Breaking News

ಇರಾನ್​ನಲ್ಲಿ ಸಿಲುಕಿದ್ದ ಕನ್ನಡಿಗರು ತಾಯ್ನಾಡಿಗೆ: ಒಂದೇ ಗ್ರಾಮದ 16 ಜನ ವಾಪಸ್​

Spread the love

ಬೆಂಗಳೂರು, ಜೂನ್​ 21: ಇರಾನ್ ಮತ್ತು ಇಸ್ರೇಲ್ (Iran and Israel) ನಡುವಿನ ಯುದ್ಧ ಮುಂದುವರೆಯುತ್ತಿದ್ದು ದಿನದಿಂದ ದಿನಕ್ಕೆ ಪರಿಸ್ಥಿತಿ ಉದ್ವಿಗ್ನವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇರಾನ್​ನಲ್ಲಿ ಸಿಲುಕಿದ್ದ 18 ಜನ ಕನ್ನಡಿಗರು (Kannadigas) ಶನಿವಾರ (ಜೂ.21) ಕರ್ನಾಟಕಕ್ಕೆ (Karnataka) ವಾಪಸ್ ಆಗಿದ್ದಾರೆ. ಇರಾನ್​ನಿಂದ ಬೆಂಗಳೂರಿಗೆ ಆಗಮಿಸಿದ ಕನ್ನಡಿಗರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಳಿಯ ಶಾಸಕ ಹಾಗೂ ಕುಟುಂಬಸ್ಥರು ಅದ್ದೂರಿಯಾಗಿ ಸ್ವಾಗತಕೋರಿದರು. ತಾಯ್ನಾಡಿಗೆ ಮರಳಿದ ಕನ್ನಡಿಗರು ಮತ್ತು ಇವರ ಪೋಷಕರಿಗೆ ಶಾಸಕ ಪುಟ್ಟಸ್ವಾಮಿಗೌಡ ಅವರು ಭಾವುಟ ನೀಡಿ ಭಾರತ್ ಮಾತಾಕಿ ಜೈ ಎನ್ನುವ ಮೂಲಕ ಸಂತಸ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಫುರ ಜಿಲ್ಲೆ ಗೌರಿಬಿದನೂರು ತಾಲೂಜಿನ ಅಲಿಪುರ ಗ್ರಾಮದ ನೂರಾರು ಜನರು ಈಗಾಗಲೆ ಇರಾನ್​ನಲ್ಲಿ ಕೆಲಸ, ಸ್ವಯಂ ಉದ್ಯೋಗ ಸೇರಿದಂತೆ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದರು. ಆದರೆ, ಈಗ ಇರಾನ್​ನಲ್ಲಿ ಯುದ್ಧ ಆರಂಭವಾದ ಹಿನ್ನೆಲೆಯಲ್ಲಿ ಅಲಿಪುರದ 16 ಜನರು ಶನಿವಾರ ಬೆಳಗ್ಗೆ ಇರಾನ್​ನಿಂದ ದೆಹಲಿಗೆ ಆಗಮಿಸಿದರು. ದೆಹಲಿಯಿಂದ ಮದ್ಯಾಹ್ನ 12 ಗಂಟೆ ಸುಮಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 16 ಜನ ಆಗಮಿಸುತ್ತಿರುವುದು ಗೊತ್ತಾಗುತ್ತಿದ್ದಂತೆ ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ, ಕುಟುಂಬಸ್ಥರು ಮತ್ತು ಗ್ರಾಮದ ಮುಖಂಡರು ಹಾರು ಶಾಲು ಕೈಲಿಡಿದು ವಿಮಾನ ನಿಲ್ದಾಣಕ್ಕೆ ಬಂದರು. ವಿಮಾನ ನಿಲ್ದಾಣದಲ್ಲಿ 16 ಜನರಿಗೆ ಹಾರ ಹಾಕಿ ಸ್ವಾಗತಕೋರುವ ಮೂಲಕ ತಾಯ್ನಾಡಿಗೆ ವಾಪಸ್ ಬರಮಾಡಿಕೊಂದರು.

ಈ ವೇಳೆ ಇರಾನ್​ನಿಂದ ವಾಪಸ್​ ಆದ ಕನ್ನಡಿಗರು ಮಾತನಾಡಿದ್ದು, ಇರಾನ್​ನಲ್ಲಿ ಸುತ್ತಾಡೋಣ, ವ್ಯಾಪಾರ ಮಾಡೋಣ ಅಂತ ಹೋಗಿದ್ವಿ. ಆದರೆ, ಅಲ್ಲಿ ಬೀಳುತ್ತಿರುವ ಬಾಂಬ್​ಗಳ ಸದ್ದು ಕೇಳಿ ವಾಪಸ್ ತಾಯ್ನಾಡಿಗೆ ಹೋಗುತ್ತೇವೆಯೋ, ಇಲ್ಲವೋ ಎಂಬ ಆತಂಕ ಎದುರಾಗಿತ್ತು. ಆದರೆ, ನಮ್ಮ ಭಾರತೀಯ ರಾಯಭಾರಿ ಅಧಿಕಾರಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯದಿಂದ ವಾಪಸ್ ತಾಯ್ನಾಡಿಗೆ ಬಂದು ಕುಟುಂಬಸ್ಥರನ್ನು ಸೇರಿದ್ದೇವೆ ಅಂತ ತಮ್ಮ ಸಂತಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಬಿಎಸ್‌ವೈ ವಿರುದ್ಧ ಪ್ರಾಸಿಕ್ಯೂಷನ್​ ಅನುಮತಿಗೆ ವಿಳಂಬ: ರಾಜ್ಯಪಾಲರ ಕಚೇರಿಗೆ ಹೈಕೋರ್ಟ್ ನೋಟಿಸ್

Spread the loveಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ 187 ಕೋಟಿ ರೂ. ಬೆಲೆಬಾಳುವ 116.17 ಎಕರೆ ಜಮೀನನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