ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ನೆತ್ತರು ಹರಿದಿದೆ. ಜೊತೆಯಲ್ಲೇ ಇದ್ದು, ಒಟ್ಟಿಗೆ ಅಡ್ಡಾಡುತ್ತಿದ್ದ ಸ್ನೇಹಿತರೇ ಸೇರಿ ಸ್ವಂತ ಗೆಳೆಯನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಡೆದಿದ್ದೇನು? ಭೀಮನಹಳ್ಳಿ ಗ್ರಾಮದ ಮಹೇಶ್ (34) ಕೊಲೆಯಾದ ದುರ್ದೈವಿ. ಮಹೇಶ್ ಮತ್ತು ಈ ಕೃತ್ಯ ಎಸಗಿದ ಯುವಕರೆಲ್ಲರೂ ಒಂದೇ ಸ್ನೇಹ ಬಳಗದವರಾಗಿದ್ದರು. ಆದರೆ, ಮಹೇಶ್ ತನ್ನದೇ ಗ್ಯಾಂಗ್ನಲ್ಲಿದ್ದ ಸ್ನೇಹಿತನೊಬ್ಬನ ಅಕ್ಕನಿಗೆ ಮೊಬೈಲ್ನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಈ …
Read More »ಹುಬ್ಬಳ್ಳಿ: ಪತ್ನಿ ಹಾಗೂ ಪೊಲೀಸರ ಕಿರುಕುಳದಿಂದ ಮನನೊಂದು ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದು ಆತ್ಮಹತ್ಯೆ
ಹುಬ್ಬಳ್ಳಿ: ಪತ್ನಿ ಹಾಗೂ ಪೊಲೀಸರ ಕಿರುಕುಳದಿಂದ ಮನನೊಂದು ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಹರಿಜನ ಕಾಲೋನಿಯಲ್ಲಿ ನಡೆದಿದೆ. ಸಂತೋಷ್ ಅಳ್ಳೂರು (39) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ಸಂತೋಷ್ ಅವರು ತಮ್ಮ ಪತ್ನಿ ಲಲಿತಾ ಅಳ್ಳೂರು ಹಾಗೂ ಮಹಿಳಾ ಠಾಣೆ ಪೊಲೀಸರ ಕಿರುಕುಳವೇ ತಮ್ಮ ಸಾವಿಗೆ ಕಾರಣ ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಸುಮಾರು 18 ವರ್ಷಗಳ ಹಿಂದೆ ಲಲಿತಾಳನ್ನು ಪ್ರೀತಿಸಿ …
Read More »ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ PSI…!!!
ಕಲಬುರಗಿ: ನಗರದ ಗಂಗಾನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಡಿಸಿಆರ್ಬಿ ವಿಭಾಗದ ಪಿಎಸ್ಐ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದವರು ಬಸವರಾಜ್ ಎಂದು ತಿಳಿದು ಬಂದಿದೆ. ಬಸವರಾಜ್ ಅವರು ಕಲಬುರಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಡಿಸಿಆರ್ಬಿ ವಿಭಾಗದಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೌಟುಂಬಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರು ಈ …
Read More »ಇನಾಮು ರದ್ದತಿ ಕಡತಕ್ಕೆ ₹1.10 ಲಕ್ಷ ಲಂಚ ಬೇಡಿಕೆ: ತಾಯಿ-ಮಗ ಲೋಕಾಯುಕ್ತ ಬಲೆಗೆ..!!
ಬಳ್ಳಾರಿ: ಜಮೀನಿನ ಇನಾಮು ರದ್ದತಿ ಮಾಡಿ ಪಟ್ಟಾ ನಮೂದು ಮಾಡಿಕೊಡುವ ಕೆಲಸಕ್ಕಾಗಿ ₹1.10 ಲಕ್ಷ ಲಂಚ ಬೇಡಿಕೆ ಇಟ್ಟಿದ್ದ ಪ್ರಥಮ ದರ್ಜೆ ಸಹಾಯಕಿ (FDA) ಹಾಗೂ ಆಕೆಯ ಮಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿರುಗುಪ್ಪ ತಾಲೂಕಿನ ಬೈರಾಪುರ ಗ್ರಾಮದ ಗೋವಿಂದ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಸುವರ್ಣ ಹಾಗೂ ಆಕೆಯ ಮಗ ದೀಪಕ್ ಅವರನ್ನು ಬಲೆಗೆ ಬೀಳಿಸಿದ್ದಾರೆ. …
Read More »ಎದೆ ನೋವು ಉರಿ ಎನ್ನುತ್ತಲೆ ಪ್ರಾಣ ಬಿಟ್ಟ ನಾಲ್ಕು ವರ್ಷದ ಪುಟ್ಟ ಬಾಲಕ…!!!
