Breaking News

ಜನ್ಮಾಷ್ಟಮಿಯಂದು ಶ್ರೀಕೃಷ್ಣನಿಗೆ ಈ ನೈವೇದ್ಯಗಳನ್ನು ಅರ್ಪಿಸಲೇಬೇಕು

ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಎಂಬಿತ್ಯಾದಿ ಹೆಸರುಗಳಿಂದ ಕರೆಯಲಾಗುವ ಕೃಷ್ಣ ಜನ್ಮಾಷ್ಟಮಿಯನ್ನುಪ್ರತಿವರ್ಷ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು  ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಜನ್ಮಾಷ್ಟಮಿಯಂದು ಶ್ರೀಕೃಷ್ಣನ ದೇವಾಲಯಗಳಲ್ಲಿ 56 ಬಗೆಯ ನೈವೇದ್ಯಗಳನ್ನು ಅರ್ಪಿಸಲಾಗುತ್ತದೆ. ಅದೇ ರೀತಿ ಭಕ್ತರು ಮನೆಯಲ್ಲಿ ವಿವಿಧ ಖಾದ್ಯಗಳನ್ನು ತಯಾರಿಸಿ ಕೃಷ್ಣನಿಗೆ ನೈವೇದ್ಯವಾಗಿ ಅರ್ಪಿಸುತ್ತಾರೆ. ಈ ಬಾರಿ ಸೆಪ್ಟೆಂಬರ್‌ 5 ರಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಕಷ್ಟಗಳೆಲ್ಲಾ ಕಳೆದು ಇಷ್ಟಾರ್ಥಗಳೆಲ್ಲಾ ಈಡೆರಲು, ಮನೆಯಲ್ಲಿ ಶಾಂತಿ ಸಮೃದ್ಧಿ, ಸಕಾರಾತ್ಮಕತೆ ನೆಲೆಸಲು …

Read More »

ಕಲಬುರಗಿಯಲ್ಲಿ ಭೀಕರ ಅಪಘಾತ – ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರವಲಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿತಾಯಿಯೊಂದಿಗೆ ಮೂರು ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಟೋ – ಲಾರಿ ಮಧ್ಯೆ ಭೀಕರ ಅಪಘಾತ ನಡೆದು ಶರಣಮ್ಮ (30) ಎಂಬ ಮಹಿಳೆ ಮತ್ತು ಆಕೆಯ 3 ತಿಂಗಳ ಮಗು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ವಾಡಿ ಪಟ್ಟಣಕ್ಕೆ ಆಗಮಿಸುವ ವೇಳೆ ಆಟೋಗೆ ಲಾರಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಅತ್ತೆ ಸಾಬಮ್ಮ, …

Read More »

200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗು ಜನನ – ರಥದಲ್ಲಿ ಕೂರಿಸಿ ಅದ್ದೂರಿ ಸ್ವಾಗತ

ಮುಂಬೈ: ಹೆಣ್ಣು ಮಗು ಬೇಡ ಎಂದು ಭ್ರೂಣ ಹತ್ಯೆ ಮಾಡಿಸುವ ಈ ಕಾಲದಲ್ಲಿ ಹೆಣ್ಣು ಮಗು ಜನಿಸಿದೆ ಎಂದು ಕುಟುಂಬವೊಂದು ರಥದಲ್ಲಿ ಕೂರಿಸಿ ಅದ್ದೂರಿಯಾಗಿ ಸ್ವಾಗತಿಸಿರುವ ಘಟನೆ ಮಹಾರಾಷ್ಟ್ರದ ಬೀಡ್‌ನಲ್ಲಿ ನಡೆದಿದೆ. ಹೌದು, ಈ ಕುಟುಂಬದಲ್ಲಿ ಸುಮಾರು 200 ವರ್ಷಗಳ ಅಂದರೆ ನಾಲ್ಕು ತಲೆಮಾರುಗಳ ಬಳಿಕ ಹೆಣ್ಣು ಮಗು ಜನಿಸಿದೆ. ಹೆರಿಗೆಯಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಟುಂಬಸ್ಥರು ಮಗು ಹಾಗೂ ತಾಯಿಯನ್ನು ರಥದಲ್ಲಿ ಕೂರಿಸಿ, ತಾಳ-ವಾದ್ಯಗಳು ಹಾಗೂ ನೃತ್ಯದೊಂದಿಗೆ …

Read More »

ಮೈಸೂರಿನಲ್ಲಿ ಮತ್ತೊಂದು ʻಗೋಲ್ಡ್ ಸ್ಕ್ಯಾಮ್ʼ – 80ಕ್ಕೂ ಹೆಚ್ಚು ಜನರಿಗೆ ಉಂಡೆನಾಮ!

