ಚಂಡೀಗಢ: ಪಂಜಾಬ್ನ ಬಾಬಾ ಫರೀದ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಭಾನುವಾರ ನಡೆಸಿದ ಫಾರ್ಮಸಿ ಆಫೀಸರ್ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಬೃಹತ್ ಹೈಟೆಕ್ ಪರೀಕ್ಷಾ ಅಕ್ರಮ ಜಾಲವನ್ನು ಪಂಜಾಬ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 28 ಅಭ್ಯರ್ಥಿಗಳು ಮತ್ತು 7 ಸೂತ್ರಧಾರಿಗಳು ಸೇರಿದಂತೆ ಒಟ್ಟು 35 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪರೀಕ್ಷೆಯಲ್ಲಿ ಮೋಸ ಮಾಡಲು ಗ್ಯಾಂಗ್ ಅತಿಸೂಕ್ಷ್ಮ ಪೆನ್ ಕ್ಯಾಮೆರಾಗಳು , ವೈರ್ಲೆಸ್ ಇಯರ್ಪೀಸ್ಗಳು ಮತ್ತು ಬ್ಯಾಟರಿ ಚಾಲಿತ ಸಂವಹನ ಸಾಧನಗಳನ್ನು …
Read More »ಜಿರಳೆಗಳ ವಿರುದ್ಧ ಲಾಠಿಚಾರ್ಜ್| ವಿಡಿಯೋ ನೋಡಲು ಸಮಯವಿಲ್ಲ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ‘ಸಂಸದ್ ಚಲೋ’ ಪ್ರತಿಭಟನೆ ವೇಳೆ ದೆಹಲಿ ಪೊಲೀಸರ ಲಾಠಿಚಾರ್ಜ್ ಮತ್ತು ಬಲಪ್ರಯೋಗದ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಈ ಕುರಿತ ಅರ್ಜಿಯ ತುರ್ತು ವಿಚಾರಣೆಗೆ ನಕಾರ ವ್ಯಕ್ತಪಡಿಸಿತು. ಅರ್ಜಿದಾರ ವಕೀಲರು ಪೊಲೀಸರ ಕೃತ್ಯವನ್ನು ಸಾಬೀತುಪಡಿಸಲು ವಿಡಿಯೋ ಸಾಕ್ಷ್ಯಗಳನ್ನು ಸಲ್ಲಿಸಲು ಮುಂದಾದಾಗ, ನಮ್ಮ ಸಮಯವನ್ನೂ ವ್ಯರ್ಥ …
Read More »ದೇಶದ್ರೋಹಿ ಸಂಘಟನೆ ʻಕಾಕ್ರೋಚ್ ಜನತಾ ಪಾರ್ಟಿʼ ಜೊತೆ ರಾಹುಲ್ ಹೋಗಿದ್ದಾರೆ: ಅಶೋಕ್ ಲೇವಡಿ
ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿ ದೇಶದ್ರೋಹಿ ಸಂಘಟನೆ, ಅದರ ಮುಖ್ಯಸ್ಥ ಅಭಿಜಿತ್ ದೀಪ್ಕೆ ಪಾಕಿಸ್ತಾನ, ಬಾಂಗ್ಲಾದೇಶದ ಜೊತೆಗೆ ಸಂಪರ್ಕ ಇಟ್ಟುಕೊಂಡಿದ್ದಾನೆ. ಅದರ ಜೊತೆಗೆ ಈಗ ರಾಹುಲ್ ಗಾಂಧಿ ಹೋಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ( ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನೆ ಬಾಗಿಲಿಗೆ ಆತ್ಮಹತ್ಯೆ ತಂದ ಸರ್ಕಾರ ಇದು. ರಾಹುಲ್ ಗಾಂಧಿ ಜಿರಳೆ ಪ್ರತಿಭಟನೆ ಅಂತಾರೆ. ʻಸಿಜೆಪಿʼ ಅದೊಂದು ದೇಶ ದ್ರೋಹ ಸಂಘಟನೆ, …
Read More »ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್
ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ ಮಾಹಿತಿ ಹೊರಬಿದ್ದಿದ್ದು, ಘಟನೆಗೆ ಮುಂಚೆಯೇ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿ 11 ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಫುಟ್ಪಾತ್ …
Read More »ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು: ಪರಮೇಶ್ವರ್
ಚಿಕ್ಕಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಸಂಪೂರ್ಣ ಜವಾಬ್ದಾರಿ ಹೊರಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆಗ್ರಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದ ವೇಳೆ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ʼನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ’ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತವೆ ಎಂದರೆ ಏನರ್ಥ? ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ ಎಂಬ ಅರಿವಿಲ್ಲವೇ? ಇದನ್ನು ಪ್ರಶ್ನಿಸುವುದು ನಮ್ಮ …
Read More »ಕಾಂಗ್ರೆಸ್ ಕಚೇರಿಗೆ ಬಂದ ಬಿಜೆಪಿ ಶಾಸಕ ಬಿಪಿ ಹರೀಶ್ಗೆ ಮೊಟ್ಟೆ ಎಸೆತ
