊಂದಿಗೆ ಸಂಪರ್ಕಿಸುವ ಮೂರು ಹೊಸ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಸೇವೆಗಳನ್ನು ಆರಂಭಿಸುವುದಾಗಿ ತಿಳಿಸಿದೆ. ಇದು ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ರೈಲು ಸಂಪರ್ಕವನ್ನು ವೃದ್ಧಿಸಲಿದೆ. ಪರಿಚಯಿಸಲಾದ ರೈಲುಗಳ ವಿವರ ಹೀಗಿದೆ ರೈಲು ಸಂಖ್ಯೆ 17071/17072 ಹೈದರಾಬಾದ್–ಬೆಳಗಾವಿ–ಹೈದರಾಬಾದ್ ಸಾಪ್ತಹಿಕ ಎಕ್ಸ್ಪ್ರೆಸ್ ರೈಲು ಸಂಖ್ಯೆ 17073/17074 ಸಿಕಂದರಾಬಾದ್–ಬೆಳಗಾವಿ–ಸಿಕಂದರಾಬಾದ್ ಸಾಪ್ತಹಿಕ ಎಕ್ಸ್ಪ್ರೆಸ್ ರೈಲು ಸಂಖ್ಯೆ 17075/17076 ಚರ್ಲಪಲ್ಲಿ–ಬೆಳಗಾವಿ–ಚರ್ಲಪಲ್ಲಿ ಸಾಪ್ತಹಿಕ ಎಕ್ಸ್ಪ್ರೆಸ್ ರೈಲುಗಳು ಸಂಚರಿಸಲಿವೆ. …
Read More »ಸಿಸಿಬಿ ಪೊಲೀಸರ ದಾಳಿ: 3 ಲಕ್ಷ ಮೌಲ್ಯದ ಗಾಂಜಾ ಜಪ್ತಿ
ಬೆಳಗಾವಿ: ಕಾಕತಿ ಎನ್ಎಚ್-48 ರ ಸರ್ವಿಸ ಮಾರ್ಗದಲ್ಲಿರುವ ಚಿಗರಿ ಪ್ರಕೃತಿ ಶಿಬಿರದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುವ ವೇಳೆ ಬೆಳಗಾವಿಯ ಸಿಸಿಬಿ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆದು ಗಾಂಜಾ ವಶಕ್ಕೆ ಪಡೆದಿದ್ದಾರೆ. ಸೈಯ್ಯದ ನಿಸಾರ ತಂದೆ ಸೈಯ್ಯದ ಇಸಾಕ (40) ಬಂದಿತ ಆರೋಪಿ ಆರೋಪಿ ನಂ.2 ಗಜಾನನ, ಎಂಬಾತನಿಗೆ ಮಾರಾಟ ಮಾಡಲು ಬಂದಾಗ ಸಿಸಿಬಿ ವಿಭಾಗ ಪಿಐ. ಮಂಜುನಾಥ ನಾಯಕ, ಪಿಎಸ್ಐ ಮಂಜುನಾಥ ಭಜಂತ್ರಿ …
Read More »ಬೆಳಗಾವಿ ಟು ಮುಂಬೈ: ಕಳ್ಳತನವಾದ ಕಾರು 24 ಗಂಟೆಯಲ್ಲೆ ಪತ್ತೆ ಹಚ್ಚಿದ ಪೊಲೀಸರು
ಬೆಳಗಾವಿ: ಬೆಳಗಾವಿ ನಗರದ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ 29,00,000 ಲಕ್ಷ ರೂ ಮೌಲ್ಯದ ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರೀಯಾಂಕಾ ಚೇತನ ಅಜರೇಕರ ಅವರು ತಮ್ಮ ಕಾರು ಕಳ್ಳತನವಾದ ಬಗ್ಗೆ ದೂರು ನೀಡಿದರು. ಪ್ರಕರಣವನ್ನು ಪತ್ತೆ ಹಚ್ಚಲು ತನಿಖೆ ನಡೆಸಿದ ಪೊಲೀಸರು ಕಳ್ಳತನವಾದ ಕಾರನ್ನು ಮಹಾರಾಷ್ಟ್ರದ ಮುಂಬೈನಿಂದ 24 ಗಂಟೆಯಲ್ಲಿ ಪತ್ತೆ ಮಾಡಿದ್ದಾರೆ. ಅಲ್ಲದೇ ಧಾರವಾಡ ಸಬ್ ಅರ್ಬನ ಪೊಲೀಸ್ ಠಾಣೆಯಲ್ಲಿ …
Read More »ಕಾಂಗ್ರೆಸ್ ಸರ್ಕಾರ ಎಸ್ಸಿ-ಎಸ್ಟಿ ಸಮುದಾಯಕ್ಕೆ ಅನ್ಯಾಯ ಮಾಡಿದೆ: ಆರ್.ಅಶೋಕ್
ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಶೇ.17 ಕ್ಕೆ ಹೆಚ್ಚಳ ಮಾಡಿದ್ದ ಎಸ್ಸಿ ಮೀಸಲಾತಿಯನ್ನು ಶೇ.15ಕ್ಕೆ ಇಳಿಕೆ ಮಾಡಿದ್ದು, ಸಿದ್ದರಾಮಯ್ಯ ಸರ್ಕಾರ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ಮೀಸಲಾತಿ ಇಳಿಕೆ ಮಾಡಿರುವ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. “ರಾಜ್ಯದಲ್ಲಿ ನಾವು ಅಧಿಕಾರದಲ್ಲಿದ್ದಾಗ ಎಸ್ಸಿ ಮೀಸಲಾತಿಯನ್ನು ಶೇ. 15 ರಿಂದ ಶೇ. …