ಮೈಸೂರು: ನಗರದಲ್ಲಿ ಚಿನ್ನತಂಬಿ ಚಿನ್ನ ವಂಚನೆ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಗೋಲ್ಡ್ ಸ್ಕ್ಯಾಮ್ ನಡೆದಿದೆ. ಚಿನ್ನದ ಅಂಗಡಿ ಮಾಲೀಕ ಜನರಿಗೆ ಚಿನ್ನ ಕೊಡುವುದಾಗಿ ಮಾಸಿಕ ಕಂತು ಕಟ್ಟಿಸಿಕೊಂಡು ಉಂಡೆನಾಮ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ 80 ಕ್ಕೂ ಹೆಚ್ಚು ಜನ ಚಿನ್ನದ ಆಸೆಗೆ ಮಾಸಿಕ ಕಂತು ಕಟ್ಟಿ ಈಗ ಹಣ ಕಳೆದುಕೊಂಡಿದ್ದಾರೆ. ಮೋಹನ್ ಜ್ಯುವೆಲರಿ ಹೆಸರಿನ ಚಿನ್ನದಂಗಡಿಯಲ್ಲಿ ಈ ವಂಚನೆ ನಡೆದಿದೆ. ಮೈಸೂರು ನಗರದ ವಿವೇಕಾನಂದ ವೃತ್ತದಲ್ಲಿನ ಮೋಹನ್‌ …

Read More »

ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ರಾಡ್‌ನಿಂದ ಹೊಡೆದು ತಂದೆಯನ್ನೇ ಕೊಂದ ಮಗ

ಕೋಲಾರ: ಸಾಲ (Debt) ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಮಗ ಕೊಂದಿರುವ ಘಟನೆ ಕೋಲಾರದಲ್ಲಿ  ನಡೆದಿದೆ. ಇನ್ನೂ ಘಟನೆ ಸಂಬಂಧ 24 ಗಂಟೆಯೊಳಗೆ ಪ್ರಕರಣ ಭೇದಿಸಿ ಆರೋಪಿಯನ್ನ ಬಂಧಿಸಲಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸಾಲ ತೀರಿಸಲು ತಂದೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಮಗನೇ ತಂದೆಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಇದಾಗಿದೆ. ಬಂಗಾರಪೇಟೆ ಪಟ್ಟಣದ ವಿಜಯನಗರ …

Read More »

ರಾಹುಲ್ ಗಾಂಧಿ ಸಾರ್ವಕರ್‌ರನ್ನ ಮುಸ್ಲಿಮರ ದ್ವೇಷಿಯಂತೆ ಬಿಂಬಿಸಿದ್ದಾರೆ: ಸಂಬಂಧಿ

ಮುಂಬೈ: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮುಸ್ಲಿಮರನ್ನು ದ್ವೇಷಿಸುತ್ತಿರಲಿಲ್ಲ. ಬದಲಿಗೆ ಅವರ ಪ್ರಗತಿಗೆ ಅಗತ್ಯವಾದ ಮಾರ್ಗಗಳನ್ನು ತಮ್ಮ ಬರಹಗಳಲ್ಲಿ ವಿವರಿಸಿದ್ದರು ಎಂದು ಸಾವರ್ಕರ್ ಅವರ ಮೊಮ್ಮಗನ ಮಗ ಸತ್ಯಕಿ ಸಾವರ್ಕರ್ ಪುಣೆ ನ್ಯಾಯಾಲಯಕ್ಕೆ  ತಿಳಿಸಿದ್ದಾರೆ. 2023ರಲ್ಲಿ ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಭಾಷಣಕ್ಕೆ ಸಂಬಂಧಿಸಿದಂತೆ ಸತ್ಯಕಿ ಸಾವರ್ಕರ್ ದಾಖಲಿಸಿರುವ ಮಾನಹಾನಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಸತ್ಯಕಿ ಅವರು ಸಾಕ್ಷ್ಯ ಹೇಳಿಕೆ ನೀಡುತ್ತಿದ್ದು, …