ಬೆಂಗಳೂರು: ಹರಿಹರದ ಬಿಜೆಪಿ ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಸಂಗ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಇಂದು ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆ ತಿರುಗೇಟು ಎಂಬಂತೆ ಬಿಜೆಪಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿತ್ತು. ಶಾಸಕರ ಮೊಬೈಲಿಗೆ ಪ್ರತಿಭಟನೆ ಸ್ಥಳದ ಲೋಕೇಶನ್ ಕಳುಹಿಸಲಾಗಿತ್ತು. ಈ ಲೋಕೇಶನ್ ಆಧಾರದ ಮೇಲೆ ಬಿಪಿ ಹರೀಶ್ ಚಾಲಕ ಕ್ವೀನ್ಸ್ …
Read More »ರಾಜ್ಯದಲ್ಲಿ ಬರ ತಾಂಡವ; ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 2,800 ರೈತರ ಆತ್ಮಹತ್ಯೆ: ಆರ್. ಅಶೋಕ್
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವ ಆಡ್ತಿದೆ. ಆದರೆ ಸರ್ಕಾರ ಸಮರ್ಪಕ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 2,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು, ಶಾಸಕರು ದೆಹಲಿಯಲ್ಲಿ ಜಾಲಿ ಅಂತ ಟ್ರಿಪ್ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಶೇ.80ರಷ್ಟು ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಮಳೆ ಕೊರತೆಯಿಂದ ಬೆಳೆಗಳು …
Read More »ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿ ಪ್ರವಾಸ ದಿಢೀರ್ ರದ್ದು
ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹುಬ್ಬಳ್ಳಿ ಪ್ರವಾಸ ದಿಢೀರ್ ರದ್ದಾಗಿದೆ. ಜುಲೈ 24ರಂದು ಹುಬ್ಬಳ್ಳಿಗೆ ಆಗಮಿಸಿ, ಜುಲೈ 25ರಂದು ಕೆಎಲ್ಇ ಮೆಡಿಕಲ್ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ವೇಳಾಪಟ್ಟಿ ನಿಗದಿಯಾಗಿತ್ತು. ಆದರೆ, ದೆಹಲಿಯಲ್ಲಿ ನಡೆದಿರುವ ಮಹತ್ವದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ಈ ಪ್ರವಾಸವನ್ನು ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ. ಅಮಿತ್ ಶಾ ಅವರ ಭೇಟಿಗೆ ಸಂಬಂಧಿಸಿದಂತೆ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಈಗಾಗಲೇ ಅವರ ಸಿಬ್ಬಂದಿ ಹುಬ್ಬಳ್ಳಿಗೆ ಆಗಮಿಸಿ …
Read More »ಸರ್ಕಾರ ನಮ್ಮನ್ನ ಸಂಪರ್ಕಿಸುತ್ತಿದೆ, ಮಾತುಕತೆಗೆ ಕರೆದರೆ ನಾವು ಸಿದ್ಧ – ಸಿಜೆಪಿ ವಕ್ತಾರ ರಾಂಕಾ
ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಕೇಂದ್ರ ಸರ್ಕಾರ ನಮ್ಮನ್ನ ಸಂಪರ್ಕಿಸುತ್ತಿದೆ, ಒಂದು ವೇಳೆ ಸರ್ಕಾರ ಮಾತುಕತೆ ನಡೆಸಲು ಮುಂದಾದ್ರೆ ನಾವು ಸಂಪೂರ್ಣ ಸಿದ್ಧ ಎಂದು ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ ಹೇಳಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ಮಾತುಕತೆ ಜಂತರ್ ಮಂತರ್ನಲ್ಲೇ ನಡೆಯಬಹುದು ಅಥವಾ ಉಭಯಪಕ್ಷಗಳು ಒಪ್ಪುವ ತಟಸ್ಥ ಸ್ಥಳದಲ್ಲೂ ನಡೆಸಬಹುದು ಎಂದು ಅವರು ತಿಳಿಸಿದ್ದಾರೆ. …
Read More »ಫುಟ್ಪಾತ್ನಲ್ಲಿ ನಿಂತಿದ್ದವರ ಮೇಲೆ ಹರಿದ ಕಾರು – ಯುವಕ ಸಾವು, ಮಹಿಳೆಯ ಕಾಲು ಮುರಿತ
ಚಿತ್ರದುರ್ಗ: ಫುಟ್ಪಾತ್ನಲ್ಲಿ ನಿಂತಿದ್ದವರ ಮೇಲೆ ಕಾರು ಹರಿದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದು, ಮಹಿಳೆಯ ಕಾಲು ಮುರಿತಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪುಟ್ಪಾತ್ಗೆ ನುಗ್ಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹೊಳಲ್ಕೆರೆ ತಾಲೂಕಿನ ದಗ್ಗೆ ಗ್ರಾಮದ ಪ್ರದೀಪ್ (30) ಸಾವನ್ನಪ್ಪಿದ್ದಾರೆ. ಮತ್ತೋರ್ವ ಮಹಿಳೆಗೆ ಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಅಪಘಾತದ ಭೀಕರ ದೃಶ್ಯ …
Read More »
Laxmi News 24×7