ಕಲಬುರಗಿ: ಐಪಿಎಲ್ ಬೆಟ್ಟಿಂಗ್ನಲ್ಲಿ ಕಳೆದುಕೊಂಡ ವ್ಯಕ್ತಿಯೊಬ್ಬ ನಾಗೂರ ಸೇತುವೆ ಬಳಿ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ ದೇಸಾಯಿ (40) ಎಂದು ಗುರುತಿಸಲಾಗಿದೆ. ಈತ ದಿನಾಲೂ ಐಪಿಎಲ್ ಬೆಟ್ಟಿಂಗ್ ಆಡಿ ಹಣ ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಅಲ್ಲದೇ ಹಲವರ ಬಳಿ ಸಾಲ ಮಾಡಿದ್ದ. ಸಾಲಗಾರರ ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಾಗೂರ ಸೇತುವೆ ಬಳಿ ಬೈಕ್ …
Read More »ಬೆಳಗಾವಿಯ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ
ಬೆಳಗಾವಿ: ನಗರಾಭಿವೃದ್ಧಿ ಕೋಶದ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ದಾಳಿಯಲ್ಲಿ ಒಟ್ಟು 14 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದ್ದು, ಸ್ವತಹ ಅಧಿಕಾರಿಗಳೇ ಅಕ್ರಮ ಆಸ್ತಿ ಕಂಡು ತಬ್ಬಿಬ್ಬಾಗಿದ್ದಾರೆ. ಬೆಳಗಾವಿ ನಗರದ ಆಂಜನೇಯ ನಗರ ಸೇರಿದಂತೆ ಏಳು ಕಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. DUDC ಎಇಇ ಅಜಯಸಿಂಗ್ ರಜಪೂತ ಮನೆಯ ಮೇಲೆ …
Read More »ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್ ರಕ್ತ ಇಂಜೆಕ್ಟ್ – ಆಘಾತಗೊಂಡು ಯುವತಿ ಆತ್ಮಹತ್ಯೆ
ಹೈದರಾಬಾದ್: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ತಿಂಗಳ ಹಿಂದೆ ವ್ಯಕ್ತಿಯೊಬ್ಬ ಹೆಚ್ಐವಿ ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ. ಘಟನೆಯಿಂದ ಭೀತಿಗೆ ಒಳಗಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾರ್ಚ್ 11 ರಂದು ಈ ಘಟನೆ ನಡೆದಿತ್ತು. ಆರೋಪಿ ಮನೋಹರ್ ಎಂಬಾತ ಯುವತಿಗೆ ಮನೆಯಲ್ಲಿ ಬಲವಂತವಾಗಿ ತನ್ನ ಹೆಚ್ಐವಿ ಸೋಂಕಿತ ರಕ್ತವನ್ನು ಇಂಜೆಕ್ಟ್ ಮಾಡಿದ್ದ. ಆರೋಪಿ ಜೊತೆ ಯುವತಿ ಮದುವೆ ನಿರಾಕರಿಸಿದ್ದಕ್ಕೆ ಈ ಕೃತ್ಯ ಎಸಗಿದ್ದ. ಆರೋಪಿ ಮನೋಹರ್ ಮತ್ತು ಯುವತಿ ಸಂಬಂಧಿಕರು. ಆತನ …
Read More »ಬೆಳಗ್ಗೆ ವಾಕಿಂಗ್ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ
ಲಕ್ನೋ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಕೀಲನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಿರಿಯ ವಕೀಲ ರಾಜೀವ್ ಸಿಂಗ್ (45) ಹತ್ಯೆಗೀಡಾದ ವ್ಯಕ್ತಿ. ಶೂಟೌಟ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗುಂಡಿನ ದಾಳಿ ನಡೆಸಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ರಾಜೀವ್ ಸಿಂಗ್ ಎಂದಿನಂತೆ ಬೆಳಗ್ಗೆ ವಾಕಿಂಗ್ ಹೋಗಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು, ವಕೀಲನ ಮೇಲೆ ಏಕಾಏಕಿ ಗುಂಡಿನ …
Read More »ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ಯೋಜನೆಯಡಿಯಲ್ಲಿ ಆಯ್ಕೆಯಾದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟೂ 18 ಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಮಹಿಳೆಯರ ಆರ್ಥಿಕ ಸ್ವಾವಲಂಬನೆಯ ಉದ್ದೇಶದಿಂದ ವಿವಿಧ ಸಾಮಗ್ರಿಗಳನ್ನು ವಿತರಿಸಲಾಗುತ್ತಿದ್ದು, ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ …
Read More »ಡಾಕ್ಟರ್ ಪತಿಯನ್ನು ಹತ್ಯೆ ಮಾಡಿ ನಾಟಕ: ಪತ್ನಿ ಆ್ಯಂಡ್ ಲವರ್ನನ್ನು ಬಂಧಿಸಿದ ಬೆಳಗಾವಿ ಪೊಲೀಸರು
ಬೆಳಗಾವಿ: ಪತಿಯನ್ನು ಹತ್ಯೆ ಮಾಡಿ, ಅಸಹಜ ಸಾವು ಎಂದು ಬಿಂಬಿಸಲು ಸಂಚು ರೂಪಿಸಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಅನಗೋಳದ ಬಾಬಲೇ ಗಲ್ಲಿಯ ನಿವಾಸಿಯಾಗಿದ್ದ 40 ವರ್ಷದ ಅವಿನಾಶ ಅಶೋಕ ಸುಪ್ಪನ್ನವರ ಹತ್ಯೆಗೀಡಾದ ವ್ಯಕ್ತಿ. ವೃತ್ತಿಯಲ್ಲಿ ಆಯುರ್ವೇದ ಥೆರಪಿಸ್ಟ್ ಆಗಿದ್ದ ಅವಿನಾಶ ಅವರು, ಕಳೆದ ಮಾರ್ಚ್ 5 ರಂದು ತಮ್ಮ’ಅಂಕುಶ ಆಯುರ್ವೇದಿಕ ಕೇರ್ ಸೆಂಟರ್ನ ಬೆಡ್ ರೂಮ್ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರ ತಲೆಯ ಹಿಂಭಾಗಕ್ಕೆ …
Read More »ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನತಾ ದರ್ಶನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಈ ಜನತಾ ದರ್ಶನ ಮಧ್ಯಾಹ್ನ 2 ಗಂಟೆಯವರೆಗೆ ನಿರಂತರವಾಗಿ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ತಮ್ಮ ಸಮಸ್ಯೆಗಳು, ಅಹವಾಲುಗಳು ಮತ್ತು ಬೇಡಿಕೆಗಳನ್ನು ಸಚಿವರ ಮುಂದಿಟ್ಟರು. ಇ ಖಾತಾ, ಮಂದಿರ ನಿರ್ಮಾಣ, ಉದ್ಯೋಗ, ಪಿಂಚಣಿ, …
Read More »ಪಕ್ಷದ ಬಲಕ್ಕಾಗಿ ಉಪಚುನಾವಣೆ ಗೆಲ್ಲುವುದು ಅನಿವಾರ್ಯ: ಸಚಿವ ಸತೀಶ್ ಜಾರಕಿಹೊಳಿ
ಬಾಗಲಕೋಟೆ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಉಮೇಶ ಮೇಟಿ ಗೆದ್ದೆ ಗೆಲ್ಲುತ್ತಾರೆ, ಅದರಲ್ಲಿ ಯಾವುದೇ ಸಂದೇಹ ಬೇಡ, ಆದರೆ ಎಷ್ಟು ಅಂತರದಿಂದ ಗೆಲ್ಲುತ್ತಾರೆಂದು ಈಗಲೇ ಖಚಿತವಾಗಿ ಹೇಳಲು ಸಾಧ್ಯವಿಲ್ಲವೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕ್ಷೇತ್ರವನ್ನು ಮೊತ್ತೊಂದು ಕ್ಷೇತ್ರಕ್ಕೆ ಹೊಲಿಕೆ ಮಾಡಲು ಆಗುವುದಿಲ್ಲ. ಶಿಗ್ಗಾಂವಿ ಗೆದ್ದ ಹಾಗೆ ಬಾಗಲಕೋಟೆ ಗೆಲ್ಲುತ್ತೇವೆ ಎನ್ನುವುದು ತಪ್ಪು. ಬಾಗಲಕೋಟೆ ವಿಧಾನಸಭೆ …
Read More »1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು: 1ನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳವರೆಗೆ ಮಿತಿ ಸಡಿಲ ಮಾಡಿತ್ತು. ಇಂದು ಅಧಿಕೃತವಾಗಿ ಆದೇಶ ಮಾಡಿದೆ. ಈ ಮಿತಿ ಸಡಿಲ ಆದೇಶ 2026-27ನೇ ಸಾಲಿನ ದಾಖಲಾತಿಗೆ ಮಾತ್ರ ಅನ್ವಯ ಆಗುವಂತೆ ಆದೇಶ ಮಾಡಲಾಗಿದೆ. ಶಾಲೆಯ ಪ್ರಾರಂಭ ಜೂನ್ 1 ರಿಂದ ಅನ್ವಯವಾಗುವಂತೆ 60 ದಿನದ ಅವಧಿಗೆ ಮಗುವಿನ …
Read More »ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್ಗೆ ದೂರು
ದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೈಕಮಾಂಡ್ಗೆ ದೂರು ನೀಡಿದ್ದಾರೆ. ಸಚಿವರಾದ ಜಮೀರ್ ಅಹಮದ್, ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ವಿರುದ್ಧ ಎರಡು ಪುಟಗಳ ಸಂಪೂರ್ಣ ವರದಿ ಸಮೇತ ಸುರ್ಜೇವಾಲಾ ಅವರು ದೂರು ದಾಖಲಿಸಿದ್ದು, ಮೂವರ ಮೇಲೆ ಕ್ರಮವಹಿಸುವಂತೆ ಉಲ್ಲೇಖಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ …
Read More »
Laxmi News 24×7