ಎದೆ ಉರಿ ಎನ್ನುತ್ತಿದ್ದ ಪುಟ್ಟ 4 ವರ್ಷದ ಬಾಲಕ ವೈಷ್ಣವ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರಾಣ ಬಿಡುವ ಮುಂಚೆ ಎದೆ ಉರಿ ಎನ್ನುತ್ತಿದ್ದ ಬಾಲಕ ತಕ್ಷಣ ಕುಸಿದು ಬಿದ್ದಿದ್ದಾನೆ ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಅಷ್ಟರಲ್ಲಾಗಲೇ ಮಗುವಿನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಚಿಕ್ಕ ವಯಸ್ಸಿಗೆ ಎದೆ ಉರಿ ನೋವಿನಿಂದ ಪ್ರಾಣ ಹೋಗಿರುವುದು ನಿಜಕ್ಕೂ ಎಲ್ಲರ ಎದೆ ನಡುಗಿಸಿದೆ. ಈ ಮಗು ಸಾವು ನ್ಯಾಯವೇ…???
Read More »ಬಿಡದಿ ಟೌನ್ಶಿಪ್ ಜಟಾಪಟಿ – ಭೂಸ್ವಾಧೀನ ಆದೇಶ ತಕ್ಷಣ ಕೈ ಬಿಡಬೇಕು: ವಿಜಯೇಂದ್ರ ಆಗ್ರಹ
ಬೆಂಗಳೂರು: ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಸರ್ಕಾರ ಹೊರಡಿಸಿರೋ ಭೂಸ್ವಾಧೀನ ಆದೇಶವನ್ನು ತಕ್ಷಣ ಕೈ ಬಿಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯ ಆದ್ಯತೆ ರೈತರಲ್ಲ. ರಾಜ್ಯದಲ್ಲಿ ಬಡವರಿಗೆ ಮನೆ ಕಟ್ಟುವುದು ಇವರ ಆದ್ಯತೆ ಅಲ್ಲ. ರಿಯಲ್ ಎಸ್ಟೇಟ್ ಇವರ ಆದ್ಯತೆ ಎಂದು ಸಿಎಂ ಅಧಿಕಾರ ವಹಿಸಿಕೊಂಡ 24 ಗಂಟೆಗಳಲ್ಲಿ ತೋರಿಸಿದ್ದಾರೆ. ಬಿಡದಿಯಲ್ಲಿ ಬಲವಂತವಾಗಿ ರೈತರಿಂದ ಸರ್ಕಾರ ಜಮೀನು ಕಸಿಯುವ ಕೆಲಸ ಮಾಡುತ್ತಿದೆ. …
Read More »ಸಿಎಂ ಆದ್ಮೇಲಾದ್ರೂ ಬ್ಲೂಫಿಲ್ಮ್ ಮಾಡ್ಸೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ: ಹೆಚ್ಡಿಕೆ ಕಿಡಿ
ಬೆಂಗಳೂರು: ರಾಜ್ಯದ ಸಿಎಂ ಆದಮೇಲಾದ್ರೂ ಬ್ಲೂಫಿಲ್ಮ್ ಮಾಡೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ. ಆ ಖಯಾಲಿ ಇನ್ನೂ ಹೋಗಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದರು. ಬಿಡದಿಯಲ್ಲಿ ಕುಮಾರಸ್ವಾಮಿ ಮತ್ತು ಕುಟುಂಬದ ವಿರುದ್ದ ಪೋಸ್ಟರ್ ಅಂಟಿಸಿರೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ರಾಜ್ಯದ ಸಿಎಂ ಆದಮೇಲಾದ್ರೂ ಬ್ಲೂಫಿಲ್ಮ್ ಮಾಡೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ. ಆ ಖಯಾಲಿ ಇನ್ನೂ …
Read More »ಎದೆ ಉರಿಯಿಂದ 4 ವರ್ಷದ ಬಾಲಕ ಸಾವು – ಹೃದಯಾಘಾತ ಶಂಕೆ
