Breaking News

ಹಾದಿ ಬೀದಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ಗೆ ಅನುಮತಿ ನೀಡಿದ್ದು ಯಾರು – ಸುರೇಶ್‌ಕುಮಾರ್‌ ಪ್ರಶ್ನೆ

ಬೆಂಗಳೂರು: ನಗರದಲ್ಲಿ ಯಾರೇ ಪ್ರತಿಭಟನೆ ಮಾಡಿದ್ದರೂ ಫ್ರೀಡಂ ಪಾರ್ಕ್‌ನಲ್ಲಿ ನಡೆಸಬೇಕು. ಹಾದಿ ಬೀದಿಯಲ್ಲಿ ಪ್ರತಿಭಟನೆ  ನಡೆಸಲು ಕಾಂಗ್ರೆಸ್‌ನವರಿಗೆ ಅನುಮತಿ ನೀಡಿದ್ದು ಯಾರು ಎಂದು ರಾಜಾಜಿನಗರ ಬಿಜೆಪಿ  ಶಾಸಕ ಸುರೇಶ್‌ ಕುಮಾರ್‌  ಪ್ರಶ್ನಿಸಿದ್ದಾರೆ. ಇಂದಿನ ಕಾಂಗ್ರೆಸ್‌ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರತಿ ಸೋಮವಾರ ನಾನು ಕ್ಷೇತ್ರ ಜನರೊಂದಿಗೆ ಮಾತನಾಡುತ್ತೇನೆ. ಈ ವೇಳೆ ಜನರು ಬಂದು ಹಲವು ಸಮಸ್ಯೆಗಳನ್ನು ಹೇಳುತ್ತಾರೆ. ಇಂದು 63ನೇ ಜನರೊಂದಿಗೆ ಜನಸೇವಕ ಕಾರ್ಯಕ್ರಮ ನಡೆಸುವಾಗ ಮುತ್ತಿಗೆ ಹಾಕಿದ್ದಾರೆ. …

Read More »

ನಿರ್ಭಯ ಕೇಸ್‌ನಲ್ಲಿದ್ದಂತವರಲ್ಲ ಇವರು, ಪೋಕ್ಸೋ ಆರೋಪಿಗಳನ್ನು ಬಿಡಿ – ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಕಲಬುರಗಿ: ರಾಜ್ಯದಲ್ಲಿ ಹುಸಿ ಬಾಂಬ್ ಬೆದರಿಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಯಾದಗಿರಿ  ಹಾಗೂ ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ನಿರ್ಭಯ  ಪ್ರಕರಣದಲ್ಲಿದ್ದ ಆರೋಪಿಗಳ ರೀತಿಯಲ್ಲ, ಈ ಪೋಕ್ಸೋ ಆರೋಪಿಗಳನ್ನು ಬಿಡಿ ಎಂದು ಕಲಬುರಗಿ ಕೋರ್ಟ್‌ಗೆ  ಬಂದ ಮೇಲ್‌ನಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ 2 ರಿಂದ 3 ಬಾರಿ ಬಾಂಬ್ ಬೆದರಿಕೆ ಬಂದಿದೆ. ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ತಮಿಳುನಾಡು …

Read More »

ರೈತರ ಜಮೀನುಗಳಲ್ಲಿ ಕೇಬಲ್ ಕಳ್ಳತನ – ಇಬ್ಬರು ಕಳ್ಳರನ್ನ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

ಕೋಲಾರ: ಗ್ರಾಮೀಣ ಭಾಗದ ರೈತರ ಕೇಬಲ್ ಕಳ್ಳತನಮಾಡುತ್ತಿದ್ದ ಕಳ್ಳರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕು ದೊಡ್ಡಹಸಾಳ ಗ್ರಾಮದಲ್ಲಿಂದು ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ರೈತರ ಬೋರ್ ವೆಲ್‌ಗೆ  ಅಳವಡಿಸಿದ್ದ ಕೇಬಲ್ ಕಳ್ಳತನ ಮಾಡುವ ವೇಳೆ ಸಿಕ್ಕಿ ಬಿದ್ದಿದ್ದಾರೆ. ಕೋಲಾರದ ಗಾಂಧಿನಗರ ನಿವಾಸಿಗಳಾದ ಚೇತನ್ ಹಾಗೂ ಸುದೀಪ್ ಕಳ್ಳತನ ಮಾಡುವ ವೇಳೆ ರೈತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸದ್ಯ ಕಳ್ಳರನ್ನು ಹಿಡಿದು …

Read More »

