ಗದಗ ಜಿಲ್ಲೆಯ Nargund ತಾಲೂಕಿನ ರಡ್ಡೆರನಾಗನೂರು ಗ್ರಾಮದಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ವಿಶ್ವನಾಥ ಹಾದಿಮನಿ (28) ಎಂಬಾತನನ್ನು ಪತ್ನಿ ಕವಿತಾ ಹಾದಿಮನಿ ಕಬ್ಬಿಣದ ರಾಡ್ (ಹಾರಿ) ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ. 2022ರಲ್ಲಿ ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಡುವೆ ಮದುವೆಯ ನಂತರ ಕಲಹ ಶುರುವಾಗಿತ್ತು. ಕಳೆದ ಎರಡು ವರ್ಷಗಳಿಂದ ಕವಿತಾ ತವರು ಮನೆಯಲ್ಲಿ ವಾಸವಾಗಿದ್ದಳು. ಇತ್ತೀಚೆಗೆ ಕುಟುಂಬ ಕಾರ್ಯಕ್ರಮದ ನಿಮಿತ್ತ ಗಂಡನ ಮನೆಗೆ ಬಂದಿದ್ದ ವೇಳೆ ಮತ್ತೆ ಜಗಳ ಉಂಟಾಗಿ ಘಟನೆ ನಡೆದಿದೆ. ಆರೋಪಿ ಕವಿತಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶ್ವಾನದಳ ಹಾಗೂ ಸೋಕೋ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7