ಚಿತ್ರದುರ್ಗ: ಎದೆ ಉರಿ ಎಂದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ನಡೆದಿದೆ. ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ (4) ಮೃತ ಬಾಲಕ. ವೈಷ್ಣವ್ ತನಗೆ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿಸಿದ್ದಾನೆ. ಕೂಡಲೇ ಪೋಷಕರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಾಲಕ ವೈಷ್ಣವ್ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
Read More »ಕಾಂಗ್ರೆಸ್, ಮೈತ್ರಿಪಕ್ಷಗಳ ನಡುವೆ ಬಿಡದಿ ಟೌನ್ಶಿಪ್ ಜಟಾಪಟಿ – ಪೋಸ್ಟರ್ ವಾರ್
ರಾಮನಗರ: ಕಾಂಗ್ರೆಸ್ ಹಾಗೂ ಮೈತ್ರಿಪಕ್ಷಗಳ ನಡುವೆ ಬಿಡದಿ ಟೌನ್ಶಿಪ್ ಜಟಾಪಟಿ ಜೋರಾಗಿದ್ದು, ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದ ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ಪೋಸ್ಟರ್ ವಾರ್ ಆರಂಭಿಸಿದೆ. ಇಂದು ಬಿಡದಿಗೆ ಬಿಜೆಪಿ ನಿಯೋಗ ಭೇಟಿ ಹಿನ್ನೆಲೆ ಕಾಂಗ್ರೆಸ್ ಪೋಸ್ಟರ್ಗಳನ್ನ (Poster) ಅಂಟಿಸಿ ಬಿಜೆಪಿಯನ್ನ ಟೀಕಿಸಿದೆ. ಯೋಜನೆ ವಿರುದ್ಧ ಪಾದಯಾತ್ರೆಗೆ ಕರೆ ನೀಡಿರುವ ಜೆಡಿಎಸ್ ವಿರುದ್ಧವೂ ಪೋಸ್ಟರ್ ಹಾಕಿ ವ್ಯಂಗ್ಯಮಾಡಿದೆ. ರೈತರ ಭೂಮಿ ಕದ್ದ ಆರ್.ಅಶೋಕ್, ಬಿರಿಯಾನಿ ಅಡ್ಡೆಯ ಚಿಲ್ಲರೆ ನಾರಾಯಣಸ್ವಾಮಿ, ಆರ್ಟಿಜಿಎಸ್ …
Read More »ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಹತ್ವದ ಸಾಧನೆ – 1.78 ಲಕ್ಷ ಕೋಟಿ ರೂ. ತಲುಪಿದ ಉತ್ಪಾದನೆ
ನವದೆಹಲಿ: ಭಾರತದ ರಕ್ಷಣಾ ಉತ್ಪಾದನೆಯು 2025-26ರ ಹಣಕಾಸು ವರ್ಷದಲ್ಲಿ ದಾಖಲೆಯ 1.78 ಲಕ್ಷ ಕೋಟಿ ರೂ. ಮಟ್ಟ ತಲುಪಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 15.6 ಪ್ರತಿಶತ ಹೆಚ್ಚಳವಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದನ್ನು ಆತ್ಮನಿರ್ಭರ ಭಾರತದ ದೊಡ್ಡ ಸಾಧನೆ ಎಂದು ಬಣ್ಣಿಸಿದ್ದಾರೆ. ಹಿಂದಿನ ಹಣಕಾಸು ವರ್ಷ 2024-25ರಲ್ಲಿ ರಕ್ಷಣಾ ಉತ್ಪಾದನೆ 1.54 ಲಕ್ಷ ಕೋಟಿ ರೂ. ಇತ್ತು. 2020-21ರಲ್ಲಿ ಇದು 84,643 ಕೋಟಿ ರೂ. ಮಾತ್ರ ಇತ್ತು. …
Read More »
Laxmi News 24×7