ರಾಜ್ಯದಲ್ಲಿ SIR ಲೋಪ – ಬಿಜೆಪಿ, ಜೆಡಿಎಸ್‌ನ ಮೈತ್ರಿ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ  ಕೆಲವು ಲೋಪ ಕಂಡುಬಂದ ಹಿನ್ನೆಲೆ ಬಿಜೆಪಿ, ಜೆಡಿಎಸ್  ಮೈತ್ರಿ ನಾಯಕರು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಪ್ರಹ್ಲಾದ್ ಜೋಶಿ, ಹೆಚ್‌ಡಿಕೆ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ ರವಿ, ಅಶ್ವಥ್ ನಾರಾಯಣ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಕಾರಜೋಳ ನಿಯೋಗ ದೂರು ಸಲ್ಲಿಕೆ ಮಾಡಿದೆ. ದೂರಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.  ವಿಪಕ್ಷಗಳ ಆರೋಪ ಏನು? * ಹಲವೆಡೆ ಸಾಮೂಹಿಕ …

Read More »

SIR ದುರ್ಬಳಕೆ ಮಾಡಿಕೊಂಡಿಲ್ಲ – ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದ ಯತೀಂದ್ರ

ಬೆಂಗಳೂರು: ಎಸ್‌ಐಆರ್  ದುರ್ಬಳಕೆ ಮಾಡಿಕೊಂಡಿಲ್ಲ, ರಾಮನಗರದಲ್ಲಿ ಮಾತ್ರ ಹಾಗಾಗಿದೆ, ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಸ್‌ಐಆರ್ ಲೋಪದ ಬಗ್ಗೆ ವಿಪಕ್ಷಗಳ ದೂರು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯನ್ನು ಯಾವುದೇ BLOಗಳು ಮಿಸ್ ಯೂಸ್ ಮಾಡಿಕೊಂಡಿಲ್ಲ. ರಾಮನಗರದಲ್ಲಿ  ಮಾತ್ರ ಆ ರೀತಿ ಆಗಿದೆ. ಅದೂ ಕೂಡ ಎಸ್‌ಐಆರ್ ಬಗ್ಗೆ ಮಾಹಿತಿ ಕೊಡೋಕೆ ಒಂದು ಕಡೆ ಸೇರಿದ್ದಾರೆ ಅಷ್ಟೆ. ಇದಕ್ಕೆ ಎಸ್‌ಐಆರ್ ಮಿಸ್ ಯೂಸ್ …

Read More »

SIR ಪ್ರಕ್ರಿಯೆಯಲ್ಲಿ ನಾವ್ಯಾರು ಕೈ ಹಾಕಿಲ್ಲ, ಆದ್ರೆ ಆಯೋಗ ಮಾಡ್ತಿರೋ ಅಭಿಯಾನದಲ್ಲಿ ಭಿನ್ನಾಭಿಪ್ರಾಯ ಇದೆ: ಡಿಕೆಶಿ

ಬೆಂಗಳೂರು: SIR ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ ಅಭಿಯಾನವನ್ನು ನಡೆಸುತ್ತಿರುವ ರೀತಿಯ ಬಗ್ಗೆ ಮಾತ್ರ ನಮಗೆ ಭಿನ್ನಾಭಿಪ್ರಾಯ ಇದೆ ಎಂದು ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. SIR ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂಬ ವಿಪಕ್ಷಗಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಈಗಾಗಲೇ ನ್ಯಾಯಾಲಯದಲ್ಲಿ ವಾದ ಮಾಡಿದ್ದೇವೆ. ಈಗ ಕೋರ್ಟ್ ತೀರ್ಪು ನೀಡಿದೆ. ಎಲ್ಲರಿಗೂ ಮತದಾನದ ಹಕ್ಕು ಸಿಗಬೇಕು ಎಂಬ …

Read More »

ಪತ್ನಿ-ನಾದಿನಿಯ ಕತ್ತು ಕೊಯ್ದು ಭೀಕರ ಕೊಲೆ – ಮೂವರು ಮಕ್ಕಳೊಂದಿಗೆ ಪತಿ ಎಸ್ಕೇಪ್

ಚಿಕ್ಕಬಳ್ಳಾಪುರ: ಅಕ್ಕ-ತಂಗಿಯರನ್ನು ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರಜಿಲ್ಲೆಯ ಚಿಂತಾಮಣಿ ನಗರದ ಜೆ.ಜೆ. ಕಾಲೋನಿಯಲ್ಲಿ ನಡೆದಿದೆ. 25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ ಮಹಿಳೆಯರು. ಮಾಹಿತಿ ತಿಳಿಯುತ್ತಿದ್ದಂತೆ ಚಿಂತಾಮಣಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದರು ಎಂದು ತಿಳಿದುಬಂದಿದೆ. ಮೃತ ಶಮಾ ಅವರ ಪತಿ ಏಜಾಜ್ ಮೇಲೆಯೇ ಕೊಲೆ …