Read More »ಬಿಹಾರದಲ್ಲಿ ಅಮಾನುಷ ಕೃತ್ಯ – ನಿಂಬೆ ಹಣ್ಣು ಕಿತ್ತಿದ್ದಕ್ಕೆ ಬಾಲಕನ ಕೊಲೆ
ಪಾಟ್ನಾ: ನಿಂಬೆ ಹಣ್ಣು ಕಿತ್ತಿದ್ದಕ್ಕೆ ಬಾಲಕನಿಗೆ ಮನಬಂದಂತೆ ಥಳಿಸಿ ಕೊಲೆ ಮಾಡಿರುವ ಘಟನೆ ಬಿಹಾರದ ನಳಂದಾದ ಸಕ್ರವಾ ಗ್ರಾಮದಲ್ಲಿ ನಡೆದಿದೆ. ಸಕ್ರವಾ ಗ್ರಾಮದ ನಿವಾಸಿಯೊಬ್ಬರ ತೋಟದಿಂದ ಬಾಲಕ ಕೆಲವು ನಿಂಬೆಹಣ್ಣುಗಳನ್ನು ಕಿತ್ತಿದ್ದ. ಇದರಿಂದ ಕೆರಳಿದ ಮಾಲೀಕ ಬಾಲಕನನ್ನು ಮನಬಂದಂತೆ ಥಳಿಸಿ ಕೊಲೆ ಮಾಡಿದ್ದಾನೆ. ಭೀಕರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಘಟನೆ ನಡೆದ ಬೆನ್ನಲ್ಲೇ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ …
Read More »ವಿಶ್ವಾಸಮತ ಗೆದ್ದ ವಿಜಯ್- ಸರ್ಕಾರಕ್ಕೆ 144 ಶಾಸಕರ ಬೆಂಬಲ
ಚೆನ್ನೈ: ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಪಾಸ್ ಆಗಿದ್ದಾರೆ. ಸರ್ಕಾರಕ್ಕೆ 144 ಮಂದಿ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಟಿವಿಕೆ, ಕಾಂಗ್ರೆಸ್, ಸಿಪಿಎಂ, ಸಿಪಿಐ, ಮುಸ್ಲಿಮ್ ಲೀಗ್, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಬಹುಮತ ಸಾಬೀತು ಪಡಿಸುವ ವೇಳೆ ಡಿಎಂಕೆ ಮತ್ತು ಪಿಎಂಕೆ ಶಾಸಕರು ಸಭಾತ್ಯಾಗ ಮಾಡಿದರು. ಒಬ್ಬ ಬಿಜೆಪಿ ಶಾಸಕರು ಮತದಾನದಿಂದ ದೂರ ಉಳಿದರು. ಅದರೆ ಸದನದಲ್ಲಿದ್ದ …
Read More »ಇಂಧನ ಉಳಿತಾಯಕ್ಕೆ ಕ್ರಮ – ಮೋದಿ ಭದ್ರತಾ ವಾಹನಗಳ ಸಂಖ್ಯೆಯಲ್ಲಿ 50% ಕಡಿತ
ನವದೆಹಲಿ: ಪಶ್ಚಿಮ ಏಷ್ಯಾದ ಉದ್ವಿಗ್ನತೆ, ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಹಾಗೂ ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆಯ ಹಿನ್ನೆಲೆ ದೇಶದಲ್ಲಿ ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ವಿಶೇಷ ಭದ್ರತಾ ಪಡೆ ಬಳಸುವ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಶೇ.50ರಷ್ಟು ಕಡಿತಗೊಳಿಸಲು ಅವರು ಸೂಚನೆ ನೀಡಿದ್ದಾರೆ. ಮಿತವ್ಯಯ ಕ್ರಮಗಳ ಭಾಗವಾಗಿ ಇತ್ತೀಚೆಗೆ ನಡೆದ ಗುಹಾವಾಟಿ ಹಾಗೂ ವಡೋದರಾ ಭೇಟಿಗಳಲ್ಲೂ ಕಡಿಮೆ ವಾಹನಗಳಲ್ಲಿಯೇ ಕಟ್ಟುನಿಟ್ಟಿನ …
Read More »
Laxmi News 24×7