Breaking News
Home / Uncategorized / ಏ. 1 ರಿಂದ ಪಡಿತರ ಚೀಟಿದಾರರಿಗೆ ಜೋಳ, ತೊಗರಿ, ರಾಗಿ: ಉಮೇಶ ಕತ್ತಿ

ಏ. 1 ರಿಂದ ಪಡಿತರ ಚೀಟಿದಾರರಿಗೆ ಜೋಳ, ತೊಗರಿ, ರಾಗಿ: ಉಮೇಶ ಕತ್ತಿ

Spread the love

ಕಲಬುರ್ಗಿ: ‘ಉತ್ತರ ‌ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ‌ಕರ್ನಾಟಕ ದಲ್ಲಿ ಬೆಳೆಯುವ ರಾಗಿಯನ್ನು ಪಡಿತರ ಚೀಟಿದಾರರಿಗೆ ನೀಡಲು ನಿರ್ಧರಿಸಲಾಗಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಮಂಗಳವಾರ ಪ್ರಕಟಿಸಿದರು.

ನಗರದ ಡಿಎಆರ್ ಮೈದಾನದಲ್ಲಿ ‌ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜೋಳ, ತೊಗರಿ, ರಾಗಿ ನೀಡ ಬೇಕು ಎಂಬುದು ಬಹಳ ದಿನಗಳ ಬೇಡಿಕೆ ಯಾಗಿತ್ತು. ಅದನ್ನು ‌ಈಗ ಈಡೇರಿಸ ಲಾಗುತ್ತಿದೆ. ಅಕ್ಕಿ ಪ್ರಮಾಣವನ್ನು ಕಡಿಮೆ ಮಾಡಿ ಅದರ ಬದಲಾಗಿ ಜೋಳ, ರಾಗಿ, ತೊಗರಿ, ಕಡಲೆ ನೀಡಲಾಗುವುದು ಎಂದರು.

ರಾಜ್ಯದಲ್ಲಿ 4.46 ಕೋಟಿ ಜನರಿಗೆ ಪಡಿತರ ಚೀಟಿಗಳನ್ನು ವಿತರಿಸಲಾ ಗಿದ್ದು, 3 ಲಕ್ಷ ಚೀಟಿಗಳನ್ನು ಹೊಸದಾಗಿ ವಿತರಿಸಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ನೀರಿಲ್ಲದಿದ್ದರೇನು..? ಬಿಯರ್ ಇದೆಯಲ್ಲ.. : ಬೆಂಗಳೂರಲ್ಲಿ ಬಿಯರ್‌ಗೆ ಫುಲ್ ಡಿಮ್ಯಾಂಡ್!

Spread the loveಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ಹೆಚ್ಚಾಗುತ್ತಿದ್ದು, ಬಿಯರ್‌ಗೂ ಬೇಡಿಕೆ ಹೆಚ್ಚಾಗಿದೆ. ಮದ್ಯಪ್ರಿಯರು ಹಾಟ್​ ಡ್ರಿಂಕ್ಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