ಮುದ್ದೇಬಿಹಾಳ: ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಕಬ್ಬಿನ ಟ್ರ್ಯಾಕ್ಟರ್ ಆಕ್ಸಿಲ್ ಕಟ್ ಆಗಿ ಟ್ರ್ಯಾಕ್ಟರ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಶಿವರಾಜ್ ಹೋಟೆಲ್ ಬಳಿ ಗುರುವಾರ ನಡೆದಿದೆ.
ಯಲ್ಲಪ್ಪ ದೇವರಗಡ್ಡಿ ಎಂಬುವರಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿಯಾಗಿ, ಲಕ್ಷಾಂತರ ಮೌಲ್ಯದ ಕಬ್ಬು ಹಾನಿ ಆಗಿದೆ.
ಅಲ್ಲದೇ, ಟ್ರ್ಯಾಕ್ಟರ್ ಚಾಲಕನಿಗೆ ಏನು ಆಗಿಲ್ಲ. ಟ್ರ್ಯಾಕ್ಟರ್ ಪಲ್ಟಿಯಾಗಿರುವ ಪರಿಣಾಮ ಲಕ್ಷಾಂತರ ಮೌಲ್ಯದ ಕಬ್ಬು ಹಾನಿಯಾಗಿದೆ. ಟ್ರ್ಯಾಕ್ಟರ್ ಜಖಂಗೊಂಡಿದೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.