Read More »

ಮೊಬೈಲ್ ಟಾರ್ಚ್‌ ಹಿಡಿದು KKRTC ಬಸ್‌ ಚಾಲನೆ – ಮೂವರು ಅಮಾನತು

ಕಲಬುರಗಿ: ಟಾರ್ಚ್‌ ಹಿಡಿದು ಬಸ್‌ ಚಲಾಯಿಸಿದ್ದ KKRTC ಅಧಿಕಾರಿಗಳು ಚಾಲಕ ಸೇರಿ ಮೂವರು ಸಿಬ್ಬಂದಿಯನ್ನು ಅಮಾನತು  ಮಾಡಿದ್ದಾರೆ. KKRTC ಬಸ್‌ ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುತ್ತಿತ್ತು. ಈ ವೇಳೆ ಮೊಬೈಲ್‌ ಟಾರ್ಚ್‌ ಹಿಡಿದು ಸುಮಾರು 90 ಕಿಲೋಮೀಟರ್ ದೂರ ಬಸ್‌ ಚಲಾಯಿಸಿದ್ದರು.  ಎಚ್ಚೆತ್ತ ಕೆಕೆಆರ್‌ಟಿಸಿ ಅಧಿಕಾರಿಗಳು ಇಲಾಖಾ ತನಿಖೆ ನಡೆಸಿದ್ದರು. ತನಿಖೆಯಲ್ಲಿ ಡಿಪೋ ಸಿಬ್ಬಂದಿ ಹಾಗೂ ಚಾಲಕನ ಅಜಾಗೃತೆ ಘಟನೆಗೆ ಕಾರಣ ಎನ್ನುವುದು ದೃಢವಾಗಿದೆ. ತನಿಖೆಯ ವರದಿ ಬೆನ್ನಲ್ಲೇ ಅಧಿಕಾರಿಗಳು ತಾಂತ್ರಿಕ …

Read More »

ರಾಮ ಮಂದಿರ ದೇಣಿಗೆ ಹಗರಣ| ಚಂಪತ್ ರಾಯ್ ರಾಜೀನಾಮೆ ಅಂಗೀಕಾರ; ಬಜರಂಗ್ ಬಾಗ್ರ ಹೊಸ ಪ್ರಧಾನ ಕಾರ್ಯದರ್ಶಿ

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರ ರಾಜೀನಾಮೆಯನ್ನು ಟ್ರಸ್ಟ್ ಅಧಿಕೃತವಾಗಿ ಅಂಗೀಕರಿಸಿದೆ. ಚಂಪತ್ ರಾಯ್ ಅವರ ಸ್ಥಾನಕ್ಕೆ ಬಜರಂಗ್ ಬಾಗ್ರ  ಅವರನ್ನು ಹೊಸ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ರಾಮಮಂದಿರದ ಕಾಣಿಕೆ ಮತ್ತು ದೇಣಿಗೆ ಹಣ ದುರುಪಯೋಗವಾಗಿರುವ ಆರೋಪದ ಹಿನ್ನೆಲೆಯಲ್ಲಿ ಇವರಿಬ್ಬರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಸೋಮವಾರ ನಡೆದ ಟ್ರಸ್ಟ್‌ನ ಪ್ರಮುಖ ಸಭೆಯಲ್ಲಿ …

Read More »

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್ ವಾರ್ – ಭೀಕರ ಘರ್ಷಣೆಗೆ 25 ಕೈದಿಗಳು ಬಲಿ, 100ಕ್ಕೂ ಹೆಚ್ಚು ಜನರಿಗೆ ಗಾಯ

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆಯಾದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ. ಕೊಲಂಬೊದ ನೆಗೊಂಬೊ ಜೈಲಿನಲ್ಲಿ ಈ ರಕ್ತಪಾತ ನಡೆದಿದೆ. ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳ ನಡುವೆ ಭಾನುವಾರವೇ (ಜು.5) ಈ ಗಲಾಟೆ ಆರಂಭವಾಗಿತ್ತು ಎಂದು ಮೂಲಗಳು ತಿಳಿಸಿವೆ. ಕೈದಿಗಳ ನಡುವಿನ ಈ ಮಾರಾಮಾರಿಗೆ ನಿಖರವಾದ ಕಾರಣ ಏನೆಂಬುದು ತಿಳಿದುಬಂದಿಲ್ಲ. ಸದ್ಯ ಅಧಿಕಾರಿಗಳು ಜೈಲಿನ ಆವರಣವನ್ನು …

Read More »