Breaking News

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ಭವಿಷ್ಯ ನುಡಿದಿದ್ದಾರೆ.

Spread the love

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜಣ್ಣ ನಿವಾಸದಲ್ಲಿನ ಔತಣ ಕೂಟ ರಾಜಕಾರಣ ಹಿನ್ನೆಲೆಯದ್ದು, ಇತ್ತ ಕಬ್ಬಿನ ದರಕ್ಕಾಗಿ ಸಭೆ, ಅತ್ತ ಔತಣಕೂಟ ಮಾಡ್ತಾರೆ.
ರೈತರು, ಶುಗ‌ರ್ ಫ್ಯಾಕ್ಟರಿ ಮಾಲೀಕರನ್ನ ಸಭೆಗೆ ಕರೀತಿರಿ, ಕೇವಲ ಅರ್ಧ ಗಂಟೆ ಸಭೆ ಮಾಡಲು ಸಾಧ್ಯವಾಗುತ್ತಾ? ರಾಜಣ್ಣ ಅವರಿಗೆ ಮೊದಲೇ ಬರಲು ಆಗಲ್ಲ ಅಂತ ಹೇಳಬೇಕಿತ್ತು. ಸಭೆ ನಡೆಸಬೇಕು ಅಂತ ಗಟ್ಟಿಯಾಗಿ ಹೇಳಬೇಕಿತ್ತು. ಅದನ್ನು ಬಿಟ್ಟು ಕೊನೆ ಗಳಿಗೆಯಲ್ಲಿ ಔತಣಕೂಟ ರದ್ದು ಮಾಡಿದ್ದಾರೆ ಎಂದರು.
ನವೆಂಬರ್ ಕ್ರಾಂತಿ ಬಗ್ಗೆ ಬಿಜೆಪಿ ನಾಯಕರು ಹೇಳಿಲ್ಲ. ನಿನ್ನೆ ಔತಣ ಕೂಟ ಕರೆದವರೇ ಹೇಳಿದ್ದು, ಕ್ರಾಂತಿ ಆಗುತ್ತೋ, ಬ್ರಾಂತಿ ಆಗುತ್ತೋ ಗೊತ್ತಿಲ್ಲ.
ಆದರೆ ಏನೋ ಒಂದು ಆಗೇ ಆಗುತ್ತೆ. ನವೆಂಬರ್ ಅಂತ್ಯದಲ್ಲಿ ರಾಜಕೀಯ ಬದಲಾವಣೆ ಆಗುತ್ತದೆ.
ಡಿಕೆ ಶಿವಕುಮಾ‌ರ್ ಮುಖ್ಯಮಂತ್ರಿ ಆಗ್ತಾರೆ ಅನ್ನೋ ಮನೋಭಾವದಲ್ಲಿ ಅವರ ಹಿಂಬಾಲಕರು ಇದ್ದಾರೆ. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಇರ್ತಾರೆ ಅಂತ ಡಿಕೆಶಿ ಬಹಿರಂಗವಾಗಿ ಹೇಳಲಿ.
ಹೇಳಿಲ್ಲ ಅಂದ್ರೆ ನಾಯಕತ್ವ ಬದಲಾವಣೆಯ ಕೆಲಸ ನಡೀತಾ ಇದೆ ಅಂತ ಅರ್ಥ. ಇದೆ ರೀತಿ ಮುಂದುವರೆದರೆ ಸರ್ಕಾರ ಪತನ ಆಗೋದು ಖಚಿತ ಎಂದರು.

 


Spread the love

About Laxminews 24x7

Check Also

ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ “ರಾಜ್ಯ ಮಟ್ಟದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ” ಪಂದ್ಯಾವಳಿ

Spread the loveಸವದತ್ತಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಕಬಡ್ಡಿ ಕ್ಲಬ್ (ಅಸುಂಡಿ) ಹಾಗೂ ಬೆಳಗಾವಿ ಜಿಲ್ಲಾ ಅಮೆಚೂರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