Read More »

ಭೂ ಮಂಜೂರಾತಿಗಾಗಿ ಮಾಜಿ ಯೋಧ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ದೇಶಕ್ಕಾಗಿ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ, ಶತ್ರುಗಳ ವಿರುದ್ಧ ಹೋರಾಟದ ವೇಳೆ ಕಾಲಿಗೆ ಗಾಯ ಮಾಡಿಕೊಂಡಿದ್ದ ಮಾಜಿ ಯೋಧರೊಬ್ಬರು  ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕಾರ್ಗಿಲ್ ಯುದ್ಧದಲ್ಲಿ  ಭಾಗಿಯಾಗಿದ್ದ ಶಿವಾನಂದ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿರುವ ಮಾಜಿ ಯೋಧ. ಶಿವಾನಂದ ರೆಡ್ಡಿ ಎಂಎಲ್‌ಐ-ಮರಾಠ ಲೈಟ್ ಇನ್ಫೆಂಟ್ರಿ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸಿದ್ದರು. ಯುದ್ಧದ ಸಂದರ್ಭದಲ್ಲಿ ಕಾಲಿಗೆ ಗಾಯಗೊಂಡಿದ್ದ ಶಿವಾನಂದ ರೆಡ್ಡಿ ನಿವೃತ್ತಿಯ ಬಳಿಕ ಸರ್ಕಾರದಿಂದ …

Read More »

ತರಗತಿ ನಡೆಯುತ್ತಿದ್ದಗಲೇ ಕೊಠಡಿಯ ಮೇಲ್ಛಾವಣಿ ಕುಸಿತ – ನಾಲ್ವರು ಮಕ್ಕಳಿಗೆ ಗಾಯ

ಬಾಗಲಕೋಟೆ: ತರಗತಿಯಲ್ಲಿ ಶಿಕ್ಷಕರಿಂದ ಮಕ್ಕಳು ಪಾಠ ಕೇಳುತ್ತಿದ್ದ ವೇಳೆಯಲ್ಲೇ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್ ದಿಢೀರ್ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ  ನಡೆದಿದೆ. ದಿನನಿತ್ಯದಂತೆ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಮೇಲ್ಛಾವಣಿಯ ಪ್ಲಾಸ್ಟರಿಂಗ್ ಹಾಗೂ ಕಾಂಕ್ರೀಟ್ ಚೂರುಗಳು ಏಕಾಏಕಿ ಮಕ್ಕಳ ಮೇಲೆ ಬಿದ್ದಿವೆ. ಘಟನೆಯಿಂದ ನಾಲ್ವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು …

Read More »

ಬರಪೀಡಿತ ಜಿಲ್ಲೆಗಳ ಪಟ್ಟಿಯಿಂದ ಬೆಳಗಾವಿ ಹೊರಕ್ಕೆ: ರೈತರ ಆಕ್ರೋಶ

ಚಿಕ್ಕೋಡಿ : ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಜಿಲ್ಲೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದೆ. ಮಳೆಯ ಕೊರತೆಯಿಂದ ಮೆಕ್ಕೆಜೋಳ, ಸೋಯಾಬಿನ್, ತೊಗರಿ, ಅಲಸಂದಿ ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಥಣಿ ತಾಲೂಕಿನಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಬಾವಿಗಳು ಬತ್ತುವ ಹಂತ ತಲುಪಿವೆ. ಕೊಳವೆಬಾವಿಗಳಿಂದಲೂ ಅಲ್ಪ …

Read More »

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ  7% ಲಂಚ ಪಡೆಯುತ್ತಿರುವ ಇಬ್ಬರು ಸಚಿವರನ್ನು ಕೂಡಲೇ ವಜಾ ಮಾಡಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರಾದರೂ ಲಂಚ ಪಡೆದರೆ ನನಗೆ ಕರೆ ಮಾಡಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಈಗ ಕಾಂಗ್ರೆಸ್‌ ಶಾಸಕ ಅಶೋಕ್‌ ಕುಮಾರ್‌ ರೈ ಅಧಿಕೃತವಾಗಿ ಪತ್ರ ಬರೆದು ಭ್ರಷ್ಟಾಚಾರದ ವಿರುದ್ಧ …

Read More »